ಜನತಾ ಕೋ-ಆಪರೇಟಿವ್ ಕ್ರೆಡಿಟ್ ಸೊಸೈಟಿ ಅಧ್ಯಕ್ಷರಾಗಿ ಮಂಕಾಳ ವೈದ್ಯ ಅವಿರೋಧ ಆಯ್ಕೆ
ಉಪಾಧ್ಯಕ್ಷರಾಗಿ ಪರಮೇಶ್ವರ ದೇವಡಿಗ ಆಯ್ಕೆ
Team Udayavani, Jul 29, 2023, 7:45 PM IST
ಭಟ್ಕಳ: ಪ್ರತಿಷ್ಟಿತ ಜನತಾ ಕೋ-ಆಪರೇಟಿವ್ ಕ್ರೆಡಿಟ್ ಸೊಸೈಟಿಯ ಆಡಳಿತ ಮಂಡಳಿಗೆ ಅಧ್ಯಕ್ಷರಾಗಿ ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ವೈದ್ಯ ಹಾಗೂ ಉಪಾಧ್ಯಕ್ಷರಾಗಿ ಪರಮೇಶ್ವರ ದೇವಡಿಗ ಅವಿರೋಧವಾಗಿ ಆಯ್ಕೆಯಾದರು.
ಜನತಾ ಕೋ-ಆಪರೇಟಿವ್ ಕ್ರೆಡಿಟ್ ಸೊಸೈಟಿಯ ಪ್ರಧಾನ ಕಚೇರಿಯಲ್ಲಿ ಶನಿವಾರ ಅಧ್ಯಕ್ಷ-ಉಪಾಧ್ಯಕ್ಷರ ಆಯ್ಕೆ ಪ್ರಕ್ರಿಯೆ ನಡೆಸಲಾಯಿತು. ಈ ಹಿಂದಿನ ಅವಧಿಯಲ್ಲೂ ಸಹ ಮಂಕಾಳ ವೈದ್ಯ ಅಧ್ಯಕ್ಷ ಹಾಗೂ ಪರಮೇಶ್ವರ ದೇವಡಿಗ ಉಪಾಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದರು.
ಇತ್ತೀಚೆಗೆ ಸೊಸೈಟಿಯ ೧೩ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಸಚಿವ ಮಂಕಾಳ ವೈದ್ಯರ ನೇತೃತ್ವದ ತಂಡವೇ ಪುನಾಯ್ಕೆಯಾಗಿತ್ತು. ಅಧ್ಯಕ್ಷ ಉಪಾಧ್ಯಕ್ಷರ ಆಯ್ಕೆ ಪ್ರಕ್ರಿಯೆಯ ಚುನಾವಣಾಧಿಕಾರಿಯಾಗಿ ಕಾರವಾರದ ಸಹಕಾರ ಸಂಘಗಳ ಉಪನಿಬಂಧಕರ ಕಚೇರಿಯ ಸುಮನಾ ನಾಯ್ಕ ಕಾರ್ಯನಿರ್ವಹಿಸಿದರು.
ಈ ಸಂದರ್ಭದಲ್ಲಿ ಸೊಸೈಟಿಯ ಎಲ್ಲಾ ನಿರ್ದೇಶಕರು, ಪ್ರಭಾರೆ ಪ್ರಧಾನ ವ್ಯವಸ್ಥಾಪಕ ನಾಗೇಶ ದೇವಡಿಗ ಮುಂತಾದವರಿದ್ದರು. ಅಧ್ಯಕ್ಷ-ಉಪಾಧ್ಯಕ್ಷರಿಗೆ ನಿರ್ದೇಶಕರು, ಅವರ ಅಭಿಮಾನಿಗಳು ಹೂವಿನ ಮಾಲೆ ಹಾಕಿ ಶುಭ ಹಾರೈಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ
Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ
ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ
ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’
PM Modi ಏ.28ರಂದು ಉತ್ತರಕನ್ನಡಕ್ಕೆ?; ಯಲ್ಲಾಪುರದಲ್ಲಿ ಬಹಿರಂಗ ಸಮಾವೇಶ?
MUST WATCH
ಹೊಸ ಸೇರ್ಪಡೆ
“ನಾನು ಬಟ್ಟೆ ಬದಲಾಯಿಸುವಾಗ ಬಾಗಿಲು..” ನಿರ್ಮಾಪಕರ ಕಿರುಕುಳದ ಬಗ್ಗೆ ಮೌನ ಮುರಿದ ನಟಿ
State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ
“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?
Shahapura: ಎರಡು ಕೆಟ್ಟ ಕಾನೂನು ಜಾರಿಗೆ ಕಾಂಗ್ರೆಸ್ ಸಿದ್ಧತೆ: ಯತ್ನಾಳ ಆರೋಪ
Desi Swara: ಮಸ್ಕತ್- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ