Mangalore: ಸಂಸತ್ನಲ್ಲಿ ಭಾಷಣ ಮರೆಯಲಾಗದ ಕ್ಷಣ: ಸೌರವ್ ಸಾಲ್ಯಾನ್
Team Udayavani, Oct 6, 2023, 12:48 AM IST
ಮಂಗಳೂರು: ಗಾಂಧೀ ಜಯಂತಿ ಪ್ರಯುಕ್ತ ಅ. 2ರಂದು ದಿಲ್ಲಿಯ ಸಂಸತ್ ಭವನದಲ್ಲಿ ನಡೆದ ವಿಶೇಷ ಕಾರ್ಯಕ್ರಮದಲ್ಲಿ ಭಾಷಣ ಮಾಡುವ ಮೂಲಕ ಕರಾವಳಿಯ ವಿದ್ಯಾರ್ಥಿ ಸೌರವ್ ಸಾಲ್ಯಾನ್ ರಾಜ್ಯಕ್ಕೆ ಕೀರ್ತಿ ತಂದಿದ್ದಾರೆ.
ಕೇಂದ್ರ ಸರಕಾರದ ಯುವಜನ ಸೇವಾ ಮತ್ತು ಕ್ರೀಡಾ ಸಚಿವಾಲಯ, ನೆಹರೂ ಯುವ ಕೇಂದ್ರದ ವತಿಯಿಂದ ಸಂಸತ್ ಭವನದಲ್ಲಿ ಭಾಷಣ ಮಾಡಲು ಅವಕಾಶ ಪಡೆದ ಕೆಲವೇ ಕೆಲವು ಮಂದಿಯಲ್ಲಿ ಸೌರವ್ ಒಬ್ಬರಾಗಿದ್ದಾರೆ. ಅವರು ಲಾಲ್ಬಹದ್ದೂರ್ ಶಾಸ್ತ್ರಿ ಜೀವನ ಚರಿತ್ರೆ ಕುರಿತಂತೆ ಜಿಲ್ಲೆ, ರಾಜ್ಯ, ರಾಷ್ಟ್ರ ಮಟ್ಟದಲ್ಲಿ ಸ್ಪರ್ಧಿಸಿ ಪ್ರಥಮ ಬಹುಮಾನ ಗೆದ್ದು ಸಂಸತ್ನಲ್ಲಿ ನಡೆದ ವಿಶೇಷ ಕಾರ್ಯಕ್ರಮದಲ್ಲಿ ಭಾಷಣಕಾರರಾಗಿ ಆಯ್ಕೆಯಾಗಿದ್ದರು.
ಈ ಕುರಿತು ನೆಹರೂ ಯುವ ಕೇಂದ್ರದ ಆಡಳಿತಾಧಿಕಾರಿ ಜಗದೀಶ್ ಕೆ. ಪತ್ರಿಕಾಗೋಷ್ಠಿಯಲ್ಲಿ ವಿವರ ನೀಡಿದರು.
ಇದೇ ವೇಳೆ ದಿಲ್ಲಿಯ ಸಂತಸದ ಕ್ಷಣಗಳನ್ನು ಹಂಚಿಕೊಂಡ ಸೌರವ್, ಸಂಸತ್ ಭವನದಲ್ಲಿ ಭಾಷಣ ಮಾಡಲು ಅವಕಾಶ ಸಿಕ್ಕಿರುವುದು ನನ್ನ ಸೌಭಾಗ್ಯ. ಜೀವಮಾನದಲ್ಲಿ ಎಂದೂ ಮರೆಯಲಾಗದ ಕ್ಷಣ. ಇಂತಹ ಅವಕಾಶ ಸಿಗಬಹುದೆಂದು ಎಂದೂ ಊಹಿಸಿರಲಿಲ್ಲ. ಹೊಸ ಸಂಸತ್ ಭವನ ವೀಕ್ಷಣೆಯ ಸದವಕಾಶವೂ ಲಭಿಸಿದೆ. ಈ ಸಾಧನೆಯ ಹಿಂದೆ ಪೋಷಕರು, ಅಧ್ಯಾಪಕರು ನನಗೆ ಪ್ರೋತ್ಸಾಹ ನೀಡಿ ಹುರಿದುಂಬಿಸಿದ್ದಾರೆ. ಮಂಗಳೂರಿನಿಂದ ಮೊದಲ ಬಾರಿಗೆ ವಿಮಾನದಲ್ಲಿ ಪ್ರಯಾಣಿಸುವ ಅವಕಾಶ ಲಭಿಸಿದ್ದು ಅತ್ಯುತ್ತಮ ಅನುಭವ ಎಂದು ಹೇಳಿದರು. ಮುಂದಿನ ದಿನಗಳಲ್ಲಿ ಮತ್ತಷ್ಟು ಸಾಧನೆ ಮಾಡುವ ಇಂಗಿತವನ್ನು ವ್ಯಕ್ತಪಡಿಸಿದರು.
ಸೌರವ್ ಅವರು ದಡ್ಡಲ್ಕಾಡ್ನ ದಿ| ಸುಧೀರ್ ಕರ್ಕೇರ ಹಾಗೂ ಪುಷ್ಪಾವತಿ ದಂಪತಿಯ ಪುತ್ರನಾಗಿದ್ದು, ಕೆನರಾ ಕಾಲೇಜಿನಲ್ಲಿ ಮೊದಲ ವರ್ಷದ ಬಿ.ಕಾಂ. ಓದುತ್ತಿದ್ದಾರೆ.
ಕೆನರಾ ಕಾಲೇಜಿನ ಪ್ರಾಂಶುಪಾಲೆ ಡಾ| ಪ್ರೇಮಲತಾ ವಿ., ಆಡಳಿತಾಧಿಕಾರಿ ದೀಪ್ತಿ ನಾಯಕ್, ಪ್ರಾಧ್ಯಾಪಕಿ ಸೀಮಾಪ್ರಭು ಎಸ್., ಸೌರವ್ ತಾಯಿ ಪುಷ್ಪಾವತಿ, ಪ್ರಿಯಾ ಸುದೇಶ್ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್ ಶಾ
JDS: ಆಶ್ಲೀಲ ವಿಡಿಯೋ ಪ್ರಕರಣ; ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಅಮಾನತು
ಈ ಪೆನ್ಡ್ರೈವ್ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್
Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ
Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೊಟೀಸ್