ಐಎಂಎ ವಂಚಕ ಮನ್ಸೂರ್ ಖಾನ್ ಬೆಂಗಳೂರಿಗೆ
Team Udayavani, Jul 20, 2019, 9:09 AM IST
ಬೆಂಗಳೂರು: ಬಹುಕೋಟಿ ಐಎಂಎ ಜ್ಯುವೆಲ್ಲರಿ ವಂಚಕ ಮೊಹಮ್ಮದ್ ಮನ್ಸೂರ್ ಖಾನ್ ನನ್ನು ಶನಿವಾರ ಬೆಂಗಳೂರಿಗೆ ಕರೆತರಲಾಗಿದೆ. ಶಾಂತಿ ನಗರದ ಜಾರಿ ನಿರ್ದೇಶನಾಲಯ ಕಚೇರಿಗೆ ಮನ್ಸೂರ್ ಖಾನ್ ಅಧಿಕಾರಿಗಳು ಕರೆತಂದಿದ್ದಾರೆ.
ಶುಕ್ರವಾರ ಮುಂಜಾನೆ 3 ಗಂಟೆಯ ವೇಳೆಗೆ ದುಬೈನಿಂದ ಬಂದಿದ್ದ ಮನ್ಸೂರ್ ಖಾನ್ ನನ್ನು ದೆಹಲಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಎಸ್ ಐಟಿ ಮತ್ತು ಇಡಿ ಅಧಿಕಾರಿಗಳು ವಶಕ್ಕೆ ಪಡೆದಿದ್ದರು. ಶುಕ್ರವಾರ ದೆಹಲಿ ನ್ಯಾಯಾಲಯದ ಮುಂದೆ ಮನ್ಸೂರ್ ನನ್ನು ಹಾಜರುಪಡಿಸಲಾಗಿತ್ತು. ಶನಿವಾರ ಮುಂಜಾನೆ ವಿಮಾನ ಮೂಲಕ ಬೆಂಗಳೂರಿಗೆ ಕರೆದು ತರಲಾಗಿದೆ.
ಮನ್ಸೂರ್ ಖಾನ್ ತನ್ನ ಸಂಸ್ಥೆ ಐಎಂಎ ಜುವೆಲ್ಲರಿಯಲ್ಲಿ ಸಾವಿರಾರು ಜನರಿಂದ ಹೂಡಿಕೆಯಾದ ಕೋಟ್ಯಾಂತರ ಹಣದೊಂದಿಗೆ ಜೂನ್ ಎಂಟರಂದು ದೇಶ ಬಿಟ್ಟು ಪರಾರಿಯಾಗಿದ್ದ. ನಂತರ ಆಡಿಯೋ ಬಿಡುಗಡೆ ಮಾಡಿದ್ದ ಮನ್ಸೂರ್ ಹಲವು ಪ್ರಭಾವಿ ವ್ಯಕ್ತಿಗಳ ಬಗ್ಗೆ ಉಲ್ಲೇಖಿಸಿದ್ದ.
ನಂತರದ ಬೆಳವಣಿಗೆಯಲ್ಲಿ “ತಾನು ಭಾರತಕ್ಕೆ ಬರಲು ಸಿದ್ದ. ಆದರೆ ನನಗೆ ಜೀವ ಭಯವಿದೆ. ಪೊಲೀಸರು ನನಗೆ ಭದ್ರತೆ ನೀಡುವ ಭರವಸೆ ನೀಡಿದರೆ ನಾನು ಭಾರತಕ್ಕೆ ಬರುತ್ತೇನೆ” ಎಂಬ ಹೇಳಿಕೆಯುಳ್ಳ ವಿಡಿಯೋ ಬಿಡುಗಡೆ ಮಾಡಿದ್ದ. ಅದರಂತೆ ಶುಕ್ರವಾರ ಮುಂಜಾನೆ ದೆಹಲಿ ವಿಮಾನ ನಿಲ್ದಾಣದಲ್ಲಿ ಬಂದಿಳಿದ ಮನ್ಸೂರ್ ನನ್ನು ವಿಶೇಷ ತನಿಖಾ ದಳ ಮತ್ತು ಜಾರಿ ನಿರ್ದೇಶನಾಲಯ ಅಧಿಕಾರಿಗಳು ಬಂಧಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ