Karnataka: ವಿಜ್ಞಾನ, ತಂತ್ರಜ್ಞಾನ ಇಲಾಖೆ ಅಧೀನ ಸಂಸ್ಥೆಗಳ ವಿಲೀನ?
ಪ್ರಸ್ತಾವನೆ ಸಿದ್ಧಪಡಿಸಲು ಅಧಿಕಾರಿಗಳಿಗೆ ಸೂಚನೆ
Team Udayavani, Nov 23, 2023, 11:13 PM IST
ಬೆಂಗಳೂರು: ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯಡಿ ಇರುವ ಸಂಸ್ಥೆಗಳನ್ನು ಆಡಳಿತಾತ್ಮಕ ಅನುಕೂಲತೆ ನಿಟ್ಟಿನಲ್ಲಿ ಒಗ್ಗೂಡಿಸುವ ಪ್ರಸ್ತಾವನೆ ಸಿದ್ಧಪಡಿಸು ವಂತೆ ಅಧಿಕಾರಿಗಳಿಗೆ ಇಲಾಖೆ ಸಚಿವ ಎನ್.ಎಸ್. ಬೋಸರಾಜು ಸೂಚಿಸಿದರು.
ವಿಕಾಸಸೌಧದಲ್ಲಿ ಗುರುವಾರ ಪ್ರಗತಿ ಪರಿಶೀಲನೆ ಸಭೆ ನಡೆಸಿದ ಅವರು, ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ಅಧೀನದಲ್ಲಿ ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಪ್ರೋತ್ಸಾಹಕ ಸೊಸೈಟಿ , ಕರ್ನಾಟಕ ರಾಜ್ಯ ವಿಜ್ಞಾನ ಮತ್ತು ತಂತ್ರ ವಿದ್ಯಾ ಮಂಡಳಿ (ಕೆಎಸ್ಸಿಎಸ್ಟಿ), ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿ(ಕೆಎಸ್ಟಿಎ)ಯಂತಹ ಅಧೀನ ಸಂಸ್ಥೆಗಳಿವೆ. ಈ ಸಂಸ್ಥೆಗಳ ಆಡಳಿತಾತ್ಮಕ ನಿರ್ವಹಣೆಯನ್ನು ಸುಗಮವಾಗಿ ನಿರ್ವಹಿಸುವ ನಿಟ್ಟಿನಲ್ಲಿ ಒಗ್ಗೂ ಡಿಸಬೇಕಾಗಿದೆ. ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ ಈ ಎಲ್ಲ ಅಧೀನ ಸಂಸ್ಥೆಗಳಿಗೆ ಅಗತ್ಯ ಅನುದಾನ ನೀಡುವ ಸಂಸ್ಥೆ ಯಾಗಿಯಷ್ಟೇ ಇರದೆ, ಆಡಳಿತಾತ್ಮಕವಾಗಿ ಹೆಚ್ಚಿನ ಅಭಿವೃದ್ಧಿ ತರುವ ನಿಟ್ಟಿನಲ್ಲಿ ಇದು ಅನಿವಾರ್ಯವಾಗಿದೆ. ಈ ನಿಟ್ಟಿನಲ್ಲಿ ಪ್ರಸ್ತಾವನೆ ಸಿದ್ಧಗೊಳಿಸುವಂತೆ ಆದೇಶಿಸಿದರು.
ವಿಜ್ಞಾನ ಕೇಂದ್ರ, ತಾರಾಲಯಗಳಿಗೆ ಏಕರೂಪದ ವಿನ್ಯಾಸ
ಕರ್ನಾಟಕ ರಿಸರ್ಚ್ ಫೌಂಡೇಷನ್ ಸ್ಥಾಪನೆಯ ನಿಟ್ಟಿನಲ್ಲಿ ಸದ್ಯದಲ್ಲೇ ಅಧಿಕೃತ ಆದೇಶ ಹೊರಡಿಸಲಾಗುವುದು. ರಾಜ್ಯದಲ್ಲಿ ಸ್ಥಾಪನೆಯಾಗುವ ವಿಜ್ಞಾನ ಕೇಂದ್ರಗಳು ಹಾಗೂ ತಾರಾಲಯಗಳಿಗೆ ಏಕರೂಪದ ವಿಸ್ತೃತ ಯೋಜನೆ (ಡಿಪಿಆರ್) ರೂಪಿಸಬೇಕು. ಹೊಸದಾಗಿ ನಿರ್ಮಾಣವಾಗುವ ಎಲ್ಲ ಕೇಂದ್ರಗಳಿಗೂ ಅದು ಅನ್ವಯವಾಗುವಂತಹ ಯೋಜನೆ ರೂಪಿಸುವಂತೆ ಸಚಿವರು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್
Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ
Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ
State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ
Shahapura: ಎರಡು ಕೆಟ್ಟ ಕಾನೂನು ಜಾರಿಗೆ ಕಾಂಗ್ರೆಸ್ ಸಿದ್ಧತೆ: ಯತ್ನಾಳ ಆರೋಪ