ದ.ಕ., ಉಡುಪಿ: 5 ಸಾವಿರ ಮಣ್ಣು ಪರೀಕ್ಷೆ ಗುರಿ


Team Udayavani, Jan 22, 2022, 7:35 AM IST

ದ.ಕ., ಉಡುಪಿ: 5 ಸಾವಿರ ಮಣ್ಣು ಪರೀಕ್ಷೆ ಗುರಿ

ಉಡುಪಿ: ಮಣ್ಣಿನ ಫ‌ಲವತ್ತತೆ ಹೆಚ್ಚಿಸುವ ನಿಟ್ಟಿನಲ್ಲಿ ಕೇಂದ್ರ ಮತ್ತು ರಾಜ್ಯ ಸರಕಾರಗಳ ವತಿಯಿಂದ ಕೃಷಿ ಇಲಾಖೆಯ ಸಂಶೋಧನಾ ಕೇಂದ್ರಗಳ ಮುಖೇನ ವ್ಯವಸ್ಥಿತ ಮಣ್ಣಿನ ಪರೀಕ್ಷೆಗೆ ಆದ್ಯತೆ ನೀಡಲಾಗುತ್ತಿದೆ.
ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗೆ 2021-22ನೇ ಸಾಲಿನಲ್ಲಿ ತಲಾ 5 ಸಾವಿರ ಮಣ್ಣು ಪರೀಕ್ಷೆ ಗುರಿ ನಿಗದಿಪಡಿಸಲಾಗಿದೆ. ಈ ವರ್ಷ ಅಧಿಕ ಮಳೆಯ ಕಾರಣ ಪ್ರಕ್ರಿಯೆಗೆ ಚಾಲನೆ ದೊರೆತಿಲ್ಲ. ಶೀಘ್ರ ಆರಂಭಗೊಳ್ಳಲಿದೆ ಎಂದು ಉಭಯ ಜಿಲ್ಲಾ ಕೃಷಿ ಅಧಿಕಾರಿಗಳು ತಿಳಿಸಿದ್ದಾರೆ.

ಪೊಟಾಶಿಯಂ ಕೊರತೆ
ಕರಾವಳಿ ಕೃಷಿ ಮಣ್ಣಿನಲ್ಲಿ ಪೊಟಾಶಿಯಂ ಕೊರತೆ ಆತಂಕ ಮೂಡಿಸುತ್ತಿದೆ ಎಂದು ಮಣ್ಣು ವಿಜ್ಞಾನಿಗಳು ತಿಳಿಸಿದ್ದಾರೆ. ಅಲ್ಲದೆ ಹುಳಿ ಮಣ್ಣಿನ ಸಮಸ್ಯೆಯೂ ಬೆಳೆಗಳ ಮೇಲೆ ಪರಿಣಾಮ ಬೀರುತ್ತಿದೆ. ಇತ್ತೀಚಿನ ಮಣ್ಣು ಪರೀಕ್ಷೆ ಅಧ್ಯಯನದಿಂದ ಈ ಬಗ್ಗೆ ಹೆಚ್ಚಿನ ಅರಿವು ಮೂಡಲು ಸಹಕಾರಿಯಾಗಿದೆ. ಉಭಯ ಜಿಲ್ಲೆಯಲ್ಲಿ ನಿರಂತರ ಜಾಗೃತಿ, ಮಣ್ಣು ಪರೀಕ್ಷೆ, ವಿಶ್ಲೇಷಣೆ, ಶಿಬಿರ, ತರಬೇತಿ ನಡೆಸಲಾಗುತ್ತಿದೆ. ಪರೀಕ್ಷೆಯ ಬಳಿಕ ರೈತರಿಗೆ ಮಣ್ಣು ಆರೋಗ್ಯ ಕಾರ್ಡ್‌ ವಿತರಿಸಲಾಗುತ್ತಿದೆ.

ಮಣ್ಣು ಪರೀಕ್ಷೆ ಹೇಗೆ?
ರೈತರು ಮಣ್ಣು ಪರೀಕ್ಷೆ ಮಾಡಿಸಿಕೊಳ್ಳಲು 3ರಿಂದ 4 ಕಡೆಗಳಲ್ಲಿ “ವಿ’ ಆಕಾರದಲ್ಲಿ ಮಣ್ಣನ್ನು ತೆಗೆದು, ಕೆತ್ತಿರುವ ಮೇಲ್ಮೆ„ ಭಾಗದ ಮಣ್ಣಿನ ಮಾದರಿಯನ್ನು ನೀಡಬೇಕು. ತೋಟಗಾರಿಕೆ ಬೆಳೆಗೆ 30 ಸೆಂ.ಮೀ., ಕೃಷಿ ಬೆಳೆಗೆ 15 ಸೆಂ.ಮೀ. ಕೆಳಗಿನ ಮಣ್ಣಿನ ಮಾದರಿ ಒದಗಿಸಬೇಕು ಎಂದು ತಜ್ಞರು ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ:ವಿದ್ಯಾರ್ಥಿಗಳಿಗೆ ಲಸಿಕೆ ವಿತರಣೆ ಶೇ.65.9ರಷ್ಟು ಗುರಿ ಸಾಧನೆ

ಪರೀಕ್ಷಾ ಕೇಂದ್ರಗಳು
ಜಿಲ್ಲಾ ಮಟ್ಟದ ಮಣ್ಣು ಪರೀಕ್ಷಾ ಕೇಂದ್ರ ಆದಿ ಉಡುಪಿಯಲ್ಲಿದ್ದು, ದ.ಕ. ಜಿಲ್ಲೆಯ ಕೇಂದ್ರ ಮಂಗಳೂರಿನಲ್ಲಿದೆ. ಮಣ್ಣು ಮಾದರಿ ವಿಶ್ಲೇಷಣೆಗಾಗಿ ಉಡುಪಿ ಜಿಲ್ಲೆಯಲ್ಲಿ ಗ್ರಾಮೀಣ ಭಾಗಗಳಲ್ಲಿ 13 ಕೇಂದ್ರ, ದ.ಕ. ಜಿಲ್ಲೆಯಲ್ಲಿ 4 ಕೇಂದ್ರಗಳಿವೆ. ಗ್ರಾಮ ಮಟ್ಟದ ಮಣ್ಣು ಪರಿಕ್ಷಾ ಘಟಕ ಸ್ಥಾಪಿಸಲು ಗರಿಷ್ಠಾ ಯೋಜನಾ ವೆಚ್ಚ 5 ಲಕ್ಷ ರೂ. ನೀಡಲಾಗುತ್ತದೆ. ಇದನ್ನು ಗ್ರಾಮದ ಉತ್ಸಾಹಿ ಯುವಕರು ನಡೆಸುವಂತೆ ಸರಕಾರ ಯೋಜನೆ ರೂಪಿಸಿದೆ. ಸಬ್ಸಿಡಿ ಸಹಕಾರದಲ್ಲಿ ಕೇಂದ್ರವನ್ನು ತೆರೆಯಲಾಗಿದ್ದು, ಉಡುಪಿ ಜಿಲ್ಲೆಯ ಬ್ರಹ್ಮಾವರದಲ್ಲಿ 5, ಬೈಂದೂರು 4, ಕುಂದಾಪುರ 4, ಕಾರ್ಕಳದ ನಿಟ್ಟೆಯಲ್ಲಿ 1 ಗ್ರಾಮೀಣ ಮಣ್ಣು ಪರೀಕ್ಷಾ ಕೇಂದ್ರಗಳಿವೆ.

ಮಣ್ಣಿನ ಆರೋಗ್ಯದ ಕಡೆಗೆ ಹೆಚ್ಚಿನ ಗಮನ ನೀಡುತ್ತ ಪೂರಕ ಕೃಷಿ ಮಾಡಿದಲ್ಲಿ ಉತ್ಪಾದನೆ ಉತ್ತಮವಾಗಿರುತ್ತದೆ. ಇಲಾಖೆ ವತಿಯಿಂದ ತರಬೇತಿ ಮತ್ತು ಸಾವಯವ ಕೃಷಿಗೆ ಒತ್ತು ನೀಡಲು ನಿರಂತರ ಕಾರ್ಯಕ್ರಮಗಳು ನಡೆಯುತ್ತಿವೆ.
– ಡಾ| ಕೆಂಪೇಗೌಡ, ಜಂಟಿ ನಿರ್ದೇಶಕ, ಕೃಷಿ ಇಲಾಖೆ, ಉಡುಪಿ

ಕರಾವಳಿ ಮಣ್ಣಿನಲ್ಲಿ ವರ್ಷದಿಂದ ವರ್ಷಕ್ಕೆ ಪೊಟಾಶಿಯಂ ಅಂಶದ ಕೊರತೆ ಕಾಣಿಸುತ್ತಿದೆ. ಕಾಲಕಾಲಕ್ಕೆ ಪರೀಕ್ಷೆಯ ಮೂಲಕ ಮಣ್ಣಿನ ಆರೋಗ್ಯ ಕಾಪಾಡಿಕೊಂಡು ಹೆಚ್ಚಿನ ಕೃಷಿ, ತೋಟಗಾರಿಕೆ ಬೆಳೆಗಳನ್ನು ಬೆಳೆಯಲು ರೈತರಿಗೆ ಮಾರ್ಗದರ್ಶನ ನೀಡುತ್ತಿದ್ದೇವೆ.
– ಡಾ| ಜಯಪ್ರಕಾಶ್‌ ಆರ್‌. ಮಣ್ಣು ವಿಜ್ಞಾನಿ, ಕೃಷಿ ವಿಜ್ಞಾನ ಕೇಂದ್ರ, ಬ್ರಹ್ಮಾವರ

ಟಾಪ್ ನ್ಯೂಸ್

H. D. Kumaraswamy ನನ್ನ ಬಳಿ ಇರುವುದು ಡಿಕೆಶಿ ಭ್ರಷ್ಟಾಚಾರದ ಮಾಹಿತಿ

H. D. Kumaraswamy ನನ್ನ ಬಳಿ ಇರುವುದು ಡಿಕೆಶಿ ಭ್ರಷ್ಟಾಚಾರದ ಮಾಹಿತಿ

uber cup badminton; India lost against china

Uber Cup Badminton: ಚೀನಾ ವಿರುದ್ಧ ಭಾರತಕ್ಕೆ 5-0 ಸೋಲು

diego maradona

Diego Maradona ಹೃದಯಾಘಾತಕ್ಕೆ ಕೊಕೇನ್‌ ಸೇವನೆ ಕಾರಣ?

Karnataka Govt ಎಸ್‌ಐಟಿಗೆ ಮತ್ತೆ 3 ಎಸಿಪಿ ಸೇರಿ 19 ಸಿಬ್ಬಂದಿ ನೇಮಕ

Karnataka Govt ಎಸ್‌ಐಟಿಗೆ ಮತ್ತೆ 3 ಎಸಿಪಿ ಸೇರಿ 19 ಸಿಬ್ಬಂದಿ ನೇಮಕ

D. K. Shivakumar ಪೆನ್‌ಡ್ರೈವ್‌ನಂತಹ ಚಿಲ್ಲರೆ ಕೆಲಸ ನಾನು ಮಾಡಲ್ಲ

D. K. Shivakumar ಪೆನ್‌ಡ್ರೈವ್‌ನಂತಹ ಚಿಲ್ಲರೆ ಕೆಲಸ ನಾನು ಮಾಡಲ್ಲ

ರಾಷ್ಟ್ರೀಯ ಮಹಿಳಾ ಆಯೋಗದಿಂದ ಸುಮೋಟೋ ಕೇಸ್‌ ದಾಖಲು

Prajwal Revanna Case ರಾಷ್ಟ್ರೀಯ ಮಹಿಳಾ ಆಯೋಗದಿಂದ ಸುಮೋಟೋ ಕೇಸ್‌ ದಾಖಲು

Four humans to begin living on Mars

Mars; ಮಂಗಳ ಗ್ರಹದಲ್ಲಿ 4 ಮಂದಿ ವಾಸ: ಆದ್ರೆ ಇದು ನಿಜವಲ್ಲ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

19

Malpe ಬೀಚ್‌: ಸಮುದ್ರ ಪಾಲಾಗತ್ತಿದ್ದ ಬಾಲಕನ ರಕ್ಷಣೆ

18

Kaup: ಕೆಲಸಕ್ಕಾಗಿ ಬಂದಿದ್ದ ಯುವತಿ ನಾಪತ್ತೆ

13

Gangolli: ಮಹಿಳೆಗೆ ಬೈಕ್‌ ಢಿಕ್ಕಿ; ಗಾಯ

12

Karkala: ಹಿಮ್ಮುಖ ಚಲಿಸಿದ ಟಿಪ್ಪರ್‌; ಸ್ಕೂಟರ್‌ ಜಖಂ

11-udupi

Udupi: ಬಸ್‌ ಢಿಕ್ಕಿ: ಮಹಿಳೆಗೆ ಗಾಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

H. D. Kumaraswamy ನನ್ನ ಬಳಿ ಇರುವುದು ಡಿಕೆಶಿ ಭ್ರಷ್ಟಾಚಾರದ ಮಾಹಿತಿ

H. D. Kumaraswamy ನನ್ನ ಬಳಿ ಇರುವುದು ಡಿಕೆಶಿ ಭ್ರಷ್ಟಾಚಾರದ ಮಾಹಿತಿ

uber cup badminton; India lost against china

Uber Cup Badminton: ಚೀನಾ ವಿರುದ್ಧ ಭಾರತಕ್ಕೆ 5-0 ಸೋಲು

diego maradona

Diego Maradona ಹೃದಯಾಘಾತಕ್ಕೆ ಕೊಕೇನ್‌ ಸೇವನೆ ಕಾರಣ?

Karnataka Govt ಎಸ್‌ಐಟಿಗೆ ಮತ್ತೆ 3 ಎಸಿಪಿ ಸೇರಿ 19 ಸಿಬ್ಬಂದಿ ನೇಮಕ

Karnataka Govt ಎಸ್‌ಐಟಿಗೆ ಮತ್ತೆ 3 ಎಸಿಪಿ ಸೇರಿ 19 ಸಿಬ್ಬಂದಿ ನೇಮಕ

D. K. Shivakumar ಪೆನ್‌ಡ್ರೈವ್‌ನಂತಹ ಚಿಲ್ಲರೆ ಕೆಲಸ ನಾನು ಮಾಡಲ್ಲ

D. K. Shivakumar ಪೆನ್‌ಡ್ರೈವ್‌ನಂತಹ ಚಿಲ್ಲರೆ ಕೆಲಸ ನಾನು ಮಾಡಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.