ಹುಬ್ಬಳ್ಳಿ: ಬಸ್ನಲ್ಲಿ ಮಹಿಳೆಯ ಸೀಟ್ ನಲ್ಲಿ ಮೂತ್ರ ವಿಸರ್ಜನೆ ಮಾಡಿದ ವ್ಯಕ್ತಿ
ಘಟನೆ ಬೆಳಕಿಗೆ ; ಸ್ಪಷ್ಟನೆ ನೀಡಿದ ಕೆಎಸ್ಆರ್ಟಿಸಿ
Team Udayavani, Feb 23, 2023, 7:16 PM IST
ಮಂಗಳೂರು: ಏರ್ ಇಂಡಿಯಾ ವಿಮಾನದಲ್ಲಿ ಮೂತ್ರ ವಿಸರ್ಜನೆ ಪ್ರಕರಣ ನಡೆದ ಕೆಲವು ದಿನಗಳ ನಂತರ, ಫೆಬ್ರವರಿ 21 ರಂದು ವಿಜಯಪುರದಿಂದ ಮಂಗಳೂರಿಗೆ ತೆರಳುತ್ತಿದ್ದ ಕೆಎಸ್ಆರ್ಟಿಸಿ ಬಸ್ನಲ್ಲಿ ಇದೇ ರೀತಿಯ ಘಟನೆ ನಡೆದಿದೆ ಎಂದು ಹೇಳಲಾಗಿದೆ.
ಮೆಕ್ಯಾನಿಕಲ್ ಇಂಜಿನಿಯರ್ ಆಗಿರುವ ಆರೋಪಿ 32 ವರ್ಷ ವಯಸ್ಸಿನ ಯುವಕ ಹುಬ್ಬಳ್ಳಿ ನಗರ ಸಮೀಪದ ಕಿರೇಸೂರಿನಲ್ಲಿ ಊಟಕ್ಕೆಂದು ಬಸ್ ನಿಲ್ಲಿಸಿದಾಗ ಮಹಿಳೆಯ ಸೀಟಿನ ಮೇಲೆ ಮೂತ್ರ ವಿಸರ್ಜನೆ ಮಾಡಿದ್ದಾನೆ ಎಂಬ ಆರೋಪ ಕೇಳಿ ಬಂದಿದೆ.
ವರದಿಗಳ ಪ್ರಕಾರ, ಮಹಿಳೆ ಮತ್ತು ಇತರ ಬಸ್ ಪ್ರಯಾಣಿಕರು ರಾತ್ರಿ ಊಟಕ್ಕೆ ಬಸ್ನಿಂದ ಇಳಿದಿದ್ದರು. ಮಹಿಳೆ ಬಸ್ಸಿಗೆ ಹಿಂತಿರುಗಿದಾಗ, ಆರೋಪಿ ತನ್ನ ಸೀಟಿನಲ್ಲಿ ಮೂತ್ರ ವಿಸರ್ಜಿಸುತ್ತಿರುವುದನ್ನು ಕಂಡು ಎಚ್ಚರಿಕೆ ನೀಡಿದ್ದು, ಗಲಾಟೆ ಕೇಳಿ ಇತರ ಪ್ರಯಾಣಿಕರು ಧಾವಿಸಿದರು.
ಘಟನೆಯ ಕುರಿತು ಸ್ಪಷ್ಟನೆ ನೀಡಿರುವ ಕೆಎಸ್ಆರ್ಟಿಸಿ, “ದೂರು ಸ್ವೀಕರಿಸಿದ ನಂತರ ವಿಜಯಪುರ-ಮಂಗಳೂರು ಬಸ್ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಕಂಡಕ್ಟರ್ ಹೇಳಿಕೆಯನ್ನು ತೆಗೆದುಕೊಳ್ಳಲಾಗಿದೆ.
“ಬಸ್ಸಿನ ಸಿಬಂದಿ ಕಿರೇಸೂರು ಹೋಟೆಲ್ನಲ್ಲಿ ರಾತ್ರಿ 10.30 ಕ್ಕೆ ಊಟ ಮತ್ತು 15-20 ನಿಮಿಷಗಳ ವಿರಾಮದ ಬಗ್ಗೆ ಪ್ರಯಾಣಿಕರಿಗೆ ತಿಳಿಸಿದರು.
ಬಿಡುವಿನ ವೇಳೆಯಲ್ಲಿ ಮದ್ಯದ ಅಮಲಿನಲ್ಲಿ ಪ್ರಯಾಣಿಸುತ್ತಿದ್ದ ಕಾಯ್ದಿರಿಸದ ಪ್ರಯಾಣಿಕ ಬಸ್ನಿಂದ ಹೊರಬರುವ ಬದಲು ಸೀಟ್ ನಂಬರ್ 3 ರಲ್ಲಿ ಮೂತ್ರ ವಿಸರ್ಜನೆ ಮಾಡುತ್ತಿರುವುದು ಕಂಡುಬಂದಿದೆ.
ವಿರಾಮದ ಬಳಿಕ ಬಸ್ ಹತ್ತಿದ ಅದೇ ಸೀಟಿನಲ್ಲಿ ಪ್ರಯಾಣಿಸಬೇಕಾಗಿದ್ದ ಮಹಿಳೆ ನೋಡಿದ್ದಾರೆ. ಆ ಬಳಿಕ ಚಾಲಕ, ಕಂಡಕ್ಟರ್ ಮತ್ತು ಇತರ ಪ್ರಯಾಣಿಕರು ಆತನನ್ನು ಬಸ್ನಿಂದ ಇಳಿಸಿ ಹೋಟೆಲ್ ಬಳಿ ಬಿಟ್ಟರು.
ಸೀಟನ್ನು ಡ್ರೈವರ್ ಮತ್ತು ಕಂಡಕ್ಟರ್ ನೀರಿನಿಂದ ತೊಳೆದು ಬಟ್ಟೆಯಿಂದ ಒರೆಸಿದರು ಬಳಿಕ ಮಹಿಳೆಗೆ ಬೇರೆ ಸೀಟಿನಲ್ಲಿ ಪ್ರಯಾಣಿಸಲು ವಿನಂತಿಸಲಾಯಿತು.
ಮಹಿಳೆ ಮೇಲೆ ಮೂತ್ರ ವಿಸರ್ಜನೆ ಮಾಡಿದ್ದಾರೆ ಎಂಬ ಆರೋಪ ಸರಿಯಲ್ಲ ಎಂದು ಕೆಎಸ್ಆರ್ಟಿಸಿ ಸ್ಪಷ್ಟಪಡಿಸಿದೆ. ಘಟನೆಯ ನಂತರ ಬಸ್ ಸಿಬಂದಿ ಮಹಿಳಾ ಪ್ರಯಾಣಿಕರಿಗೆ ಭದ್ರತೆ ಮತ್ತು ಸುರಕ್ಷತೆಯ ಭರವಸೆ ನೀಡಿದರು ಮತ್ತು ಸಹಾಯ ಮಾಡಿದರು ಎಂದು ಮೂಲಗಳು ತಿಳಿಸಿವೆ. ಘಟನೆಯ ನಂತರ ಮಹಿಳಾ ಪ್ರಯಾಣಿಕರು ಆಘಾತಕ್ಕೊಳಗಾಗಿದ್ದರು ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.
ಆರೋಪಿಯು ಸಹ ಪ್ರಯಾಣಿಕರು ಹಾಗೂ ಬಸ್ಸಿನ ಸಿಬಂದಿಯೊಂದಿಗೆ ವಾಗ್ವಾದಕ್ಕೆ ಇಳಿದಿದ್ದ. ಆದರೆ, ಸಂತ್ರಸ್ತ ಮಹಿಳೆ ಈ ಬಗ್ಗೆ ಪೊಲೀಸ್ ದೂರು ನೀಡಲು ನಿರಾಕರಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ. ಮಹಿಳೆ ದೂರು ನೀಡಲು ಸಿದ್ಧರಿಲ್ಲದ ಕಾರಣ ಪ್ರಯಾಣ ಮುಂದುವರಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಸಂತ್ರಸ್ತ ಮಹಿಳೆ ವಿಜಯಪುರದಿಂದ ಹುಬ್ಬಳ್ಳಿಗೆ ಪ್ರಯಾಣ ಬೆಳೆಸಿದ್ದರು ಎಂದು ಮೂಲಗಳು ವಿವರಿಸಿವೆ.
ಮಹಿಳಾ ಪ್ರಯಾಣಿಕರಿಗೆ ಸಂದೇಶ ನೀಡಲು ಘಟನೆಗೆ ಸಂಬಂಧಿಸಿದಂತೆ ದೂರು ದಾಖಲಿಸಲು ಅಧಿಕಾರಿಗಳು ಚಿಂತನೆ ನಡೆಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ
Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್ಸಿ ಮೀಸಲಾತಿ ಹೇಳಿಕೆಗೆ ವಿರೋಧ
Lok Sabha Election; ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ
MUST WATCH
ಹೊಸ ಸೇರ್ಪಡೆ
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್
Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ