Mangalore: ಕುಕ್ಕರ್ ಬಾಂಬ್ ಸ್ಫೋಟ- ಸದ್ಯದಲ್ಲೇ ಆರೋಪಪಟ್ಟಿ ಸಲ್ಲಿಕೆ
Team Udayavani, Nov 23, 2023, 11:44 PM IST
ಬೆಂಗಳೂರು: ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣದ ತನಿಖೆ ಪೂರ್ಣಗೊಳಿಸಿರುವ ರಾಷ್ಟ್ರೀಯ ತನಿಖಾ ದಳ(ಎನ್ಐಎ) ಅಧಿಕಾರಿಗಳು ಆರೋಪಿ ಶಾರಿಕ್ ಸಹಿತ ಐವರ ವಿರುದ್ಧ ಸದ್ಯದಲ್ಲೇ ಆರೋಪಪಟ್ಟಿ ಸಲ್ಲಿಸಲಿದ್ದಾರೆ.
ಪ್ರಕರಣ ಸಂಬಂಧ ಈಗಾಗಲೇ ಶಾರಿಕ್, ಮಾಜ್ ಮುನೀರ್, ಯಾಸೀನ್, ಅರಾಫತ್ ಸಹಿತ ಐವರನ್ನು ಬಂಧಿಸಲಾಗಿದೆ. ಜತೆಗೆ ಆರೋಪಿಗಳ ವಿರುದ್ಧ 50ಕ್ಕೂ ಹೆಚ್ಚು ಸಾಕ್ಷಿಗಳ ಹೇಳಿಕೆ ಹಾಗೂ ತಾಂತ್ರಿಕ ಸಾಕ್ಷ್ಯಗಳನ್ನು ಸಂಗ್ರಹಿಸಲಾಗಿದೆ. ಸ್ಫೋಟಕ್ಕೆ ಎಲ್ಲೆಲ್ಲಿ ಸಂಚು ರೂಪಿಸಲಾಗಿತ್ತು? ತರಬೇತಿ ಎಲ್ಲಿ ನಡೆಸಲಾಗಿತ್ತು? ಕೃತ್ಯದಲ್ಲಿ ಯಾರೆಲ್ಲಭಾಗಿಯಾಗಿದ್ದರು? ಪ್ರಾಯೋಗಿಕ ತರಬೇತಿ ಪಡೆದು ಸ್ಫೋಟಿಸಿದ್ದ ಶಿವಮೊಗ್ಗದ ತುಂಗಾ ನದಿ ತೀರದ ಸ್ಥಳವನ್ನು ಆರೋಪಪಟ್ಟಿಯಲ್ಲಿ ಉಲ್ಲೇಖೀಸಲಾಗುತ್ತದೆ ಎಂದು ಮೂಲಗಳು ತಿಳಿಸಿವೆ.
ಪ್ರಮುಖವಾಗಿ ಶಂಕಿತರು ಕದ್ರಿ ದೇವಸ್ಥಾನ ಸ್ಫೋಟಕ್ಕೆ ಸಂಚು ರೂಪಿಸಿದ್ದರು ಎಂಬುದು ತನಿಖೆಯಲ್ಲಿ ಬೆಳಕಿಗೆ ಬಂದಿತ್ತು. ಹೀಗಾಗಿ ಕದ್ರಿ ದೇವಸ್ಥಾನ ಸ್ಫೋಟಕ್ಕೆ ಎಲ್ಲಿ ಯೋಜನೆ ರೂಪಿಸಲಾಗಿತ್ತು. ತರಬೇತಿ ಎಲ್ಲಿ ನಡೆಸಲಾಗಿತ್ತು, ಕದ್ರಿ ದೇವಸ್ಥಾನ ಸ್ಫೋಟದ ಬಳಿಕ ಉಡುಪಿ ಕೃಷ್ಣ ಮಠ, ಚಿಕ್ಕಮಗಳೂರು ಬಿಜೆಪಿ ಕಚೇರಿ ಸ್ಫೋಟ ಹೊಣೆಯೂ ಇದೇ ಶಾರಿಕ್ ವಹಿಸಿದ್ದ. ಜತೆಗೆ ಕೆಲವು ಮಠಗಳನ್ನು ಗುರಿಯಾಗಿಸಿಕೊಂಡಿದ್ದು, ಅವುಗಳ ಸ್ಫೋಟಕ್ಕೂ ಸಂಚು ರೂಪಿಸಿದ್ದ ಬಗ್ಗೆಯೂ ಉಲ್ಲೇಖೀಸಲಾಗಿದೆ. ಜತೆಗೆ, ಆರು ತಿಂಗಳ ಕಾಲ ನಿರಂತರವಾಗಿ ತರಬೇತಿ ಪಡೆದ ಬಗ್ಗೆಯೂ ಮಾಹಿತಿ ಇದರಲ್ಲಿದೆ. ವಿದೇಶಿ ಹ್ಯಾಂಡ್ಲರ್ಗಳ ಬಗ್ಗೆಯೂ ಸ್ಫೋಟಕ ವಿಚಾರಗಳನ್ನು ಆರೋಪಿಗಳು ಬಾಯಿಬಿಟ್ಟಿದ್ದಾರೆ. ಸ್ಫೋಟಕಗಳನ್ನು ಖರೀದಿಗೆ ವಿದೇಶದಿಂದ ಸಾಕಷ್ಟು ಹಣ ಬರುತ್ತಿತ್ತು. ಇದೇ ಹಣದಿಂದ ಆರೋಪಿಗಳು ಸ್ಫೋಟಕ್ಕೆ ಬೇಕಾದ ವಸ್ತುಗಳನ್ನು ಖರೀದಿಸುತ್ತಿದ್ದರು. ಜತೆಗೆ ಇವರ ಖರ್ಚು ವೆಚ್ಚಗಳನ್ನು ಹ್ಯಾಂಡ್ಲರ್ಗಳೇ ನೋಡಿಕೊಳ್ಳುತ್ತಿದ್ದರು ಎಂಬುದು ಉಲ್ಲೇಖವಾಗಿದೆ ಎಂದು ಮೂಲಗಳು ತಿಳಿಸಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ
Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು
Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ
Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್
Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್
MUST WATCH
ಹೊಸ ಸೇರ್ಪಡೆ
Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ
Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ
Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ