ಮುಂಗಾರು ಇಳಿಕೆ: ಬಿತ್ತನೆಗೆ ಹಿನ್ನಡೆ : ವಾಡಿಕೆಗಿಂತ ಶೇ.7ರಷ್ಟು ಕಡಿಮೆ ಮಳೆ
Team Udayavani, Jul 18, 2021, 6:55 AM IST
ಹೊಸದಿಲ್ಲಿ: ಈ ಬಾರಿಯ ಮುಂಗಾರು ನಿರೀಕ್ಷಿತ ಪ್ರಮಾಣದಲ್ಲಿ ಮಳೆ ಸುರಿಸದೇ ಇರುವುದು, ನೇರವಾಗಿ ಕೃಷಿ ಕ್ಷೇತ್ರದ ಮೇಲೆ ಪರಿಣಾಮ ಬೀರಿದೆ. ಭಾರತೀಯ ಹವಾಮಾನ ಇಲಾಖೆಯ ಪ್ರಕಾರ, ಈ ವರ್ಷದಲ್ಲಿ ಈವರೆಗೆ ವಾಡಿಕೆಗಿಂತ ಶೇ. 7ರಷ್ಟು ಕಡಿಮೆ ಮಳೆಯಾಗಿದೆ. ಕೆಲವು ಭಾಗದಲ್ಲಿ ಮಳೆಯಾಗಿದ್ದರೆ, ಇನ್ನೂ ಕೆಲವು ಕಡೆ ಮಳೆಗಾಗಿ ರೈತರು ಕಾದು ಕುಳಿತಿದ್ದಾರೆ. ಇದರಿಂದಾಗಿ, ಬಿತ್ತನೆಯ ಪ್ರಮಾಣ ಇಳಿಮುಖವಾಗಿದೆ.
ಕೇಂದ್ರ ಕೃಷಿ ಸಚಿವಾಲಯ ಬಿಡುಗಡೆ ಮಾಡಿರುವ ಮಾಹಿತಿಯ ಪ್ರಕಾರ, ಜು. 16ರ ಹೊತ್ತಿಗೆ ದೇಶಾದ್ಯಂತ 61.19 ಮಿಲಿಯನ್ ಹೆಕ್ಟೇರ್ ಪ್ರದೇಶದಲ್ಲಿ ಭತ್ತ, ಹತ್ತಿ ಮತ್ತು ಸೋಯಾಬೀನ್ಗಳ ಬಿತ್ತನೆಯಾಗಿದ್ದು, ಕಳೆದ ವರ್ಷಕ್ಕೆ ಹೋಲಿಸಿದರೆ ಇದು ಶೇ. 12ರಷ್ಟು ಇಳಿಮುಖವಾದಂತಾಗಿದೆ. ಕಳೆದ ಮುಂಗಾರುವಿನಲ್ಲಿ ದೇಶಾದ್ಯಂತ 5.37 ಮಿಲಿಯನ್ ಹೆಕ್ಟೇರ್ ಪ್ರದೇಶಗಳಲ್ಲಿ ಕಬ್ಬು ಬಿತ್ತನೆ ಮಾಡಲಾಗಿತ್ತು. ಈ ಬಾರಿಯೂ ಅಷ್ಟೇ ಪ್ರದೇಶದಲ್ಲಿ ಕಬ್ಬು ಬಿತ್ತನೆ ಮಾಡಲಾಗಿದೆ. ಇನ್ನು, ಹತ್ತಿಯ ಬಿತ್ತನೆ ಕೇವಲ 9.84 ಮಿಲಿಯನ್ ಹೆಕ್ಟೇರ್ ಪ್ರದೇಶದಲ್ಲಾಗಿದ್ದು, ಕಳೆದ ವರ್ಷಕ್ಕೆ ಹೋಲಿಸಿದರೆ ಇದು ಶೇ. 13ರಷ್ಟು ಕಡಿಮೆಯಾಗಿದೆ. ಅಕ್ಕಿ ರಫ್ತಿನಲ್ಲಿ ಭಾರತ ಅಗ್ರಸ್ಥಾನದಲ್ಲಿದೆ. ಆದರೆ ಬಿತ್ತನೆ ಇಳಿಮುಖವಾಗಿ ರುವುದರಿಂದ ಅಕ್ಕಿ ಉತ್ಪಾದನೆ ಕಡಿಮೆಯಾಗಿ ರಫ್ತಿನ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ