ಕ್ಷುಲ್ಲಕ ವಿಚಾರಕ್ಕೆ ಜಗಳ : ಚಾಕುವಿನಿಂದ ಇರಿದು ವೃದ್ಧನ ಕೊಲೆ
Team Udayavani, Oct 29, 2020, 4:00 PM IST
ಮಂಡ್ಯ: ತಾಲೂಕಿನ ಶಿವಳ್ಳಿ ಗ್ರಾಮದಲ್ಲಿ ಬುಧವಾರ ರಾತ್ರಿ ವೃದ್ಧನನ್ನು ಚಾಕುವಿನಿಂದ ಇರಿದು ಕೊಲೆ ಮಾಡಲಾಗಿದೆ.
ಗ್ರಾಮದ ಚೆನ್ನವೀರಯ್ಯ(72) ಮೃತ. ಈತನನ್ನು ಅದೇ ಗ್ರಾಮದ ಮೋಹನ್ ಎಂಬಾತ ಚಾಕುವಿನಿಂದ ಇರಿದು ಕೊಲೆ ಮಾಡಿದ್ದಾನೆ ಎಂದು ಆರೋಪಿಸಲಾಗಿದೆ.
ಇಬ್ಬರ ಮನೆ ಅಕ್ಕಪಕ್ಕದಲ್ಲಿದೆ. ಈ ಕುಟುಂಬಗಳ ನಡುವೆ ಆಗಾಗ್ಗೆ ಸಣ್ಣಪುಟ್ಟ ವಿಚಾರಕ್ಕೆ ಗಲಾಟೆಗಳು ನಡೆಯುತ್ತಿತ್ತು ಎನ್ನಲಾಗಿದೆ. ಬುಧವಾರ ರಾತ್ರಿ ಚೆನ್ನವೀರಯ್ಯ ಕ್ಷುಲ್ಲಕ ವಿಚಾರಕ್ಕೆ ಜಗಳ ತೆಗೆದು ಮೋಹನ್ ತಾಯಿಯನ್ನು ನಿಂದಿಸಿದ್ದಾನೆ. ಈ ವಿಚಾರ ತಿಳಿದ ಮೋಹನ್, ಚಾಕುವಿನಿಂದ ಇರಿದಿದ್ದಾನೆ. ಇದರಿಂದ ತೀವ್ರ ರಕ್ತಸ್ರಾವದಿಂದ ಒದ್ದಾಡುತ್ತಿದ್ದ ಚೆನ್ನವೀರಯ್ಯನನ್ನು ಆಸ್ಪತ್ರೆಗೆ ಸಾಗಿಸುತ್ತಿದ್ದ ಮಾರ್ಗ ಮಧ್ಯೆ ಮೃತಪಟ್ಟಿದ್ದಾನೆ ಎಂದು ತಿಳಿದು ಬಂದಿದೆ.
ಸ್ಥಳಕ್ಕೆ ಮಂಡ್ಯ ಗ್ರಾಮಾಂತರ ವೃತ್ತ ನಿರೀಕ್ಷಕ ಮಹೇಶ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಶಿವಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ:ಫ್ರಾನ್ಸ್ ಚರ್ಚ್ ನೊಳಗೆ ಟೆರರ್ ಅಟ್ಯಾಕ್?: ಮಹಿಳೆಯ ರುಂಡ ಕತ್ತರಿಸಿ ಹತ್ಯೆ, ಆರೋಪಿ ಸೆರೆ