ಮಹಾರಾಷ್ಟ್ರದಲ್ಲಿ “ಲಾಕ್‌’ ಮಾದರಿ ನಿರ್ಬಂಧ


Team Udayavani, Jan 9, 2022, 6:30 AM IST

ಮಹಾರಾಷ್ಟ್ರದಲ್ಲಿ “ಲಾಕ್‌’ ಮಾದರಿ ನಿರ್ಬಂಧ

ಮುಂಬೈ/ನವದೆಹಲಿ: ಮಹಾರಾಷ್ಟ್ರದಲ್ಲಿ ಒಂದೇ ದಿನ 41,434 ಕೊರೊನಾ ಪ್ರಕರಣಗಳು ಪತ್ತೆಯಾಗುತ್ತಿದ್ದಂತೆಯೇ ಎಚ್ಚೆತ್ತಿರುವ ರಾಜ್ಯ ಸರ್ಕಾರ ಮತ್ತಷ್ಟು ನಿರ್ಬಂಧಗಳನ್ನು ವಿಧಿಸುವ ಮೂಲಕ ರಾಜ್ಯವನ್ನು ಭಾಗಶಃ ಲಾಕ್‌ಡೌನ್‌ ಸ್ಥಿತಿಗೆ ತಳ್ಳಿದೆ.

ಫೆ.15ರವರೆಗೂ ರಾಜ್ಯಾದ್ಯಂತ ಶಾಲೆ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಸೆಲೂನ್‌, ಕ್ರೀಡಾ ಸಂಕೀರ್ಣ, ಈಜುಕೊಳ, ಜಿಮ್‌, ಸ್ಪಾಗಳನ್ನು ಸಂಪೂರ್ಣವಾಗಿ ಮುಚ್ಚಲು ಆದೇಶಿಸಲಾಗಿದೆ. ಕೇವಲ ಲಸಿಕೆ ಪಡೆದಿರುವವರು ಮಾತ್ರವೇ ಸಾರ್ವಜನಿಕ ಸಾರಿಗೆಯಲ್ಲಿ ಪ್ರಯಾಣಿಸಬಹುದು, ಸಿನಿಮಾ ಥಿಯೇಟರ್‌ಗಳು ಶೇ.50ರ ಆಸನ ಭರ್ತಿಯೊಂದಿಗೆ ಬೆಳಗ್ಗೆ 8ರಿಂದ ರಾತ್ರಿ 10ರವರೆಗೆ ಮಾತ್ರ ಕಾರ್ಯನಿರ್ವಹಿಸಬಹುದು ಎಂದು ಸಿಎಂ ಉದ್ಧವ್‌ ಠಾಕ್ರೆ ಘೋಷಿಸಿದ್ದಾರೆ. ಖಾಸಗಿ ಕಚೇರಿಗಳಲ್ಲೂ ಶೇ.50ರ ನಿಯಮ, ಸಾಧ್ಯವಾದರೆ ವರ್ಕ್‌ ಫ್ರಂ ಹೋಂ ಮಾಡಲು ಸೂಚಿಸಲಾಗಿದೆ. ಬೆಳಗ್ಗೆ 5ರಿಂದ ರಾತ್ರಿ 11ರವರೆಗೆ 5 ಅಥವಾ ಹೆಚ್ಚಿನ ಸಂಖ್ಯೆಯಲ್ಲಿ ಜನರು ಗುಂಪಾಗಿ ಓಡಾಡುವಂತಿಲ್ಲ. ಜ.10ರ ಮಧ್ಯರಾತ್ರಿಯಿಂದಲೇ ಹೊಸ ನಿಯಮ ಅನ್ವಯವಾಗಲಿದ್ದು, ಅಗತ್ಯ ಸೇವೆ ಹೊರತುಪಡಿಸಿ ರಾತ್ರಿ 11ರಿಂದ ಬೆ.5ರವರೆಗೆ ಯಾರೂ ಹೊರಗೆ ಓಡಾಡುವಂತಿಲ್ಲ ಎಂದೂ ಮಾರ್ಗಸೂಚಿಯಲ್ಲಿ ತಿಳಿಸಲಾಗಿದೆ.

ಈ ನಡುವೆ, “ಕೊರೊನಾ ಕೇಸುಗಳ ಮೇಲೆ ಗಮನ ಕೊಡುವುದನ್ನು ನಿಲ್ಲಿಸಿ. ಒಮಿಕ್ರಾನ್‌ ಹೆಚ್ಚು ಗಂಭೀರ ಸಮಸ್ಯೆ ಉಂಟುಮಾಡುವುದಿಲ್ಲ ಎಂದು ದತ್ತಾಂಶಗಳೇ ಹೇಳಿವೆ’ ಎಂದು ರಾಷ್ಟ್ರೀಯ ಕೋವಿಡ್‌ ಸೂಪರ್‌ಮಾಡೆಲ್‌ ಕಮಿಟಿ ಅಧ್ಯಕ್ಷ ಎಂ. ವಿದ್ಯಾಸಾಗರ್‌ ಹೇಳಿದ್ದಾರೆ.

ಇದನ್ನೂ ಓದಿ:ಹಿಮವರ್ಷ: ಕಾಶ್ಮೀರದಲ್ಲಿ ವಿಮಾನ ಸಂಚಾರಕ್ಕೂ ಅಡ್ಡಿ

ಒಮಿಕ್ರಾನ್‌: ಭಯ ಅಗತ್ಯವಿಲ್ಲ
ಭಾರತವು ಒಮಿಕ್ರಾನ್‌ ಅಲೆಗೆ ಪ್ರವೇಶ ಪಡೆದಿದೆಯಾದರೂ, ಡೆಲ್ಟಾಗೆ ಹೋಲಿಸಿದರೆ ಒಮಿಕ್ರಾನ್‌ ಗಂಭೀರತೆ ಕಡಿಮೆಯಿರಲಿದೆ ಎಂದು ಅಮೆರಿಕ ಮೂಲದ ಆರೋಗ್ಯ ತಜ್ಞ ಡಾ. ಕ್ರಿಸ್ಟೋಫ‌ರ್‌ ಹೇಳಿದ್ದಾರೆ.

ಫೆಬ್ರವರಿಯಲ್ಲೇ ಭಾರತದಲ್ಲಿ ಒಮಿಕ್ರಾನ್‌ ಉತ್ತುಂಗಕ್ಕೇರಲಿದ್ದು, ದಿನಕ್ಕೆ 5 ಲಕ್ಷದಷ್ಟು ಮಂದಿಗೆ ಸೋಂಕು ತಗುಲುವ ಸಾಧ್ಯತೆಯಿದೆ. ದಕ್ಷಿಣ ಆಫ್ರಿಕಾದಲ್ಲೂ ಡೆಲ್ಟಾ, ಬೀಟಾ ಸೋಂಕಿನ ನಡುವೆಯೇ ಒಮಿಕ್ರಾನ್‌ ಪ್ರವೇಶವಾಗಿತ್ತು. ಆದರೆ, ಸೋಂಕಿತರಿಗೆ ಲಸಿಕೆಯು ಸಾಕಷ್ಟು ಪ್ರಮಾಣದಲ್ಲಿ ಸುರಕ್ಷತೆ ಒದಗಿಸಿದೆ. ಭಾರತದಲ್ಲೂ ಕೇಸುಗಳ ಸಂಖ್ಯೆ ಹೆಚ್ಚಾದರೂ, ಆಸ್ಪತ್ರೆ ಸೇರುವವರ ಪ್ರಮಾಣ ಮತ್ತು ಮರಣ ಪ್ರಮಾಣ ತಗ್ಗಿರಲಿದೆ ಎಂದೂ ಅವರು ಹೇಳಿದ್ದಾರೆ. ಇದೇ ವೇಳೆ. ಫೆ1ರಿಂದ 15ರೊಳಗೆ ದೇಶದಲ್ಲಿ 3ನೇ ಅಲೆ ಉತ್ತುಂಗಕ್ಕೇರಲಿದೆ ಎಂದು ಐಐಟಿ ಮದ್ರಾಸ್‌ ಕೂಡ ವಿಶ್ಲೇಷಿಸಿದೆ.

 

ಟಾಪ್ ನ್ಯೂಸ್

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

ARMY (2)

ಕಾಶ್ಮೀರದ ಉಧಂಪುರದಲ್ಲಿ ಗ್ರಾಮ ರಕ್ಷಣ ಸಿಬಂದಿ ಹತ್ಯೆ

arrested

ಮಹಾದೇವ್‌ ಆ್ಯಪ್‌ ಕೇಸು: ನಟ ಸಾಹಿಲ್‌ ಖಾನ್‌ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.