Manipur: ಸ್ನೈಪರ್ಗಳಿಂದ ಹಿರಿಯ ಪೊಲೀಸ್ ಅಧಿಕಾರಿ ಹತ್ಯೆ
ಮಯೆನ್ಮಾರ್ ಗಡಿ ಸಮೀಪದ ಮೊರೆ ಎಂಬ ಪಟ್ಟಣದಲ್ಲಿ ಘಟನೆ
Team Udayavani, Oct 31, 2023, 9:05 PM IST
ಇಂಫಾಲ/ನವದೆಹಲಿ: ಈಶಾನ್ಯ ಮಣಿಪುರದಲ್ಲಿ ಶಂಕಿತ ಕುಕಿ ಉಗ್ರಗಾಮಿಗಳು ರಾಜ್ಯ ಪೊಲೀಸ್ ಇಲಾಖೆಯ ಹಿರಿಯ ಅಧಿಕಾರಿಯೊಬ್ಬರನ್ನು ಗುಂಡು ಹಾರಿಸಿ ಕೊಂದಿದ್ದಾರೆ. ಮಯೆನ್ಮಾರ್ ಗಡಿ ಸಮೀಪ ಇರುವ ಬಿಎಸ್ಎಫ್ನ ಹೆಲಿಪ್ಯಾಡ್ ಸಮೀಪ ಈ ಘಟನೆ ನಡೆದಿದೆ. ಉಪ ವಿಭಾಗಾಧಿಕಾರಿ ಮಟ್ಟ (ಎಸ್ಡಿಪಿಒ) ಪೊಲೀಸ್ ಅಧಿಕಾರಿ ಚಿಂಗ್ತಾಮ್ ಆನಂದ್ ಎಂಬುವರನ್ನು ಸ್ನೆ„ಪರ್ಗಳು (ದೂರದ ಸ್ಥಳದಿಂದ ಗುರಿ ಇಟ್ಟು ಗುಂಡು ಹಾರಿಸುವವರು ) ಕೊಂದಿದ್ದಾರೆ.
ಮಯೆನ್ಮಾರ್ಗೆ ಹೊಂದಿಕೊಂಡಿರುವ ಮಣಿಪುರದ ಮೊರೆ ಎಂಬಲ್ಲಿ ಈ ಘಟನೆ ನಡೆದಿದೆ. ಹೊಸತಾಗಿ ನಿರ್ಮಾಣವಾಗಿರುವ ಹೆಲಿಪ್ಯಾಡ್ ಅನ್ನು ಪರೀಕ್ಷಿಸುತ್ತಿರುವ ಸಂದರ್ಭದಲ್ಲಿ ಗುಂಡು ಹಾರಾಟದ ಘಟನೆ ನಡೆದಿದೆ. ಮೊರೆ ಎಂಬ ಪಟ್ಟಣದಿಂದ ಮಣಿಪುರ ರಾಜ್ಯ ಪೊಲೀಸ್ ಅಧಿಕಾರಿಗಳನ್ನು ಹೊರ ಕಳುಹಿಸಬೇಕು ಎಂಬ ಬೇಡಿಕೆಯ ನಡುವೆಯೇ ಈ ಘಟನೆ ನಡೆದಿದೆ. ಈ ಹಿನ್ನೆಲೆಯಲ್ಲಿ ಇಂಫಾಲದಲ್ಲಿ ಸಿಎಂ ಎನ್.ಬೀರೇನ್ ಸಿಂಗ್ ನೇತೃತ್ವದಲ್ಲಿ ಸಭೆ ನಡೆದು, ಪರಿಸ್ಥಿತಿಯ ಬಗ್ಗೆ ಪರಾಮರ್ಶೆ ನಡೆಸಲಾಯಿತು.
ಮೇನಿಂದ ನಡೆಯುತ್ತಿರುವ ಹಿಂಸಾಕೃತ್ಯಗಳಲ್ಲಿ ಕನಿಷ್ಠ 180 ಮಂದಿ ಅಸುನೀಗಿ, 60 ಸಾವಿರಕ್ಕೂ ಅಧಿಕ ಮಂದಿ ನೆಲೆ ಕಳೆದುಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mumbai 26/11 ದಾಳಿಯ ವಕೀಲ ಉಜ್ವಲ್ ನಿಕಮ್ ಗೆ ಬಿಜೆಪಿ ಟಿಕೆಟ್, ಪೂನಮ್ ಗೆ ಕೊಕ್?
Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ನಿರಾಕರಿಸಿದ ನ್ಯಾಯಾಲಯ
Mamata Banerjee: ಮತ್ತೆ ಎಡವಿ ಬಿದ್ದ ಮಮತಾ ಬ್ಯಾನರ್ಜಿ… ಕಾಲಿಗೆ ಸಣ್ಣ ಗಾಯ
‘ತಾರಕ್ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್ ಸಿಂಗ್ ನಾಪತ್ತೆ… ಮೊಬೈಲ್ ಸ್ವಿಚ್ ಆಫ್
W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ
MUST WATCH
ಹೊಸ ಸೇರ್ಪಡೆ
Ranveer Singh : ʼಹನುಮಾನ್ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್ ಸಿಂಗ್ ನಟನೆ?
Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ
ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ
Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ
Tollywood: ಅಧಿಕೃತವಾಗಿ ರಿವೀಲ್ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್ ಡೇಟ್