ವೈದ್ಯಕೀಯ ಕಾಲೇಜು ಸ್ಥಳಾಂತರ: ಡಿಕೆಶಿ ಒತ್ತಡಕ್ಕೆ ಮಣಿಯದಿರಲು ಸಂಪುಟದಲ್ಲಿ ಸಲಹೆ
Team Udayavani, Nov 1, 2019, 5:02 AM IST
ಬೆಂಗಳೂರು: ಕನಕಪುರಕ್ಕೆ ಮಂಜೂರಾಗಿದ್ದ ವೈದ್ಯಕೀಯ ಕಾಲೇಜು ಚಿಕ್ಕಬಳ್ಳಾಪುರಕ್ಕೆ ಸ್ಥಳಾಂತರಗೊಳಿಸುವ ವಿಷಯದಲ್ಲಿ ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಒತ್ತಡಕ್ಕೆ ಮಣಿಯದಂತೆ ಸಂಪುಟದಲ್ಲಿ ಕೆಲವು ಸಚಿವರು ಸಲಹೆ ನೀಡಿದ್ದಾರೆ ಎಂದು ತಿಳಿದು ಬಂದಿದೆ.
ಉಪ ಮುಖ್ಯಮಂತ್ರಿ ಡಾ| ಸಿ.ಎನ್.ಅಶ್ವತ್ಥ್ ನಾರಾಯಣ್ ಸಹಿತ ಹಲವು ಸಚಿವರು, ವೈದ್ಯಕೀಯ ಕಾಲೇಜು ಸ್ಥಳಾಂತರದ ಬಗ್ಗೆ ಮತ್ತೆ ನಿಲುವು ಬದಲಿಸುವುದು ಬೇಡ ಎಂದು ಮುಖ್ಯಮಂತ್ರಿ ಯವರಿಗೆ ತಿಳಿಸಿದರು.
ಇದಕ್ಕೆ ಸಿಎಂ ಯಡಿಯೂರಪ್ಪ ಅವರು ಸಹ ತಾಲೂಕಿಗೆ ಒಂದು ವೈದ್ಯಕೀಯ ಕಾಲೇಜು ಕೊಡಲು ಆಗುವುದಿಲ್ಲ. ಈಗಾಗಲೇ ರಾಮನಗರಕ್ಕೆ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾನಿಲಯ ಮಂಜೂರಾತಿ ಆಗಿದೆ ಎಂದು ಹೇಳಿದರು ಎನ್ನಲಾಗಿದೆ.
ಉಪ ಮುಖ್ಯಮಂತ್ರಿ ಡಾ|ಸಿ.ಎನ್.ಅಶ್ವತ್ಥ್ ನಾರಾಯಣ್ ಅವರು, ಡಿ.ಕೆ.ಶಿವಕುಮಾರ್ ಪ್ರತಿಭಟನೆ ಮಾಡಲಿ, ಉಪವಾಸ ಸತ್ಯಾಗ್ರಹ ಮಾಡಲಿ, ಯಾವುದೇ ಕಾರಣಕ್ಕೂ ಚಿಕ್ಕಬಳ್ಳಾಪುರಕ್ಕೆ ವೈದ್ಯಕೀಯ ಕಾಲೇಜು ಸ್ಥಳಾಂತರಿಸಿರುವ ನಿರ್ಧಾರದಿಂದ ಹಿಂದೆ ಸರಿಯವುದು ಬೇಡ ಎಂದು ಹೇಳಿದರು. ಇದಕ್ಕೆ ಹಲವು ಸಚಿವರು ಸಹಮತ ವ್ಯಕ್ತಪಡಿಸಿದರು ಎಂದು ತಿಳಿದು ಬಂದಿದೆ.
ಡಾ| ಸುಧಾಕರ್ ಬೇಡಿಕೆಗೆ ಒಪ್ಪಿಗೆ: ಮಂಚೇನಹಳ್ಳಿ ಹೊಸ ತಾಲೂಕು
ಅನರ್ಹಗೊಂಡಿರುವ ಶಾಸಕ ಡಾ| ಕೆ. ಸುಧಾಕರ್ ಅವರ ಬೇಡಿಕೆಯಾದ ಗೌರಿಬಿದನೂರು ತಾಲೂಕಿನ ಮಂಚೇನಹಳ್ಳಿ ಹೋಬಳಿಯನ್ನು ಪ್ರತ್ಯೇಕ ತಾಲೂಕು ಮಾಡಲು ರಾಜ್ಯ ಸಚಿವ ಸಂಪುಟ ಒಪ್ಪಿಗೆ ನೀಡಿದೆ. ಮಾಜಿ ಸಚಿವ ಶಿವಶಂಕರ ರೆಡ್ಡಿ ಅವರ ತೀವ್ರ ವಿರೋಧದ ಹೊರತಾಗಿಯೂ ಪ್ರತ್ಯೇಕ ತಾಲೂಕು ರಚನೆ ಸಂಬಂಧ ಸಂಪುಟದಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ. ಈ ಮೂಲಕ ಡಾ| ಸುಧಾಕರ್ ಅವರ ಎರಡೂ ಬೇಡಿಕೆಗಳು ಈಡೇರಿದಂತಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು
ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ
ಸಂಸದ ಡಿ.ಕೆ.ಸುರೇಶ್ ಆಸ್ತಿ ಮೌಲ್ಯ 593 ಕೋಟಿ ರೂ.!
Politics: ಸುಮಲತಾ – ನಾವು ಶಾಶ್ವತ ಶತ್ರುಗಳಲ್ಲ: ಕುಮಾರಸ್ವಾಮಿ
Bangaluru cafe ಸ್ಫೋಟದ ಸಂಚುಕೋರ ಎನ್ಐಎ ಬಲೆಗೆ: ಯಾರಿದು ಷರೀಫ್?
MUST WATCH
ಹೊಸ ಸೇರ್ಪಡೆ
LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ
Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ
Kannada Cinema; ಸ್ನೇಹಿತರ ಸುತ್ತ ‘ಪಾರ್ಟ್ನರ್’: ಟ್ರೇಲರ್, ಆಡಿಯೋದಲ್ಲಿ ಹೊಸಬರ ಚಿತ್ರ
Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್
ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು