ಮಾವಿನ ಬೆಳೆಗೆ ಅಕಾಲಿಕ ಮಳೆ ಕರಿನೆರಳು : ಭರ್ಜರಿ ಇಳುವರಿ ಕನಸು ಈಗ ನುಚ್ಚುನೂರು
Team Udayavani, Jan 18, 2021, 3:21 PM IST
ಹಾವೇರಿ: ಪ್ರತಿ ವರ್ಷ ಒಂದಿಲ್ಲೊಂದು ಸಂಕಷ್ಟ ಎದುರಿಸುತ್ತಿರುವ ಮಾವು ಬೆಳೆಗಾರರಿಗೆ ಈ ಬಾರಿ ನಾಲ್ಕಾರು ದಿನಗಳ ಹಿಂದೆ ಸುರಿದ ಅಕಾಲಿಕ ಮಳೆ ಬರೆ ಎಳೆದಿದ್ದು, ಭರ್ಜರಿ ಇಳುವರಿ ಕನಸು ಕಂಡಿದ್ದ ಮಾವು ಬೆಳೆಗಾರರು ಆತಂಕಕ್ಕೊಳಗಾಗುವಂತೆ ಮಾಡಿದೆ.
ಜಿಲ್ಲಾದ್ಯಂತ ಕಳೆದ ನಾಲ್ಕಾರು ದಿನಗಳ ಹಿಂದೆ ಸುರಿದ ಅಕಾಲಿಕ ಮಳೆ ಮಾವು ಬೆಳೆಗಾರರ ಆತಂಕ ಹೆಚ್ಚಿಸಿದೆ. ಕೆಲ ದಿನಗಳ
ಹಿಂದೆ ಜೋರಾದ ಚಳಿ ವಾತಾವರಣದಿಂದ ಮಾವಿನ ಮರಗಳಲ್ಲಿ ಹಸಿರೆಲೆ ಕಾಣದಷ್ಟು ಹೂಬಿಟ್ಟಿದ್ದವು. ಕೆಲ ಗಿಡಗಳಲ್ಲಿ ಕಡಲೆ ಗಾತ್ರದ ಮಿಡಿಗಾಯಿಗಳಾಗಿದ್ದವು. ಎರಡೂ¾ರು ತಿಂಗಳಲ್ಲಿ ಭಾರೀ ಇಳುವರಿ ನಿರೀಕ್ಷೆ ಹೊಂದಲಾಗಿತ್ತು. ಮುಂಗಾರು ಬೆಳೆ ಕೈಕೊಟ್ಟರೂ ಮಾವು ಕೈಹಿಡಿಯುವ ಆಶಾವಾದ ಹೊಂದಿದ್ದರು. ಆದರೆ, ಅನಿರೀಕ್ಷಿತವಾಗಿ ಸುರಿದ ಮಳೆ ಮಾವುಬೆಳೆಗಾರರ ಆತಂಕಕ್ಕೆ ಕಾರಣವಾಗಿದೆ.
ಇದನ್ನೂ ಓದಿ:ಮೂರು ವರ್ಷಗಳಿಂದ ನನೆಗುದಿಗೆ ಬಿದ್ದಿದ್ದ ಕ್ರೀಡಾಂಗಣ ಮೇಲ್ಛಾವಣಿ ನಿರ್ಮಾಣ ಕಾರ್ಯ ಚುರುಕು
ರೈತರಲ್ಲಿ ನಷ್ಟದ ಆತಂಕ: ಜಿಲ್ಲೆಯ ಹಾನಗಲ್ಲ ತಾಲೂಕಿನಲ್ಲಿ ಗರಿಷ್ಠ 3200 ಹೆಕ್ಟೇರ್ ಪ್ರದೇಶದಲ್ಲಿ ಮಾವು ಬೆಳೆಯಲಾಗುತ್ತಿದೆ. ಶಿಗ್ಗಾವಿ ತಾಲೂಕಿನಲ್ಲೂ 1500 ಸಾವಿರ ಹೆಕ್ಟೇರ್ಗಿಂತ ಹೆಚ್ಚಿನ ಪ್ರಮಾಣದಲ್ಲಿ ಮಾವು ಬೆಳೆಯಲಾಗುತ್ತಿದೆ. ಜಿಲ್ಲೆಯಲ್ಲಿ 5,700 ಹೆಕ್ಟೇರ್ ಪ್ರದೇಶದಲ್ಲಿ ಮಾವು ಬೆಳೆಯಿದೆ. ಈ ಭಾಗದಲ್ಲಿ ಪ್ರತಿ ಹೆಕ್ಟೇರ್ಗೆ 18ರಿಂದ 20 ಟನ್ ಮಾವು ಉತ್ಪಾದನೆಯಾಗುತ್ತದೆ. ಜಿಲ್ಲೆಯಲ್ಲಿ ವಾರ್ಷಿಕ 1.20 ಲಕÒ ಟನ್ಗೂ ಹೆಚ್ಚು ಮಾವಿನ ಹಣ್ಣು ಬೆಳೆದು, ರಫ್ತು ಮಾಡಲಾಗುತ್ತದೆ. ಅದು ಈ ಬಾರಿ ಮತ್ತಷ್ಟು ಹೆಚ್ಚಿ ಸುಮಾರು 1.50 ಲಕÒ ಟನ್ ಮಾವು ಉತ್ಪಾದನೆಯಾಗುವ ನಿರೀಕ್ಷೆ ಹೊಂದಲಾಗಿತ್ತು.
ಕಳೆದ ವರ್ಷ ಮಾವು ಬೆಳೆ ಕಡಿಮೆಯಿದ್ದರೂ ಇದ್ದ ಬೆಳೆಯನ್ನೂ ಮಾರಾಟ ಮಾಡಲಾಗದೇ ಬೆಳೆಗಾರರು ನಷ್ಟ ಅನುಭವಿಸಿದ್ದರು. ಮಾವಿನ ಸೀಸನ್ ವೇಳೆಯೇ ಕೊರೊನಾ ಸೋಂಕು ಆರಂಭವಾಗಿ ಲಾಕ್ಡೌನ್ ಮಾಡಲಾಗಿತ್ತು. ಇದರಿಂದ ಇದ್ದ ಬೆಳೆಯನ್ನು ಸಾಗಿಸಲೂ ಆಗದೇ, ಮಾರುಕಟ್ಟೆಗೂ ಒಯ್ಯಲಾಗದೇ ರೈತರು ನಷ್ಟ ಅನುಭವಿಸಿದ್ದರು. ಈ ಸಲವಾದರೂ ಉತ್ತಮ ಬೆಳೆ ಬರುವ ನಿರೀಕ್ಷೆಯಲ್ಲಿರುವ ರೈತರಿಗೆ ಅನಿರೀಕ್ಷಿತ ಮಳೆ ನಷ್ಟಕ್ಕೆ ನೂಕಿದೆ.
5,700 ಹೆಕ್ಟೇರ್ ಪ್ರದೇಶದಲ್ಲಿ ಮಾವು
ಜಿಲ್ಲೆಯ 5,700 ಹೆಕ್ಟೇರ್ ಪ್ರದೇಶದಲ್ಲಿ ಗುಣಮಟ್ಟದ ಮಾವು ಬೆಳೆಯಲಾಗುತ್ತಿದೆ. ಇತ್ತೀಚಿನ ವರ್ಷಗಳಲ್ಲಿ ಬೆಳೆಗಾರರ ಸಂಖ್ಯೆ ಹೆಚ್ಚಿದ್ದು, ಇಲ್ಲಿಯ ಆಪೂಸು ತಳಿಯ ಮಾವಿನ ಹಣ್ಣಿಗೆ ವಿವಿಧೆಡೆ ಹೆಚ್ಚಿನ ಬೇಡಿಕೆಯೂ ಇದೆ. ಇಲ್ಲಿಯ ಮಾವಿಗೆ ಬ್ರಾಂಡ್
ನೀಡಲಾಗಿದ್ದು, ವರದಾ ನದಿ ತೀರದ ಆಪೂಸು ಜಾತಿಯ ಮಾವಿಗೆ ವರದಾ ಗೋಲ್ಡ್ ಎಂದು ಬ್ರಾಂಡ್ ಮಾಡಿ ಮಾರುಕಟ್ಟೆ ಮಾಡಲಾಗುತ್ತಿದೆ. ಹಾನಗಲ್ಲ ಭಾಗದ ರೈತರು ಮಾವನ್ನು ಹೆಚ್ಚಿನ ಪ್ರಮಾಣದಲ್ಲಿ ಬೆಳೆಯುತ್ತಿದ್ದಾರೆ. ಪಕ್ಕದ ಮಹಾರಾಷ್ಟ್ರದ
ಜ್ಯೂಸ್ ಫ್ಯಾಕ್ಟರಿಗಳಿಗೆ ಇಲ್ಲಿಯ ಮಾವಿಗೆ ಹೆಚ್ಚಿನ ಬೇಡಿಕೆಯಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
MUST WATCH
ಹೊಸ ಸೇರ್ಪಡೆ
Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ
ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ
ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್ಕುಮಾರ್
Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ