ಕಾಪುವಿನಲ್ಲಿ ಕಾಲಾವಧಿ ಸುಗ್ಗಿ ಮಾರಿಪೂಜೆ ಸಂಭ್ರಮ
Team Udayavani, Mar 24, 2021, 1:27 AM IST
ಕಾಪು: ಪ್ರಸಿದ್ಧ ಕಾಲಾವಧಿ ಸುಗ್ಗಿ ಮಾರಿಪೂಜೆಗೆ ಕಾಪುವಿನ ಮೂರೂ ಮಾರಿಗುಡಿಗಳು ಸಿದ್ಧಗೊಂಡಿದ್ದು ಕಾಪುವಿನಲ್ಲಿ ಹಬ್ಬದ ವಾತಾವರಣದ ಸಂಭ್ರಮ ಕಾಣಿಸಿಕೊಂಡಿದೆ.
ಕಾಪು ಶ್ರೀ ಹಳೇ ಮಾರಿಗುಡಿ ದೇವಸ್ಥಾನ, ಶ್ರೀ ಹೊಸ ಮಾರಿಗುಡಿ ದೇವಸ್ಥಾನ ಮತ್ತು ಶ್ರೀ ಮೂರನೇ ಮಾರಿಗುಡಿ (ಕಲ್ಯ) ದೇವಸ್ಥಾನದಲ್ಲಿ ಮಂಗಳವಾರ ಸಂಜೆಯಿಂದ ಬುಧವಾರ ಸಂಜೆಯವರೆಗೆ ನಡೆಯುವ ಸುಗ್ಗಿ ಮಾರಿಪೂಜೆಗಾಗಿ ವಿವಿಧೆಡೆಗಳಿಂದ ಆಗಮಿಸುವ ಭಕ್ತರ ಅನುಕೂಲಕ್ಕಾಗಿ ಬಿಗು ಪೊಲೀಸ್ ಬಂದೋಬಸ್ತ್ ಸಹಿತವಾಗಿ ವಿಶೇಷ ವ್ಯವಸ್ಥೆಗಳು ಜೋಡಣೆಯಾಗಿವೆ. ಸುಗ್ಗಿ ಮಾರಿಪೂಜೆಯ ಪ್ರಯುಕ್ತ ಗುಡಿಗಳು ವಿದ್ಯುತ್ ದೀಪಾಲಂಕಾರ ಮತ್ತು ಪುಷ್ಪಾಲಂಕಾರದೊಂದಿಗೆ ಎಲ್ಲರ ಕಣ್ಮನ ಸೆಳೆಯುತ್ತಿವೆ.
ತೆರೆದುಕೊಂಡ ವ್ಯಾಪಾರ ಮಳಿಗೆಗಳು
ಮೂರು ಮಾರಿಗುಡಿಗಳ ಪರಿಸರದಲ್ಲಿ ವಿವಿಧ ರೀತಿಯ ಮಾರಾಟ ಮಳಿಗೆಗಳು, ಅಂಗಡಿ – ಸ್ಟಾಲ್ಗಳು ತೆರೆದುಕೊಂಡಿವೆ. ದೇವಿಗೆ ಅತ್ಯಂತ ಪ್ರಿಯವಾಗಿರುವ ಮಲ್ಲಿಗೆ, ಹಿಂಗಾರ, ಹಣ್ಣು ಕಾಯಿ ಸಮರ್ಪಣೆಗೆ ಸಹಿತ ವಿವಿಧ ಅಂಗಡಿಗಳು ಮಂಗಳವಾರ ಬೆಳಗ್ಗಿನಿಂದಲೇ ವ್ಯಾಪಾರ ಪ್ರಾರಂಭಿಸಿವೆ. ಕಾಪು ಸಂತೆ ಮಾರ್ಕೆಟ್ನ ಒಳಗೆ ಸೀಮಿತ ಸಂಖ್ಯೆಯ ಕೋಳಿ ಅಂಗಡಿಗಳಿಗೆ ವ್ಯಾಪಾರಕ್ಕೆ ಅವಕಾಶ ಮಾಡಿಕೊಡಲಾಗಿದೆ.
ಸ್ವಚ್ಛತೆಗೆ ವಿಶೇಷ ಆದ್ಯತೆ
ಸ್ವಚ್ಛತೆ ಕಾಪಾಡುವ ನಿಟ್ಟಿನಲ್ಲಿ ಪುರಸಭೆ ಯು ಇಬ್ಬರು ಉಸ್ತುವಾರಿಗಳ ಸಹಿತವಾಗಿ 15 ಮಂದಿ ಪೌರ ಕಾರ್ಮಿರನ್ನೊಳಗೊಂಡ ತಂಡವನ್ನು ರಚಿಸಲಾಗಿದ್ದು ಅವರು 24ಗಿ7 ಮಾದರಿಯಲ್ಲಿ ಕಾರ್ಯ ನಿರ್ವ ಹಿಸಲಿದ್ದಾರೆ. ಪ್ಲಾಸ್ಟಿಕ್ ನಿಷೇಧದ ಬಗ್ಗೆ ಜಾಗೃತಿಯೂ ನಡೆಯುತ್ತಿದೆ.
ಭದ್ರತೆಗೆ 200 ಪೊಲೀಸರು
ಭದ್ರತೆಗೆ 200ಕ್ಕೂ ಹೆಚ್ಚು ಪೊಲೀಸರನ್ನು ನಿಯೋಜಿಸಲಾಗಿದ್ದು, ಚೆಕ್ಪೋಸ್ಟ್ ಅಳವಡಿಸಲಾಗಿದೆ. ನೂಕು ನುಗ್ಗಲು ನಿಯಂತ್ರಣಕ್ಕೆ ಕ್ರಮವಹಿಸಲಾಗಿದೆ.
ಕೊರೊನಾ ಜಾಗೃತಿಗೆ ಪ್ರತ್ಯೇಕ ತಂಡ
ಕೊರೊನಾ ಮುನ್ನೆಚ್ಚರಿಕಾ ಕ್ರಮಗಳ ಪಾಲನೆಯ ಪರಿಶೀಲನೆಗಾಗಿ ಕಾಪು ತಹಶೀಲ್ದಾರ್ ಪ್ರತಿಭಾ ಆರ್. ಮತ್ತು ಪುರಸಭೆ ಮುಖ್ಯಾಧಿಕಾರಿ ವೆಂಕಟೇಶ ನಾವು ಅವರು ಸ್ವತಃ ಫೀಲ್ಡಿಗಿಳಿದಿದ್ದು, ಮಾಸ್ಕ್ ಧರಿಸದವರಿಗೆ ದಂಡ ವಿಧಿಸುವ ಕಾಯಕದಲ್ಲಿ ತೊಡಗಿದ್ದಾರೆ. ಪುರಸಭಾ ವ್ಯಾಪ್ತಿಯಲ್ಲಿ ಆರೋಗ್ಯ ನಿರೀಕ್ಷಕರ ನೇತೃತ್ವದಲ್ಲಿ ಪ್ರತ್ಯೇಕ ತಂಡವನ್ನು ರಚಿಸಲಾಗಿದ್ದು ಮಾಸ್ಕ್ ಧರಿಸದವರಿಗೆ ದಂಡ ವಿಧಿಸುವುದರ ಸಹಿತವಾಗಿ ಜನರಲ್ಲಿ ಸಾಮಾಜಿಕ ಅಂತರ ಪಾಲನೆಯ ಕುರಿತಾಗಿ ಜಾಗೃತಿ ಮೂಡಿಸುವ ಕೆಲಸ ನಡೆಯುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ
MUST WATCH
ಹೊಸ ಸೇರ್ಪಡೆ
Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ
ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ
ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್