ಪಂಚಮಸಾಲಿ 3ನೇ ಪೀಠ: ಡಾ| ಮಹಾದೇವ ಶ್ರೀಗೆ ಪಟ್ಟಾಭಿಷೇಕ

250ಕ್ಕೂ ಹೆಚ್ಚು ಸ್ವಾಮೀಜಿ ಗಳು, ಗಣ್ಯರು ಭಾಗಿ; ಆಲಗೂರಿನಲ್ಲಿ ಅದ್ದೂರಿ ಪೀಠಾರೋಹಣ

Team Udayavani, Feb 14, 2022, 7:10 AM IST

ಪಂಚಮಸಾಲಿ 3ನೇ ಪೀಠ: ಡಾ| ಮಹಾದೇವ ಶ್ರೀಗೆ ಪಟ್ಟಾಭಿಷೇಕ

ಬಾಗಲಕೋಟೆ: ಬಹು ನಿರೀಕ್ಷಿತ ಹಾಗೂ ರಾಜ್ಯದಲ್ಲಿ ತೀವ್ರ ಕುತೂಹಲ ಕೆರಳಿಸಿದ್ದ ಪಂಚಮಸಾಲಿ ಸಮಾಜದ 3ನೇ ಪೀಠದ ನೂತನ ಜಗದ್ಗುರುಗಳಾಗಿ ಬಬಲೇಶ್ವರ ಬ್ರಹನ್ಮಠದ ಡಾ| ಮಹಾದೇವ ಶಿವಾಚಾರ್ಯ ಸ್ವಾಮೀಜಿಗೆ ರವಿವಾರ ಪಟ್ಟಾಭಿಷೇಕ ನೆರವೇರಿಸಲಾಯಿತು.

ವೀರಶೈವ ಲಿಂಗಾಯತ ಪಂಚಮಸಾಲಿ ಮಠಾಧೀಶರ ಒಕ್ಕೂಟದ ನೇತೃತ್ವದಲ್ಲಿ ನೂರಾರು ಸ್ವಾಮೀಜಿಗಳು, ಹರಿಹರ ಪೀಠದ ಜಗದ್ಗುರು ವಚನಾನಂದ ಶ್ರೀಗಳು ಸಹಿತ ನಾಡಿನ ಹಲವು ಮಠಾಧೀಶರ ನೇತೃತ್ವದಲ್ಲಿ 3ನೇ ಪೀಠದ ಪೀಠಾಧ್ಯಕ್ಷರಿಗೆ ರುದ್ರಾಕ್ಷಿ ಪೀಠ, ರುದ್ರಾಭಿಷೇಕ ನೆರವೇರಿಸಿ ಜಗದ್ಗುರುಗಳನ್ನಾಗಿ ಅಧಿಕಾರ ವಹಿಸಲಾಯಿತು.

ಆಲಗೂರಿನಲ್ಲಿ ಬ್ರಾಹ್ಮಿ ಮುಹೂರ್ತದಲ್ಲಿ ಅಷ್ಟ ದುರ್ಗಾ ಪೂಜೆ, ಪಾರ್ವತಿ ಪೂಜೆ, ಏಕಾ ದಶಿ ಮಹಾರುದ್ರ ಪೂಜೆ, ಸ್ವಸ್ತಿಪುಣ್ಯ ಆಹ್ವಾಚನ ಸಹಿತ ವಿವಿಧ ಧಾರ್ಮಿಕ ವಿಧಿಗಳು ನಡೆದವು. ರುದ್ರಾಭಿಷೇಕ ಆಸನದಲ್ಲಿ ಜಗದ್ಗುರುಗಳನ್ನು ಕೂಡಿಸಿ, ಮಂತ್ರ ಪಠಣ, ಪೂಜೆಯ ವಿಧಿ-ವಿಧಾನ ನಡೆಸಲಾಯಿತು.

ಹರಿಹರ ಪೀಠದ ಜಗದ್ಗುರು ಶ್ರೀ ವಚನಾನಂದ ಸ್ವಾಮೀಜಿ, ವೀರಶೈವ ಪಂಚಮಸಾಲಿ ಮಠಾಧೀಶರ ಒಕ್ಕೂಟದ ಕಾರ್ಯದರ್ಶಿ ಅಭಿನವ ಸಂಗನಬಸವ ಸ್ವಾಮೀಜಿ, ಉಪಾಧ್ಯಕ್ಷ ಬೆಂಡವಾಡದ ರೇವಣಸಿದ್ದ ಸ್ವಾಮೀಜಿ, ಸಿದ್ದಲಿಂಗ ದೇವರು ಸಹಿತ ಹಲವು ಶ್ರೀಗಳು ಪಾಲ್ಗೊಂಡಿದ್ದರು.

ಬಳಿಕ ಮಧ್ಯಾಹ್ನ ಆಲಗೂರಿನ ಬೃಹತ್‌ ವೇದಿಕೆಯಲ್ಲಿ ನೂತನ ಜಗದ್ಗುರುಗಳಿಗೆ ರುದ್ರಾಕ್ಷಿಗಳಿಂದ ಸಿದ್ಧಪಡಿಸಿದ್ದ ಪೀಠ ತೊಡಿಸಿ, ಬಹಿರಂಗವಾಗಿ ಪೀಠಾರೋಹಣ ನೆರವೇರಿಸಲಾಯಿತು. ಈ ಕಾರ್ಯಕ್ಕೆ ಸುಮಾರು 200ಕ್ಕೂ ಹೆಚ್ಚು ಸ್ವಾಮೀಜಿಗಳು, ಸಾವಿರಾರು ಭಕ್ತರು, ಪಂಚಮಸಾಲಿ ಸಮಾಜವೂ ಸಹಿತ ಹಲವು ಸಮಾಜಗಳ ಪ್ರಮುಖರು ಸಾಕ್ಷಿಯಾದರು.

ಇದನ್ನೂ ಓದಿ:15-18 ವರ್ಷದ ಶೇ.70 ಮಕ್ಕಳಿಗೆ ಲಸಿಕೆ; ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ

ರಾಜ್ಯದಲ್ಲಿ ಪಂಚಮಸಾಲಿ ಸಮಾಜದ 3ನೇ ಪೀಠ ಸ್ಥಾಪನೆ ಕುರಿತು ಸುದ್ದಿ ಹರಡಿದಾಗ ಬಹು ಚರ್ಚೆಯಾಗಿತ್ತು. ಕೂಡಲಸಂಗಮ ಪೀಠದ ಜಗದ್ಗುರು ಬಸವಜಯ ಮೃತ್ಯುಂಜಯ ಸ್ವಾಮೀಜಿ, ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಸಹಿತ ಕೆಲವರು 3ನೇ ಪೀಠಕ್ಕೆ ವಿರೋಧ ವ್ಯಕ್ತಪಡಿಸಿದ್ದರು. ಇದು ನಿರಾಣಿ ಪೀಠ ಎಂದು ಟೀಕಿಸಿದ್ದರು.
ಆದರೆ, ರವಿವಾ ರ ನಡೆದ ಗಾಣಿಗ ಪೀಠದ ಅಭಿನವ ಜಯಬಸವ ಜಗದ್ಗುರು, ದಿಂಗಾಲೇಶ್ವರ ಸ್ವಾಮೀಜಿ, ಸುಲಫಲದ ಸಾರಂಗ ದೇಶಿಕೇಂದ್ರ ಶ್ರೀ, ನಿಡಸೋಸಿಯ ಪಂಚಮ ಶಿವಲಿಂಗ ಶಿವಾಚಾರ್ಯ ಸ್ವಾಮೀಜಿ ಸಹಿತ ಸುಮಾರು 200ಕ್ಕೂ ಹೆಚ್ಚು ಶ್ರೀಗಳು, ಬೃಹತ್‌ ಮತ್ತು ಮಧ್ಯಮ ಕೈಗಾರಿಕೆ ಸಚಿವ ಮುರುಗೇಶ ನಿರಾಣಿ, ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ. ವಿಜಯೇಂದ್ರ, ಸಂಸದ ಪಿ.ಸಿ. ಗದ್ದಿಗೌಡರ, ಹುನಗುಂದ ಶಾಸಕ ದೊಡ್ಡನಗೌಡ ಪಾಟೀಲ್‌, ರಾಮದುರ್ಗ ಶಾಸಕ ಮಹಾದೇವಪ್ಪ ಯಾದವಾಡ, ವಿಧಾನ ಪರಿಷತ್‌ ಸದಸ್ಯ ಹನಮಂತ ನಿರಾಣಿ, ಮಾಜಿ ಶಾಸಕ ಜಗದೀಶ ಮೆಟಗುಡ್ಡ, ಬೀಜ ಮತ್ತು ಸಾವಯವ ಪ್ರಮಾಣನ ಸಂಸ್ಥೆ ಅಧ್ಯಕ್ಷ ವಿಜುಗೌಡ ಪಾಟೀಲ್‌, ಉತ್ತರ ಕರ್ನಾಟಕ ಸಮಗ್ರ ನೀರಾವರಿ ಹೋರಾಟ ಸಮಿತಿ ಅಧ್ಯಕ್ಷ ಸಂಗಮೇಶ ನಿರಾಣಿ ಭಾಗವಹಿಸಿದ್ದರು.

ಟ್ರಸ್ಟಿಗಳ ಸಂಗಮ
3ನೇ ಪೀಠದ ನೂತನ ಜಗದ್ಗುರುಗಳ ಪೀಠಾರೋಹಣ, ಬೃಹತ್‌ ರೈತ ಮತ್ತು ಧರ್ಮ ಸಮ್ಮೇಳನದಲ್ಲಿ ಹರಿಹರ, ಕೂಡಲಸಂಗಮ ಹಾಗೂ ನೂತನ ಆಲಗೂರ ಸಹಿತ ಮೂರು ಪೀಠಗಳ ಟ್ರಸ್ಟಿಗಳು ಒಂದೇ ವೇದಿಕೆಯಡಿ ಕಾಣಿಸಿಕೊಂಡು, ಇದು ಸಮಾಜ ಒಡೆಯುವ ಕೆಲಸವಲ್ಲ. ಸಮಾಜ ಕಟ್ಟುವ ಕೆಲಸ ಎಂದು ಬಹಿರಂಗವಾಗಿ ಸಾರಿದರು. ಆಲಗೂರಿನ ಈ ಪೀಠದಿಂದ ಸಮಾಜದಲ್ಲಿ ಧರ್ಮ, ಧಾರ್ಮಿಕ ಕಾರ್ಯ ನಡೆಯಲಿವೆ ಎಂದು ಮೂರು ಪೀಠಗಳ ಟ್ರಸ್ಟಿಗಳು ಹೇಳಿದರು.

ಟಾಪ್ ನ್ಯೂಸ್

ಕಚೇರಿಗಳಲ್ಲಿ ಇ-ಆಫೀಸ್‌ ತಂತ್ರಾಂಶ ಕಡ್ಡಾಯಕ್ಕೆ ಆದೇಶ

Govt ಕಚೇರಿಗಳಲ್ಲಿ ಇ-ಆಫೀಸ್‌ ತಂತ್ರಾಂಶ ಕಡ್ಡಾಯಕ್ಕೆ ಆದೇಶ

1-weeewqe

KKR vs RR ಪಂದ್ಯ ಮಳೆಯಿಂದಾಗಿ ರದ್ದು: ಆರ್ ಸಿಬಿಗೆ ರಾಜಸ್ಥಾನ್ ಎಲಿಮಿನೇಟರ್‌ ಎದುರಾಳಿ

Devarajegowda ವಿರುದ್ಧ ಮಾನನಷ್ಟ ಕೇಸ್‌: ಶಿವರಾಮೇಗೌಡ

Devarajegowda ವಿರುದ್ಧ ಮಾನನಷ್ಟ ಕೇಸ್‌: ಶಿವರಾಮೇಗೌಡ

ರಾಜ್ಯ ಸರಕಾರಕ್ಕೆ ವರ್ಷ: ಸುರ್ಜೇವಾಲ ಹರ್ಷ

Congress ರಾಜ್ಯ ಸರಕಾರಕ್ಕೆ ವರ್ಷ: ಸುರ್ಜೇವಾಲ ಹರ್ಷ

ಕಡಿಮೆ ಅಂಕ: ಕುಂದಾಪುರ ಮೂಲದ ವಿದ್ಯಾರ್ಥಿ ಆತ್ಮಹತ್ಯೆ

SSLC ಕಡಿಮೆ ಅಂಕ: ಕುಂದಾಪುರ ಮೂಲದ ವಿದ್ಯಾರ್ಥಿ ಆತ್ಮಹತ್ಯೆ

Gokarna: ಪ್ರವಾಸಿ ಬೋಟ್ ಪಲ್ಟಿ ; 40 ಪ್ರವಾಸಿಗರ ರಕ್ಷಣೆ

Gokarna: ಪ್ರವಾಸಿ ಬೋಟ್ ಪಲ್ಟಿ ; 40 ಪ್ರವಾಸಿಗರ ರಕ್ಷಣೆ

1-qweqwqe

IPL ಅಭಿಷೇಕ್ ಸ್ಫೋಟಕ ಆಟ: ಪಂಜಾಬ್ ವಿರುದ್ಧ ಹೈದರಾಬಾದ್ ಗೆ 4 ವಿಕೆಟ್ ಜಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Rabkavi-Banhatti; ರೋಹಿಣಿ ಮಳೆ ಒಲಿದರೆ ರೈತನ ಬಾಳೇ ಬಂಗಾರ

Rabkavi-Banhatti; ರೋಹಿಣಿ ಮಳೆ ಒಲಿದರೆ ರೈತನ ಬಾಳೇ ಬಂಗಾರ

6-rabakavi

Rabkavi Banhatti: ಶತಮಾನದ ಸೋಮವಾರಪೇಟೆ ಸಮಸ್ತ ದೈವ ಮಂಡಳಿಯ ಗರಡಿ ಮನೆ

3-mahalingapur

Mahalingpur: ತೆರಬಂಡಿ ಸ್ಪರ್ಧೆಯ ಹೋರಿ ದಾಖಲೆಯ 10.10 ಲಕ್ಷಕ್ಕೆ ಖರೀದಿಸಿದ ರೈತ

1-qweqwewqe

Rabkavi Banhatti: ಪ್ರಾಚೀನ ದೇವಸ್ಥಾನಕ್ಕೆ ಬೇಕಿದೆ ರಕ್ಷಣೆ

ಆನ್‌ಲೈನ್‌ ವಂಚನೆ: 6 ವರ್ಷದಲ್ಲಿ 4 ಕೋಟಿ ರೂ. ಕಳೆದುಕೊಂಡ ವಿದ್ಯಾವಂತರು!

ಆನ್‌ಲೈನ್‌ ವಂಚನೆ: 6 ವರ್ಷದಲ್ಲಿ 4 ಕೋಟಿ ರೂ. ಕಳೆದುಕೊಂಡ ವಿದ್ಯಾವಂತರು!

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

ಕಚೇರಿಗಳಲ್ಲಿ ಇ-ಆಫೀಸ್‌ ತಂತ್ರಾಂಶ ಕಡ್ಡಾಯಕ್ಕೆ ಆದೇಶ

Govt ಕಚೇರಿಗಳಲ್ಲಿ ಇ-ಆಫೀಸ್‌ ತಂತ್ರಾಂಶ ಕಡ್ಡಾಯಕ್ಕೆ ಆದೇಶ

1-weeewqe

KKR vs RR ಪಂದ್ಯ ಮಳೆಯಿಂದಾಗಿ ರದ್ದು: ಆರ್ ಸಿಬಿಗೆ ರಾಜಸ್ಥಾನ್ ಎಲಿಮಿನೇಟರ್‌ ಎದುರಾಳಿ

Devarajegowda ವಿರುದ್ಧ ಮಾನನಷ್ಟ ಕೇಸ್‌: ಶಿವರಾಮೇಗೌಡ

Devarajegowda ವಿರುದ್ಧ ಮಾನನಷ್ಟ ಕೇಸ್‌: ಶಿವರಾಮೇಗೌಡ

ರಾಜ್ಯ ಸರಕಾರಕ್ಕೆ ವರ್ಷ: ಸುರ್ಜೇವಾಲ ಹರ್ಷ

Congress ರಾಜ್ಯ ಸರಕಾರಕ್ಕೆ ವರ್ಷ: ಸುರ್ಜೇವಾಲ ಹರ್ಷ

ಕಡಿಮೆ ಅಂಕ: ಕುಂದಾಪುರ ಮೂಲದ ವಿದ್ಯಾರ್ಥಿ ಆತ್ಮಹತ್ಯೆ

SSLC ಕಡಿಮೆ ಅಂಕ: ಕುಂದಾಪುರ ಮೂಲದ ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.