3 ಬಾರಿ ನಡೆಯದ ಪುರಸಭೆ ಸಭೆ ಆಡಳಿತಾಧಿಕಾರಿಯಿಂದ ಸದಸ್ಯರಿಗೆ ಅವಮಾನ: ಆರೋಪ


Team Udayavani, Sep 10, 2020, 4:10 PM IST

3 ಬಾರಿ ನಡೆಯದ ಪುರಸಭೆ ಸಭೆ ಆಡಳಿತಾಧಿಕಾರಿಯಿಂದ ಸದಸ್ಯರಿಗೆ ಅವಮಾನ: ಆರೋಪ

ಮಳವಳ್ಳಿ: ಪಟ್ಟಣದಲ್ಲಿನ ಸಮಸ್ಯೆಗಳ ಬಗ್ಗೆ ಚರ್ಚಿಸಲು ಮೂರು ಬಾರಿ ಸಭೆ ಕರೆದು ಸಭೆ ನಡೆಸದೇ ಆಡಳಿತಾಧಿಕಾರಿ ಅವಮಾನ ಮಾಡಿದ್ದಾರೆ ಎಂದು ಆರೋಪಿಸಿ ಪುರಸಭೆ ಸದಸ್ಯರು ಪಕ್ಷಾತೀತವಾಗಿ ಪ್ರತಿಭಟನೆ ನಡೆಸಿದರು.
ಪಟ್ಟಣದ ಪುರಸಭೆ ಕಚೇರಿ ಮುಂದೆ ಜಮಾಯಿಸಿದ ಜಾ.ದಳ, ಕಾಂಗ್ರೆಸ್‌ ಮತ್ತು ಬಿಜೆಪಿ ಸದಸ್ಯರು ಆಡಳಿತಾಧಿಕಾರಿ ಆಗಿರುವ ಉಪವಿಭಾಗಾಧಿಕಾರಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಜನರ ಸಮಸ್ಯೆ ಚರ್ಚಿಸುತ್ತಿಲ್ಲ: ಪುರಸಭೆ ಸದಸ್ಯ ನಂದಕುಮಾರ್‌ ಮಾತನಾಡಿ, ಕಳೆದ ಮೂರು ತಿಂಗಳಿಂದ ಮೂರು ಬಾರಿ ಸಭೆ ಕರೆದು ಯಾವುದೇ ಮಾಹಿತಿ ನೀಡದೆ ಏಕಾಏಕಿ ಮುಂದೂಡ ಲಾಗಿದೆ. ಇದರಿಂದ ಪಟ್ಟಣದ ಜನರ ಸಮಸ್ಯೆಗಳ ಚರ್ಚಿಸಲು ಸಾಧ್ಯವಾಗಿಲ್ಲ. ನಮ್ಮ ವಾರ್ಡ್‌ಗಳಲ್ಲಿ ಸಾಕಷ್ಟು ಮೂಲಭೂತ ಸೌಕರ್ಯಗಳ ಕೊರತೆ ಇದ್ದು, ಪಟ್ಟಣದಲ್ಲಿನ ಜನರ ಹಾಗೂ ಮತದಾರರಿಂದ ಆಯ್ಕೆಯಾದ ನಮ್ಮ ಮಾತುಗಳನ್ನು ಅಧಿಕಾರಿಗಳನ್ನು ಕೇಳುವುದಿಲ್ಲ ಎಂದು ಆರೋಪಿಸಿದರು.

ಆಡಳಿತಕ್ಕೆ ಅವಕಾಶ ಸಿಕ್ಕಿಲ್ಲ: ಗೆದ್ದು ಒಂದೂವರೆ ವರ್ಷವಾದರೂ ನಮಗೆ ಆಡಳಿತ ನಡೆಸಲು ಅವಕಾಶ ಸಿಕ್ಕಿಲ್ಲ. ಅಧ್ಯಕ್ಷ ಮತ್ತು ಉಪಾಧ್ಯಕ್ಷ ಮೀಸಲಾತಿ ಸಂಬಂಧ ಪ್ರಕರಣ ನ್ಯಾಯಾಲಯಲ್ಲಿದ್ದು, ಈ ಮಧ್ಯೆ ಆಡಳಿತಾಧಿಕಾರಿಯಾಗಿ ಉಪವಿಭಾಗಾಧಿಕಾರಿ ಅವರನ್ನು ನೇಮಕ ಮಾಡಲಾಗಿದೆ. ಅವರು ಕಳೆದ ಜು.6, ಆ.8 ಮತ್ತು ಸೆ.9ರಂದು ಸಭೆ ಕರೆದಿದ್ದರು. ಆದರೆ, ಸಭೆ ಆರಂಭವಾಗುವುದು ಅರ್ಧ ಗಂಟೆ ಇದ್ದಾಗ ಸಭೆಯನ್ನು ರದ್ದುಪಡಿಸಲಾಗಿದೆ ಎಂದು ಪುರಸಭೆ ಅಧಿಕಾರಿಗಳು ದೂರವಾಣಿ ಕರೆ ಮಾಡಿ ತಿಳಿಸುತ್ತಾರೆ.

ಅಧಿಕಾರಿಗಳು ಸಹ ಪುರಸಭೆ ವ್ಯಾಪ್ತಿಯಲ್ಲಿ ಮೂಲಭೂತ ಸೌಕರ್ಯಗಳನ್ನು ಕಲ್ಪಿಸದೆ ಇರುವುದು ಬೇಸರ ಸಂಗತಿಯಾಗಿದೆ. ಜನರಿಂದ ಆಯ್ಕೆಯಾದ ನಮಗೆ ಮಾಡುತ್ತಿರುವ ಅವಮಾನವಾಗಿದೆ. ಕೂಡಲೇ ಆಡಳಿತಾಧಿಕಾರಿ ಸಭೆ ಕರೆಯಬೇಕು. ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಹೋರಾಟ ನಡೆಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

ಪುರಸಭೆ ಸದಸ್ಯರಾದ ಪ್ರಶಾಂತ್‌ಕುಮಾರ್‌, ಬಸವರಾಜು, ಪುಟ್ಟಸ್ವಾಮಿ, ರವಿ, ವಡ್ಡರಹಳ್ಳಿ ಸಿದ್ದರಾಜು, ಕುಮಾರ್‌, ನಾಗೇಶ್‌, ನೂರುಲ್ಲಾ, ಸುನೀತಾ, ಮಹೇಶ್ವರಿ, ಸವಿತಾ, ಅಥಿಯ ಬೇಗಂ, ಮಣಿ, ಇಂದ್ರಮ್ಮ, ಪ್ರಮೀಳ, ಶಿವಕುಮಾರ್‌, ಭಾಗ್ಯಮ್ಮ, ಪುರಸಭೆ ಮಾಜಿ ಅಧ್ಯಕ್ಷ ದೊಡ್ಡಯ್ಯ ಹಾಜರಿದ್ದರು.

ಟಾಪ್ ನ್ಯೂಸ್

arrested

Bangaluru cafe ಸ್ಫೋಟದ ಸಂಚುಕೋರ ಎನ್‌ಐಎ ಬಲೆಗೆ: ಯಾರಿದು ಷರೀಫ್?

1-qeqewqeqwe

IPL ಉದ್ಘಾಟನ ಸಮಾರಂಭ ವೀಕ್ಷಣೆ: ಹೊಸ ದಾಖಲೆ

1-wqweqeqweqweqeeqeqwe

ILO ವರದಿ; ಭಾರತದಲ್ಲಿ ನಿರುದ್ಯೋಗ ಉಲ್ಬಣ

Anant KUmar Hegde

Uttara Kannada BJP; ಅನಂತ್‌ ಕುಮಾರ ಹೆಗಡೆ ತಟಸ್ಥ?: ಪ್ರಚಾರದಿಂದಲೂ ದೂರ

1-wqeweeqwqewq

MGNREGA; ಉದ್ಯೋಗ ಖಾತ್ರಿ ಯೋಜನೆ: ಕಾರ್ಮಿಕರ ವೇತನ ಹೆಚ್ಚಳ

congress

Congress; ಕೋಲಾರಕ್ಕೆ ಗೌತಮ್‌ ಅಚ್ಚರಿಯ ಅಭ್ಯರ್ಥಿ?: 3ನೇ ವ್ಯಕ್ತಿಗೆ ಲಾಭ!

rape

Sullia;ಕೂಜಿಮಲೆ ಪ್ರದೇಶದಲ್ಲಿ ಕಾಣಿಸಿಕೊಂಡಾಕೆ ನಕ್ಸಲ್‌ ಅಲ್ಲ: ರಾಜಸ್ಥಾನಿ ಮಹಿಳೆ !


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

arrested

Bangaluru cafe ಸ್ಫೋಟದ ಸಂಚುಕೋರ ಎನ್‌ಐಎ ಬಲೆಗೆ: ಯಾರಿದು ಷರೀಫ್?

Lok Sabha Election: ಬಿಜೆಪಿ-ಜೆಡಿಎಸ್‌ “ಜಂಟಿ ಸಮರಾಭ್ಯಾಸ’

Lok Sabha Election: ಬಿಜೆಪಿ-ಜೆಡಿಎಸ್‌ “ಜಂಟಿ ಸಮರಾಭ್ಯಾಸ’

congress

Congress; ಕೋಲಾರಕ್ಕೆ ಗೌತಮ್‌ ಅಚ್ಚರಿಯ ಅಭ್ಯರ್ಥಿ?: 3ನೇ ವ್ಯಕ್ತಿಗೆ ಲಾಭ!

32

Politics: ಟಿಕೆಟ್‌ ಹಂಚಿಕೆ ಮರುಪರಿಶೀಲಿಸಿ ಎಂದ ವೀಣಾ ಬೆಂಬಲಿಗರಿಗೆ ಸಿಎಂ ತಿರುಗೇಟು

IMD

North Karnataka; ಹಲವು ಜಿಲ್ಲೆಗಳಲ್ಲಿ ಎರಡು ದಿನ ಉಷ್ಣ ಅಲೆ ಸಾಧ್ಯತೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

arrested

Bangaluru cafe ಸ್ಫೋಟದ ಸಂಚುಕೋರ ಎನ್‌ಐಎ ಬಲೆಗೆ: ಯಾರಿದು ಷರೀಫ್?

1-qeqewqeqwe

IPL ಉದ್ಘಾಟನ ಸಮಾರಂಭ ವೀಕ್ಷಣೆ: ಹೊಸ ದಾಖಲೆ

Lok Sabha Election: ಬಿಜೆಪಿ-ಜೆಡಿಎಸ್‌ “ಜಂಟಿ ಸಮರಾಭ್ಯಾಸ’

Lok Sabha Election: ಬಿಜೆಪಿ-ಜೆಡಿಎಸ್‌ “ಜಂಟಿ ಸಮರಾಭ್ಯಾಸ’

1-wqweqeqweqweqeeqeqwe

ILO ವರದಿ; ಭಾರತದಲ್ಲಿ ನಿರುದ್ಯೋಗ ಉಲ್ಬಣ

Anant KUmar Hegde

Uttara Kannada BJP; ಅನಂತ್‌ ಕುಮಾರ ಹೆಗಡೆ ತಟಸ್ಥ?: ಪ್ರಚಾರದಿಂದಲೂ ದೂರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.