ಜನಾಂಗೀಯ ಹಿಂಸಾಚಾರ ಮಣಿಪುರ DGP ಗೆ ಸಮನ್ಸ್
Team Udayavani, Aug 2, 2023, 12:36 AM IST
ಹೊಸದಿಲ್ಲಿ: ಮಣಿಪುರದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಹಾಗೂ ಸಾಂವಿಧಾನಿಕ ಯಂತ್ರವು ಸಂಪೂರ್ಣ ಹಳ್ಳ ಹಿಡಿದಿದೆ ಎಂದು ಮಣಿಪುರ ಸರಕಾ ರವನ್ನು ಸುಪ್ರೀಂ ಕೋರ್ಟ್ ತೀವ್ರವಾಗಿ ತರಾಟೆಗೆ ತೆಗೆದು ಕೊಂಡಿದೆ.
ಇದೇ ವೇಳೆ ತನ್ನ ಪ್ರಶ್ನೆಗಳಿಗೆ ಆ.7ರಂದು ಪ್ರತಿಕ್ರಿಯೆ ನೀಡು ವಂತೆ ಡಿಜಿಪಿಗೆ ಸಮನ್ಸ್ ಜಾರಿ ಗೊಳಿಸಿದೆ. ಮಣಿಪುರ ಪ್ರಕರಣದ ಕುರಿತು ಮಂಗಳವಾರ ವಿಚಾರಣೆ ನಡೆಸಿ ದ ಸಿಜೆಐ ಡಿ.ವೈ.ಚಂದ್ರಚೂಡ್ ನೇತೃ ತ್ವದ ನ್ಯಾಯಪೀಠ, ಮಣಿಪುರ ರಾಜ್ಯ ಪೊಲೀಸರು ಕಾನೂನು ಮತ್ತು ಸುವ್ಯವಸ್ಥೆಯ ಮೇಲೆ ತಮ್ಮ ಹಿಡಿತವನ್ನು ಸಂಪೂರ್ಣವಾಗಿ ಕಳೆದುಕೊಂಡಿದ್ದಾರೆ. ಜನಾಂಗೀಯ ಹಿಂಸಾಚಾರ ಮತ್ತು ಮಹಿಳಾ ಕೇಂದ್ರಿತ ದೌರ್ಜನ್ಯಗಳ ಘಟನೆಗಳ ತನಿಖೆಯಲ್ಲಿ ತಡ ಮತ್ತು ಆಲಸ್ಯ ಎದ್ದು ಕಾಣುತ್ತಿದೆ ಎಂದು ಕಿಡಿ ಕಾರಿತು. ಇದೇ ವೇಳೆ ಘಟನೆಗಳನ್ನು ಪ್ರತ್ಯೇಕಿಸಿ ಸಂಪೂರ್ಣ ವಾಗಿ ವಿವರ ನೀಡುವಂತೆ ಮಣಿಪುರ ಸರಕಾರಕ್ಕೆ ಸೂಚಿಸಿತು. ಇದೇ ವೇಳೆ, ಬುಧವಾರ ಬೆಳಗ್ಗೆ 11 ಗಂಟೆಗೆ ಎಐಸಿಸಿ ಅಧ್ಯಕ್ಷ ಮಲ್ಲಿ ಕಾರ್ಜುನ ಖರ್ಗೆ ನೇತೃತ್ವದ ವಿಪಕ್ಷಗಳ ನಿಯೋಗವು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿಯಾಗಿ ಮಣಿಪುರ ವಿಚಾರದ ಕುರಿತು ಚರ್ಚಿಸಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
W.Bengal; ಮುಸ್ಲಿಂ ಮುನಿಸಿಗೆ ಮಂದಿರಕ್ಕೆ ಬಾರದ ಮಮತಾ: ಅಮಿತ್ ಶಾ
1500 for women: ಆಂಧ್ರದಲ್ಲಿ ಕರ್ನಾಟಕ ಮಾದರಿ ಎನ್ಡಿಎ ಗ್ಯಾರಂಟಿ
Election; ಮೊಹಬ್ಬತ್ ಕೀ ದುಕಾನ್ನಲ್ಲಿ ಫೇಕ್ ವೀಡಿಯೋಗಳು ಮಾರಾಟ: ಮೋದಿ
Supreme Court; ಪತಂಜಲಿ ಆಯ್ತು, ಈಗ ಐಎಂಎ ವಿರುದ್ಧ ಸುಪ್ರೀಂ ಕೋರ್ಟ್ ಗರಂ
Kolkatta; ಸಂಪತ್ತು ಹಂಚಿಕೆ ಮಾಡುತ್ತೇವೆ: ಉ.ಪ್ರ.ಸಿಎಂ ಯೋಗಿ ಘೋಷಣೆ