ಮಾಯಾವತಿ ಹೇಳಿದ್ದು ಗೊತ್ತೇ ಆಗಿಲ್ಲ: ಮಹೇಶ್‌


Team Udayavani, Jul 25, 2019, 3:06 AM IST

mayavati

ಬೆಂಗಳೂರು: “ಯಾವುದೇ ಪಕ್ಷಕ್ಕೂ ಬೆಂಬಲ ಸೂಚಿಸದೇ ಇಂದಿಗೂ ತಟಸ್ಥ ನಿಲುವನ್ನೇ ಹೊಂದಿದ್ದು, ಸಂವಹನ ಕೊರತೆಯಿಂದ ಮೈತ್ರಿ ಸರ್ಕಾರದ ವಿಶ್ವಾಸಮತ ಪ್ರಕ್ರಿಯೆಯಲ್ಲಿ ಭಾಗವಹಿಸಲು ಸಾಧ್ಯವಾಗಿಲ್ಲ’ ಎಂದು ಕೊಳ್ಳೇಗಾಲದ ಬಿಎಸ್‌ಪಿ ಶಾಸಕ ಎನ್‌.ಮಹೇಶ್‌ ತಿಳಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜೂ. 23ರಂದು ನಡೆದ ಬಿಎಸ್‌ಪಿ ರಾಷ್ಟ್ರೀಯ ಕಾರ್ಯಕಾರಣಿ ಸಭೆಯಲ್ಲಿ ಬಹುಜನ ಸಮಾಜ ಪಕ್ಷ (ಬಿಎಸ್‌ಪಿ) ರಾಷ್ಟ್ರೀಯ ಅಧ್ಯಕ್ಷೆ ಮಾಯಾವತಿಯವರು ರಾಜ್ಯದಲ್ಲಿ ಯಾರಿಗೂ ಬೆಂಬಲಿಸದೇ ಸ್ವತಂತ್ರವಾಗಿರಲು ಸೂಚನೆ ನೀಡಿದ್ದರು. ಹೀಗಾಗಿ, ನಂತರ ರಾಜ್ಯ ರಾಜಕಾರಣದ ಬೆಳವಣಿಗೆಗಳಲ್ಲಿ ಯಾರಿಗೂ ಬೆಂಬಲ ಸೂಚಿಸದೇ ತಟಸ್ಥ ನೀತಿ ಅನುಸರಿಸಿದ್ದೆ.

ಇನ್ನು ರಾಜ್ಯದಲ್ಲಿ ಕಲಾಪ ಆರಂಭವಾಗಿ ವಿಶ್ವಾಸ ಮತಯಾಚನೆ ವಿಚಾರ ಬಂದಾಗ ಬಿಎಸ್‌ಪಿ ಕರ್ನಾಟಕ ಉಸ್ತುವಾರಿಯಾದ ರಾಜ್ಯಸಭಾ ಸದಸ್ಯ ಡಾ.ಅಶೋಕ್‌ ಸಿದ್ಧಾರ್ಥ ಅವರ ಬಳಿ ಬೆಂಬಲ ಸೂಚಿಸುವ ಕುರಿತು ಮಾತನಾಡಿದ್ದೆ. ಆಗ ಅವರು ಮಾಯಾವತಿ ಅವರ ಜತೆ ಮಾತನಾಡಿದ್ದು, ತಟಸ್ಥವಾಗಿರಲು ಹೇಳಿದ್ದಾರೆ ಎಂದು ತಿಳಿಸಿದ್ದರು.

ಹೀಗಾಗಿ, ವಿಶ್ವಾಸ ಮತ ಪ್ರಕ್ರಿಯೆಗೆ ಭಾಗವಹಿಸಲಿಲ್ಲ, ಕಲಾಪಕ್ಕೆ ಗೈರಾಗುತ್ತೇನೆ ಎಂದು ಕೂಡಾ ಹೇಳಿದ್ದೆ, ಒಪ್ಪಿದ್ದರು. ಬಳಿಕ ವಿಶ್ವಾಸಮತ ಪ್ರಕ್ರಿಯೆಯಲ್ಲಿ ಭಾಗವಹಿಸಿ ಮೈತ್ರಿ ಬೆಂಬಲ ಸೂಚಿಸುವಂತೆ ಮಾಯಾವತಿ ಟ್ವಿಟ್ಟರ್‌ ಮೂಲಕ ಹೇಳಿರುವ ಬಗ್ಗೆ ನನಗೆ ಮಾಹಿತಿ ಇಲ್ಲ ನಾನು ಟ್ವಿಟ್ಟರ್‌ ಬಳಸುವುದಿಲ್ಲ. ಹೀಗಾಗಿ, ವಿಶ್ವಾಸಮತ ಪ್ರಕ್ರಿಯೆಯಿಂದ ದೂರ ಉಳಿದಿದ್ದೆ ಎಂದು ಹೇಳಿದರು.

ಈ ಬಾರಿ ಕಲಾಪದಲ್ಲಿ ಭಾಗವಹಿಸುವುದಿಲ್ಲ ಎಂದು ನಿರ್ಧರಿಸಿದ ಬಳಿಕ ಕ್ಷೇತ್ರದ ಕಾರ್ಯಚಟುವಟಿಕೆಯಲ್ಲಿ ತೊಡಗಿಸಿಕೊಂಡಿದ್ದೆ. ಜು.15ರಂದು ಕ್ಷೇತ್ರದ ಗ್ರಾಪಂ ಸದಸ್ಯರೊಬ್ಬರು ನಿಧನರಾಗಿದ್ದು, ಅವರ ಕುಟುಂಬಕ್ಕೆ ಸಾಂತ್ವನ ಹೇಳಿ ಎರಡು ದಿನ ಅವರ ಜತೆ ಇದ್ದೆ. ಆನಂತರ ವೈಯಕ್ತಿಕ ಕಾರಣಗಳಿಗೆ ವಾರದ ಮಟ್ಟಿಗೆ ಧ್ಯಾನ ಶಿಬಿರದಲ್ಲಿ ಭಾಗವಹಿಸಿದ್ದೆ. ಮಾಧ್ಯಮ ಸೇರಿದಂತೆ ಯಾರ ಸಂಪರ್ಕವೂ ನನಗೆ ಇರಲಿಲ್ಲ.

ಇಂದು ಬೆಳಗ್ಗೆ ಪತ್ರಿಕೆ ಓದುವಾಗ ನನ್ನನ್ನು ಪಕ್ಷದಿಂದ ಉಚ್ಚಾಟನೆ ಮಾಡಿದ್ದಾರೆ ಎಂದು ತಿಳಿಯಿತು. ಈ ಕುರಿತು ಸ್ಪಷ್ಟನೆ ನೀಡಲು ಪತ್ರಿಕಾಗೋಷ್ಠಿ ನಡೆಸುತ್ತಿದೇನೆ. ಈ ವರೆಗೆ ಪಕ್ಷದಿಂದ ಯಾವುದೇ ಕರೆ, ಪತ್ರ ಬಂದಿಲ್ಲ ಎಂದರು. 2019ರ ಲೋಕಸಭಾ ಚುನಾವಣೆಯಲ್ಲಿ ಮಾಯಾವತಿ ಅವರ ಚುನಾವಣಾ ಪೂರ್ವ ಯಾವುದೇ ಒಪ್ಪಂದ ಇಲ್ಲ ಎಂಬ ನಿರ್ಧಾರ ಮಾಡಿ ರಾಜ್ಯದ ಎಲ್ಲಾ ಲೋಕಸಭಾ ಕ್ಷೇತ್ರಗಳಿಗೂ ಬಿಎಸ್‌ಪಿ ಅಭ್ಯರ್ಥಿ ನಿಲ್ಲಿಸಲು ಹೇಳಿದ್ದರು.

ಒಟ್ಟಾರೆ ರಾಜ್ಯದಲ್ಲಿ 4 ಲಕ್ಷಕ್ಕೂ ಹೆಚ್ಚು ಮತ ಬಿಎಸ್‌ಪಿ ಅಭ್ಯರ್ಥಿಗಳು ಪಡೆದರು. ಆ ಚುನಾವಣೆ ಬಳಿಕ ವಿಧಾನಸಭೆಯ ಆಡಳಿತ ಅಥವಾ ವಿರೋಧ ಪಕ್ಷ ಎರಡೂ ಕಡೆ ಕೂರುವುದು ಬೇಡ ಎಂದಿದ್ದರು. ಹೀಗಾಗಿ, ಸ್ಪಿಕರ್‌ಗೆ ಮನವಿ ಮಾಡಿ ಪ್ರತ್ಯೇಕ ಆಸನ ವ್ಯವಸ್ಥೆ ಮಾಡಿಕೊಡುವಂತೆ ಮನವಿ ಮಾಡಿದ್ದೆ. ಅಂದಿನಿಂದಲೂ ತಟಸ್ಥವಾಗಿದ್ದೇನೆ ಮುಂದೆಯೂ ತಟಸ್ಥವಾಗಿರುತ್ತೇನೆ ಎಂದರು.

ಉಚ್ಚಾಟನೆ ವಾಪಸ್‌ ಸಾಧ್ಯತೆ: ನಾನು ಯಾವುದೇ ಆದೇಶ ಉಲ್ಲಂ ಸಿಲ್ಲ. ಪಕ್ಷದ ವಿರುದ್ಧ ಅಶಿಸ್ತು ತೋರಿಲ್ಲ. ನನಗೆ ಟ್ವಿಟ್ಟರ್‌ ಮಾಹಿತಿ ತಲುಪಿಲ್ಲ. ಜತೆಗೆ ಒಂದು ವಾರಗಳ ನಾನು ಯಾವ ರೀತಿಯ ಸಂಪರ್ಕ ಇಲ್ಲದೇ ಧ್ಯಾನ ಶಿಬಿರದಲ್ಲಿ ಭಾಗವಹಿಸಿದ್ದೆ. ಹೀಗಾಗಿ, ವಿಶ್ವಾಸ ಮತಯಾಚನೆ ಪ್ರಕ್ರಿಯೆಯಲ್ಲಿ ಭಾಗವಹಿಸಿಲ್ಲ ಎಂದು ಬಿಎಸ್‌ಪಿ ರಾಷ್ಟ್ರೀಯ ಅಧ್ಯಕ್ಷೆ ಮಾಯಾವತಿ ಅವರ ಗಮನಕ್ಕೆ ತರುತ್ತೇನೆ. ಬಳಿಕ ಅವರು ಉಚ್ಚಾಟನೆ ವಾಪಸ್‌ ಪಡೆಯಬಹದು. ಮುಂದೆ ಬಿಎಸ್‌ಪಿ ಶಾಸಕನಾಗಿಯೇ ಮುಂದುವರೆಯುತ್ತೇನೆ ಎಂದು ಶಾಸಕ ಮಹೇಶ್‌ ತಿಳಿಸಿದರು.

ಟಾಪ್ ನ್ಯೂಸ್

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

17-voting

Vote: ಮತದಾನದ ಮಹತ್ವ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

17-voting

Vote: ಮತದಾನದ ಮಹತ್ವ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

16-adu-jeevitham

Movie Review: ಆಡು ಜೀವಿದಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.