ಮಾರುಕಟ್ಟೆಯಿಂದ ಮರೆಯಾಗಲು ಸಜ್ಜಾದ ಮಾವು

ಪ್ರಸಕ್ತ ಸುಗ್ಗಿಯಲ್ಲಿ ಕೊನೆಯ ಬಾರಿ ಮಾವಿನ ರುಚಿ ಸವಿಯಲು ಮುಂದಾದ ಗ್ರಾಹಕರು ; ಹಣ್ಣುಗಳ ಲಭ್ಯತೆ ಇನ್ನು 10-15 ದಿನ ಮಾತ್ರ

Team Udayavani, Jun 24, 2022, 1:21 PM IST

15

ಹಾವೇರಿ: ಹಣ್ಣುಗಳ ರಾಜ ಮಾವಿನ ಸುಗ್ಗಿ ವಿದಾಯದ ಹಾದಿಯಲ್ಲಿದ್ದು, ಇನ್ನೂ 10 ರಿಂದ 15 ದಿನ ಮಾರುಕಟ್ಟೆಯಲ್ಲಿ ಹಣ್ಣು ದೊರೆತರೆ ಹೆಚ್ಚು. ಮಾವಿನ ಸುಗ್ಗಿಯ ಅಂತ್ಯದಲ್ಲಿ ದರವೂ ಕಡಿಮೆಯಾಗಿದ್ದು, ಗ್ರಾಹಕರು ಕೊನೆಯ ಬಾರಿ ಮಾವಿನ ಹಣ್ಣಿನ ರುಚಿ ಸವಿಯಲು ಮುಂದಾಗುತ್ತಿದ್ದಾರೆ.

ನಗರದ ಎಂ.ಜಿ. ರೋಡ್‌, ಬಸ್‌ ನಿಲ್ದಾಣದ ಬಳಿ ಮಾವು ಮಾರಾಟವಾಗುತ್ತಿದೆ. ಈ ಬಾರಿ ಮಾವು ಮಾರುಕಟ್ಟೆಗೆ ತಡವಾಗಿ ಆಗಮಿಸಿದ್ದರೂ ದರದಲ್ಲಿ ಏರಿಕೆ ಕಂಡು ಬಂದಿತ್ತು. ಸುಗ್ಗಿಯ ಆರಂಭದ ದಿನಗಳಲ್ಲಿ ಸಿರಿವಂತರಿಗೆ ಮಾತ್ರ ಕೈಗೆಟಕುವ ಮಾವು, ಇದೀಗ ಎಲ್ಲರಿಗೂ ಸುಲಭವಾಗಿ ಲಭ್ಯವಾಗುತ್ತಿದ್ದು, ಮಾವಿನ ಹಣ್ಣಿನ ದರದಲ್ಲಿ ಸ್ಪಲ್ಪಮಟ್ಟಿಗೆ ಇಳಿಕೆಯಾಗಿದೆ.

ಬಾದಾಮಿ ಕೆಜಿಗೆ 100-120 ರೂ.ಗೆ ಮಾರಾಟವಾದರೆ, ನೀಲಂ 100 ರೂ., ಮಲ್ಲಿಕಾ 80 ರಿಂದ 100 ರೂ.ಗೆ ಒಂದು ಕೆಜಿ ಮಾರಾಟವಾಗುತ್ತಿವೆ. ಸುಗ್ಗಿಯ ಆರಂಭದಿಂದ ಅಂತ್ಯದವರೆಗೂ ಆಪೂಸ್‌ ಹಣ್ಣುಗಳಿಗೆ ಹೆಚ್ಚಿನ ಬೇಡಿಕೆಯಿತ್ತು. ಮಾವಿನ ಹಣ್ಣುಗಳಲ್ಲಿ ಹೆಚ್ಚು ಜನರು ಆಪೂಸ್‌ ಹಣ್ಣನ್ನು ಬೇಡುತ್ತಿದ್ದರು. ಆದ್ದರಿಂದ ಹೆಚ್ಚಿನ ಸಂಖ್ಯೆಯ ಹಣ್ಣುಗಳನ್ನು ಮಾವಿನ ಸುಗ್ಗಿಯುದ್ದಕ್ಕೂ ಗ್ರಾಹಕರ ಬೇಡಿಕೆಗೆ ತಕ್ಕಂತೆ ಹೊರ ರಾಜ್ಯಗಳಿಂದ ಖರೀದಿಸಿ ಮಾರಾಟ ನಡೆಸುತ್ತಿದ್ದೆವು ಎಂದು ವ್ಯಾಪಾರಿ ಶಾಹಿದ್‌ಅಲಿ ಜಮಖಂಡಿ ತಿಳಿಸಿದರು.

ಈ ಬಾರಿ ಮಾವಿನ ಸೀಜನ್‌ ತಡಗಾಗಿ ಆರಂಭಗೊಂಡರೂ ಚಲೋ ವ್ಯಾಪಾರ ನಡೆಯಿತು. ದರ ಹೆಚ್ಚಿದ್ದರೂ ಅನುಕೂಲಸ್ಥರು ಖರೀದಿಸಿದರು. ಕಾರ ಹುಣ್ಣಿಮೆ ಬಳಿಕ ಶೇ.75ರಷ್ಟು ವಹಿವಾಟು ಇಳಿಮುಖವಾಗಿದೆ. ಇದೀಗ ಹೆಚ್ಚಿನ ಸಂಖ್ಯೆಯಲ್ಲಿ ಮಧ್ಯಮ ವರ್ಗದವರು, ಬಡವರು ಹಣ್ಣುಗಳ ಖರೀದಿ ಮಾಡುತ್ತಿದ್ದಾರೆ. ಒಟ್ಟಾರೆ ಹಿಂದಿನ ವರ್ಷದ ವಹಿವಾಟಿಗೆ ಹೋಲಿಸಿದರೆ ಈ ಬಾರಿ ಉತ್ತಮ ವಹಿವಾಟು ನಡೆದಿದೆ. ಮಳೆ ಆರಂಭಗೊಂಡಿತು ಎಂದೊಡನೆ ಸಹಜವಾಗಿಯೇ ನಮ್ಮ ವಹಿವಾಟು ಇಳಿಮುಖವಾಗುತ್ತದೆ. ರೈತರು ಮಾರುಕಟ್ಟೆಗೆ ಖರೀದಿಗೆ ಬರುವ ಬದಲು ಹೊಲಗಳಲ್ಲಿ ದುಡಿಮೆಯಲ್ಲಿ ತೊಡಗಿಸಿಕೊಳ್ಳುತ್ತಾರೆ ಎಂದು ಹೇಳಿದರು.

ಮಾವು ಮಾರುಕಟ್ಟೆಗೆ ವಿದಾಯ ಹೇಳಲು ಸಜ್ಜಾಗಿದೆ. ಇನ್ನೊಂದು 10 ದಿನ ಸಿಕ್ಕರೆ ಹೆಚ್ಚು. ಮತ್ತೆ ನಾವು ಮಾವಿನ ಸ್ವಾದ ಸವಿಯಬೇಕೆಂದರೆ ಕನಿಷ್ಟ 9-10 ತಿಂಗಳು ಕಾಯಬೇಕು. ಆದ್ದರಿಂದ, ಸುಗ್ಗಿಯ ಕೊನೆಯ ಅವಧಿಯಲ್ಲಿ ಮಾವು ಖರೀದಿಸುತ್ತಿದ್ದೇವೆ. –ಸಂತೋಷ ದಶಮನಿ, ಗ್ರಾಹಕರು

ಕಾರ ಹುಣ್ಣಿಮೆಯ ನಂತರ ಮಾವಿನ ಹಣ್ಣುಗಳ ವ್ಯಾಪಾರ ಇಳಿಮುಖವಾಗಿದೆ. ಇನ್ನೂ ಮಳೆ ಬೀಳದ್ದರಿಂದ ಗ್ರಾಹಕರು ಹಣ್ಣು ಖರೀದಿಸುತ್ತಿದ್ದಾರೆ. ಕಳೆದ ವರ್ಷ ಕೊರೊನಾ ಹಿನ್ನೆಲೆಯಲ್ಲಿ ವ್ಯಾಪಾರ ಅಷ್ಟಾಗಿ ಆಗಿರಲಿಲ್ಲ. ಈ ವರ್ಷದ ವ್ಯಾಪಾರ ಸ್ವಲ್ಪಮಟ್ಟಿಗೆ ಉತ್ತಮವಾಗಿದೆ. –ದಾವಲ್‌ ಶಿರಹಟ್ಟಿ, ಹಣ್ಣುಗಳ ವ್ಯಾಪಾರಸ್ಥರು

 

ಟಾಪ್ ನ್ಯೂಸ್

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ls polls: ರಾಜ್ಯದಲ್ಲಿ ನಾವು 18 -20 ಸೀಟ್‌ ಗೆಲ್ಲುತ್ತೇವೆ; ಸಚಿವ ಶಿವಾನಂದ ಪಾಟೀಲ ವಿಶ್ವಾಸ

Ls polls: ರಾಜ್ಯದಲ್ಲಿ ನಾವು 18 -20 ಸೀಟ್‌ ಗೆಲ್ಲುತ್ತೇವೆ; ಸಚಿವ ಶಿವಾನಂದ ಪಾಟೀಲ ವಿಶ್ವಾಸ

ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ

ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ

ಹಾವೇರಿ- ಸತ್ಯದ ಸತ್ಪಥದಿಂದ ಜೀವನ ಪರಿವರ್ತನೆ: ರಂಭಾಪುರಿ ಶ್ರೀ

ಹಾವೇರಿ- ಸತ್ಯದ ಸತ್ಪಥದಿಂದ ಜೀವನ ಪರಿವರ್ತನೆ: ರಂಭಾಪುರಿ ಶ್ರೀ

ಬಸವರಾಜ ಬೊಮ್ಮಾಯಿ

LokSabha Election; ಕಾಂಗ್ರೆಸ್ ನ ಬಹುಮತ ಹೇಳಿಕೆಯೇ ಹಾಸ್ಯಾಸ್ಪದ: ಬಸವರಾಜ ಬೊಮ್ಮಾಯಿ

Haveri; ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ

Haveri; ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

ಕೊಪ್ಪಳ: ಮಗ ರಾಜಶೇಖರ ವಿರುದ್ಧ ತಂದೆ ನಾಮಪತ್ರ ಸಲ್ಲಿಕೆ!

ಕೊಪ್ಪಳ: ಮಗ ರಾಜಶೇಖರ ವಿರುದ್ಧ ತಂದೆ ನಾಮಪತ್ರ ಸಲ್ಲಿಕೆ!

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.