ಮಾನವ ಕಳ್ಳಸಾಗಣೆ ಭೇದಿಸಿದ ಮಂಗಳೂರು ಪೊಲೀಸರು : ಶ್ರೀಲಂಕಾದ 38 ನಾಗರಿಕರ ಬಂಧನ


Team Udayavani, Jun 12, 2021, 7:00 AM IST

ಮಾನವ ಕಳ್ಳಸಾಗಣೆ ಭೇದಿಸಿದ ಮಂಗಳೂರು ಪೊಲೀಸರು : ಶ್ರೀಲಂಕಾದ 38 ನಾಗರಿಕರ ಬಂಧನ

ಮಂಗಳೂರು : ಅಕ್ರಮವಾಗಿ ಭಾರತಕ್ಕೆ ವಲಸೆ ಬಂದಿರುವ ಶ್ರೀಲಂಕಾದ 38 ಪ್ರಜೆಗಳು ಮತ್ತು ನಗರದಲ್ಲಿ ಅವರಿಗೆ ಆಶ್ರಯ ನೀಡಿದ 6 ಮಂದಿ ಸ್ಥಳೀಯರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದು, ಅಂತಾರಾಷ್ಟ್ರೀಯ ಮಾನವ ಕಳ್ಳಸಾಗಣೆ ಜಾಲವೊಂದನ್ನು ಬೇಧಿಸಿದ್ದಾರೆ.

ಏಜೆಂಟ್‌ಗಳ ಮೂಲಕ ಶ್ರೀಲಂಕಾದಿಂದ ತ.ನಾಡಿಗೆ ಬಂದು ಅಲ್ಲಿಂದ ಬೆಂಗಳೂರಿಗೆ, ಬಳಿಕ ಮಂಗಳೂರಿಗೆ ಬಂದಿರುವ ಇವರು ಕೆನಡಕ್ಕೆ ಹೋಗುವ ಯೋಜನೆ ಹಾಕಿದ್ದರು. ಶ್ರೀಲಂಕಾದ ಏಜೆಂಟ್‌ ಇವರಿಗೆ ಕೆನಡದಲ್ಲಿ ಉದ್ಯೋಗ ಕೊಡಿಸುವುದಾಗಿ ಹೇಳಿ ಪ್ರತಿಯೊಬ್ಬರಿಂದ 10 ಲಕ್ಷ ರೂ.ವರೆಗೆ ಹಣ ಪಡೆದಿರುವ ಮಾಹಿತಿ ಲಭಿಸಿದೆ ಎಂದು ಮಂಗಳೂರು ಪೊಲೀಸ್‌ ಆಯುಕ್ತ ಎನ್‌. ಶಶಿ ಕುಮಾರ್‌ ತಿಳಿಸಿದ್ದಾರೆ.

ಮಾ. 17ರಂದು ಶ್ರೀಲಂಕಾದಿಂದ ದೋಣಿಯಲ್ಲಿ ಇವರನ್ನು ತಮಿಳುನಾಡಿನ ತೂತುಕುಡಿಗೆ ಕಳುಹಿಸಿಕೊಡಲಾಗಿತ್ತು. ಅಲ್ಲಿಂದ ಬಸ್‌ ಪ್ರಯಾಣ ಮಾಡಿ ಮಧುರೈ, ಸೇಲಂ ಮೂಲಕ ಬೆಂಗಳೂರಿಗೆ ಕರೆದೊಯ್ಯಲಾಯಿತು. ಅಲ್ಲಿ ಸಣ್ಣ ಗುಂಪು ಮಾಡಿ ಒಂದೊಂದೇ ಗುಂಪನ್ನು ಮಂಗಳೂರಿಗೆ ಕಳುಹಿಸಲಾಗಿತ್ತು. ನಗರದ 2 ಲಾಡ್ಜ್ಗಳು ಮತ್ತು ಒಂದು ಖಾಸಗಿ ಮನೆ ಯಲ್ಲಿ ಸುಮಾರು ಒಂದೂವರೆ ತಿಂಗಳು ಆಶ್ರಯ ನೀಡಲಾಗಿತ್ತು.

ಮಾನವ ಕಳ್ಳಸಾಗಣೆ ಪ್ರಕರಣ
ಇದು ರಾಷ್ಟ್ರೀಯ ಭದ್ರತೆಯ ದೃಷ್ಟಿಯಿಂದ ಗಂಭೀರ ಪ್ರಕರಣವಾಗಿದ್ದು, ಮಾನವ ಕಳ್ಳ ಸಾಗಾಟವೂ ಹೌದು. ವಶವಾಗಿರುವವರಲ್ಲಿ ಹೆಚ್ಚಿನವರು ಉತ್ತರ ಶ್ರೀಲಂಕಾ ಭಾಗದವರು ಎಂಬ ಮಾಹಿತಿ ಲಭಿಸಿದೆ. ಇವರ ವಿರುದ್ಧ ಪಾಂಡೇಶ್ವರ ಪೊಲೀಸ್‌ ಠಾಣೆಯಲ್ಲಿ 103/2021 ಕಲಂ 120 (ಬಿ), 370, 420 ಐಪಿಸಿ, ವಿದೇಶೀ ಕಾಯಿದೆ 1964ರ ಸೆಕ್ಷನ್‌ 14 ಮತ್ತು ಪಾಸ್‌ಪೋರ್ಟ್‌ ಕಾಯಿದೆ 1967ರ ಸೆಕ್ಷನ್‌ 12(1)(ಎ)ರಂತೆ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಆಯುಕ್ತರು ತಿಳಿಸಿದ್ದಾರೆ.

ಟಾಪ್ ನ್ಯೂಸ್

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

ಕೊಡಪಾಡಿ: ಮೃತ ವ್ಯಕ್ತಿಯ ಹೆಸರಲ್ಲಿ ನಕಲಿ ಸಹಿ ಬಳಸಿ ಪವರ್‌ ಆಫ್‌ ಅಟಾರ್ನಿ, ದೂರು ದಾಖಲು

ಕೊಡಪಾಡಿ: ಮೃತ ವ್ಯಕ್ತಿಯ ಹೆಸರಲ್ಲಿ ನಕಲಿ ಸಹಿ ಬಳಸಿ ಪವರ್‌ ಆಫ್‌ ಅಟಾರ್ನಿ, ದೂರು ದಾಖಲು

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.