ಉಪ ಚುನಾವಣೆಯಲ್ಲಿದೆ ಹಲವು ವೈಶಿಷ್ಟ್ಯ


Team Udayavani, Nov 25, 2019, 3:08 AM IST

By-Election

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ “ಜಿದ್ದಾಜಿದ್ದಿ’ ಹುಟ್ಟು ಹಾಕಿರುವ ಹಾಗೂ ಉಪ ಚುನಾವಣೆಗಳ ಸಂಖ್ಯೆಯನ್ನು ಶತಕದ ಗಡಿ ದಾಟಿಸಿರುವ 15 ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆ ಹಲವು ವೈಶಿಷ್ಟ್ಯತೆಗಳನ್ನೂ ಹೊಂದಿದೆ.

ಈಗ ಚುನಾವಣೆ ನಡೆಯುತ್ತಿರುವ 15 ವಿಧಾನಸಭಾ ಕ್ಷೇತ್ರಗಳಲ್ಲಿನ ಒಟ್ಟು ಮತದಾರರ ಸಂಖ್ಯೆಗಿಂತಲೂ ದೇಶದ 16 ರಾಜ್ಯ/ಕೇಂದ್ರಾಡಳಿತ ಪ್ರದೇಶಗಳಲ್ಲಿ ಮತದಾರರ ಸಂಖ್ಯೆ ಕಡಿಮೆ ಇದೆ. ಅಲ್ಲದೇ ಈ ವರ್ಷ ಏಕಕಾಲಕ್ಕೆ ನಡೆಯುತ್ತಿರುವ ದೇಶದ ಎರಡನೇ ಅತಿದೊಡ್ಡ ಉಪ ಚುನಾವಣೆ ಇದಾಗಿದೆ.

ರಾಜ್ಯದಲ್ಲಿ ಉಪ ಚುನಾವಣೆ ನಡೆಯುತ್ತಿರುವ 15 ವಿಧಾನಸಭಾ ಕ್ಷೇತ್ರಗಳಲ್ಲಿ ಮತದಾರರ ಸಂಖ್ಯೆ ಒಟ್ಟು 37.77 ಲಕ್ಷ ಇದೆ. ಆದರೆ, ಹಿಮಾಚಲ ಪ್ರದೇಶ, ಜಮ್ಮು- ಕಾಶ್ಮೀರ, ತ್ರಿಪುರಾ, ಅಂಡಮಾನ್‌ ನಿಕೋಬಾರ್‌, ಲಕ್ಷದ್ವೀಪ ಸೇರಿ ದೇಶದ 16 ರಾಜ್ಯ/ಕೇಂದ್ರಾಡಳಿತ ಪ್ರದೇಶಗಳಲ್ಲಿ ಅಲ್ಲಿನ ಮತದಾರರ ಸಂಖ್ಯೆ ಇದಕ್ಕಿಂತಲೂ ಕಡಿಮೆ ಇದೆ. ಆ ಅರ್ಥದಲ್ಲಿ ಇದು ದೇಶದ ಅತಿದೊಡ್ಡ ಉಪ ಚುನಾವಣೆಗಳ ಪೈಕಿ ಒಂದು ಎಂದು ಹೇಳಲಾಗುತ್ತಿದೆ.

ಅದೇ ರೀತಿ, ಈ ವರ್ಷ ಏಪ್ರಿಲ್‌ನಿಂದ ಇಲ್ಲಿವರೆಗೆ ಏಕಕಾಲಕ್ಕೆ ನಡೆದಿರುವ ದೇಶದ ಎರಡನೇ ಅತಿದೊಡ್ಡ ಉಪ ಚುನಾವಣೆ ಇದಾಗಿದೆ. 2019ರ ಏಪ್ರಿಲ್‌ನಲ್ಲಿ ತಮಿಳುನಾಡಿನ 18 ವಿಧಾನಸಭಾ ಕ್ಷೇತ್ರಗಳಿಗೆ ಏಕ ಕಾಲಕ್ಕೆ ಉಪ ಚುನಾವಣೆ ನಡೆದಿತ್ತು. ಈಗ ಕರ್ನಾಟಕದಲ್ಲಿ 15 ಕ್ಷೇತ್ರಗಳಿಗೆ ಏಕಕಾಲಕ್ಕೆ ಉಪ ಚುನಾವಣೆ ನಡೆಯುತ್ತಿದೆ.

ಚುನಾವಣಾ ಆಯೋಗದ ಮಾಹಿತಿಯಂತೆ ದೇಶದಲ್ಲಿ 2014 ಮತ್ತು 2019ರಲ್ಲಿ ನಡೆದ ಲೋಕಸಭಾ ಚುನಾವಣೆಗಳಲ್ಲಿ ಹಾಗೂ ಇದೇ ಅವಧಿಯಲ್ಲಿ ನಡೆದ ಆಯಾ ರಾಜ್ಯ/ಕೇಂದ್ರಾಡಳಿತ ಪ್ರದೇಶಗಳಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಅಲ್ಲಿ ಇದ್ದ ಒಟ್ಟು ಮತದಾರರ ಸಂಖ್ಯೆಗಿಂತಲೂ ನಮ್ಮ ರಾಜ್ಯದಲ್ಲಿ ಉಪ ಚುನಾವಣೆ ನಡೆಯುತ್ತಿರುವ 15 ಕ್ಷೇತ್ರಗಳಲ್ಲಿ ಹೆಚ್ಚು ಮತದಾರರು ಇದ್ದಾರೆ.

ಜಮ್ಮು-ಕಾಶ್ಮೀರ, ಹಿಮಾಚಲ ಪ್ರದೇಶದಲ್ಲಿ 30 ಲಕ್ಷ ಮೇಲ್ಪಟ್ಟು ಮತದಾರರು ಇದ್ದರೆ, ಮೇಘಾಲಯ, ನಾಗಲ್ಯಾಂಡ್‌, ಮಣಿಪುರ ಮತ್ತು ತ್ರಿಪುರಾಗಳಲ್ಲಿ 10 ಲಕ್ಷಕ್ಕೂ ಹೆಚ್ಚು ಮತದಾರರು ಇದ್ದಾರೆ. ಉಳಿದಂತೆ, ಗೋವಾ, ಪಾಂಡಿಚೇರಿ, ಅರುಣಾಚಲ ಪ್ರದೇಶ, ಸಿಕ್ಕಿಂ, ಮಿಜೋರಾಂ, ಚಂಡಿಗಢ, ಅಂಡಮಾನ್‌ ನಿಕೋಬಾರ್‌, ದಾದರ್‌ ಹವೇಲಿಯಲ್ಲಿ 1 ರಿಂದ 8 ಲಕ್ಷ ಮತದಾರರು ಇದ್ದರೆ, ದಮನ್‌ ಆ್ಯಂಡ್‌ ದಿವ್‌, ಲಕ್ಷದ್ವೀಪಗಳಲ್ಲಿ ಮತದಾರರು ಸಂಖ್ಯೆ ಸಾವಿರಗಳಲ್ಲಿದೆ.

80 ಉಪ ಚುನಾವಣೆಗಳು: ರಾಜ್ಯಗಳ ವಿಧಾನಸಭೆಗಳಿಗೆ ಉಪ ಚುನಾವಣೆಗಳು ಹೊಸದಲ್ಲ. ಆಯಾ ರಾಜ್ಯಗಳಲ್ಲಿ ಪ್ರತಿ ವಿಧಾನಸಭೆಯ ಅವಧಿಯಲ್ಲಿ ವಿವಿಧ ಕಾರಣಗಳಿಗೆ ಉಪ ಚುನಾವಣೆಗಳು ನಡೆಯುತ್ತಲೇ ಬಂದಿದೆ. ಅದರಂತೆ, 2019ರಲ್ಲಿ ಇಲ್ಲಿವರೆಗೆ ದೇಶದಲ್ಲಿ ಒಟ್ಟು 80 ಕ್ಷೇತ್ರಗಳಿಗೆ ಉಪ ಚುನಾವಣೆ ನಡೆದಿದೆ. 2019ರ ಎಪ್ರಿಲ್‌ನಿಂದ ಅಕ್ಟೋಬರ್‌ವರೆಗೆ ತಮಿಳುನಾಡಿನಲ್ಲಿ 24, ಉತ್ತರ ಪ್ರದೇಶದಲ್ಲಿ 14, ಪಶ್ಚಿಮ ಬಂಗಾಳದಲ್ಲಿ 11, ಗುಜರಾತಿನಲ್ಲಿ 16 ವಿಧಾನಸಭಾ ಕ್ಷೇತ್ರಗಳಿಗೆ ಉಪ ಚುನಾವಣೆ ನಡೆದಿದೆ.

ರಾಜ್ಯ/ಕೇಂದ್ರಾಡಳಿತ ಪ್ರದೇಶ ಮತದಾರರು
ಕರ್ನಾಟಕ 37.77 ಲಕ್ಷ (15 ಕ್ಷೇತ್ರಗಳು)
ಜಮ್ಮು-ಕಾಶ್ಮೀರ 35.66 ಲಕ್ಷ
ಹಿಮಾಚಲಪ್ರದೇಶ 30.98 ಲಕ್ಷ
ತ್ರಿಪುರಾ 20.23 ಲಕ್ಷ
ಮಣಿಪುರ 14.12 ಲಕ್ಷ
ಮೇಘಾಲಯ 10.78 ಲಕ್ಷ
ನಾಗಾಲ್ಯಾಂಡ್‌ 10.38 ಲಕ್ಷ
ಗೋವಾ 8.17 ಲಕ್ಷ
ಪಾಂಡಿಚೇರಿ 7.40 ಲಕ್ಷ
ಅರುಣಾಚಲ ಪ್ರದೇಶ 5.96 ಲಕ್ಷ
ಚಂಡಿಗಢ 4.53 ಲಕ್ಷ
ಮಿಜೋರಾಂ 4.33 ಲಕ್ಷ
ಸಿಕ್ಕಿಂ 3.08 ಲಕ್ಷ
ಅಂಡಮಾನ್‌ ನಿಕೋಬಾರ್‌ 1.90 ಲಕ್ಷ
ದಾದರ್‌ ಹವೇಲಿ 1.65 ಲಕ್ಷ
ದಮನ್‌ ಆ್ಯಂಡ್‌ ದಿವ್‌ 87 ಸಾವಿರ
ಲಕ್ಷ ದ್ವೀಪ 43 ಸಾವಿರ

* ರಫೀಕ್‌ ಅಹ್ಮದ್‌

ಟಾಪ್ ನ್ಯೂಸ್

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

17-voting

Vote: ಮತದಾನದ ಮಹತ್ವ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

17-voting

Vote: ಮತದಾನದ ಮಹತ್ವ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

16-adu-jeevitham

Movie Review: ಆಡು ಜೀವಿದಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.