ಪತಿ ಸಮಾಧಿ ಪಕ್ಕ ಮರಿಬಸಮ್ಮ ಕಂಠಿ ಅಂತ್ಯ ಸಂಸ್ಕಾರ


Team Udayavani, Dec 10, 2020, 4:10 PM IST

ಪತಿ ಸಮಾಧಿ ಪಕ್ಕ ಮರಿಬಸಮ್ಮ ಕಂಠಿ ಅಂತ್ಯ ಸಂಸ್ಕಾರ

ಇಳಕಲ್ಲ: ಬೆಳಗಾವಿಯ ಕಿತ್ತೂರಿನಲ್ಲಿ ಮಂಗಳವಾರ ನಿಧನರಾಗಿದ್ದ ಮಾಜಿ ಮುಖ್ಯಮಂತ್ರಿ ದಿ| ಎಸ್‌.ಆರ್‌. ಕಂಠಿ ಅವರ ಪತ್ನಿ ಮರಿಬಸಮ್ಮ ಕಂಠಿ (102) ಅವರ ಅಂತ್ಯಕ್ರಿಯೆ ಜಿಲ್ಲೆಯ ಇಳಕಲ್ಲ ನಗರದಲ್ಲಿ ಬುಧವಾರ ಸಂಜೆ ನೆರವೇರಿತು.

ಕಿತ್ತೂರಿನಿಂದ ಇಳಕಲ್ಲಕ್ಕೆ ಮಧ್ಯಾಹ್ನ ಪಾರ್ಥಿವ ಶರೀರ ಬುಧವಾರ ಮಧ್ಯಾಹ್ನ 3.15 ಗಂಟೆಗೆ ನಗರದ ಶ್ರೀ ಬಸವೇಶ್ವರ ವೃತ್ತಕ್ಕೆ ಆಗಮಿಸಿತು. ಬಸವೇಶ್ವರ ವೃತ್ತದಿಂದ ನೇರವಾಗಿ ಶ್ರೀ ವಿಜಯ ಮಹಾಂತೇಶ ಮಹಾವಿದ್ಯಾಲ ಆವರಣಕ್ಕೆ ತರಲಾಯಿತು. ಅಲ್ಲಿ ಸಂಘದ ಚೇರಮನ್‌ ಎಂ.ವಿ. ಪಾಟೀಲ ಹಾಗೂ ಸಂಘದ ಆಡಳಿತ ಮಂಡಳಿ ಸದಸ್ಯರು ಪಾರ್ಥಿವ ಶರೀರಕ್ಕೆ ಹೂಮಾಲೆ ಹಾಕಿ ಪುಷ್ಪ ನಮನ ಸಲ್ಲಿಸಿದರು. ರಸ್ತೆಯುದ್ದಕ್ಕೂ ನೂರಾರು ಜನರು ಅಂತಿಮ ನಮನ ಸಲ್ಲಿಸಿದರು.

ನಂತರ ದಿ| ಎಸ್‌.ಆರ್‌. ಕಂಠಿ ವೃತ್ತಕ್ಕೆ ಆಗಮಿಸಿದಾಗ ವಿಶೇಷ ಪೂಜೆಗೈದು ಬರಮಾಡಿಕೊಳ್ಳಲಾಯಿತು. ಶಾಸಕ ದೊಡ್ಡನಗೌಡ ಪಾಟೀಲ, ನಗರಸಭೆ ಅಧ್ಯಕ್ಷೆ ಶೋಭಾ ಆಮದಿಹಾಳ ಸಮಸ್ತ ಜನರ ಪರವಾಗಿ ಪಾರ್ಥಿವ ಶರೀರಕ್ಕೆ ಹೂಮಾಲೆ ಹಾಕಿ ಅಂತಿಮ ನಮನ ಸಲ್ಲಿಸಿದರು.

ದಿ|ಎಸ್‌.ಆರ್‌. ಕಂಠಿ ವೃತ್ತದಿಂದ ನಗರದ ಗುಬ್ಬಿಪೇಟ್‌, ಸಾಲಪೇಟ್‌, ಬಸವೇಶ್ವರ ದೇವಸ್ಥಾನದಿಂದ ಮುಖ್ಯ ಬಜಾರ್‌ ರಸ್ತೆ ಮೂಲಕ ಶ್ರೀ ವಿಜಯ ಮಹಾಂತೇಶ್ವರ ಸಂಸ್ಥಾನ ಮಠಕ್ಕೆ ಆಗಮಿಸಿತು. ಗುರುಮಹಾಂತ ಶ್ರೀಗಳು ಹಾಗೂ ಶಿರೂರದ ಬಸವತೀರ್ಥದ ಡಾ| ಬಸವಲಿಂಗ ಸ್ವಾಮಿಗಳು ಪುಷ್ಪವೃಷ್ಟಿಗೈದು ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. ನಂತರ ಮಠದಲ್ಲಿ ಮಧ್ಯಾಹ್ನ ಸುಮಾರು ಎರಡು ಗಂಟೆಗಳ ಕಾಲ ಸಾರ್ವಜನಿಕರಿಗೆ ಅಂತಿಮ ದರ್ಶನಕ್ಕಾಗಿ ಅವಕಾಶ ನೀಡಲಾಯಿತು.

ನಂತರ ಮಠದಿಂದ ಇಳಕಲ್ಲ ನಗರ ಹೊರವಲಯದ ಶ್ರೀ ವಿಜಯ ಮಹಾಂತೇಶ ಕತೃì ಗದ್ದುಗೆಯವರೆಗೂ ಮೆರವಣಿಗೆ ನಡೆಸಿ, ವಿಜಯ ಮಹಾಂತೇಶ ಕತೃ ಗದ್ದುಗೆಗೆ ತಂದು ನುಡಿನಮನ ಸಲ್ಲಿಸಲಾಯಿತು. ನಂತರ ದಿ| ಎಸ್‌.ಆರ್‌. ಕಂಠಿ ಸಮಾಧಿ ಪಕ್ಕದಲ್ಲಿ ಲಿಂಗಾಯತ ವಿಧಿ-ವಿಧಾನಗಳಂತೆ ಮರಿಬಸಮ್ಮ ಕಂಠಿ ಅಂತ್ಯಕ್ರಿಯೆ ನೆರವೇರಿಸಲಾಯಿತು. ಕಂಠಿ ಅವರ ಪುತ್ರ ಮಹೇಂದ್ರ ಕಂಠಿ
ದಂಪತಿ ಸೇರಿ ಇಳಕಲ್ಲದ ಹಲವರು ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ

1-weeeqwe

ಅಮೃತಶಿಲೆಯಲ್ಲಿ ಕೆತ್ತಿದ 18 ಅಡಿ ಕಾಳಿ ಮಾತೆ ಪ್ರತಿಮೆ ಇಂದು ಕೇರಳಕ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ

ಇಂದಿನಿಂದ ದ್ವಿತೀಯ ಪಿಯು-2 ಪರೀಕ್ಷೆ: 1.5 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಇಂದಿನಿಂದ ದ್ವಿತೀಯ ಪಿಯು-2 ಪರೀಕ್ಷೆ: 1.5 ಲಕ್ಷ ವಿದ್ಯಾರ್ಥಿಗಳ ನೋಂದಣಿ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.