ಪತ್ರಿಕೋದ್ಯಮ, ಇಂಗ್ಲಿಷ್‌, ಮನಃಶಾಸ್ತ್ರ ಓದಿದವರು ಶಿಕ್ಷಕರಾಗುವಂತಿಲ್ಲ!

ಅರ್ಹತೆಯಿದ್ದರೂ ಅವಕಾಶ ನೀಡದ ಸರಕಾರ

Team Udayavani, Feb 25, 2022, 6:55 AM IST

ಪತ್ರಿಕೋದ್ಯಮ, ಇಂಗ್ಲಿಷ್‌, ಮನಃಶಾಸ್ತ್ರ ಓದಿದವರು ಶಿಕ್ಷಕರಾಗುವಂತಿಲ್ಲ!

ಉಡುಪಿ: ಸರಕಾರಿ ಶಾಲಾ ಶಿಕ್ಷಕರಾಗಿ ಸೇವೆ ಸಲ್ಲಿಸಲು ಎಲ್ಲ ಅರ್ಹತೆಗಳಿದ್ದರೂ ಪದವಿಯಲ್ಲಿ ಪತ್ರಿಕೋದ್ಯಮ, ಇಂಗ್ಲಿಷ್‌ ಜತೆಗೆ ಮನಃಶಾಸ್ತ್ರವನ್ನು ಐಚ್ಛಿಕ ವಿಷಯವಾಗಿ ಓದಿದ ಕಾರಣಕ್ಕಾಗಿಯೇ ಸರಕಾರದ ನಿಯಮದಲ್ಲಿ ಅವಕಾಶವೇ ನೀಡಿಲ್ಲ.

ಇದರಿಂದ ಹೆಚ್ಚು ಸಮಸ್ಯೆ ಎದುರಿಸುತ್ತಿರುವುದು ಮಂಗಳೂರು ವಿಶ್ವವಿದ್ಯಾ ನಿಲಯದಲ್ಲಿ ಈ ಹಿಂದೆ ಅಧ್ಯಯನ ಮಾಡಿದ ಅಭ್ಯರ್ಥಿಗಳು. ಮಂಗಳೂರು ವಿ.ವಿ. ವ್ಯಾಪ್ತಿಯ ಹಲವು ಕಾಲೇಜುಗಳಲ್ಲಿ ಪತ್ರಿಕೋದ್ಯಮ, ಇಂಗ್ಲಿಷ್‌ ಹಾಗೂ ಮನಃಶಾಸ್ತ್ರ ಐಚ್ಛಿಕ ವಿಷಯವಾಗಿ ಓದಲು ಅವಕಾಶವಿತ್ತು. ಈ ರೀತಿಯ ಕಾಂಬಿನೇಷನ್‌ ಬೇರೆ ಯಾವುದೇ ವಿ.ವಿ.ಗಳಲ್ಲಿ ಇಲ್ಲಿಯಷ್ಟು ಜನಪ್ರಿಯವಾಗಿರಲಿಲ್ಲ. ಈ ಮೂರು ಐಚ್ಛಿಕ ವಿಷಯದಲ್ಲಿ ಪದವಿ ಪೂರೈಸಿ ಅನಂತರ ಇಂಗ್ಲಿಷ್‌ನಲ್ಲಿ ಸ್ನಾತಕೋತ್ತರ ಪದವಿ, ಬಿ.ಇಡಿ. ಮಾಡಿ, ಶಿಕ್ಷಕರ ಅರ್ಹತಾ ಪರೀಕ್ಷೆ ಉತ್ತೀರ್ಣರಾಗಿದ್ದರೂ ಸರಕಾರಿ ಶಿಕ್ಷಕರ ಹುದ್ದೆಗೆ ಅರ್ಜಿ ಸಲ್ಲಿಸಲು ಸಾಧ್ಯವಾಗುತ್ತಿಲ್ಲ.

ಈಗ ಸುಮಾರು 10 ಸಾವಿರ ಪದವೀಧರ ಶಿಕ್ಷಕರ ಹುದ್ದೆ ಭರ್ತಿಗೆ ಸರಕಾರ ಮುಂದಾಗಿದೆ. ಶಿಕ್ಷಕರ ನೇಮಕಾತಿ ಸಂಬಂಧ ಸರಕಾರ ರೂಪಿಸಿರುವ ವೃಂದ ಮತ್ತು ನೇಮಕಾತಿ ನಿಯಮದಲ್ಲಿ ಇಂಗ್ಲಿಷ್‌, ಪತ್ರಿಕೋದ್ಯಮ ಹಾಗೂ ಮನಃಶಾಸ್ತ್ರವನ್ನು ಪದವಿಯಲ್ಲಿ ಐಚ್ಛಿಕ ವಿಷಯವಾಗಿ ಕಲಿತವರಿಗೆ ಇಂಗ್ಲಿಷ್‌ ಶಿಕ್ಷಕರ ಹುದ್ದೆಗೆ ಅರ್ಜಿ ಸಲ್ಲಿಸಲು ಅವಕಾಶವೇ ನೀಡಿಲ್ಲ. ನಮಗೂ ಅವಕಾಶ ಕಲ್ಪಿಸಬೇಕು ಎಂದು ಈಗಾಗಲೇ ಹಲವು ಅಭ್ಯರ್ಥಿಗಳು ಮುಖ್ಯಮಂತ್ರಿ, ಶಿಕ್ಷಣ ಸಚಿವರು, ವಿವಿಧ ಇಲಾಖೆಯ ಸಚಿವರಿಗೆ ಮನವಿಯನ್ನು ಸಲ್ಲಿಸಿದ್ದಾರೆ. ಆದರೆ ಸರಕಾರ ಈವರೆಗೂ ಕ್ರಮ ತೆಗೆದುಕೊಂಡಿಲ್ಲ.

ವಿವಿಧ ವಿಷಯ ಸೇರಿದೆ :

ಪದವೀಧರ ಶಿಕ್ಷಕ ಹುದ್ದೆಗೆ ಅರ್ಜಿ ಸಲ್ಲಿಸಲು ಪದವಿಯಲ್ಲಿ ಆಂಗ್ಲಭಾಷೆಯ ಜತೆಗೆ ಕನ್ನಡ, ಹಿಂದಿ, ಮರಾಠಿ, ಉರ್ದು, ತೆಲುಗು, ತಮಿಳು, ಮಲಯಾಳ, ಕೊಂಕಣಿ, ಸಂಸ್ಕೃತ ಭಾಷಾ ವಿಷಯ, ಇತಿಹಾಸ, ಅರ್ಥಶಾಸ್ತ್ರ ಹಾಗೂ ರಾಜಕೀಯ ಶಾಸ್ತ್ರ ಓದಿದವರಿಗೆ ಅವಕಾಶ ನೀಡಲಾಗಿದೆ. ಇತ್ತೀಚಿನ ವರ್ಷದಲ್ಲಿ ಸಮಾಜಶಾಸ್ತ್ರ ಕಾಂಬಿನೇಷನ್‌ಗೂ ಅವಕಾಶ ನೀಡಲಾಗಿದೆ. ಈಗ ಇಂಗ್ಲಿಷ್‌, ಪತ್ರಿಕೋದ್ಯಮ ಮತ್ತು ಮನಃಶಾಸ್ತ್ರ ಓದಿದ ಅಭ್ಯರ್ಥಿಗಳನ್ನು ಮಾತ್ರ ಅರ್ಜಿ ಸಲ್ಲಿಸುವ ಪ್ರಕ್ರಿಯೆಯಿಂದಲೇ ಹೊರಗೆ ಉಳಿಸಿದ್ದಾರೆ.

ಬಿಇಡಿ, ಟಿಇಟಿಗೆ ಅವಕಾಶ :

ಈ ಅಭ್ಯರ್ಥಿಗಳಿಗೆ ಬಿ.ಇಡಿ. ಮಾಡಲು ಸರಕಾರವೇ ಅನುಮತಿಸಿದೆ. ಸರಕಾರದ ನಿಯಮ ದಂತೆ ಸಾರ್ವಜನಿಕ ಶಿಕ್ಷಣ ಇಲಾಖೆಯ ಕೇಂದ್ರೀಕೃತ ದಾಖಲಾತಿ ಘಟಕ(ಸಿಎಸಿ) ನಡೆಸುವ ಶಿಕ್ಷಕರ ಅರ್ಹತಾ ಪರೀಕ್ಷೆಯಲ್ಲೂ ತೇರ್ಗಡೆಯಾಗಿದ್ದಾರೆ. ಆದರೆ ಶಿಕ್ಷಕರ ಹುದ್ದೆಗೆ ಮಾತ್ರ ಅರ್ಜಿ ಸಲ್ಲಿಸಲು ಅವಕಾಶ ನೀಡುತ್ತಿಲ್ಲ.

ಕೋಟ ಪತ್ರ :

ಈ ಮೂರು ವಿಷಯಗಳಲ್ಲಿ ಪದವಿ ಪೂರೈಸಿ, ಶಿಕ್ಷಕರಾಗಲು ಎಲ್ಲ ಅರ್ಹತೆ ಇರುವವರಿಗೆ ಪದವೀಧರ ಶಿಕ್ಷಕರ ಹುದ್ದೆಗೆ ಅವಕಾಶ ಕಲ್ಪಿಸುವ ಸಂಬಂಧ ನಿಯಮದಲ್ಲಿ ಸೂಕ್ತ ತಿದ್ದುಪಡಿ ಅಗತ್ಯವಿದೆ. ಅಗತ್ಯ ಮಾರ್ಪಾಟು ಮಾಡಿ ನೂರಾರು ಅಭ್ಯರ್ಥಿಗಳಿಗೆ ನ್ಯಾಯ ಒದಗಿಸುವಂತೆ ಸಮಾಜ ಕಲ್ಯಾಣ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರು ಫೆ. 16ರಂದು ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಚಿವ ಬಿ.ಸಿ. ನಾಗೇಶ್‌ ಅವರಿಗೆ ಪತ್ರ ಬರೆದಿದ್ದಾರೆ.

ಸಮಸ್ಯೆ ಅರಿವಾಗಿದೆ :

ಇಂಗ್ಲಿಷ್‌, ಪತ್ರಿಕೋದ್ಯಮ, ಮನಃಶಾಸ್ತ್ರ ಕಾಂಬಿನೇಷನ್‌ ಓದಿದ ಅಭ್ಯರ್ಥಿಗಳು ಎದುರಿಸುತ್ತಿರುವ ಸಮಸ್ಯೆ ಗಮನಕ್ಕೆ ಬಂದಿದೆ. ಲಿಖೀತವಾಗಿ ದೂರುಗಳು ಬಂದರೆ, ಸರಕಾರಕ್ಕೆ ಕಳುಹಿಸಲಿದ್ದೇವೆ. ಸರಕಾರದ ಹಂತದಲ್ಲಿ ನಿಯಮಕ್ಕೆ ತಿದ್ದುಪಡಿ ಆಗಬೇಕು.– ಡಾ| ಪಿ. ಸುಬ್ರಹ್ಮಣ್ಯ ಯಡಪಡಿತ್ತಾಯ, ಮಂಗಳೂರು ವಿ.ವಿ. ಕುಲಪತಿ

ಟಾಪ್ ನ್ಯೂಸ್

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

17

Team India: ಟಿ20 ವಿಶ್ವಕಪ್‌ ತಂಡ ರಾಹುಲ್‌ಗೆ ಚಾನ್ಸ್‌, ಹಾರ್ದಿಕ್‌ ಪಾಂಡ್ಯಗೆ ಕೊಕ್‌?

Horoscope: ಈ ರಾಶಿಯವರಿಗೆ ಹಿತಶತ್ರುಗಳ ಒಳಸಂಚಿನ ಬಗೆಗೆ ಎಚ್ಚರವಿರಲಿ

Horoscope: ಈ ರಾಶಿಯವರು ಹಿತಶತ್ರುಗಳ ಒಳಸಂಚಿನ ಬಗೆಗೆ ಎಚ್ಚರದಿಂದಿರಬೇಕು

1-NG

JEE; ಮಹಾರಾಷ್ಟ್ರ ರೈತನ ಮಗ ಮೇನ್‌ ಟಾಪರ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

17

Team India: ಟಿ20 ವಿಶ್ವಕಪ್‌ ತಂಡ ರಾಹುಲ್‌ಗೆ ಚಾನ್ಸ್‌, ಹಾರ್ದಿಕ್‌ ಪಾಂಡ್ಯಗೆ ಕೊಕ್‌?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.