ಮಂಗಳಾದೇವಿ: ವಸತಿಗೃಹ ಸಹಿತ ಸುಸಜ್ಜಿತ ಬಸ್‌ ಟರ್ಮಿನಲ್‌

ಹಳೆಯ ಕಟ್ಟಡ ತೆರವಿಗೆ ನಿರ್ಧಾರ; ಸ್ಮಾರ್ಟ್‌ಸಿಟಿ-ಪಾಲಿಕೆಯಿಂದ ಹೊಸ ಯೋಜನೆ

Team Udayavani, Feb 28, 2022, 2:24 PM IST

ಮಂಗಳಾದೇವಿ: ವಸತಿಗೃಹ ಸಹಿತ ಸುಸಜ್ಜಿತ ಬಸ್‌ ಟರ್ಮಿನಲ್‌

ಮಂಗಳಾದೇವಿ : ಇತಿಹಾಸ ಪ್ರಸಿದ್ಧ ಶ್ರೀ ಮಂಗಳಾ ದೇವಿ ದೇವ ಸ್ಥಾನದ ಸಮೀಪದಲ್ಲಿರುವ ಪಾಲಿಕೆಯ ಹಳೆಯ ಕೆಲವು ಕಟ್ಟಡಗಳನ್ನು ತೆರವುಗೊಳಿಸಿ ಅಲ್ಲಿ ಬಸ್‌ ಟರ್ಮಿನಲ್‌, ವಸತಿಗೃಹ ಸಹಿತ ಬಹು ಉಪಯೋಗಿ ಕಟ್ಟಡ ನಿರ್ಮಾಣಕ್ಕೆ ಮಹಾನಗರ ಪಾಲಿಕೆ ಹಾಗೂ ಸ್ಮಾರ್ಟ್‌ಸಿಟಿ ಜಂಟಿಯಾಗಿ ನಿರ್ಧರಿಸಿದೆ.

ಸದ್ಯ ಇಲ್ಲಿ ಜಪ್ಪು ಹೆರಿಗೆ ಕೇಂದ್ರ, ಡಿಸ್ಪೆನ್ಸರಿ, ಪಶುವೈದ್ಯಕೀಯ ಚಿಕಿತ್ಸಾಲಯ, ನಗರ ನೈರ್ಮಲ್ಯ ನಿರೀಕ್ಷಕರ ಕಚೇರಿ ಹಾಗೂ ವಸತಿಗೃಹಗಳಿವೆ. ಸದ್ಯ ಇವು ಹಳೆಯ ಕಟ್ಟಡಗಳಾಗಿದ್ದು ಉಪಯೋಗಿಸಲು ಯೋಗ್ಯವಲ್ಲದ ರೀತಿಯಲ್ಲಿವೆ. ಹೀಗಾಗಿ ಇಲ್ಲಿನ ಹಳೆಯ ಕಟ್ಟಡವನ್ನು ತೆರವುಗೊಳಿಸುವುದು ಅನಿವಾರ್ಯ ವಾಗಿದೆ ಎಂದು ಪಾಲಿಕೆ ನಿರ್ಧರಿಸಿದೆ.

ಈ ಸ್ಥಳವು ಪಾಲಿಕೆಗೆ ಸೇರಿದ್ದು ಹಾಗೂ ಕಟ್ಟಡಗಳು ಸಹ ಪಾಲಿಕೆಯ ಆಸ್ತಿ. ಇವುಗಳು ಬರೋಬ್ಬರಿ 60 ವರ್ಷಗಳಿಗಿಂತಲೂ ಹಳೆಯದಾಗಿದ್ದು, ನಾದುರಸ್ತಿಯಲ್ಲಿದೆ. ದುರಸ್ತಿ, ನಿರ್ವಹಣೆಗೆ ಬಹಳಷ್ಟು ಖರ್ಚು ತಗಲುವ ನಿರೀಕ್ಷೆಯಿದೆ. ಹೀಗಾಗಿ ಇಲ್ಲಿನ ಹಳೆ ಕಟ್ಟಡವನ್ನು ತೆರವುಗೊಳಿಸಿ ಇಲ್ಲಿ ಬಹು ಉಪಯೋಗಿ ಅಭಿವೃದ್ಧಿ ಕಾಮಗಾರಿ ಕೈಗೆತ್ತಿಕೊಳ್ಳುವಂತೆ ಮೇಯರ್‌ ಪ್ರೇಮಾನಂದ ಶೆಟ್ಟಿ ಅವರು ಆಯುಕ್ತರಾದ ಅಕ್ಷಯ್‌ ಶ್ರೀಧರ್‌ ಅವರಿಗೆ ಸೂಚಿಸಿದ್ದರು.

ಈ ಸ್ಥಳದಲ್ಲಿ ಬಸ್‌ ಟರ್ಮಿನಲ್‌, ವಸತಿ ಗೃಹಗಳು, ಪ್ರಾಥಮಿಕ ಆರೋಗ್ಯ ಕೇಂದ್ರ, ಪಶು ವೈದ್ಯ ಚಿಕಿತ್ಸಾಲಯ ಹಾಗೂ ನೈರ್ಮಲ್ಯ ನಿರೀಕ್ಷಕರ ವಾರ್ಡ್‌ ಕಚೇರಿ ಇತ್ಯಾದಿಗಳನ್ನು ಒಳಗೊಂಡ ಬಹು ಉಪಯೋಗಿ ಬಸ್‌ ಟರ್ಮಿನಲ್‌ ಹಬ್‌ ಅಭಿವೃದ್ಧಿಪಡಿಸುವ ಪ್ರಸ್ತಾವ ಸಿದ್ಧಪಡಿಸಲಾಗಿದೆ. ಪಾಲಿಕೆಯ ಸಹಯೋಗದೊಂದಿಗೆ ವಸತಿಗೃಹಗಳ ನಿರ್ಮಾಣ ಮಾಡುವುದು ಹಾಗೂ ಬಸ್‌ ಟರ್ಮಿನಲ್‌, ಪ್ರಾಥಮಿಕ ಆರೋಗ್ಯ ಕೇಂದ್ರ, ಪಶು ವೈದ್ಯ ಚಿಕಿತ್ಸಾಲಯವನ್ನು ಸ್ಮಾರ್ಟ್‌ಸಿಟಿ ವತಿಯಿಂದ ಅಭಿವೃದ್ಧಿಪಡಿಸಲಾಗುತ್ತದೆ.

ಸ್ಮಾರ್ಟ್‌ಸಿಟಿ ವತಿಯಿಂದ ಬಸ್‌ ಟರ್ಮಿನಲ್‌, ಪ್ರಾಥಮಿಕ ಆರೋಗ್ಯ ಕೇಂದ್ರ, ಪಶು ವೈದ್ಯ ಚಿಕಿತ್ಸಾಲಯಗಳನ್ನು ನಿರ್ಮಿಸಲು ಪ್ರಸ್ತಾವನೆ ತಯಾರಿಸಲಾಗಿದೆ. ಇದಕ್ಕೆ ಒಟ್ಟು 442 ಲಕ್ಷ ರೂ. ಎಂದು ಅಂದಾಜಿಸಲಾಗಿದ್ದು ಟೆಂಡರ್‌ ಕರೆಯಲಾಗಿದೆ.

ಬಹುಉಪಯೋಗಿ ಕಟ್ಟಡ ಯೋಜನೆ
ಪಾಲಿಕೆಗೆ ಸೇರಿದ ಸ್ಥಳದಲ್ಲಿ ಇರುವ ಅಪಾಯಕಾರಿ ವಸತಿಗೃಹ, ಡಿಸ್ಪೆನ್ಸರಿ, ಪಶುವೈದ್ಯ ಚಿಕಿತ್ಸಾಲಯ, ಪ್ರಾಥಮಿಕ ಆರೋಗ್ಯ ಕೇಂದ್ರ ಕಟ್ಟಡಗಳನ್ನು ತೆರವುಗೊಳಿಸಲು ಪಾಲಿಕೆ ಪರಿಷತ್‌ನಲ್ಲಿ ಒಪ್ಪಿಗೆ ದೊರೆತಿದೆ. ಇಲ್ಲಿ ಬಸ್‌ ಟರ್ಮಿನಲ್‌, ವಸತಿಗೃಹ ಸಹಿತ ಬಹು ಉಪಯೋಗಿ ಜನಸ್ನೇಹಿ ಯೋಜನೆಗಳ ಅನುಷ್ಠಾನಕ್ಕೆ ಸ್ಮಾರ್ಟ್‌ ಸಿಟಿಯಲ್ಲಿ ಕ್ರಮ ಕೈಗೊಳ್ಳಲಾಗಿದೆ. ಈ ಯೋಜನೆ ಜಾರಿಯಾಗುವ ಮೂಲಕ ಮಂಗಳಾದೇವಿ ವ್ಯಾಪ್ತಿಯಲ್ಲಿ ಅಭಿವೃದ್ಧಿಯ ಹೊಸ ಕನಸು ಸಾಕಾರವಾಗಲಿದೆ.- ಪ್ರೇಮಾನಂದ ಶೆಟ್ಟಿ, ಮೇಯರ್‌, ಮಹಾನಗರ ಪಾಲಿಕೆ

20 ವಸತಿಗೃಹ
ಹಾಲಿ ಅಪಾಯಕಾರಿ ಸ್ಥಿತಿಯಲ್ಲಿರುವ ವಸತಿಗೃಹಗಳನ್ನು ತೆರವುಗೊಳಿಸಿ ಐದು ಅಂತಸ್ತಿನಲ್ಲಿ (ಪ್ರತೀ ಅಂತಸ್ತಿನಲ್ಲಿ 4 ವಸತಿ ಗೃಹ-ಪ್ರತೀ ಮನೆ 99 ಚದರ ಅಡಿ)ಒಟ್ಟು 20 ವಸತಿಗೃಹಗಳನ್ನು ನಿರ್ಮಿಸಲು ಉದ್ದೇಶಿಸಲಾಗಿದೆ. ಅದರಂತೆ ಪ್ರಥಮ ಹಂತದಲ್ಲಿ ಎರಡು ಅಂತಸ್ತಿನ ಎಂಟು ವಸತಿಗೃಹಗಳಿಗೆ ಒಟ್ಟು 199.50 ಲಕ್ಷ ರೂ. ಪ್ರಸ್ತಾವನೆ ತಯಾರಿಸಲಾಗಿದೆ. ಇದು ನಿರ್ಮಾಣವಾದರೆ ಪಾಲಿಕೆ ಸಿಬಂದಿಗೆ ನೆರವಾಗಬಹುದು.

– ದಿನೇಶ್‌ ಇರಾ

ಟಾಪ್ ನ್ಯೂಸ್

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.