ಸವದತ್ತಿಯ ಮಹಿಳಾ ಪೇದೆ ಈಗ ಪಿಎಸ್‍ಐ : ಸೇವಾನಿರತ ಮೀಸಲಾತಿಯಡಿ ರಾಜ್ಯಕ್ಕೆ ಪ್ರಥಮ ಸ್ಥಾನ


Team Udayavani, Jan 24, 2022, 6:21 PM IST

ಸವದತ್ತಿ ಮಹಿಳಾ ಪೇದೆ ಈಗ ಪಿಎಸೈ : ಸೇವಾನಿರತ ಮೀಸಲಾತಿಯಡಿ ರಾಜ್ಯಕ್ಕೆ ಪ್ರಥಮ ಸ್ಥಾನ

ಸವದತ್ತಿ : ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಸುಧೀರ್ಘ 10 ವರ್ಷ ಸೇವೆ ಸಲ್ಲಿಸುತ್ತಿರುವ ಮಹಿಳಾ ಪೊಲೀಸ್ ಪೇದೆ ಮಮತಾ ಗೈಬಿನಾಥ ಜೋಗೀಸ್ ಪಿಎಸ್‍ಐ ಪರೀಕ್ಷೆಯಲ್ಲಿ ಸೇವಾ ನಿರತ ಮೀಸಲಾತಿಯಡಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದ್ದಾರೆ.

ಮೂಲತಃ ರಾಮದುರ್ಗದವರಾದ ಇವರು, ಬಡ ಕುಟುಂಬದಲ್ಲಿ ಜನಿಸಿದ ಇವರು ತಾಯಿಯ ಗರ್ಭದಲ್ಲಿರುವಾಗಲೇ ತಂದೆ ಗೌಬಿನಾಥ ನಿಧನರಾದರು. ಇವರ ಸೋದರ ಮಾವ ವೀರಭದ್ರ ಸಹಾಯದೊಂದಿಗೆ ತಾಯಿ ಮಾಸವ್ವ ರಾಮದುರ್ಗದಲ್ಲಿ ಕೂಲಿ-ನಾಲಿ ಮಾಡಿ ಮಗಳಿಗೆ ಉತ್ತಮ ಶಿಕ್ಷಣ ನೀಡಿದರು. ರಾಮದುರ್ಗದ ಶಾಸಕರ ವಿದ್ಯಾಚೇತನ ಮಾದರಿ ಶಾಲೆಯಲ್ಲಿ ಪ್ರಾಥಮಿಕ ಶಿಕ್ಷಣ, ನೇತಾಜಿ ಸುಭಾಸ ಚಂದ್ರ ಭೋಸ್ ಶಾಲೆಯಲ್ಲಿ ಪ್ರೌಢ ಶಿಕ್ಷಣ ಪಡೆದಿದ್ದಾರೆ.

ಮೊದಲಿನಿಂದಲೂ ಬಡತನವನ್ನು ಕಣ್ಣಾರೆ ಕಂಡ ಇವರು ಏನನ್ನಾದರೂ ಸಾಧಿಸಬೇಕೆಂಬ ಹಂಬಲ, ತಾಯಿಯನ್ನು ಸುಖವಾಗಿಟ್ಟುಕೊಳ್ಳಬೇಕೆಂಬ ಆಸೆಯಿಂದ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ನಡೆಸಿದರು. ಆರಂಭದಲ್ಲಿ ಯಶ ಕಂಡ ಇವರು 2010ರ ಸಿವಿಲ್ ಕಾನ್ಸ್ ಟೇಬಲ್ ಹುದ್ದೆ ಗಿಟ್ಟಿಸಿಕೊಂಡರು. ನಂತರ 2013ರಲ್ಲಿ ದೂರ ಶಿಕ್ಷಣದ ಮೂಲಕ ಬಿ.ಎ ಪದವಿ ಮುಗಿಸಿ ಪಿಎಸೈ ಹುದ್ದೆಗೆ ತಯಾರಿ ನಡೆಸಿದರು.

ಸತತ ಪ್ರಯತ್ನ, ಕಠಿಣ ಪರಿಶ್ರಮ ಹಾಗೂ ಧೃಡ ನಂಬಿಕೆಯಿದ್ದರೆ ಯಾವುದು ಅಸಾಧ್ಯವಲ್ಲ ಎಂಬುವದನ್ನು ಮಮತಾ ಜೋಗೀಸ್ 2021ರ ಪಿಎಸೈ ಹುದ್ದೆಗೆ ಆಯ್ಕೆಯಾಗುವದರ ಮೂಲಕ ತೋರಿಸಿಕೊಟ್ಟಿದ್ದಾರೆ. ಮಹಿಳಾ ಮೀಸಲು ಕೋಟಾದಡಿ ಪಿಎಸ್‍ಐ ಹುದ್ದೆಗೆ ಆಯ್ಕೆಯಾಗಿ ರಾಜ್ಯಕ್ಕೆ ಮಹಿಳಾ ವಿಭಾಗದಲ್ಲಿ ಪ್ರಥಮ ಸ್ಥಾನ ತಮ್ಮದಾಗಿಸಿಕೊಂಡಿದ್ದಾರೆ. ಇವರ ಈ ಸಾಧನೆಗೆ ಠಾಣಾ ಅಧಿಕಾರಿಗಳು ಹಾಗೂ ಸಿಬ್ಬಂದಿ ಅಭಿನಂದಿಸಿದ್ದಾರೆ.

ಇದನ್ನೂ ಓದಿ : ಸಂಪರ್ಕದಲ್ಲಿರುವ ಬಿಜೆಪಿ ಶಾಸಕರ ಮಾಹಿತಿ ಬಿಟ್ಟುಕೊಡಲ್ಲ:ಡಿಕೆಶಿ

ಟಾಪ್ ನ್ಯೂಸ್

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.