ಯಾಂತ್ರಿಕ ಮೀನುಗಾರಿಕೆ ಬಹುತೇಕ ಮುಕ್ತಾಯ

 ಚಂಡಮಾರುತ ಭೀತಿ, ಮುಂಗಾರು ಅಬ್ಬರ

Team Udayavani, Jun 4, 2020, 5:37 AM IST

ಯಾಂತ್ರಿಕ ಮೀನುಗಾರಿಕೆ ಬಹುತೇಕ ಮುಕ್ತಾಯ

ಗಂಗೊಳ್ಳಿ: ಈ ಋತುವಿನ ಯಾಂತ್ರೀಕೃತ ಮೀನುಗಾರಿಕೆಗೆ ಜೂ. 14ರ ವರೆಗೆ ಅವಕಾಶವಿದ್ದರೂ, ಒಂದೆಡೆ ಚಂಡ ಮಾರುತ, ಮತ್ತೂಂದೆಡೆ ಮುಂಗಾರು ಆರಂಭ ಆಗುತ್ತಿರುವುದರಿಂದ ಗಂಗೊಳ್ಳಿ ಯಲ್ಲಿ ಬಹುತೇಕ ಮೀನುಗಾರಿಕೆ ಮುಕ್ತಾಯದ ಹಂತದಲ್ಲಿದೆ.

ಪ್ರತಿ ವರ್ಷ ಮೇ 31ಕ್ಕೆ ಮೀನುಗಾರಿಕೆ ಋತು ಮುಕ್ತಾಯಗೊಳ್ಳುತ್ತಿದ್ದು, ಆದರೆ ಈ ಬಾರಿ ಲಾಕ್‌ಡೌನ್‌ನಿಂದಾಗಿ ಮೀನುಗಾರಿಕೆಗೆ ಅಡ್ಡಿಯಾಗಿದ್ದರಿಂದ ಕೇಂದ್ರ ಸರಕಾರ ಸ್ವಲ್ಪ ಮಟ್ಟಿಗೆ ವಿನಾಯಿತಿ ನೀಡಿ, ಜೂ. 14ರ ವರೆಗೆ ಅವಕಾಶ ಕಲ್ಪಿಸಿತ್ತು. ಆದರೆ ಈಗಾಗಲೇ ಚಂಡಮಾರುತದ ಭೀತಿಯಿಂದ ಮುನ್ನೆಚ್ಚರಿಕೆ ಕ್ರಮವಾಗಿ ಜೂ. 4ರ ವರೆಗೆ ಮೀನುಗಾರಿಕೆಗೆ ತೆರಳದಂತೆ ಸೂಚನೆ ನೀಡಲಾಗಿದೆ.

ಶೇ. 80ರಷ್ಟು ಅಂತ್ಯ
ಜೂ.ರ ಅನಂತರ ಆರಂಭವಾದರೂ ಮುಂಗಾರು ಆರಂಭವಾಗುವುದರಿಂದ ಮತ್ತಷ್ಟು ಅಪಾಯ ಎದುರಾಗುವ ಸಂಭವವಿದ್ದು, ಆ ಹಿನ್ನೆಲೆಯಲ್ಲಿ ಗಂಗೊಳ್ಳಿ ಬಂದರಿನಲ್ಲಿ ಈಗಾಗಲೇ ಬಹುತೇಕ ಅಂದರೆ ಶೇ. 75ರಿಂದ 80ರಷ್ಟು ಬೋಟುಗಳು, ದೋಣಿಗಳು ಮೀನುಗಾರಿಕೆಯನ್ನು ಮುಗಿಸಿ, ದಡದಲ್ಲಿ ಲಂಗರು ಹಾಕಿವೆ. ಈಗ ಇಲ್ಲಿನ ಮ್ಯಾಂಗನೀಸ್‌ ವಾರ್ಫ್‌ನಲ್ಲಿ ಬೋಟುಗಳನ್ನು ಸಮುದ್ರದಿಂದ ದಡದತ್ತ ಎಳೆದು ತರುವ ಕಾರ್ಯದಲ್ಲಿ ಮೀನುಗಾರರು ನಿರತರಾಗಿದ್ದಾರೆ. ಅದಲ್ಲದೆ ಮಳೆ ನೀರು ಬೀಳದಂತೆ ಮತ್ತೆ ತಟ್ಟಿಯನ್ನು ಕಟ್ಟುವ ಕಾರ್ಯ ಕೂಡ ಭರದಿಂದ ಸಾಗಿದೆ.

ನೀರಸ ಋತು
ಹಿಂದಿನೆಲ್ಲ ವರ್ಷಗಳಿಗಿಂತಲೂ ಈ ವರ್ಷ ಮೀನುಗಾರರಿಗೆ ನಿರಾಶಾದಾಯಕ ವರ್ಷವಾಗಿತ್ತು. ಅನೇಕ ಬಾರಿ ಮೀನುಗಾರಿಕೆಗೆ ತೆರಳಿದರೂ ಮೀನಿಲ್ಲದೆ ಬರಿಗೈಯಲ್ಲಿ ಬರುವಂತಾಗಿತ್ತು. ಅದರಲ್ಲೂ ಗಂಗೊಳ್ಳಿಯಲ್ಲಿ ಹೆಚ್ಚಾಗಿ ಸಿಗುತ್ತಿದ್ದ ಬೂತಾಯಿ (ಬೈಗೆ) ಈ ಬಾರಿ ಕಡಿಮೆ ಪ್ರಮಾಣದಲ್ಲಿ ಬಲೆಗೆ ಬಿದ್ದಿದ್ದು, ಇಲ್ಲಿನ ಮೀನುಗಾರರಿಗೆ ಭಾರೀ ಹೊಡೆತ ನೀಡಿದೆ. ಇನ್ನು ಲಾಕ್‌ಡೌನ್‌ನಿಂದಾಗಿ ಕೆಲ ಕಾಲ ಮೀನುಗಾರಿಕೆ ಸ್ಥಗಿತಗೊಂಡಿದ್ದು, ಇದರಿಂದ ಸೀಸನ್‌ನಲ್ಲೇ ಸಂಕಷ್ಟ ತಂದೊಡ್ಡಿತ್ತು. ಇದರೊಂದಿಗೆ ಅನ್ಯ ರಾಜ್ಯದವರ ಲೈಟ್‌ ಫಿಶಿಂಗ್‌ ಆತಂಕ, ಆಗಾಗ ಬರುವ ಹವಾಮಾನ ವೈಪರೀತ್ಯದಿಂದಾಗಿ ಈ ಋತು ನೀರಸವಾಗುತ್ತು ಎನ್ನುವುದು ಮೀನುಗಾರರ ಅಭಿಪ್ರಾಯ.

ವಾರ್ಷಿಕ ವಹಿವಾಟು
ಈ ವರ್ಷದಲ್ಲಿ ಕುಂದಾಪುರ ತಾಲೂಕಿನ ಗಂಗೊಳ್ಳಿ, ಮರವಂತೆ, ತ್ರಾಸಿ, ಕೊಡೇರಿ, ಉಪ್ಪುಂದ, ಮಡಿಕಲ್‌, ಶಿರೂರು ಮತ್ತಿತರ ಕಡೆಗಳಲ್ಲಿ ಒಟ್ಟು 18,675 ಮೆಟ್ರಿಕ್‌ ಟನ್‌ ಮೀನು ಸಂಗ್ರಹವಾಗಿದ್ದು, 29,855 ಲಕ್ಷ ರೂ. ವಾರ್ಷಿಕ ವಹಿವಾಟು ಆಗಿದೆ.

ಶುರುವಾಗಿಲ್ಲ
ಮೀನುಗಾರಿಕೆ ಬಂದರಿನ 2ನೇ ಹರಾಜು ಪ್ರಾಂಗಣದ ಜೆಟ್ಟಿ ಕುಸಿದು ವರ್ಷಗಳು ಕಳೆದರೂ, 12 ಕೋ.ರೂ. ಅನುದಾನ ಮಂಜೂರಾದರೂ ಕೂಡ ಈ ಮೀನುಗಾರಿಕೆ ಋತು ಮುಗಿಯುವುದರೊಳಗೆ ಕಾಮಗಾರಿ ಮಾತ್ರ ಆರಂಭಗೊಂಡಿಲ್ಲ. ಮುಂದಿನ ಮೀನುಗಾರಿಕೆ ಋತು ವಿನ ಆರಂಭದ ವೇಳೆ ಕಾಮಗಾರಿ ಶುರುವಾಗುವುದು ಅನುಮಾನ.

ನಿರಾಶಾದಾಯಕ
ಈ ವರ್ಷವಿಡೀ ಮೀನು ಗಾರರಿಗೆ ಅಷ್ಟೇನೂ ಆಶಾ ದಾಯಕವಾಗಿರಲಿಲ್ಲ. ಆದರೆ ಲಾಕ್‌ಡೌನ್‌ ಮುಗಿದ ಬಳಿಕದ 10-15 ದಿನಗಳ ಮೀನುಗಾರಿಕೆ ವಹಿವಾಟು ಉತ್ತಮವಾಗಿಯೇ ಇತ್ತು. ಇದಷ್ಟೇ ಮೀನುಗಾರರಿಗೆ ಸ್ವಲ್ಪ ಸಮಾಧಾನವೆನ್ನಬಹು. ಆದರೆ ಜನ ವರಿಯಿಂದ ಸಿಗಬೇಕಾದ ಡೀಸೆಲ್‌ ಸಬ್ಸಿಡಿ ಇನ್ನೂ ಸಿಕ್ಕಿಲ್ಲ. ನಮಗೆ ಸಹಾಯಧನವಂತೂ ಘೋಷಿಸಿಲ್ಲ. ಕನಿಷ್ಠ ನೀಡಬೇಕಿರುವ ಹಣವನ್ನಾದರೂ ಸರಿಯಾದ ಸಮಯಕ್ಕೆ ನೀಡಲಿ.
– ಬಸವ ಖಾರ್ವಿ, ಮೀನುಗಾರ

ಟಾಪ್ ನ್ಯೂಸ್

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

musk

Tesla; ಭಾರತದಲ್ಲಿ ಎಲಾನ್‌ ಮಸ್ಕ್ 25,000 ಕೋಟಿ ಹೂಡಿಕೆ?

voter

EVM ಯಾವ ಗುಂಡಿ ಒತ್ತಿದರೂ ಬಿಜೆಪಿಗೆ ಮತ: ಭಾರೀ ಚರ್ಚೆ

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

1-qwewqeqwe

Cerelac ಶಿಶು ಆಹಾರದಲ್ಲಿ ಹೆಚ್ಚುವರಿ ಸಕ್ಕರೆ ಬೆರೆತಿದೆ: ಗಂಭೀರ ಆರೋಪ

1-kudre

Horse riding ಎಚ್ಚರಿಕೆ: ಅಪಾಯಕಾರಿ ಗ್ಲ್ಯಾಂಡರ್ಸ್‌ ಸೋಂಕು ಅಂಟಿಕೊಂಡೀತು ಹುಷಾರು!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

accident

Bramavara; ಹೆದ್ದಾರಿಯಲ್ಲಿ ಭೀಕರ ಅಪಘಾತ: ಲಾರಿಗೆ ಸಿಲುಕಿ ಬೈಕ್ ಸವಾರ ದುರ್ಮರಣ

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

8

Malpe Beach: ಈಜಲು ಹೋದ ಮೂವರು ಸಮುದ್ರಪಾಲು; ಓರ್ವನ ಸಾವು, ಇಬ್ಬರ ರಕ್ಷಣೆ

1-wqeqwew

BJP ನುಡಿದಂತೆ ನಡೆಯದ ಕೇಂದ್ರ ಸರಕಾರ, 15 ಲ.ರೂ. ಬಂದಿದೆಯೇ?: ಜೆ.ಪಿ. ಹೆಗ್ಡೆ

4

ಕೋತಲಕಟ್ಟೆ: ಹೆದ್ದಾರಿ ಬಳಿ ನಿಲ್ಲಿಸಿದ್ದ ಸ್ಕೂಟಿ ಕಳವು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.