Mangalore: ಬರ ಎದುರಿಸುವುದಕ್ಕೆ ಮಂಗಳೂರು, ಮೂಡುಬಿದಿರೆ ಸಜ್ಜು


Team Udayavani, Feb 10, 2024, 1:34 PM IST

Mangalore: ಬರ ಎದುರಿಸುವುದಕ್ಕೆ ಮಂಗಳೂರು, ಮೂಡುಬಿದಿರೆ ಸಜ್ಜು

ಮಹಾನಗರ: ಜಿಲ್ಲೆಯ ಎರಡು ತಾಲೂಕುಗಳು “ಸಾಧಾರಣ ಬರಪೀಡಿತ’ ತಾಲೂಕುಗಳ ಪಟ್ಟಿಯಲ್ಲಿ ಕಾಣಿಸಿಕೊಂಡ ಬಳಿಕ ಈ ಬೇಸಗೆಯಲ್ಲಿ ಸಮಸ್ಯೆಗಳಾಗದಂತೆ ಜಿಲ್ಲಾಡಳಿತ ಕ್ರಮಗಳಿಗೆ ಮುಂದಾಗಿದೆ. ಮಂಗಳೂರು ಹಾಗೂ ಮೂಡುಬಿದಿರೆ ಈ ಎರಡೂ ತಾಲೂಕುಗಳೂ ಮಳೆ ಕೊರತೆ ಆಧಾರದಲ್ಲಿ ಬರಪೀಡಿತವೆಂದು ಘೋಷಿಸಲ್ಪಟ್ಟಿದ್ದರೂ ಹಿಂಗಾರು ಮಳೆ ಉತ್ತಮವಾಗಿ (ವಾಡಿಕೆಗಿಂತ ಶೇ. 5 ಹೆಚ್ಚಳ)ಬಿದ್ದಿರುವುದು ಜನರಿಗೆ, ಆಡಳಿತಕ್ಕೆ ತುಸು ನಿರಾಳವೆನಿಸಿದೆ.

ಆದರೂ ಫೆಬ್ರವರಿ ಕೊನೆಗೆ ಅಥವಾ ಮಾರ್ಚ್‌ ವೇಳೆಗೆ ಮಳೆಯಾಗದಿದ್ದರೆ ಈ ಎರಡೂ ತಾಲೂಕುಗಳಲ್ಲಿ ಎಲ್ಲೆಲ್ಲಿ ಸಮಸ್ಯೆಯಾಗಬಹುದು ಎನ್ನುವುದನ್ನು ಆಯಾ ಗ್ರಾಮ ಪಂಚಾಯತ್‌, ಪಟ್ಟಣ ಪಂಚಾಯತ್‌ಗಳ ವ್ಯಾಪ್ತಿಯಲ್ಲೇ ಬರ ನಿವಾರಣ ಯೋಜನೆ ಸಿದ್ಧಪಡಿಸಲಾಗಿದೆ. ಎಲ್ಲ ಪೂರ್ವಸಿದ್ಧತೆಗಳನ್ನೂ ಮಾಡಿಕೊಳ್ಳಲಾಗಿದ್ದು, ನೀರು ಹಾಗೂ ಜಾನುವಾರುಗಳ ಮೇವಿನ ಒದಗಣೆಗೆ ಪೂರ್ವ ತಯಾರಿ ಮಾಡಿಕೊಳ್ಳಲಾಗಿದೆ. ಸದ್ಯಕ್ಕೆ ಯಾವುದೇ ಸಮಸ್ಯೆ ಕಂಡು ಬಂದಿಲ್ಲ.

ಕುಡಿಯುವ ನೀರಿನ ಕೊರತೆ ಬರಬಹುದಾದ ಕಡೆಗಳಲ್ಲಿ ಹತ್ತಿರದಲ್ಲಿರುವ ಹೆಚ್ಚು ನೀರಿನ ಇಳುವರಿ ಇರುವ ಗುಣಮಟ್ಟದ ನೀರಿರುವ ಕೊಳವೆ ಬಾವಿಗಳನ್ನು ಗುರುತಿಸಿ ನಿಯಮಾನುಸಾರ ಬಳಕೆಗಾಗಿ ಕರಾರು ಒಪ್ಪಂದ ಮಾಡಿಕೊಳ್ಳಲು ಸೂಚಿಸಲಾಗಿದೆ. ಗುಡ್ಡಗಾಡು ಪ್ರದೇಶ, ಅಂತರ್ಜಲ ಮೂಲವಿಲ್ಲದ ಗ್ರಾಮಗಳಲ್ಲಿ ಕುಡಿಯುವ ನೀರಿನ ಅಭಾವ ಕಂಡು ಬಂದರೆ ಟ್ಯಾಂಕರ್‌ ಮೂಲಕ ಸರಬರಾಜು ಮಾಡಲು ಕ್ರಮ ವಹಿಸಬೇಕು. ಇದಕ್ಕಾಗಿಯೇ ಟ್ಯಾಂಕರ್‌ ಯುಟಿಲೈಸೇಶನ್‌ ಎನ್ನುವ ಆ್ಯಪ್‌ ಬಳಸಿ ದತ್ತಾಂಶ ಸಂಗ್ರಹಿಸಬೇಕು ಎಂಬ ಸೂಚನೆ ಬಂದಿದೆ. ಬಾಡಿಗೆ ಟ್ಯಾಂಕರ್‌ ಮೂಲಕ ತುರ್ತು ಕುಡಿಯುವ ನೀರನ್ನು ಒದಗಿಸುವ ಪ್ರಕ್ರಿಯೆಗೆ ಕೆಟಿಪಿಪಿ ಕಾಯ್ದೆಯಡಿ ಪಾರದರ್ಶಕ ಟೆಂಡರ್‌ ಪ್ರಕ್ರಿಯೆ ಕೈಗೊಳ್ಳುವುದಕ್ಕೆ ಜಿಲ್ಲಾಧಿಕಾರಿಗಳಿಗೆ ಈಗಾಗಲೇ ಸೂಚನೆ ಬಂದಿದೆ.

ಮಂಗಳೂರು, ಮೂಡುಬಿದಿರೆ ಸ್ಥಿತಿ:
ಜನವರಿ ಬಳಿಕ ನೀರಿನ ಅಭಾವ ಬರ ಬಹುದು ಎನ್ನುವ ನಿರೀಕ್ಷೆ ಇತ್ತು, ಆದರೆ ಈ ವರೆಗೆ ಸಮಸ್ಯೆಗಳಾಗಿಲ್ಲ. ಸದ್ಯಕ್ಕೆ ಯಾವುದೇ
ಸಮಸ್ಯೆ ಕಂಡು ಬಂದಿಲ್ಲ, ಬಜಪೆ ಪಟ್ಟಣ ಪಂ. ಹಾಗೂ ಕೆಲವು ಗ್ರಾ.ಪಂ.ಗಳಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಖಾಸಗಿ ನೀರು ಪೂರೈಕೆ ಟ್ಯಾಂಕರ್‌ ಗಳನ್ನು ಗುರುತಿಸಿ ಟೆಂಡರ್‌ ಕರೆದು ಇರಿಸಿ ಕೊಂಡಿದ್ದಾರೆ. ಅಲ್ಲದೆ ನೀರಿರುವ ಸರಕಾರಿ ಬೋರ್‌ ವೆಲ್‌, ಖಾಸಗಿ ಬೋರ್‌ವೆಲ್‌ಗ‌ಳನ್ನೂ ಗುರು ತಿಸಿ ಕರಾರು ಮಾಡಿಕೊಳ್ಳಲಾಗಿದೆ. ಯಾವಾಗ ಆವಶ್ಯಕತೆ ಇದೆಯೋ ಆಗ ಅದನ್ನು ಬಳಸಿ
ಕೊಳ್ಳಲಾಗುವುದು ಎಂದು ಮಂಗಳೂರು ತಹ ಶೀಲ್ದಾರ್‌ ಪ್ರಶಾಂತ್‌ ವಿ. ಪಾಟೀಲ್‌ ತಿಳಿಸಿದ್ದಾರೆ. ಮೂಡುಬಿದಿರೆಯಲ್ಲೂ ಸದ್ಯ ಯಾವುದೇ ರೀತಿಯ ಸಮಸ್ಯೆ ಬಂದಿಲ್ಲ, ನೀರು ಪೂರೈಕೆ ಯಲ್ಲೂ ಯಾವುದೇ ವ್ಯತ್ಯಯವಾಗಿಲ್ಲ, ಮೂಡು ಬಿದಿರೆ ಕಿಂಡಿ ಅಣೆಕಟ್ಟಿನಲ್ಲೂ ಸಾಕಷ್ಟು ನೀರಿರುವ ಕಾರಣ ತೊಂದರೆಯಿಲ್ಲ. ಆದರೂ ಇಲ್ಲೂ ಟ್ಯಾಂಕರ್‌ಗಳ ಜತೆ ಒಪ್ಪಂದ, ಖಾಸಗಿ ಬೋರ್‌ ವೆಲ್‌ಗ‌ಳನ್ನು ಗುರುತಿಸುವ ಕೆಲಸವಾಗಿದೆ.

ಸದ್ಯ ಮೇವಿಗೆ ಸಮಸ್ಯೆ ಇಲ್ಲ
ಎರಡೂ ತಾಲೂಕುಗಳಲ್ಲಿ ಮೇವಿನ ಕೊರತೆ ಆಗದಂತೆಯೂ ಕ್ರಮ ಕೈಗೊಳ್ಳಲಾಗಿದೆ. ಹೆಚ್ಚುವರಿಯಾಗಿ ಮೇವಿನ ಪೂರೈಕೆಗೆ ಬೇಕಾದ ಮಾಹಿತಿಯನ್ನು ಪಶುಸಂಗೋಪನ ಇಲಾಖೆ ಅಧಿಕಾರಿಗಳು ಜಿಲ್ಲಾಧಿಕಾರಿಗಳಿಗೆ ರವಾನಿಸಿದ್ದು, ಅಗತ್ಯವಿದ್ದರೆ ಟೆಂಡರ್‌ ಕರೆಯಲಾಗುತ್ತದೆ. ಸದ್ಯ ಮಂಗಳೂರಿನಲ್ಲಿ 16,350 ಜಾನುವಾರು, 4,614 ಆಡು/ಕುರಿ ಇವೆ. 9,985 ಟನ್‌ನಷ್ಟು ಮೇವು ಲಭ್ಯವಿದ್ದು, ಮುಂದಿನ 14 ವಾರಗಳಿಗೆ ಸಾಕಾಗಬಹುದು. ಅದೇ ರೀತಿ ಮೂಡುಬಿದಿರೆಯಲ್ಲಿ 19,651 ಜಾನುವಾರು, 1,131 ಆಡು/ ಕುರಿ ಇದೆ, 9,328 ಟನ್‌ ಮೇವು ಲಭ್ಯವಿದ್ದು, ಮುಂದಿನ 12 ವಾರಗಳಿಗೆ ಸಾಕಾಗಬಹುದು ಎಂಬ ನಿರೀಕ್ಷೆ ಇದೆ ಎಂದು ಜಿಲ್ಲಾ ಪಶುಸಂಗೋಪನ ಇಲಾಖೆ ಉಪನಿರ್ದೇಶಕ ಡಾ| ಅರುಣ್‌ ಕುಮಾರ್‌ ಶೆಟ್ಟಿ ತಿಳಿಸಿದ್ದಾರೆ.

ಟಾಸ್ಕ್ ಫೋರ್ಸ್‌ ಸಭೆ
ಸದ್ಯಕ್ಕೆ ಎಲ್ಲೂ ಬರದ ಸಮಸ್ಯೆ ಬಂದಿಲ್ಲ, ಮಂಗಳೂರು, ಮೂಡುಬಿದಿರೆ ಇವೆರಡಷ್ಟೇ ಅಲ್ಲ, ಎಲ್ಲ ತಾಲೂಕುಗಳಲ್ಲೂ
ಟಾಸ್ಕ್ ಫೋರ್ಸ್‌ ಸಭೆಗಳನ್ನು ಮಾಡುತ್ತಿದ್ದಾರೆ. ಸಮಸ್ಯೆಗಳಿದ್ದರೆ ತಿಳಿಸುವಂತೆ ಸೂಚಿಸಿದೆ. ಟ್ಯಾಂಕರ್‌ಗಳ ಜತೆ ಒಪ್ಪಂದ, ಖಾಸಗಿ ಬೋರ್‌ವೆಲ್‌ ಗುರುತಿಸುವ ಕೆಲಸ ಮಾಡಲಾಗಿದೆ.
 ಮುಲ್ಲೈ ಮುಗಿಲನ್‌,
ಜಿಲ್ಲಾಧಿಕಾರಿ, ದ.ಕ.

*ವೇಣುವಿನೋದ್‌ ಕೆ.ಎಸ್‌.

ಟಾಪ್ ನ್ಯೂಸ್

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

4-heart-diseases

Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!

3-

LS Polls: ರಾಷ್ಟ್ರ ಪ್ರೇಮ ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ: ಮಂಜುನಾಥ್ ಭಂಡಾರಿ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

2-baikampady

Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Elections; ದಕ್ಷಿಣ ಕನ್ನಡ: ಶೇ.77.56; ಉಡುಪಿ-ಚಿಕ್ಕಮಗಳೂರು: ಶೇ.77.15 ಮತದಾನ

Lok Sabha Elections; ದಕ್ಷಿಣ ಕನ್ನಡ: ಶೇ.77.56; ಉಡುಪಿ-ಚಿಕ್ಕಮಗಳೂರು: ಶೇ.77.15 ಮತದಾನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನ ಗಗನಂ’

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನಂ ಗಗನಂ’

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

4-heart-diseases

Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.