ಮಲಪ್ರಭಾ ನದಿ ಒತ್ತುವರಿ ವಿಚಾರವನ್ನು ವಿಧಾನಸಭೆ ಕಲಾಪದಲ್ಲಿ ಚರ್ಚಿಸುವೆ : ಸಿದ್ದರಾಮಯ್ಯ


Team Udayavani, Sep 15, 2020, 3:22 PM IST

ಮಲಪ್ರಭಾ ನದಿ ಒತ್ತುವರಿ ವಿಚಾರವನ್ನು ವಿಧಾನಸಭೆ ಕಲಾಪದಲ್ಲಿ ಚರ್ಚಿಸುವೆ : ಸಿದ್ದರಾಮಯ್ಯ

ಬಾಗಲಕೋಟೆ: ಮಲಪ್ರಭಾ ನದಿ ಒತ್ತುವರಿಯಾಗಿದೆ. ಈ ಕುರಿತು ಜಲ ಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಜತೆಗೆ ಚರ್ಚೆ ಮಾಡುತ್ತೇನೆ. ಸೆ. 21ರಿಂದ ಆರಂಭಗೊಳ್ಳಲಿರುವ ವಿಧಾನಸಭೆ ಕಲಾಪದಲ್ಲೂ ಪ್ರಸ್ತಾಪಿಸುವೆ ಎಂದು ಬಾದಾಮಿ ಶಾಸಕರೂ ಆಗಿರುವ ವಿಧಾನಸಭೆ ವಿರೋಧ ಪಕ್ಷದ ನಾಯಕ, ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದರು.

ಬಾದಾಮಿ ಕ್ಷೇತ್ರದ ಗೋವಿನಕೊಪ್ಪ ಬಳಿ ವಿಜಯಪುರ-ಹುಬ್ಬಳ್ಳಿ ರಾಷ್ಟ್ರೀಯ ಹೆದ್ದಾರಿಯ ಹಳೆಯ ಸೇತುವೆ ಹಾನಿಯಾದ
ಪ್ರದೇಶಕ್ಕೆ ಭೇಟಿ ನೀಡಿದ ಬಳಿಕ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.

ಮಲಪ್ರಭಾ ನದಿ ಪ್ರವಾಹದಿಂದ 22.44 ಕೋಟಿ ಮೊತ್ತದ 3600 ಹೆಕ್ಟೇರ್‌ ಬೆಳೆ ಬಾದಾಮಿ ಕ್ಷೇತ್ರದಲ್ಲಿ ಹಾನಿಯಾಗಿದೆ. ಅಧಿವೇಶನದಲ್ಲಿ ರಾಜ್ಯ ಹಾಗೂ ಬಾದಾಮಿಯ ನೆರೆ ಹಾವಳಿ ಕುರಿತು ಮಾತಾಡುತ್ತೇನೆ. ಕಳೆದ ಬಾರಿಯೂ ನೆರೆ ಪರಿಹಾರ
ಸರಿಯಾಗಿ ಕೊಟ್ಟಿಲ್ಲ. ಗೋವಿನಕೊಪ್ಪ ಹಳೆಯ ಸೇತುವೆ ದುರಸ್ತಿ ಮಾಡಿ, ಎತ್ತರಿಸುವಂತೆ ಕಳೆದ ಬಾರಿಯೇ ಒತ್ತಾಯ ಮಾಡಿದ್ದೆ.
ಒಂದು ವರ್ಷವಾದರೂ ಮಾಡಿಲ್ಲ. ಪ್ರವಾಹದ ಬಗ್ಗೆ ಕಳೆದ ಬಾರಿ 3ರಿಂದ 4 ಗಂಟೆ ಮಾತನಾಡಿದ್ದೆ. ರಾಜ್ಯದಲ್ಲಿ ಈ ವರ್ಷ 8871
ಕೋಟಿ ಹಾನಿಯಾಗಿದೆ ಎಂದು ಸರ್ಕಾರ ಹೇಳಿದೆ. ಈ ವರೆಗೂ ಕೇಂದ್ರವಾಗಲಿ, ರಾಜ್ಯ ಸರ್ಕಾರವಾಗಲಿ ಒಂದು ರೂಪಾಯಿ
ಪರಿಹಾರ ಕೊಟ್ಟಿಲ್ಲ ಎಂದರು.

ಮುಂದಿನ ವಾರ ಅಧಿವೇಶನ ಶುರುವಾಗಲಿದ್ದು, ಈ ಕುರಿತು ಸವಿಸ್ತಾರವಾಗಿ ಮಾತನಾಡುವೆ. ಸೇತುವೆ, ರಸ್ತೆಗಳನ್ನು ತಕ್ಷಣ ದುರಸ್ತಿ ಮಾಡಲು ಒತ್ತಾಯಿಸುವೆ ಎಂದು ತಿಳಿಸಿದರು. ನದಿ ಒತ್ತುವರಿಯೂ ಚರ್ಚೆ: ಮಲಪ್ರಭಾ ನದಿಯನ್ನು ಬಹಳ ಜನ ಒತ್ತುವರಿ ಮಾಡಿದ್ದಾರೆ. ನದಿ ಪಾತ್ರವನ್ನು ತೆರವು ಮಾಡಬೇಕೆಂಬ ಒತ್ತಾಯವಿದೆ. ನದಿ ಒತ್ತುವರಿಯಾದರೆ ಪದೇ ಪದೇ ಪ್ರವಾಹ ಬರುತ್ತದೆ. ಈ ಕುರಿತೂ ಅಧಿವೇಶನದಲ್ಲಿ ಚರ್ಚೆ ಮಾಡುತ್ತೇನೆ ಎಂದು ಹೇಳಿದರು.

ಜಿಪಂ ಅಧ್ಯಕ್ಷೆ ಬಾಯಕ್ಕ ಮೇಟಿ, ಮಾಜಿ ಸಚಿವರಾದ ಎಚ್‌.ವೈ. ಮೇಟಿ, ಬಿ.ಬಿ. ಚಿಮ್ಮನಕಟ್ಟಿ, ಕಾಂಗ್ರೆಸ್‌ ಮುಖಂಡರಾದ ಹೊಳಬಸು ಶೆಟ್ಟರ, ಮಹೇಶ ಹೊಸಗೌಡರ, ಎಂ.ಬಿ. ಹಂಗರಗಿ, ಸಣ್ಣಬೀರಪ್ಪ ಪೂಜಾರ, ವೆಂಕಣ್ಣ ಹೊರಕೇರಿ, ಹನಮಂತ ನರಗುಂದ, ಬಸು ಕಟ್ಟಿಕಾರ, ಶೇಖಪ್ಪ ಪವಾಡಿನಾಯ್ಕರ, ಶಿವಾನಂದ ಚೋಳನ್ನವರ, ಬಸಪ್ಪ ಧರೆಗೌಡ್ರ, ಉಪ ವಿಭಾಗಾಧಿಕಾರಿ ಎಂ. ಗಂಗಪ್ಪ, ತಹಶೀಲ್ದಾರ್‌ ಸುಹಾಸ ಇಂಗಳೆ, ಸಿಪಿಐ ರಮೇಶ ಹಾನಾಪುರ, ಪಿಎಸ್‌ಐ ಪ್ರಕಾಶ ಬಣಕಾರ ಉಪಸ್ಥಿತರಿದ್ದರು.

ಆಶ್ರಯ ಕಾಲೋನಿ ರಸ್ತೆಗೆ ರೈತನ ಭೂಮಿ: ಸಿದ್ದ ರಾಮಯ್ಯ ನೆರವು ಬಾದಾಮಿ ತಾಲೂಕಿನ ಮಲಪ್ರಭಾ ನದಿ ದಡದ ತಳಕವಾಡ ಗ್ರಾಮದಲ್ಲಿ ಆಶ್ರಯ ಕಾಲೋನಿಗೆ ತೆರಳಲು ಸಾರ್ವಜನಿಕರ ಅನುಕೂಲಕ್ಕಾಗಿ ತನ್ನ ಭೂಮಿಯನ್ನೇ ರಸ್ತೆ ನಿರ್ಮಾಣಕ್ಕೆ ನೀಡಿದ ರೈತನಿಗೆ ಮಾಜಿ ಸಿಎಂ ಸಿದ್ದರಾಮಯ್ಯ, ತಮ್ಮ ವೈಯಕ್ತಿಕ ನೆರವು ನೀಡುವ ಮೂಲಕ ರೈತನ ಕಾರ್ಯಕ್ಕೆ
ಮೆಚ್ಚುಗೆ ವ್ಯಕ್ತಪಡಿಸಿದರು. ತಳಕವಾಡದ ವೀರಯ್ಯ ಮೂಗನೂರ ಕುಟುಂಬದವರು, ಆಶ್ರಯ ಕಾಲೋನಿಗೆ ತೆರಳಲು ರಸ್ತೆ ನಿರ್ಮಾಣಕ್ಕೆ ಭೂಮಿ ನೀಡಿದ್ದು, ಅವರ ಕುಟುಂಬಕ್ಕೆ ಸಿದ್ದರಾಮಯ್ಯ ವೈಯಕ್ತಿಕ 1 ಲಕ್ಷ ನೀಡಿದರು.

ಟಾಪ್ ನ್ಯೂಸ್

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qwwqeqw

Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weqwewq

Belur: ದೈತ್ಯ ‘ಕರಡಿ’ ಆನೆ ಕೊನೆಗೂ ಸೆರೆ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Amit Shah

Modi 3.0 ಅವಧಿಯಲ್ಲಿ ನಕ್ಸಲ್‌ ಮುಕ್ತ ದೇಶ: ಅಮಿತ್‌ ಶಾ

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

1-weqwewq

Belur: ದೈತ್ಯ ‘ಕರಡಿ’ ಆನೆ ಕೊನೆಗೂ ಸೆರೆ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.