ಯಲಬುರ್ಗಾ ಜಿಲ್ಲೆಯಲ್ಲಿ ಹೆಚ್ಚುತ್ತಿದೆ ಗಾಂಜಾ ಘಾಟು! ಪೊಲೀಸ್ ಇಲಾಖೆಯ ನಿರ್ಲಕ್ಷ್ಯ
Team Udayavani, Sep 19, 2020, 4:52 PM IST
ಯಲಬುರ್ಗಾ: ಕೋವಿಡ್ ಹಿನ್ನೆಲೆಯಲ್ಲಿ ಜನತೆ ಆರ್ಥಿಕವಾಗಿ ಸಾಕಷ್ಟು ತೊಂದರೆ ಅನುಭವಿಸುತ್ತಿದ್ದರೂ ಗಾಂಜಾ ಸೇವನೆ, ಮಾರಾಟ ಮಾತ್ರ ಎಗ್ಗಿಲ್ಲದೇ ಸಾಗಿದೆ ಎಂಬ ಮಾತುಗಳು ಸಾರ್ವಜನಿಕ ವಲಯದಿಂದ ಕೇಳಿ ಬರುತ್ತಿದೆ. ವಿದ್ಯಾರ್ಥಿಗಳು ಗಾಂಜಾ ಮಾಫಿಯಾಕ್ಕೆ ಬಲಿಯಾಗುತ್ತಿದ್ದಾರೆ. ಗಾಂಜಾ ಮಾಫಿಯಾ ಮಟ್ಟ ಹಾಕುವ ನಿಟ್ಟಿನಲ್ಲಿ ಪೊಲೀಸ್ ಇಲಾಖೆ ವಿಫಲಗೊಂಡಿದೆ ಎಂಬ ಆರೋಪಗಳು ಕೇಳಿ ಬರುತ್ತಿದೆ. ದೇಶ, ರಾಜ್ಯಾದ್ಯಂತ ಡ್ರಗ್ಸ್ ದಂಧೆಯ ಕರಾಳ ಮುಖ ಕಳಚಿ ಬೀಳುತ್ತಿದೆ. ತಾಲೂಕಿನಲ್ಲಿಯೂ ಗಾಂಜಾ ಸೇವನೆ ಮತ್ತು ಮಾರಾಟಗಾರರ ಪತ್ತೆ ಕಾರ್ಯ ಬಿರುಸುಗೊಳ್ಳಬೇಕಿದೆ. ಗಾಂಜಾ ವ್ಯಸನಕ್ಕೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಮುಂದಾಗಬೇಕಿದೆ.
ಪ್ರಕರಣ ದಾಖಲು: ಗಾಂಜಾ ಮಾರಾಟ ಹಾಗೂ ಸೇವನೆ ವಿರುದ್ಧ ಪೊಲೀಸ್ ಇಲಾಖೆ ನಿರಂತರವಾಗಿ ಕಾರ್ಯಚರಣೆ ನಡೆಸುತ್ತಿದೆ. ಕುಕನೂರು ಠಾಣಾ ವ್ಯಾಪ್ತಿಯಲ್ಲಿನ ತಳಕಲ್ಲ ಗ್ರಾಮದಲ್ಲಿ ಗಾಂಜಾ ಸೇವೆನೆ ಕುರಿತು ಪ್ರಕರಣ ದಾಖಲಿಸಿಕೊಂಡು 20 ಗ್ರಾಂ ಗಾಂಜಾ ವಶಕ್ಕೆ ತೆಗೆದುಕೊಳ್ಳಲಾಗಿದೆ. ಯಲಬುರ್ಗಾ, ಬೇವೂರು ಠಾಣಾ ವ್ಯಾಪ್ತಿಯ ಮಸಾರಿ ಜಮೀನುಗಳಲ್ಲಿ ವಿವಿಧ ಬೆಳೆಗಳ ಮಧ್ಯೆ ಗಾಂಜಾ ಬೆಳೆದು ರಾಷ್ಟ್ರೀಯ ಹೆದ್ದಾರಿಗಳ ಮೂಲಕ ಸರಬರಾಜು ಮಾಡಲಾಗುತ್ತದೆ ಎಂಬ ಗುಮಾನಿ ಹಬ್ಬಿದೆ. ಪಕ್ಕದ ಜಿಲ್ಲೆಗಳಿಂದ ತಾಲೂಕಿಗೆ ಗಾಂಜಾ ಸರಬರಾಜು ಆಗುತ್ತಿದೆ ಎಂದು ಸಾರ್ವಜನಿಕರು ಆರೋಪಿಸುತ್ತಿದ್ದಾರೆ.
2018ರಲ್ಲಿ ಪ್ರಕರಣ: ಯಲಬುರ್ಗಾ ಠಾಣಾ ವ್ಯಾಪ್ತಿಯ ಮಲಕಸಮುದ್ರ ಗ್ರಾಮದ ಜಮೀನಿನಲ್ಲಿ ಬೆಳೆಯಲಾಗಿದ್ದ ಗಾಂಜಾ ವಶಪಡಿಸಿಕೊಂಡು ಪ್ರಕರಣ ದಾಖಲಿಸಿಕೊಳ್ಳಲಾಗಿತ್ತು. ಅದನ್ನು ಬಿಟ್ಟರೇ ಇದುವರೆಗೂ ಒಂದು ಪ್ರಕರಣ ಸಹ ದಾಖಲಾಗಿಲ್ಲ. ತಾಲೂಕಿನಲ್ಲಿ ಗಾಂಜಾ ಮಾರಾಟ ಹಾಗೂ ಸೇವನೆ ಪತ್ತೆ ಹಚ್ಚಲು ಮೂರು ತಂಡಗಳನ್ನು ರಚಿಸಲಾಗಿದೆ.
ಕುಕನೂರು, ಬೇವೂರು, ಯಲಬುರ್ಗಾ ಮೂರು ಠಾಣೆಗಳಲ್ಲಿ ಪತ್ಯೇಕ ತಂಡ ರಚಿಸಿ ಈ ಕುರಿತು ಕಾರ್ಯಾಚರಣೆ ನಡೆಸಲಾಗಿದೆ. ಈಗಾಗಲೇ ಕೆಲ ರೈತರ ಜಮೀನುಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಲಾಗಿದೆ ಎನ್ನುತ್ತಾರೆ ಸಿಪಿಐ ಎಂ. ನಾಗರಡ್ಡಿ.
– ಮಲ್ಲಪ್ಪ ಮಾಟರಂಗಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
MUST WATCH
ಹೊಸ ಸೇರ್ಪಡೆ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ