ಧರ್ಮಸ್ಥಳ: ಮೊಳಗಿದ ಶಿವಪಂಚಾಕ್ಷರಿ ಪಠಣ
Team Udayavani, Mar 2, 2022, 12:38 PM IST
ಬೆಳ್ತಂಗಡಿ : ಮಹಾಶಿವರಾತ್ರಿ ಪ್ರಯುಕ್ತ ಶ್ರೀ ಕ್ಷೇತ್ರ ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿ ಸಹಿತ ತಾಲೂಕಿನ ಪ್ರಮುಖ ಶಿವ ದೇವಸ್ಥಾನಗಳಲ್ಲಿ ವಿಶೇಷ ಪ್ರಾರ್ಥನೆ, ಶಿವನಾಮ ಸಂಕೀರ್ತನೆ, ಶತ ರುದ್ರಾಭಿಷೇಕ ಬಿಲ್ವಾರ್ಚನೆ ಮುಂತಾದ ಸೇವೆಗಳು ನಡೆಯಿತು.
ವಿವಿಧ ಕಡೆಗಳಿಂದ ಪಾದಯಾತ್ರೆ ಆರಂಭಿಸಿದ್ದ ಪಾದಯಾತ್ರಿಗಳು ಮಾ.1ಕ್ಕೆ ಧರ್ಮಸ್ಥಳಕ್ಕೆ ತಲುಪಿ ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಪಡೆದು ಧರ್ಮಸ್ಥಳ ಧರ್ಮಾಧಿಕಾರಿಗಳನ್ನು ಭೇಟಿಯಾಗಿ ಆಶೀರ್ವಾದ ಪಡೆದರು. ಮಂಗಳವಾರ ದೇವಸ್ಥಾನವು ಯಾತ್ರಿಕರಿಂದ ಆವರಿಸಿತ್ತು.
ಕ್ಷೇತ್ರಗಳಿಗೆ ಅಲಂಕಾರ
ಶ್ರೀ ಕ್ಷೇತ್ರ ಧರ್ಮಸ್ಥಳವನ್ನು ವಿಶೇಷ ಹೂ ಸಹಿತ ವಿದ್ಯುತ್ ದೀಪಗಳಿಂದ ಸಿಂಗರಿಸಲಾಗಿದೆ. ಕ್ಷೇತ್ರದ ಡಿ.ಹರ್ಷೇಂದ್ರ ಕುಮಾರ್ ಅವರ ಮಾರ್ಗದರ್ಶನದಲ್ಲಿ ಸ್ವತ್ಛತೆಗೆ ಆದ್ಯತೆ ನೀಡಲಾಗಿದೆ. ಸನ್ನಿಧಾನದಲ್ಲಿ ಪ್ಲಾಸ್ಟಿಕ್ ಬಳಸದಂತೆ ಜಾಗೃತಿ ಫಲಕ ಸಹಿತ ಸೂಚನ ಫಲಕ ಅಳವಡಿಸಲಾಗಿದೆ. ಮಂಗಳವಾರ ಮುಂಜಾನೆಯಿಂದಲೇ ನೇತ್ರಾವತಿ ಸ್ನಾನ ಘಟ್ಟ ಸಹಿತ ಎಲ್ಲೆಡೆ ಭಕ್ತರು ತಂಗಿದ್ದರು. ದೇವಸ್ಥಾನ ಮುಂಭಾಗ ಧರ್ಮಸ್ಥಳ ಧರ್ಮಾಧಿಕಾರಿ ಡಾ| ಡಿ.ವೀರೇಂದ್ರ ಹೆಗ್ಗಡೆ ಅವರು ಅಹೋರಾತ್ರಿ ಜಾಗರಣೆಗೆ ಚಾಲನೆ ನೀಡಿದರು. ಸುಮಾರು 2 ಲಕ್ಷಕ್ಕೂ ಅಧಿಕ ಮಂದಿ ಕಳೆದ ಎರಡು ದಿನಗಳಲ್ಲಿ ದೇವರ ದರ್ಶನ ಪಡೆದಿದ್ದು, ಕ್ಷೇತ್ರದಿಂದ ನಿರಂತರ ಅನ್ನದಾನ ಸೇವೆ ನೆರವೇರಿತು.
ಇಂದಬೆಟ್ಟುವಿನ ಅರ್ಧನಾರೀಶ್ವರ ಸ್ವಾಮಿ ಸನ್ನಿಧಿಯಲ್ಲಿ ಭಕ್ತರಿಂದ ಸಾಮೂಹಿಕ ಶಿವ ಸಹಸ್ರನಾಮ ಪಠಣ ನಡೆಯಿತು. ದೇವಸ್ಥಾನವನ್ನು ಹೂಗಳಿಂದ ಅಲಂಕರಿಸಲಾಗಿತ್ತು. ಶ್ರೀ ಕ್ಷೇತ್ರ ಓಡೀಲು ಮಹಾಲಿಂಗೇಶ್ವರ ದೇವಸ್ಥಾನ, ಉಜಿರೆ ಜನಾರ್ದನ ದೇವಸ್ಥಾನ, ಸುರ್ಯ ಶ್ರೀ ಸದಾಶಿವರುದ್ರ ದೇವಸ್ಥಾನ ಸಹಿತ ಪ್ರಮುಖ ದೇವಸ್ಥಾನಗಳಲ್ಲಿ ವಿಶೇಷ ಸೇವೆಗಳು ನಡೆದವು.
ಇದನ್ನೂ ಓದಿ : ಉಕ್ರೇನ್ ಸಂಕಷ್ಟ: ಸಚಿವ ಪ್ರಹ್ಲಾದ್ ಜೋಶಿ ಹೇಳಿಕೆ ವಿರುದ್ಧ ವ್ಯಾಪಕ ಆಕ್ರೋಶ
ಭಕ್ತರಿಂದ ಕಲಾ ಸೇವೆ
ಶಿವರಾತ್ರಿ ಪ್ರಯುಕ್ತ ಭಕ್ತರು ದೇವಸ್ಥಾನದ ಮುಂಭಾಗ ಲಕ್ಷೋಪಮಂದಿ ಸೇರಿದ್ದರು. ಮುಂಜಾನೆವರೆಗು ಶಿವನಾಮಜಪದಲ್ಲಿ ತೊಡಗಿರುತ್ತಾರೆ. ಭಕ್ತಿಯಿಂದ ರಾಜ್ಯದ ನಾನಾ ಕಡೆಗಳಿಂದ ಬಂದ ಕಲಾ ತಂಡಗಳು ಡೊಳ್ಳು, ನಗಾರಿ, ಶಂಖ, ಸೇರಿದಂತೆ ವಿವಿಧ ಪ್ರಕಾರಗಳ ಕಲಾ ಸೇವೆಯನ್ನು ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು
Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ
LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ
Pramod, Pruthvi Ambaar: ಪೋಸ್ಟ್ ಪ್ರೊಡಕ್ಷನ್ನಲ್ಲಿ ‘ಭುವನಂ ಗಗನಂ’
Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ