Diploma ವಿದ್ಯಾರ್ಥಿಗಳಿಗೆ ಸೂಕ್ತ ಉದ್ಯೋಗಾವಕಾಶ ಕಲ್ಪಿಸಲು ಕ್ರಮ: ಡಾ| ಎಂ.ಸಿ. ಸುಧಾಕರ್
Team Udayavani, Oct 4, 2023, 11:47 PM IST
ಬೆಂಗಳೂರು: ಡಿಪ್ಲೊಮಾ ಶಿಕ್ಷಣದಲ್ಲಿ ಥಿಯರಿ ಮತ್ತು ಕೌಶಲಕ್ಕೆ ಸಮಾನ ಆದ್ಯತೆ ಇರಬೇಕು. ವಿದ್ಯಾರ್ಥಿಗಳು ಔದ್ಯೋಗಿಕವಾಗಿ ಬಳಸುವ ಯಂತ್ರೋಪಕರಣಗಳ ಬಗ್ಗೆ ಶಿಕ್ಷಣ ಪಡೆಯುವಾಗಲೇ ಮಾಹಿತಿ ಸಿಗಬೇಕು ಎಂದು ಉನ್ನತ ಶಿಕ್ಷಣ ಸಚಿವ ಹೇಳಿದ್ದಾರೆ.
ವಿಕಾಸ ಸೌಧದಲ್ಲಿ ನಡೆದ ಪಾಲಿಟೆಕ್ನಿಕ್ ಡಿಪ್ಲೊಮಾ ಶಿಕ್ಷಣದಲ್ಲಿ ಉದ್ಯೋಗಾವಕಾಶಗಳನ್ನು ಹೆಚ್ಚಿಸುವ ಬಗ್ಗೆ ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆ ಆಯೋಜಿಸಿದ್ದ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು.
ಪಾಲಿಟೆಕ್ನಿಕ್ ಕಾಲೇಜುಗಳಿಗೆ ಮೂಲ ಸೌಕರ್ಯ ಒದಗಿಸುವ ಜವಾಬ್ದಾರಿ ನಮ್ಮ ಮೇಲಿದೆ. ಬೋಧಕ ಸಿಬಂದಿಯ ಕೊರತೆಯನ್ನು ಅತಿಥಿ ಉಪನ್ಯಾಸಕರನ್ನು ನೇಮಿಸುವುದರ ಮೂಲಕ ತುಂಬಲು ಪ್ರಯತ್ನ ನಡೆಸುತ್ತಿದ್ದೇವೆ. ಸರಕಾರ ಸಹ ಆದಷ್ಟು ಅನುದಾನ ನೀಡಲು ಪ್ರಯತ್ನಿಸಲಿದೆ. ಇದರ ಜತೆಗೆ ಸಾಂಸ್ಥಿಕ ಸಾಮಾಜಿಕ ಹೊಣೆಯಡಿಯೂ ಸೌಲಭ್ಯಗಳನ್ನು ಒದಗಿಸಲು ಸರಕಾರ ಪ್ರಯತ್ನಿಸಲಿದೆ ಎಂದವರು ಭರವಸೆ ನೀಡಿದರು.ಉಪನ್ಯಾಸಕರು ಇಂದಿನ ಆಧುನಿಕ ವಿಷಯಗಳ ಬಗ್ಗೆ ತಿಳಿದುಕೊಂಡು ಅಗತ್ಯ ತರಬೇತಿ ಪಡೆಯಲು ಮುಂದಾಗಬೇಕು. ಅದೇ ರೀತಿ ಪ್ರಾಂಶುಪಾಲರು ತಮ್ಮ ಸುತ್ತಲಿನ ಕೈಗಾರಿಕೆಗಳ ಜತೆ ಉತ್ತಮ ಬಾಂಧವ್ಯವನ್ನಿಟ್ಟುಕೊಂಡು ಕೈಗಾರಿಕೆ – ಶೈಕ್ಷಣಿಕ ಪಾಲುದಾರಿಕೆ ಸ್ಥಾಪಿಸಿವಿದ್ಯಾರ್ಥಿಗಳಿಗೆ ಸೂಕ್ತ ಉದ್ಯೋಗಾವಕಾಶ ಕಲ್ಪಿಸಲು ಕ್ರಮ ಕೈಗೊಳ್ಳಬೇಕು ಎಂದು ಸಲಹೆ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Politics: ಕೇಂದ್ರ ಬರ ಪರಿಹಾರ ನೀಡದಿರಲು ವಿಧಾನಸಭೆ ಚುನವಾಣೆ ಸೋಲಿನ ಸೇಡು: ರಾಮಲಿಂಗಾರೆಡ್ಡಿ
Politics: ಡಿಕೆಶಿ ಹೆಸರು ಹೇಳದಿದ್ದರೆ ಕೆಲವರಿಗೆ ನಿದ್ದೆ ಬರಲ್ಲ : ರಾಮಲಿಂಗಾರೆಡ್ಡಿ
LS Polls: ಮೋದಿ ಆಡಳಿತದಲ್ಲಿ ಭಾರತ 3ನೇ ಆರ್ಥಿಕ ಶಕ್ತಿ
ವರದಿ, ವೀಡಿಯೋ ಪ್ರಕಟಿಸದಂತೆ ನಿರ್ಬಂಧಕಾಜ್ಞೆ ತಂದ ಈಶ್ವರಪ್ಪ ಪುತ್ರ
Hassan Pen Drive; 40 ಜಿಬಿ ಪೆನ್ಡ್ರೈವ್ನಲ್ಲಿ ಸಾವಿರಾರು ಅಶ್ಲೀಲ ವಿಡಿಯೋ!
MUST WATCH
ಹೊಸ ಸೇರ್ಪಡೆ
Politics: ಕೇಂದ್ರ ಬರ ಪರಿಹಾರ ನೀಡದಿರಲು ವಿಧಾನಸಭೆ ಚುನವಾಣೆ ಸೋಲಿನ ಸೇಡು: ರಾಮಲಿಂಗಾರೆಡ್ಡಿ
LPG Cylinders: ವಾಣಿಜ್ಯ ಬಳಕೆಯ ಎಲ್ ಪಿಜಿ ಸಿಲಿಂಡರ್ ಬೆಲೆ ಮತ್ತೆ ಇಳಿಕೆ; ಹೊಸ ದರ ಎಷ್ಟು?
ಧ್ರುವ್ ರಾಠಿ ಮುಸ್ಲಿಂ, ಆತನ ಪತ್ನಿ ಪಾಕಿಸ್ತಾನಿ: ವೈರಲ್ ಪೋಸ್ಟ್ನ ಸತ್ಯಾಸತ್ಯತೆ ಏನು?
ಇನ್ಸ್ಟಾ ಪ್ರೊಫೈಲ್ ಮಾಯೆ: ಯುವತಿ ಎಂದು 45ರ ಆಂಟಿ ಜೊತೆ 20ರ ಯುವಕನ ಚಾಟ್: ಮುಂದೆ ಆದದ್ದು..
NewsClick ಸ್ಥಾಪಕ ಪ್ರಬೀರ್ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!