ಮಲ್ಪೆಯ ಮೀನುಗಾರಿಕೆ ಬೋಟ್ ಗೋವಾದಲ್ಲಿ ಮುಳುಗಡೆ, 7 ಮಂದಿಯ ರಕ್ಷಣೆ
Team Udayavani, Jun 2, 2020, 10:42 PM IST
ಮಲ್ಪೆ: ಮೀನುಗಾರಿಕೆಗೆ ತೆರಳಿದ್ದ ಮಲ್ಪೆಯ ಆಳಸಮುದ್ರ ಬೋಟ್ ಮಂಗಳವಾರ ಮಧ್ಯಾಹ್ನ ಗೋವಾ ಸಮೀಪ ಮುಳುಗಡೆ ಗೊಂಡಿದೆ. ಬೋಟಿನಲ್ಲಿದ್ದ 7 ಮಂದಿ ಮೀನುಗಾರರನ್ನು ರಕ್ಷಿಸಲಾಗಿದೆ.
ಮಲ್ಪೆ ವಡಭಾಂಡೇಶ್ವರದ ದೀಪಿಕಾ ಅವರ ಮಾಲಕತ್ವದ ಶ್ರೀ ದುರ್ಗಾ ಹನುಮ ಆಳಸಮುದ್ರ ಬೋಟ್ ಮೇ 23ರಂದು ಮಲ್ಪೆ ಬಂದರಿನಿಂದ ಮೀನುಗಾರಿಕೆಗೆ ತೆರಳಿತ್ತು. ಮಹಾರಾಷ್ಟ್ರದಲ್ಲಿ ಮೀನುಗಾರಿಕೆ ನಡೆಸಿ ವಾಪಸು ಬರುವಾಗ ಮಂಗಳವಾರ ಅಪರಾಹ್ನ 2ರ ವೇಳೆಗೆ ಗೋವಾ ಸಮೀಪದ ರೆಡ್ಹೌಸ್ ಬಳಿ ಸುಮಾರು 27 ನಾಟಿಕಲ್ ಮೈಲು ದೂರದಲ್ಲಿರುವಾಗ ಗಾಳಿಯ ರಭಸಕ್ಕೆ ಫೈಬರ್ ಒಡೆದು ನೀರು ಬೋಟಿನ ಒಳ ಸೇರಿ ಬೋಟ್ ಮುಳುಗಲಾರಂಭಿಸಿತು. ಅದರಲ್ಲಿದ್ದ ಮೀನುಗಾರರು ತತ್ಕ್ಷಣ ಬೇರೆ ಬೋಟಿ ನವರೆಗೆ ಮಾಹಿತಿ ನೀಡಿದರು.
ಬೋಟಿನಲ್ಲಿದ್ದ ಉ.ಕ. ಜಿಲ್ಲೆಯ ಕೇಶವ ಮಾದೇವ ಮೊಗೇರ, ನಾಗರಾಜ್ ಈಶ್ವರ ಮೊಗೇರ, ರಾಮಚಂದ್ರ ನಾರಾಯಣ ನಾಯ್ಕ, ಈಶ್ವರ ವೆಂಕಟರಮಣ ಹರಿಕಾಂತ್ರ, ದಿನೇಶ್ ಜಟ್ಟ ಮೊಗೇರ, ಗುರುರಾಜ್ ಮಂಜುನಾಥ ಮೊಗೇರ, ಚಿದಂಬರ ಗಣಪತಿ ಹರಿಕಾಂತ್ರ ಅವರನ್ನು ಸಮೀಪದಲ್ಲಿದ್ದ ಶಿವಬೈರವ ಬೋಟಿನವರು ರಕ್ಷಿಸಿ ದಡ ಸೇರಿಸಿದ್ದಾರೆ. ಸುಮಾರು 8 ಲಕ್ಷ ರೂ. ಮೌಲ್ಯದ ಮೀನು, ಡೀಸೆಲ್ ಸಮುದ್ರಪಾಲಾಗಿವೆೆ. ಸುಮಾರು 60 ಲಕ್ಷ ರೂ. ನಷ್ಟ ಉಂಟಾಗಿದೆ ಎಂದು ಅಂದಾಜಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ
ಜಯಪ್ರಕಾಶ್ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್ ಕುಮಾರ್ ಮುರೊಳ್ಳಿ
ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು
ಕಾರ್ಗಿಲ್ ಯೋಧ ಮೆಲ್ವಿನ್ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ
ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್