Mangaluru: ಮುಗಿಯುತ್ತಿಲ್ಲ ಕಾಮಗಾರಿ…ಪ್ರವಾಸಿ ತಾಣಗಳ ಅಭಿವೃದ್ಧಿಯ ಆಮೆ ನಡಿಗೆ!

ಇಂಟರ್‌ಲಾಕ್‌ ಕೆಲಸ ಇಲ್ಲಿ ಪೂರ್ಣವಾಗಿದ್ದರೂ, ಶೌಚಾಲಯ ಕೆಲಸ ಪ್ರಗತಿಯಲ್ಲಿದೆ.

Team Udayavani, Jan 17, 2024, 2:32 PM IST

Mangaluru: ಮುಗಿಯುತ್ತಿಲ್ಲ ಕಾಮಗಾರಿ…ಪ್ರವಾಸಿ ತಾಣಗಳ ಅಭಿವೃದ್ಧಿಯ ಆಮೆ ನಡಿಗೆ!

ಮಹಾನಗರ: ಪ್ರವಾಸೋದ್ಯಮ ಅಭಿವೃದ್ದಿಗಾಗಿ ಸರಕಾರ ರೂಪಿಸುವ ಯೋಜನೆಗಳ ಪ್ರಗತಿ ಆಮೆಗತಿಯಲ್ಲಿದೆ. ಪ್ರವಾಸೋದ್ಯಮ ಪೂರಕವಾದ ಹಲವು ಯೋಜನೆಗಳನ್ನು ಸರಕಾರ ಘೋಷಿಸಿದ್ದರೂ, ಕೆಲವು ಯೋಜನೆಗೆ ಅನುದಾನ ನೀಡದೆ- ನೀಡಿ ದರೂ ಅದನ್ನು ಬಳಕೆ ಮಾಡಲು ಉತ್ಸಾಹ ತೋರದೆ ನಿರ್ಲಕ್ಷ್ಯ ವಹಿಸಿದಂತಿದೆ!

ದ.ಕ. ಜಿಲ್ಲೆಯಲ್ಲಿ ಪ್ರವಾಸಿ ತಾಣಗಳ ಮೂಲಸೌಲಭ್ಯ ಅಭಿವೃದ್ದಿಗಾಗಿ ಒಟ್ಟು 66 ಯೋಜನೆಗಳನ್ನು ಕೈಗೆತ್ತಿಕೊಳ್ಳಲಾಗಿದೆ.
ಇದಕ್ಕೆ ಅಂದಾಜು ಮೊತ್ತ 3160.52 ಲಕ್ಷ ರೂ.ಆದರೆ ಈವರೆಗೆ ಬಿಡುಗಡೆಯಾದ ಅನುದಾನ 2112.73 ಲಕ್ಷ ರೂ.ಮಾತ್ರ. ಈ ಕಾರಣದಿಂದ ಕೆಲವು ಯೋಜನೆ ಜಿಲ್ಲೆಯಲ್ಲಿ ಪೂರ್ಣವಾಗಿದ್ದರೆ, ಉಳಿದಂತೆ ಶೇ.60ರಷ್ಟು “ಕಾಮಗಾರಿ ಪ್ರಗತಿ ಯಲ್ಲಿದೆ’ ಎಂಬ ಉತ್ತರದಲ್ಲಿದೆ. ಉಳಿದವು “ಟೆಂಡರ್‌ ಪ್ರಕ್ರಿಯೆಯಲ್ಲಿದೆ’, “ಅಂದಾಜು ಪಟ್ಟಿ ಸಿದ್ದವಾಗಿದೆ’ ಎಂಬ ಉತ್ತರ ಲಭಿಸುತ್ತಿದ್ದರೆ, ಕೆಲವು ಇನ್ನಷ್ಟೇ ಪ್ರಾರಂಭವಾಗಬೇಕಿದೆ!

2018ರಿಂದ 2022ರವರೆಗೆ ಸರಕಾರ ಮಂಜೂರಾತಿ ನೀಡಿದ ಹಲವು ಯೋಜನೆಗಳು ಇನ್ನೂ ಕುಂಟುತ್ತಾ ಸಾಗುತ್ತಿದೆ. ಈ ಪೈಕಿ ಮಂಗಳೂರು, ಉಳ್ಳಾಲ, ಮೂಡುಬಿದಿರೆ, ಮೂಲ್ಕಿ ವ್ಯಾಪ್ತಿಯ ಯೋಜನೆಗಳು ಹಲವುವಿದೆ. ಮಂಗಳೂರಿನ ಸುಲ್ತಾನ್‌ಬತ್ತೇರಿ ಕೋಟೆಯನ್ನು ಸಂಪರ್ಕಿಸುವ ರಸ್ತೆ ಅಭಿವೃದ್ದಿ ಕಾಮಗಾರಿಗೆ 2017-18ರಲ್ಲಿ ಮಂಜೂರಾತಿ ದೊರೆತರೂ 125 ಲಕ್ಷ ರೂ.ಗಳ ಪೈಕಿ 50 ಲಕ್ಷ ರೂ. ಮಾತ್ರ ಬಿಡುಗಡೆಯಾಗಿ, ಈಗಲೂ ಯೋಜನೆ “ಪ್ರಗತಿಯಲ್ಲಿದೆ’!

ಉಳ್ಳಾಲ ಚೀರುಂಭ ಭಗವತೀ ದೇವಸ್ಥಾನ ಬಳಿ ಯಾತ್ರಿ ನಿವಾಸ, ಮಂಜನಾಡಿ ದರ್ಗಾದ ಬಳಿ ಯಾತ್ರಿ ನಿವಾಸ ನಿರ್ಮಾಣ, ತಲಪಾಡಿ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಬಳಿ ಮೂಲ ಸೌಕರ್ಯ ಅಭಿವೃದ್ದಿಯೂ ಪ್ರಗತಿಯಲ್ಲೇ ಇದೆ. ಇಂಟರ್‌ಲಾಕ್‌ ಕೆಲಸ ಇಲ್ಲಿ ಪೂರ್ಣವಾಗಿದ್ದರೂ, ಶೌಚಾಲಯ ಕೆಲಸ ಪ್ರಗತಿಯಲ್ಲಿದೆ.

ವಾಮಂಜೂರು ಪರಾರಿಯ ಶ್ರೀ ಕೋರ್ದಬ್ಬು, ಚಾಮುಂಡಿ ಹಾಗೂ ಪರಿವಾರ ದೈವಗಳ ಕ್ಷೇತ್ರದಲ್ಲಿ ಮೂಲಸೌಲ ಭ್ಯ ವ್ಯವಸ್ಥೆ ಕಲ್ಪಿಸುವ ಯೋಜನೆ, ಇರಾ ಗ್ರಾಮದ ಶ್ರೀ ಸೋಮನಾಥೇಶ್ವರ ಸೇವಸ್ಥಾನದಲ್ಲಿ ಮೂಲ ಸೌಕರ್ಯವೂ ಪ್ರಗತಿಯಲ್ಲೇ ಇದೆ!

ಪ್ರಾರಂಭವೇ ಆಗಿಲ್ಲ!
ಸಸಿಹಿತ್ಲು ಕಡಲ ತೀರದಲ್ಲಿ ವಿವಿಧ ಪ್ರವಾಸಿ ಮೂಲಸೌಲಭ್ಯ ಅಭಿವೃದ್ಧಿ ಒಳಗೊಂಡ ಜಿ.ಎಲ್‌. ಆರ್‌ ಘಟಕ ಸ್ಥಾಪನೆ ಹಾಗೂ
ಇತರ ಸೌಲಭ್ಯ ಅಭಿವೃದ್ದಿಗೆ 536 ಲಕ್ಷ ರೂ. ಅಂದಾಜಿಸಲಾಗಿತ್ತು. ಇದು ಇನ್ನೂ ಶುರು ಕಂಡಿಲ್ಲ. ಜತೆಗೆ ಕಡಲ ತೀರದಲ್ಲಿ ಕುಡಿಯುವ ನೀರಿನ ವ್ಯವಸ್ಥೆ ಬೀದಿ ದೀಪ ಅಳವಡಿಕೆಯೂ ಬಾಕಿಯಾಗಿದೆ.

ಇಲ್ಲಿ ಮೂಲ ಸೌಲಭ್ಯದ ಕೊರತೆ ಇದೆ. ನಿರ್ವಹಣೆ ಇಲ್ಲದೆ ಸೊರಗಿದೆ. ಜತೆಗೆ ಕಡಲ್ಕೊರತೆ ಆಗಿ ತೀರ ಪ್ರದೇಶ ಕೊಚ್ಚಿ ಹೋಗಿದೆ. ಜತೆಗೆ, 2023-24ನೇ ಸಾಲಿನ ಆಯವ್ಯಯ ಭಾಷಣದಲ್ಲಿ ಉಲ್ಲೇಖಿಸಿದ ಸಸಿಹಿತ್ಲು ಕಡಲ ತೀರವನ್ನು ಅಂತಾರಾಷ್ಟ್ರೀಯ ಸರ್ಫಿಂಗ್ ತಾಣವಾಗಿ ಖಾಸಗಿ ಸಹಭಾಗಿತ್ವದಲ್ಲಿ ಅಭಿವೃದ್ಧಿಗೊಳಿಸುವ ಯೋಜನೆ‌ ಪ್ರಾರಂಭಕ್ಕೆ ಇನ್ನೆಷ್ಟು ಸಮಯ ಬೇಕಾಗಬಹುದೋ!

ಮರೋಳಿ ಶ್ರೀ ಸೂರ್ಯ ನಾರಾಯಣ ಕ್ಷೇತ್ರದಲ್ಲಿ ಮೂಲ ಸೌಕರ್ಯ ಅಭಿವೃದ್ದಿ ಹಾಗೂ ಮಂಗಳಾದೇವಿಯಲ್ಲಿ ಕಾಯ್ದಿರಿಸಿದ
ಜಾಗದಲ್ಲಿ ಯಾತ್ರಿ ನಿವಾಸ ನಿರ್ಮಾಣ ಪ್ರಾರಂಭವಾಗಿಲ್ಲ.

ಶೀಘ್ರ ಮುಕ್ತಾಯ
ಪ್ರವಾಸಿ ತಾಣಗಳ ಅಭಿವೃದ್ಧಿ ಯೋಜನೆಯಡಿ ಈಗಾಗಲೇ ಮಂಜೂರಾದ ಕಾಮಗಾರಿಗಳ ಪೈಕಿ ಹಲವು ಪೂರ್ಣಗೊಂಡಿವೆ. ಕೆಲವು ಕಾಮಗಾರಿಗಳು ಪ್ರಗತಿಯಲ್ಲಿದೆ. ಉಳಿದ ಯೋಜನೆಗಳು ಸರಕಾರದ, ತಾಂತ್ರಿಕ ಒಪ್ಪಿಗೆಯ ಮೂಲಕ ಆರಂಭಿಸುವ ಪ್ರಕ್ರಿಯೆ ನಡೆಯುತ್ತಿದೆ. ಬಾಕಿ ಕಾಮಗಾರಿಯನ್ನು ಶೀಘ್ರದಲ್ಲಿ ಮುಗಿಸಲು ಕ್ರಮ ಕೈಗೊಳ್ಳಲಾಗುವುದು.
ಮಾಣಿಕ್ಯ, ಉಪನಿರ್ದೇಶಕರು,
ಪ್ರವಾಸೋದ್ಯಮ ಇಲಾಖೆ-ದ.ಕ

*ದಿನೇಶ್‌ ಇರಾ

ಟಾಪ್ ನ್ಯೂಸ್

b y vijayendra

LokSabha; ರಾಹುಲ್ ಗಾಂಧಿಯನ್ನು ರಾಜ್ಯಕ್ಕೆ ಹೆಚ್ಚೆಚ್ಚು ಕರೆಯಿಸಬೇಕು: ವಿಜಯೇಂದ್ರ‌ ವ್ಯಂಗ್ಯ

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

7-uv-fusion

UV Fusion: ಅಲ್ಪನಿಗೆ ಐಶ್ವರ್ಯ ಬಂದರೆ ಅರ್ಧ ರಾತ್ರಿಲಿ ಕೊಡೆ ಹಿಡಿದ

b y vijayendra

LokSabha; ರಾಹುಲ್ ಗಾಂಧಿಯನ್ನು ರಾಜ್ಯಕ್ಕೆ ಹೆಚ್ಚೆಚ್ಚು ಕರೆಯಿಸಬೇಕು: ವಿಜಯೇಂದ್ರ‌ ವ್ಯಂಗ್ಯ

6-uv-fusion

UV Fusion: ಮಿತಿಯೊಳಗಿನ ಬದುಕು ನೆನಪಾದಾಗ

5-vitla

Vitla Palace: ಶತಮಾನಗಳ ಇತಿಹಾಸದ ವಿಟ್ಲ ಅರಮನೆ

4

ವಿಚ್ಛೇದನ ನೀಡದಿದ್ದರೆ ತಲೆಯನ್ನು ಕಡಿದು ಕುಕ್ಕರ್‌ನಲ್ಲಿ ಬೇಯಿಸುವೆ ಎಂದ ಪತಿ ವಿರುದ್ಧ FIR

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.