ಮಂಗಳೂರು: ಮನೆ ಮಂದಿ ಹೊರಗೆ- ಕಳ್ಳರು ಮನೆಯೊಳಗೆ !


Team Udayavani, May 22, 2024, 6:06 PM IST

ಮಂಗಳೂರು: ಮನೆ ಮಂದಿ ಹೊರಗೆ- ಕಳ್ಳರು ಮನೆಯೊಳಗೆ !

ಮಹಾನಗರ: ಮಂಗಳೂರು ನಗರ ವಾಸಿ ಗಳೇ ಎಚ್ಚರ. ಮನೆಗೆ ಬೀಗ ಹಾಕಿ ಕಾರ್ಯಕ್ರಮಕ್ಕೋ, ಸಂಬಂಧಿಕರ ಮನೆಗೋ ಅಥವಾ ಪ್ರವಾಸಕ್ಕೋ ಹೋಗುವಾಗ ಹುಷಾರಾಗಿರಿ. ಯಾಕೆಂದರೆ ಕಳ್ಳರು ಮನೆಯನ್ನು ದೋಚುವ ಅಪಾಯವಿದೆ!
ಕಳೆದ ಕೇವಲ 12 ದಿನಗಳ ಅಂತರದಲ್ಲಿ ನಗರದಲ್ಲಿ ಮೂರು ಮನೆಗಳಲ್ಲಿ ಕಳ್ಳತನ ನಡೆದಿದ್ದು ಲಕ್ಷಾಂತರ ರೂಪಾಯಿ ಮೌಲ್ಯದ
ಚಿನ್ನಾಭರಣಗಳು ಕಳ್ಳರ ಪಾಲಾಗಿವೆ. ಮನೆಗೆ ಬಾಗಿಲು ಹಾಕಿ ಹೊರಗೆ ಹೋಗುವುದನ್ನೇ ಕಾಯುತ್ತಿರುವ ಕಳ್ಳರು ಬೀಗ ಮುರಿದು ನಗ, ನಗದು ದೋಚುತ್ತಾರೆ ಎಂಬ ಸಂಶಯವಿದೆ.

ಮೇ 5ರಿಂದ ಮೇ 17ರ ವರೆಗೆ ಕಂಕನಾಡಿ ನಗರ, ಬರ್ಕೆ ಠಾಣಾ ವ್ಯಾಪ್ತಿಗಳಲ್ಲಿ ನಡೆದಿರುವ ಕಳ್ಳತನ ಕೃತ್ಯಗಳಲ್ಲಿ ಒಂದಕ್ಕೊಂದು ಸಾಮ್ಯತೆ ಕಂಡುಬರುತ್ತಿದ್ದು ಒಂದೇ ಗ್ಯಾಂಗ್‌ ವ್ಯವಸ್ಥಿತವಾಗಿ ಕೃತ್ಯ ಎಸಗುತ್ತಿದೆಯೇ ಎಂಬ ಶಂಕೆ ವ್ಯಕ್ತವಾಗಿದೆ.

ಜನರಿಲ್ಲದ ಮನೆಗಳೇ ಟಾರ್ಗೆಟ್‌
ಘಟನೆ 1: ಮನೆಯವರು ಮೈಸೂರಿಗೆ ಮೇ 5ರಂದು ಪ್ರವಾಸಕ್ಕೆ ಹೋಗಿದ್ದರು. ಮೇ 7ರಂದು ಬಂದು ನೋಡಿದಾಗ ಮನೆಯಲ್ಲಿದ್ದ
ಅಂದಾಜು 1.60 ಲ.ರೂ. ಮೌಲ್ಯದ ಚಿನ್ನಾಭರಣ ಕಳವಾಗಿತ್ತು.

ಘಟನೆ 2: ಮೇ 10ರಂದು ಮನೆಯವರು ಯಕ್ಷಗಾನ ನೋಡಲು ಹೋಗಿದ್ದರು. ವಾಪಸ್‌ ಬಂದಾಗ ಮನೆಯಲ್ಲಿದ್ದ ಚಿನ್ನದ ಬಳೆ, ಲ್ಯಾಪ್‌ಟಾಪ್‌, ನಗದು ಇರಲಿಲ್ಲ.

ಘಟನೆ 3: ಮನೆಯವರು ಮೇ 17ರಂದು ಸಂಜೆ ಮನೆಯಿಂದ ಸಂಬಂಧಿಕರ ಮನೆಗೆ ಹೋಗಿದ್ದರು. ಮೇ 20ರಂದು ಮಧ್ಯಾಹ್ನ ಬಂದು ನೋಡಿದಾಗ ಮನೆಯಲ್ಲಿದ್ದ ಚಿನ್ನದ ಪೆಂಡೆಂಟ್‌, ಬ್ರಾಸ್ಲೆಟ್‌, ಬೆಳ್ಳಿಯ ಉಂಗುರ, ವಾಚ್‌ ಕಳವಾಗಿತ್ತು.

ಮತ್ತೆ ಕ್ರಿಯಾಶೀಲರಾದ ಕಳ್ಳರು
ಕುಲಶೇಖರದಲ್ಲಿ ಜ. 11ರಂದು ಮನೆಯವರು ಬೆಳಗ್ಗೆ ಹೊರಗಡೆ ಹೋಗಿ ಅಪರಾಹ್ನ ವಾಪಸ್‌ ಬಂದಾಗ ಮನೆಯ ಹೆಂಚುಗಳನ್ನು ತೆಗೆದು ಅಂದಾಜು 3.50 ಲ.ರೂ. ಮೌಲ್ಯದ ಚಿನ್ನದ ಆಭರಣಗಳನ್ನು ಕಳವು ಮಾಡಲಾಗಿತ್ತು. ಡಿ. 19ರಂದು ರಾತ್ರಿ ನಗರದ ಮನೆಯೊಂದರಿಂದ 160 ಗ್ರಾಂ ಚಿನ್ನಾಭರಣ, 6,000 ರೂ. ನಗದು ಹಣ ಕಳವು ಮಾಡಲಾಗಿತ್ತು. ಕದ್ರಿಯ ಬಾಡಿಗೆ
ಮನೆಯಲ್ಲಿದ್ದವರು ಮೈಸೂರಿಗೆ ಊರಿಗೆಂದು ತೆರಳಿ ವಾಪಸ್‌ ಜ. 16ರಂದು ಬಂದು ನೋಡಿದಾಗ ಮನೆಯ ಬಾಗಿಲಿನ ಲಾಕ್‌ ಮುರಿದು ಬೆಳ್ಳಿಯ ಸೊತ್ತುಗಳನ್ನು ಕಳವು ಮಾಡಿರುವುದು ಗೊತ್ತಾಗಿತ್ತು. ಕೆಲವು ಸಮಯದ ಅನಂತರ ಮತ್ತೆ ಕಳ್ಳರು ಕ್ರಿಯಾಶೀಲರಾಗಿದ್ದಾರೆ.

ಆಸ್ಪತ್ರೆ, ಪಿಜಿಗೂ ಲಗ್ಗೆ ಹಾಕ್ತಾರೆ ಹುಷಾರ್‌
*ಉರ್ವ ಪೊಲೀಸ್‌ ಠಾಣಾ ವ್ಯಾಪ್ತಿಯ ಕೊಟ್ಟಾರದ ಪಿಜಿಯಲ್ಲಿದ್ದವರು ಮೇ 9ರಂದು ಸಂಜೆ ಹೊರಗೆ ಹೋಗಿ ರಾತ್ರಿ 7.20ಕ್ಕೆ ಬಂದು ನೋಡಿದಾಗ ಲ್ಯಾಪ್‌ಟಾಪ್‌, ಮೊಬೈಲ್‌ ಕಳವಾಗಿತ್ತು.

*ನಗರದ ಕಣ್ಣಿನ ಆಸ್ಪತ್ರೆಯ ಆಡಳಿತಾಧಿಕಾರಿಯೊಬ್ಬರು ಮೇ 18ರಂದು ರಾತ್ರಿ 9ಕ್ಕೆ ಮನೆ ಲಾಕ್‌ ಮಾಡಿ ಆಸ್ಪತ್ರೆಗೆ ಹೋಗಿದ್ದ ರು. ಮೇ 20ರ ಬೆಳಗ್ಗೆ ಬಂದು ನೋಡಿದಾಗ ಬೀಗ ಒಡೆದು 74,000 ರೂ. ಕಳವಾಗಿತ್ತು.

ಸಾರ್ವಜನಿಕರು ಏನು ಮಾಡಬಹುದು?
*ಮನೆಯಿಂದ ಹೊರಗೆ ಹೋಗುವ ಸಂದರ್ಭದಲ್ಲಿ ಮನೆಯಲ್ಲಿ ಚಿನ್ನ, ನಗದು ಇಟ್ಟು ಹೋಗಬಾರದು. ಬದಲಾಗಿ ಬ್ಯಾಂಕ್‌ನಲ್ಲೇ ಇಡಬೇಕು.

*ಮನೆಗೆ ಸಿಸಿ ಕೆಮರಾ ಅಳವಡಿಸುವುದು ಸೂಕ್ತ.

*ಅಲರ್ಟ್‌ ಮಾಡುವಂತಹ ಹಲವು ಸಾಧನಗಳು ಲಭ್ಯವಿದ್ದು ಅವುಗಳನ್ನು ಕೂಡ ಗೌಪ್ಯವಾಗಿ ಅಳವಡಿಸಬಹುದು.

*ತುಂಬ ದಿನ ಮನೆ ಬಿಟ್ಟು ಹೋಗುವುದಾದರೆ ಸಮೀಪದ ಪೊಲೀಸ್‌ ಠಾಣೆಗೆ ತಿಳಿಸಬಹುದು.

ಟಾಪ್ ನ್ಯೂಸ್

ಶ್ರುತಿ ಬಿ.ಆರ್‌., ಕೃಷ್ಣಮೂರ್ತಿ ಬಿಳಿಗೆರೆಗೆ ಕೇಂದ್ರ ಸಾಹಿತ್ಯ ಯುವ, ಬಾಲ ಪುರಸ್ಕಾರ

ಶ್ರುತಿ ಬಿ.ಆರ್‌., ಕೃಷ್ಣಮೂರ್ತಿ ಬಿಳಿಗೆರೆಗೆ ಕೇಂದ್ರ ಸಾಹಿತ್ಯ ಯುವ, ಬಾಲ ಪುರಸ್ಕಾರ

ನಾಯಕರ ಬೆನ್ನು ಬಿಡಿ, ಕ್ಷೇತ್ರ ಸುತ್ತಾಡಿ: ಪದಾಧಿಕಾರಿಗಳಿಗೆ ಡಿಕೆಶಿ ತಾಕೀತು

ನಾಯಕರ ಬೆನ್ನು ಬಿಡಿ, ಕ್ಷೇತ್ರ ಸುತ್ತಾಡಿ: ಪದಾಧಿಕಾರಿಗಳಿಗೆ ಡಿಕೆಶಿ ತಾಕೀತು

hdಚನ್ನಪಟ್ಟಣದ ಮೇಲೆ ಅಣ್ಣ ತಮ್ಮಂದಿರ ವಕ್ರದೃಷ್ಟಿ: ಎಚ್‌ಡಿಕೆ

ಚನ್ನಪಟ್ಟಣದ ಮೇಲೆ ಅಣ್ಣ ತಮ್ಮಂದಿರ ವಕ್ರದೃಷ್ಟಿ: ಎಚ್‌ಡಿಕೆ

ಬೊಮ್ಮಾಯಿ, ಕುಮಾರಸ್ವಾಮಿ, ಕೋಟ ಶ್ರೀನಿವಾಸ ಪೂಜಾರಿ ರಾಜೀನಾಮೆ

ಬೊಮ್ಮಾಯಿ, ಕುಮಾರಸ್ವಾಮಿ, ಕೋಟ ಶ್ರೀನಿವಾಸ ಪೂಜಾರಿ ರಾಜೀನಾಮೆ

ಕೇಂದ್ರ ಸಚಿವ ಎಚ್‌ಡಿಕೆ ಬಳಿ ಅಭಿವೃದ್ಧಿ ಯೋಜನೆಗಳ ಪಟ್ಟಿ ಇಟ್ಟ ಸ್ಪೀಕರ್‌ ಖಾದರ್‌

ಕೇಂದ್ರ ಸಚಿವ ಎಚ್‌ಡಿಕೆ ಬಳಿ ಅಭಿವೃದ್ಧಿ ಯೋಜನೆಗಳ ಪಟ್ಟಿ ಇಟ್ಟ ಸ್ಪೀಕರ್‌ ಖಾದರ್‌

Basavaraj Bommai ಅಂತಾರಾಜ್ಯ ಜಲ ವಿವಾದ ಪರಿಹಾರಕ್ಕೆ ಯತ್ನ

Basavaraj Bommai ಅಂತಾರಾಜ್ಯ ಜಲ ವಿವಾದ ಪರಿಹಾರಕ್ಕೆ ಯತ್ನ

ಆಯಾ ರಾಜ್ಯಗಳೇ “ನೀಟ್‌’ ಪರೀಕ್ಷೆ ನಡೆಸಲು ಕೇಂದ್ರಕ್ಕೆ ಮನವಿ: ಡಿಕೆಶಿ

ಆಯಾ ರಾಜ್ಯಗಳೇ “ನೀಟ್‌’ ಪರೀಕ್ಷೆ ನಡೆಸಲು ಕೇಂದ್ರಕ್ಕೆ ಮನವಿ: ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru ಖಾಸಗಿ ಬಸ್‌ನಲ್ಲಿ ಲ್ಯಾಪ್‌ಟಾಪ್‌ ಸಹಿತ ಬ್ಯಾಗ್‌ ಕಳವು

Mangaluru ಖಾಸಗಿ ಬಸ್‌ನಲ್ಲಿ ಲ್ಯಾಪ್‌ಟಾಪ್‌ ಸಹಿತ ಬ್ಯಾಗ್‌ ಕಳವು

National Highway 73: ಸಮಸ್ಯೆಗಳ ನಿವಾರಣೆNational Highway 73: ಸಮಸ್ಯೆಗಳ ನಿವಾರಣೆ

National Highway 73: ಸಮಸ್ಯೆಗಳ ನಿವಾರಣೆ

ತ್ವರಿತಗತಿಯಲ್ಲಿ ತೇಲುವ ಜೆಟ್ಟಿ ಕಾಮಗಾರಿ ಮುಗಿಸಲು ಸೂಚನೆ

ತ್ವರಿತಗತಿಯಲ್ಲಿ ತೇಲುವ ಜೆಟ್ಟಿ ಕಾಮಗಾರಿ ಮುಗಿಸಲು ಸೂಚನೆ

ಶಿಕ್ಷಣದ ಮೂಲಕ ಕೌಶಲಪೂರ್ಣ ವ್ಯಕ್ತಿತ್ವ ನಿರ್ಮಾಣ: ಥಾವರ್‌ಚಂದ್‌ ಗೆಹ್ಲೋಟ್

ಶಿಕ್ಷಣದ ಮೂಲಕ ಕೌಶಲಪೂರ್ಣ ವ್ಯಕ್ತಿತ್ವ ನಿರ್ಮಾಣ: ಥಾವರ್‌ಚಂದ್‌ ಗೆಹ್ಲೋಟ್

university

Mangalore University: ಪ್ರಕಾಶ್ ಶೆಟ್ಟಿ, ರೊನಾಲ್ಡ್ ಕೊಲಾಸೋರಿಗೆ ಗೌರವ ಡಾಕ್ಟರೆಟ್ ಪ್ರದಾನ

MUST WATCH

udayavani youtube

ಕಾಪು ಸರ್ವೀಸ್ ರಸ್ತೆಯಲ್ಲಿ ರಿಕ್ಷಾ ಚಾಲಕ ಮತ್ತು ಬೈಕ್ ಸವಾರನ ನಡುವೆ ಹೊಡೆದಾಟ

udayavani youtube

ದರ್ಶನ್ ಗ್ಯಾಂಗ್ ಕ್ರೌರ್ಯ ಹೇಗಿತ್ತು ಗೊತ್ತಾ..? ವೈರಲ್ ಆಡಿಯೋ ಇಲ್ಲಿದೆ

udayavani youtube

Udupi: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ

udayavani youtube

ಕಾಂಗ್ರೆಸ್ ಹಿರಿಯ ಶಾಸಕ ಸಿ.ಎಸ್.ನಾಡಗೌಡರಿಂದ ರಾಜಕೀಯ ತ್ಯಾಗದ ಮಾತು

udayavani youtube

ಇಳಿಕೆಯಾದ ಘಟಪ್ರಭಾ ನದಿ

ಹೊಸ ಸೇರ್ಪಡೆ

ಶ್ರುತಿ ಬಿ.ಆರ್‌., ಕೃಷ್ಣಮೂರ್ತಿ ಬಿಳಿಗೆರೆಗೆ ಕೇಂದ್ರ ಸಾಹಿತ್ಯ ಯುವ, ಬಾಲ ಪುರಸ್ಕಾರ

ಶ್ರುತಿ ಬಿ.ಆರ್‌., ಕೃಷ್ಣಮೂರ್ತಿ ಬಿಳಿಗೆರೆಗೆ ಕೇಂದ್ರ ಸಾಹಿತ್ಯ ಯುವ, ಬಾಲ ಪುರಸ್ಕಾರ

ನಾಯಕರ ಬೆನ್ನು ಬಿಡಿ, ಕ್ಷೇತ್ರ ಸುತ್ತಾಡಿ: ಪದಾಧಿಕಾರಿಗಳಿಗೆ ಡಿಕೆಶಿ ತಾಕೀತು

ನಾಯಕರ ಬೆನ್ನು ಬಿಡಿ, ಕ್ಷೇತ್ರ ಸುತ್ತಾಡಿ: ಪದಾಧಿಕಾರಿಗಳಿಗೆ ಡಿಕೆಶಿ ತಾಕೀತು

1-ssdad

ಅನುಚಿತ ವರ್ತನೆ‌ ; ಜೆಸ್ಕಾಂ ಗುತ್ತಿಗೆದಾರನಿಗೆ‌ ಚಪ್ಪಲಿಯಿಂದ ಹೊಡೆದ ಮಹಿಳೆ

hdಚನ್ನಪಟ್ಟಣದ ಮೇಲೆ ಅಣ್ಣ ತಮ್ಮಂದಿರ ವಕ್ರದೃಷ್ಟಿ: ಎಚ್‌ಡಿಕೆ

ಚನ್ನಪಟ್ಟಣದ ಮೇಲೆ ಅಣ್ಣ ತಮ್ಮಂದಿರ ವಕ್ರದೃಷ್ಟಿ: ಎಚ್‌ಡಿಕೆ

ಬೊಮ್ಮಾಯಿ, ಕುಮಾರಸ್ವಾಮಿ, ಕೋಟ ಶ್ರೀನಿವಾಸ ಪೂಜಾರಿ ರಾಜೀನಾಮೆ

ಬೊಮ್ಮಾಯಿ, ಕುಮಾರಸ್ವಾಮಿ, ಕೋಟ ಶ್ರೀನಿವಾಸ ಪೂಜಾರಿ ರಾಜೀನಾಮೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.