Mangalore: ಷೇರು ಮಾರುಕಟ್ಟೆ ಹೂಡಿಕೆ: ವಂಚನೆ
Team Udayavani, Jan 22, 2024, 11:21 PM IST
ಮಂಗಳೂರು: ಷೇರು ಮಾರುಕಟ್ಟೆಯಲ್ಲಿ ಹಣ ಹೂಡಿಕೆಗೆ ಸಲಹೆ ನೀಡುವುದಾಗಿ ನಂಬಿಸಿ ಹಣ ವರ್ಗಾಯಿಸಿಕೊಂಡು ವಂಚಿಸಿದ ಪ್ರಕರಣ ನಡೆದಿದೆ.
ದೂರುದಾರರು ಫೇಸ್ಬುಕ್ನಲ್ಲಿ ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಮಾಡುವ ಬಗ್ಗೆ ಸಲಹೆ ಒದಗಿಸುವ ವಾಟ್ಸ್ಆ್ಯಪ್ ಗ್ರೂಪ್ನ ಜಾಹೀರಾತು ನೋಡಿ ಷೇರು ಮಾರುಕಟ್ಟೆಯಲ್ಲಿ ಹಣವನ್ನು ಹೂಡಿಕೆ ಮಾಡುವ ಬಗ್ಗೆ ಸಲಹೆ ಪಡೆದುಕೊಳ್ಳಲು ವಾಟ್ಸ್ಆ್ಯಪ್ ಗ್ರೂಪ್ನಲ್ಲಿ ಸೇರಿಕೊಂಡು ಹೂಡಿಕೆಗೆ ಸಂಬಂಧಿಸಿದಂತೆ ಬರುವ ಸಂದೇಶಗಳನ್ನು ನೋಡುತ್ತಿದ್ದರು. ಗ್ರೂಪ್ನ ಅಡ್ಮಿನ್ ತಿಳಿಸಿದಂತೆ ಟ್ರೇಡಿಂಗ್ ಬಗ್ಗೆ ಆನ್ಲೈನ್ ಆ್ಯಪ್ನಲ್ಲಿ ನೊಂದಣಿ ಮಾಡಿಕೊಂಡಿದ್ದರು. ಅಡ್ಮಿನ್ ಆ್ಯಪ್ ಮೂಲಕ ಹಣವನ್ನು ಹೂಡಿಕೆ ಮಾಡುವಂತೆ ತಿಳಿಸಿದ್ದು, ಅದರಂತೆ ಆತ ಕಳುಹಿಸಿಕೊಟ್ಟ ವಿವಿಧ ಬ್ಯಾಂಕ್ ಖಾತೆಗಳಿಗೆ ಹಂತ ಹಂತವಾಗಿ ಒಟ್ಟು 10,32,000 ರೂ. ವರ್ಗಾಯಿಸಿದ್ದಾರೆ. ಆದರೆ ಅವರ ಹಣವನ್ನು ಹೂಡಿಕೆ ಮಾಡದೆ ವಂಚಿಸಲಾಗಿದೆ ಎಂದು ದೂರು ನೀಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ
Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್
Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ
Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !
Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ