ವಾರದೊಳಗೆ ಕೇಂದ್ರದಿಂದ ಮಹದಾಯಿ ಅಧಿಸೂಚನೆ?


Team Udayavani, Jul 11, 2019, 3:07 AM IST

varadolage

ಹುಬ್ಬಳ್ಳಿ: ಮಹದಾಯಿ ನ್ಯಾಯಾಧಿಕರಣ ತೀರ್ಪಿನ ಹಿನ್ನೆಲೆಯಲ್ಲಿ ಮಹದಾಯಿ ನದಿ ನೀರು ಬಳಕೆ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ವಾರದೊಳಗಾಗಿ ಅಧಿಸೂಚನೆ ಹೊರಡಿಸಲು ಗಂಭೀರ ಚಿಂತನೆ ನಡೆಸಿದೆ.

ಮಹದಾಯಿ ನೀರು ವಿಚಾರವಾಗಿ ಕರ್ನಾಟಕ ಹಾಗೂ ಗೋವಾ ನಡುವೆ ಹಲವು ದಶಕಗಳ ವಿವಾದವಿತ್ತು. ನ್ಯಾ| ಜೆ.ಎಂ.ಪಾಂಚಾಲ ನೇತೃತ್ವದ ನ್ಯಾಯಾಧಿಕರಣ ನೀರು ಹಂಚಿಕೆ ತೀರ್ಪು ನೀಡಿದೆ. ಈ ಬಗ್ಗೆ ಕರ್ನಾಟಕ ಸುಪ್ರೀಂಕೋರ್ಟ್‌ಗೆ ಆಕ್ಷೇಪ ಅರ್ಜಿ ಸಲ್ಲಿಸಿದೆಯಾದರೂ ಹಂಚಿಕೆಯಾದ ನೀರು ಬಳಕೆಗೆ ಯಾವುದೇ ಅಡ್ಡಿ ಇಲ್ಲ.

ನೀರು ಬಳಕೆ ಕಾಮಗಾರಿಗೆ ಕೇಂದ್ರ ಸರ್ಕಾರ ಅಧಿಸೂಚನೆ ಹೊರಡಿಸಬೇಕಾಗಿದೆ. ಮಹದಾಯಿ ನ್ಯಾಯಾಧಿಕರಣ 2018ರ ಆಗಸ್ಟ್‌ನಲ್ಲಿ ತೀರ್ಪು ನೀಡಿದ ನಂತರ ಅಧಿಸೂಚನೆ ವಿಚಾರದಲ್ಲಿ ರಾಜಕೀಯ ಪಕ್ಷಗಳಲ್ಲಿ ಆರೋಪ-ಪ್ರತ್ಯಾರೋಪಕ್ಕೆ ವೇದಿಕೆಯಾಗಿತ್ತು. ಇದೀಗ ಕೇಂದ್ರ ಸರ್ಕಾರ ಅಧಿಸೂಚನೆ ಹೊರಡಿಸಲು ಮಹತ್ವದ ಹೆಜ್ಜೆ ಇರಿಸಿದೆ.

ಸುಳಿವು ನೀಡಿದ್ದ ಜೋಶಿ: ಮಹದಾಯಿ ನದಿ ನೀರನ್ನು ರಾಜ್ಯ ಬಳಕೆ ವಿಚಾರದಲ್ಲಿ ಕೇಂದ್ರ ಸರ್ಕಾರ ಉತ್ಸುಕವಾಗಿದ್ದು, ಶೀಘ್ರದಲ್ಲಿಯೇ ಸಿಹಿ ಸುದ್ದಿ ನೀಡಲಿದೆ ಎಂದು ಕೇಂದ್ರ ಸಂಸದೀಯ ವ್ಯವಹಾರ, ಗಣಿ ಮತ್ತು ಕಲ್ಲಿದ್ದಲು ಸಚಿವ ಪ್ರಹ್ಲಾದ ಜೋಶಿ ಇತ್ತೀಚೆಗಷ್ಟೇ ಸುಳಿವು ನೀಡಿದ್ದರು. ಇದಕ್ಕೆ ಪೂರಕ ಎನ್ನುವಂತೆ ಕೇಂದ್ರ ಸರ್ಕಾರ ಅಧಿಸೂಚನೆ ಜಾರಿಗೆ ಮುಂದಾಗಿದೆ.

ಸದಾನಂದಗೌಡ ಮುತುವರ್ಜಿ: ಮಹದಾಯಿ ವಿಷಯವಾಗಿ ಕೇಂದ್ರ ಸರ್ಕಾರ ಅಧಿಸೂಚನೆ ಹೊರಡಿಸುವ ನಿಟ್ಟಿನಲ್ಲಿ ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ ಹೆಚ್ಚಿನ ಮುತುವರ್ಜಿ ವಹಿಸಿದ್ದಾರೆ. ಅಧಿಸೂಚನೆ ನಂತರ ಕಾಮಗಾರಿಗೆ ಹೆಚ್ಚಿನ ಅಡ್ಡಿಯುಂಟಾಗದಂತೆ ಎಲ್ಲಾ ಮುಂಜಾಗ್ರತಾ ಕ್ರಮಗಳೊಂದಿಗೆ ಅಧಿಸೂಚನೆ ಹೊರಡಿಸುವ ನಿಟ್ಟಿನಲ್ಲಿ ಅವರು ಕೇಂದ್ರ ಸಚಿವರು, ರಾಜ್ಯದ ಸಂಸದರು, ರಾಜ್ಯ ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ ಇನ್ನಿತರರೊಂದಿಗೆ ಸಮಗ್ರ ರೀತಿಯಲ್ಲಿ ಸಮಾಲೋಚನೆ ನಡೆಸಿದ್ದಾರೆ. ಅಧಿಸೂಚನೆ ವಿಷಯವಾಗಿ ಸದಾನಂದಗೌಡ ಅವರು ದೆಹಲಿಯಲ್ಲಿನ ತಮ್ಮ ನಿವಾಸದಲ್ಲಿ ಮಹತ್ವದ ಚರ್ಚೆಗಳನ್ನು ನಡೆಸಿದ್ದಾರೆ ಎನ್ನಲಾಗಿದೆ.

ಹಂಚಿಕೆಯಾದ ನೀರು ಎಷ್ಟು?: 2010ರಲ್ಲಿ ರಚನೆಗೊಂಡಿದ್ದ ನ್ಯಾ| ಜೆ.ಎಂ.ಪಾಂಚಾಲ ನೇತೃತ್ವದ ಮಹದಾಯಿ ನ್ಯಾಯಾಧಿಕರಣ ಸುಮಾರು 8 ವರ್ಷಗಳ ನಂತರ ಅಂದರೆ, 2018ರ ಆಗಸ್ಟ್‌ನಲ್ಲಿ ಮಹದಾಯಿ ನದಿ ನೀರು ಹಂಚಿಕೆ ತೀರ್ಪು ನೀಡಿತ್ತು. ನ್ಯಾಯಾಧಿಕರಣ ಕರ್ನಾಟಕಕ್ಕೆ ಒಟ್ಟು 13.5 ಟಿಎಂಸಿ ಅಡಿ ನೀರು ಹಂಚಿಕೆ ಮಾಡಿತ್ತು.

ಇದರಲ್ಲಿ 5.5 ಟಿಎಂಸಿ ಅಡಿ ನೀರು ಮುಂಬೈ ಕರ್ನಾಟಕ ಭಾಗಕ್ಕೆ ಕುಡಿಯುವ ನೀರಿನ ಉದ್ದೇಶಕ್ಕೆ, 8.2 ಟಿಎಂಸಿ ಅಡಿ ನೀರು ವಿದ್ಯುತ್‌ ಉತ್ಪಾದನೆಗೆಂದು ಹಂಚಿಕೆ ಮಾಡಿತ್ತು. ಕಳಸಾದಿಂದ 1.12 ಟಿಎಂಸಿ ಅಡಿ, ಬಂಡೂರಿಯಿಂದ 2.18 ಟಿಎಂಸಿ ಅಡಿ ನೀರು ಬಳಕೆಗೆ ಅವಕಾಶ ನೀಡಲಾಗಿದೆ. ಅದೇ ರೀತಿ, ಗೋವಾಕ್ಕೆ 24 ಟಿಎಂಸಿ ಅಡಿ, ಮಹಾರಾಷ್ಟ್ರಕ್ಕೆ 1.33 ಟಿಎಂಸಿ ಅಡಿ ನೀರು ಹಂಚಿಕೆ ಮಾಡಲಾಗಿದೆ.

ರಾಜ್ಯ ಸರ್ಕಾರದ ಜವಾಬ್ದಾರಿ: ಮಹದಾಯಿ ನ್ಯಾಯಾಧಿಕರಣದ ತೀರ್ಪಿನಂತೆ ನೀರು ಬಳಕೆ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಅಧಿಸೂಚನೆ ಹೊರಡಿಸಿದರೆ ಕಾಮಗಾರಿ ಕೈಗೊಳ್ಳುವ ಮಹತ್ವದ ಜವಾಬ್ದಾರಿ ರಾಜ್ಯ ಸರ್ಕಾರದ್ದಾಗಲಿದೆ. ಕಳಸಾ ಕೆನಾಲ್‌ಗೆ ಡ್ಯಾಂ ನಿರ್ಮಾಣ, ಬಂಡೂರಿ ನಾಲಾದಿಂದ ನೀರು ಪಡೆಯಲು ಅಗತ್ಯ ಕಾಮಗಾರಿ ಆರಂಭಿಸುವುದು ಸೇರಿದಂತೆ ಹಲವು ಸಿವಿಲ್‌ ಕಾಮಗಾರಿಗಳನ್ನು ಕೈಗೊಳ್ಳಬೇಕಾಗಿದೆ.

ಕಾಲಮಿತಿಯಲ್ಲಿ ಕಾಮಗಾರಿ ಕೈಗೊಂಡರೂ ಇದು ಪೂರ್ಣಗೊಳ್ಳಲು ಕನಿಷ್ಠ ಒಂದೂವರೆಯಿಂದ ಎರಡು ವರ್ಷ ಬೇಕು ಎಂದು ಹೇಳಲಾಗುತ್ತಿದೆ. ಕೇಂದ್ರ ಸರ್ಕಾರ ಒಂದು ವಾರದಲ್ಲಿ ಅಧಿಸೂಚನೆ ಹೊರಡಿಸಿದರೂ, ರಾಜ್ಯದಲ್ಲಿನ ಸದ್ಯದ ರಾಜಕೀಯ ಅಸ್ಥಿರತೆಯಲ್ಲಿ ಸರ್ಕಾರ ಯಾವ ರೀತಿ ಈ ಕಾಮಗಾರಿಗೆ ಆದ್ಯತೆ ನೀಡಲಿದೆ ಎಂಬ ಪ್ರಶ್ನೆ ಕಾಡತೊಡಗಿದೆ.

ಮಹದಾಯಿ ವಿಚಾರದಲ್ಲಿ ಕೇಂದ್ರ ಸರ್ಕಾರ ಅಧಿಸೂಚನೆ ಹೊರಡಿಸಲು ಮುಂದಾಗಿರುವುದು ಮಹತ್ವದ ಹೆಜ್ಜೆ. ಬಾಗಲಕೋಟೆ ಸೇರಿದಂತೆ ನಾಲ್ಕು ಜಿಲ್ಲೆಗಳಿಗೆ ಮಹದಾಯಿ ನೀರು ಪ್ರಯೋಜನಕಾರಿ ಆಗಲಿದೆ. ಅಧಿಸೂಚನೆ ಹೊರಬಿದ್ದ ನಂತರ ರಾಜ್ಯ ಸರ್ಕಾರ ವಿಳಂಬ ತೋರದೆ ಕೂಡಲೇ ಯುಧ್ದೋಪಾದಿಯಲ್ಲಿ ಕಾಮಗಾರಿ ಕೈಗೊಂಡು ನೀರು ಬಳಕೆಗೆ ಮುಂದಾಗಬೇಕು.
-ಸಂಗಮೇಶ ನಿರಾಣಿ, ಸಂಚಾಲಕ, ಉಕ ಸಮಗ್ರ ನೀರಾವರಿ ಹೋರಾಟ ಸಮಿತಿ

ಮಹದಾಯಿ ಕುರಿತಾಗಿ ಕೇಂದ್ರ ಅಧಿಸೂಚನೆ ಹೊರಡಿಸಲಿದೆ ಎಂಬ ಸುಳಿವು ಸಿಕ್ಕಿದೆ. ನ್ಯಾಯಾಧಿಕರಣ 13.5ಟಿಎಂಸಿ ಅಡಿ ನೀರನ್ನು ರಾಜ್ಯಕ್ಕೆ ಹಂಚಿಕೆ ಮಾಡಿದ್ದರೂ ವಾಸ್ತವಿಕವಾಗಿ ನಮಗೆ ಸಿಗುವ ನೀರು 3.9 ಟಿಎಂಸಿ ಅಡಿಯಷ್ಟು ಮಾತ್ರ. ಇಷ್ಟು ನೀರಾದರೂ ನವಿಲುತೀರ್ಥ ಜಲಾಶಯಕ್ಕೆ ಸೇರಿದರೆ ಹುಬ್ಬಳ್ಳಿ-ಧಾರವಾಡ ಸೇರಿ ವಿವಿಧ ಕಡೆ ಕುಡಿಯುವ ನೀರಿಗೆ ಬಳಕೆಯಾಗುತ್ತಿದ್ದ ಜಲಾಶಯದಲ್ಲಿನ ನೀರು ಕೃಷಿ ಬಳಕೆಗೆ ಸಿಗುವಂತಾಗಲಿದೆ.
-ಶಂಕರ ಅಂಬಲಿ, ಮಹದಾಯಿ ಹೋರಾಟಗಾರ

* ಅಮರೇಗೌಡ ಗೋನವಾರ

ಟಾಪ್ ನ್ಯೂಸ್

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

aaa

ನೇಹಾ ಕಗ್ಗೊಲೆ ಆಕಸ್ಮಿಕ, ವೈಯಕ್ತಿಕ ಸರಕಾರದ ಹೇಳಿಕೆ ವಿವಾದ, ಆಕ್ರೋಶ

1-weweqwe

Globant; ಮನೆಯಿಂದಲೇ 30,000 ಮಂದಿ ಕೆಲಸ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.