ಮಂಡ್ಯ: ನಾಲೆಗೆ ಬಿದ್ದ ಬಸ್: 20ಕ್ಕೂ ಹೆಚ್ಚು ಮಂದಿಗೆ ಗಾಯ
Team Udayavani, Feb 19, 2023, 5:35 AM IST
ಮಂಡ್ಯ: ಗಾರ್ಮೆಂಟ್ಸ್ ನೌಕರರನ್ನು ಕರೆದೊಯ್ಯುವ ಬಸ್ ರಸ್ತೆ ಬದಿ ನಾಲೆಗೆ ಉರುಳಿ ಬಿದ್ದ ಪರಿಣಾಮ ಹತ್ತಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಘಟನೆ ತಾಲೂಕಿನ ಡಣನಾಯಕನಪುರ ಗ್ರಾಮದ ಬಳಿ ಶುಕ್ರವಾರ ಸಂಜೆ ಸಂಭವಿಸಿದೆ.
ಘಟನೆಯಲ್ಲಿ ಚಾಲಕ ಸೇರಿ ಹಲವರಿಗೆ ಕೈ-ಕಾಲು ಮುರಿತವಾಗಿದ್ದು, ಕೆಲವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಎಲ್ಲ ಗಾಯಾಳುಗಳನ್ನು ಮಂಡ್ಯ ಮಿಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.
ಮಂಡ್ಯ ತಾಲೂಕಿನ ಶಿವಾರ ಮಾರ್ಗದ ನೌಕರರನ್ನು ಕರೆದೊಯ್ಯುವ ಖಾಸಗಿ ಬಸ್ ಆಗಿದ್ದು, ಗಾರ್ಮೆಂಟ್ಸ್ನಿಂದ ಕೆಲಸ ಮುಗಿಸಿ ಶಿವಾರ ಸೇರಿ ಸುತ್ತಮುತ್ತಲ ಗ್ರಾಮಕ್ಕೆ ತೆರಳುತ್ತಿದ್ದ ಬಸ್ ಆಯ ತಪ್ಪಿ ನಾಲೆಗೆ ಉರುಳಿ ಬಿದ್ದಿದೆ.
ನಾಲೆಯಲ್ಲಿ ಹೆಚ್ಚಾಗಿ ನೀರು ಇರದ ಪರಿಣಾಮ ಪ್ರಾಣಾಪಾಯದಿಂದ ಎಲ್ಲರೂ ಪಾರಾಗಿದ್ದಾರೆ. ಕೆರಗೋಡು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ
Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ
Sumalatha Ambareesh: ಟ್ವೀಟ್ನಲ್ಲಿ ಸಂಸದೆ ಸುಮಲತಾ ಅಂಬರೀಶ್ ವಿವೇಕದ ಪಾಠ
Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ
ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ