ಬಡವರ ಕಲ್ಯಾಣ ಧರ್ಮದ ರಕ್ಷಣೆ ಅಹರ್ನಿಶಿ: ಸಚಿವ ಆರ್‌. ಅಶೋಕ್‌

ಸುವರ್ಣ ಸಂಭ್ರಮಕ್ಕೆ ಸಾಕ್ಷಿಯಾದ ಧರ್ಮಸ್ಥಳ ಉಚಿತ ಸಾಮೂಹಿಕ ವಿವಾಹ ; 183 ಜೋಡಿ ದಾಂಪತ್ಯ ಜೀವನಕ್ಕೆ

Team Udayavani, Apr 28, 2022, 6:20 AM IST

ಬಡವರ ಕಲ್ಯಾಣ ಧರ್ಮದ ರಕ್ಷಣೆ ಅಹರ್ನಿಶಿ: ಸಚಿವ ಆರ್‌. ಅಶೋಕ್‌

ಬೆಳ್ತಂಗಡಿ: ಹಿಂದೂ ಪರಂಪರೆಯಲ್ಲಿ ದಾಂಪತ್ಯದ ಮಹತ್ವವನ್ನು ಹಿರಿಯರು ಏಳೇಳು ಜನುಮದ ಅನುಬಂಧ ಎಂದು ಸಾರಿದ್ದಾರೆ. ಇದರರ್ಥ ಬದುಕಿನಲ್ಲಿ ಸಿರಿತನ-ಬಡತನ ಶಾಶ್ವತವಲ್ಲ. ಅರ್ಥಪೂರ್ಣ ಬದುಕಿನ ರಹಸ್ಯವೇ ಪ್ರೀತಿ ಮತ್ತು ವಿಶ್ವಾಸವಾಗಿದೆ. ಈ ನೆಲೆಯಲ್ಲಿ ಭಾರತೀಯ ಸಂಸ್ಕೃತಿಯು ಧರ್ಮ ರಕ್ಷಣೆ ಮತ್ತು ಬಡವರ ಕಲ್ಯಾಣಕ್ಕೆ ಮಹತ್ವ ನೀಡುತ್ತಾ ಬಂದಿದೆ ಎಂದು ಕಂದಾಯ ಸಚಿವ ಆರ್‌. ಅಶೋಕ್‌ ಹೇಳಿದರು.

ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆ ಅವರ ನೇತೃತ್ವದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಬುಧವಾರ ಗೋಧೂಳಿ ಲಗ್ನ ಸುಮುಹೂರ್ತದಲ್ಲಿ ನೆರವೇರಿದ 50ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಸಮಾರಂಭದಲ್ಲಿ ಅವರು ಶುಭ ಹಾರೈಸಿದರು.

ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಜನಪರ ಯೋಜನೆಗಾಗಿ ನೂರಾರು ಕಾರ್ಯಗಳಾಗುತ್ತಿವೆ. ಧರ್ಮಸ್ಥಳವೆಂದರೆ ನಿಜವಾದ ಧರ್ಮವಿರುವಂತ ಶಕ್ತಿ ಸ್ವರೂಪಿ ಈಶ್ವರನ ನೆಲೆವೀಡಾಗಿದೆ ಎಂದರು.

ಚಲನಚಿತ್ರ ನಟ ಗಣೇಶ್‌ ಮಾತನಾಡಿ, ಸತ್ಯವೆಂದರೆ ಮಂಜುನಾಥ, ಪ್ರಮಾಣ ಎಂದರೆ ಧರ್ಮಸ್ಥಳವಾಗಿದೆ. ಸಂಸಾರ ಸಾಗರಕ್ಕೆ ಧುಮುಕಿದ ನವದಂಪತಿಗಳಿಗೆ ಶ್ರೀ ಸ್ವಾಮಿಯು ದೋಣಿಯ ನಾವಿಕನಂತೆ ಬಂದು ಅನುಗ್ರಹಿಸಲಿ ಎಂದ ಅವರು ವರನಟ ರಾಜ್‌ಕುಮಾರ್‌ ಹಾಡಿದ “ಹೊಸ ಬಾಳಿನ ಹೊಸಿಲಲಿ ನಿಂತಿರುವ ಹೊಸ ಜೋಡಿಗೆ’ ಹಾಡನ್ನು ಹಾಡಿ ನೂತನ ದಂಪತಿಗಳಿಗೆ ಶುಭಕೋರಿದರು.

ಸರಳ ಜೀವನಕ್ಕೆ ನಾಂದಿ
ಡಾ| ಡಿ. ವೀರೇಂದ್ರ ಹೆಗ್ಗಡೆಯವರು ಆಶೀರ್ವದಿಸಿ, ಹಿಂದೆ ವಿವಾಹದ ದುಂದುವೆಚ್ಚದಿಂದ ಸಾಲ ಮಾಡಿ ಜೀತಕ್ಕೆ ತುತ್ತಾಗುತ್ತಿದ್ದರು. ಅಂದು ಸರಕಾರ ಜೀತಮುಕ್ತರನ್ನಾಗಿ ಮಾಡಿತ್ತು. ಹಾಗಾಗಿ ಸಾಮೂಹಿಕ ವಿವಾಹ ಸರಳ ಜೀವನಕ್ಕೆ ನಾಂದಿಯಾಗಬೇಕು. ಮದುವೆಯ ಹೆಸರಿನಲ್ಲಿ ದುಂದು ವೆಚ್ಚ ಸಲ್ಲ. ಅದಕ್ಕಾಗಿ ಸಾಮೂಹಿಕ ವಿವಾಹ ಯೋಜನೆಯನ್ನು ಧರ್ಮಸ್ಥಳದಲ್ಲಿ ಆರಂಭಿಸಲಾಯಿತು ಎಂದರು. 50ನೇ ವರ್ಷದ ಈ ಕಾರ್ಯ ಕ್ರಮದಲ್ಲಿ 24 ತಾಲೂಕಿನ 53 ಜಾತಿಯವರು ಇದ್ದು, 60 ಜೊತೆ ಅಂತರ್ಜಾತೀಯ ವಿವಾಹವಾಗಿದ್ದಾರೆ ಎಂದು ಉಲ್ಲೇಖೀಸಿ ಮೆಚ್ಚುಗೆ ವ್ಯಕ್ತಪಡಿಸಿದರು.

ಬೆಂಗಳೂರಿನ ಶಾಸಕರು ಹಾಗೂ ಒಕ್ಕಲಿಗ ಗೌಡರ ಸಂಘದ ರಾಜ್ಯಾಧ್ಯಕ್ಷ ಕೃಷ್ಣಪ್ಪ, ಶಾಸಕ ಹರೀಶ್‌ ಪೂಂಜ, ಡಾ| ಹೇಮಾವತಿ ವೀ. ಹೆಗ್ಗಡೆ, ಡಿ. ಸುರೇಂದ್ರ ಕುಮಾರ್‌, ಡಿ. ಹಷೇìಂದ್ರ ಕುಮಾರ್‌ ಮತ್ತು ಸುಪ್ರಿಯಾ ಹಷೇìಂದ್ರ ಕುಮಾರ್‌ ಉಪಸ್ಥಿತರಿದ್ದರು.

ಡಿ. ಹರ್ಷೇಂದ್ ಕುಮಾರ್‌ ಸ್ವಾಗತಿಸಿ ದರು. ಗಣೇಶ್‌ ಕಾಮತ್‌ ವಂದಿಸಿದರು. ಬಾರಕೂರಿನ ದಾಮೋದರ ಶರ್ಮಾ ಕಾರ್ಯಕ್ರಮ ನಿರ್ವಹಿಸಿದರು.

ಮನೆಬಾಗಿಲಿಗೆ ಸರಕಾರದ ಸೇವೆ
ರಾಜ್ಯ ಸರಕಾರ ಜನಪರ ಯೋಜನೆಯಡಿ ಗ್ರಾಮವಾಸ್ತವ್ಯ ನಡೆಸಿ ಮನೆಬಾಗಿಲಿಗೆ ಸೇವೆ ಒದಗಿಸುತ್ತಿದೆ. ಮುಂದಿನ 15 ದಿನಗಳಲ್ಲಿ ವೃದ್ಧಾಪ್ಯ ವೇತನವನ್ನು ದೂರವಾಣಿ ಮೂಲಕ ಆಧಾರ್‌ ಮಾಹಿತಿ ನೀಡಿದರೆ 72 ತಾಸಿನಲ್ಲಿ ಮನೆಬಾಗಿಲಿಗೆ ತಲುಪಿಸುವ ಕಾರ್ಯವಾಗಲಿದೆ. ಪಡಿತರ ಸೇರಿದಂತೆ ಎಲ್ಲ ಸೇವೆ ಮನೆಬಾಗಿಲಿಗೆ ನೀಡುವ ಕಾರ್ಯಕ್ಕೆ ಸದ್ಯದಲ್ಲೇ ಚಾಲನೆ ದೊರೆಯಲಿದೆ ಎಂದು ಸಚಿವ ಅಶೋಕ್‌ ತಿಳಿಸಿದರು.

ಟಾಪ್ ನ್ಯೂಸ್

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.