Marriage: ಹಿಂದೂ ಯುವಕನನ್ನು ವರಿಸಿದ ಅನ್ಯಕೋಮಿನ ಯುವತಿ
6 ವರ್ಷಗಳಿಂದ ಪ್ರೀತಿಸುತ್ತಿದ್ದ ಜೋಡಿಗೆ ಠಾಣೆಯಲ್ಲೇ ಮದುವೆ ಮಾಡಿಸಿದ ಬಜರಂಗ ದಳ ಕಾರ್ಯಕರ್ತರು
Team Udayavani, Dec 9, 2023, 11:29 PM IST
ಧಾರವಾಡ: ಹಿಂದೂ ಯುವಕ ಮತ್ತು ಅನ್ಯಕೋಮಿನ ಯುವತಿ ಪೊಲೀಸ್ ಠಾಣೆಯಲ್ಲೇ ಪರಸ್ಪರ ಹಾರ ಬದಲಿಸಿಕೊಂಡ ಘಟನೆ ಡಿ.4ರಂದು ನಡೆದಿರುವುದು ತಡವಾಗಿ ಬೆಳಕಿಗೆ ಬಂದಿದೆ.
ಧಾರವಾಡ ತಾಲೂಕಿನ ಬಾಡ ಗ್ರಾಮದ ಮಂಜುನಾಥ ಹಾಗೂ ಉಮಾ (ಹೆಸರು ಬದಲಿಸಲಾಗಿದೆ) 6 ವರ್ಷಗಳಿಂದ ಪ್ರೀತಿಸುತ್ತಿದ್ದರು. ಯುವತಿ ಮನೆಯವರ ವಿರೋಧವಿದ್ದ ಕಾರಣ ಉಪ ನೋಂದಣಾಧಿಕಾರಿ ಕಚೇರಿಯಲ್ಲಿ ವಿವಾಹ ನೋಂದಣಿ ಮಾಡಿಸಿಕೊಂಡು ಊರು ಬಿಟ್ಟು ಹೋಗಿದ್ದರು.ಯುವತಿ ನಾಪತ್ತೆ ಬಗ್ಗೆ ಆಕೆಯ ಮನೆಯವರು ಧಾರವಾಡ ಗ್ರಾಮೀಣ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಈ ಹಿನ್ನೆಲೆಯಲ್ಲಿ ಪ್ರೇಮಿಗಳು ಸ್ವಯಂಪ್ರೇರಿತರಾಗಿ ಠಾಣೆಗೆ ಬಂದು ಹಾಜರಾಗಿದ್ದರು. ಬಳಿಕ ಪೊಲೀಸರು ಯುವತಿಯನ್ನು ಸಾಂತ್ವನ ಕೇಂದ್ರಕ್ಕೆ ಕಳುಹಿಸಿದ್ದರು.
ವಿಷಯ ತಿಳಿದು ಠಾಣೆಗೆ ಬಂದ ಬಜರಂಗದಳ ಕಾರ್ಯಕರ್ತರು, ಪ್ರೇಮಿಗಳನ್ನು ಒಂದು ಮಾಡಬೇಕೆಂದು ಠಾಣೆ ಎದುರು ಪ್ರತಿಭಟಿಸಿದ್ದರು. ಬಳಿಕ ಪೊಲೀಸರು ಯುವತಿಯನ್ನು ಕರೆತಂದು ಯುವಕನ ಜತೆ ಹೋಗಲು ಅವಕಾಶ ಮಾಡಿಕೊಟ್ಟರು. ಬಜರಂಗದಳದ ಕಾರ್ಯಕರ್ತರು ಇಬ್ಬರೂ ಪ್ರೇಮಿಗಳಿಗೆ ಠಾಣೆಯಲ್ಲೇ ಪರಸ್ಪರ ಹಾರ ಬದಲಿಸುವ ಮೂಲಕ ಮದುವೆ ಮಾಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Drought Relief: ಕಾಂಗ್ರೆಸ್-ಬಿಜೆಪಿ ಬರ ಪರಿಹಾರ ಜಟಾಪಟಿ
Drought Relief: ಎಕ್ಸ್ (ಟ್ವಿಟರ್)ನಲ್ಲೂ ಕಾಂಗ್ರೆಸ್-ಬಿಜೆಪಿ ವಾಕ್ಸಮರ
Congress Govt “ಕನ್ನಡಿಗರ ತೆರಿಗೆ ಹಣದಲ್ಲಿ ಕಲೆಕ್ಷನ್ ಏಜೆಂಟ್ ಟ್ರಿಫ್’: ಬಿಜೆಪಿ ಆರೋಪ
HDK ಪೆನ್ಡ್ರೈವ್ನಲ್ಲಿ ಏನಿತ್ತು ಎಂಬುದು ಈಗ ಬಯಲಾಗಿದೆ: ಡಿಕೆಶಿ
Lok Sabha Election; 2ನೇ ಹಂತದಲ್ಲಿ ಸಕ್ರಿಯ: ಎಚ್.ಡಿ. ಕುಮಾರಸ್ವಾಮಿ