ಬಿಲ್‌ ಪಾವತಿಗೆ ಮೆಸ್ಕಾಂ ಸೂಚನೆ; 3 ತಿಂಗಳು ಅವಧಿ ವಿಸ್ತರಣೆ ಆದೇಶ ಬಂದಿಲ್ಲ


Team Udayavani, Apr 5, 2020, 12:58 PM IST

ಬಿಲ್‌ ಪಾವತಿಗೆ ಮೆಸ್ಕಾಂ ಸೂಚನೆ; 3 ತಿಂಗಳು ಅವಧಿ ವಿಸ್ತರಣೆ ಆದೇಶ ಬಂದಿಲ್ಲ

ಮಂಗಳೂರು: ವಿದ್ಯುತ್‌ ಗ್ರಾಹಕರು ಮೂರು ತಿಂಗಳ ಅವಧಿಗೆ (ಜೂನ್‌ 2020ರ ವರೆಗೆ) ಬಿಲ್‌ ಪಾವತಿಸುವುದನ್ನು ಮುಂದೂಡಲಾಗಿದೆ ಎಂದು ಕೆಲವು ಮಾಧ್ಯಮಗಳಲ್ಲಿ ವರದಿ ಪ್ರಕಟವಾಗಿದ್ದರೂ ಈ ವಿಷಯದ ಬಗ್ಗೆ ಕೇಂದ್ರ ಇಂಧನ ಸಚಿವಾಲಯದಿಂದ ರಾಜ್ಯ ಸರಕಾರ ಅಥವಾ ವಿದ್ಯುತ್‌ ಸರಬರಾಜು ಕಂಪೆನಿಗಳಿಗೆ ಯಾವುದೇ ನಿರ್ದೇಶನಗಳಿಲ್ಲ. ಆದ್ದರಿಂದ ಗ್ರಾಹಕರು ತಮ್ಮ ವಿದ್ಯುತ್‌ ಬಿಲ್‌ ಪಾವತಿಗೆ ಮುಂದಾಗಬೇಕು ಎಂದು ಮೆಸ್ಕಾಂ ಪ್ರಕಟನೆ ಮೂಲಕ ಮನವಿ ಮಾಡಿದೆ.

ಮಾಸಿಕ ಮಾಪಕ (ಮೀಟರ್‌) ಓದುವಿಕೆ ಹಾಗೂ ಬಿಲ್‌ ವಿತರಣೆಯನ್ನು ಯಾವ ರೀತಿಯಲ್ಲಿ ನಿರ್ವಹಿಸಬಹುದು ಎಂಬುದನ್ನೂ ವಿವರಿಸಿದೆ.
ಲಾಕ್‌ಡೌನ್‌ ಹಿನ್ನೆಲೆಯಲ್ಲಿ ಗ್ರಾಹಕರು ಮನೆಯಿಂದಲೇ ತಮ್ಮ ಕಚೇರಿ ಕೆಲಸಗಳನ್ನು ತೊಂದರೆ ಇಲ್ಲದೆ ನಿರ್ವಹಿಸಲು, ಅಡಚಣೆ ರಹಿತ ವಿದ್ಯುತ್‌ ನೀಡಲು 24x 7 ಮೆಸ್ಕಾಂ ಕಾರ್ಯನಿರ್ವಹಿಸುತ್ತಿದೆ. ಕೇಂದ್ರ ಹಾಗೂ ರಾಜ್ಯ ಸರಕಾರಗಳು ಕೋವಿಡ್‌-19 ಸೋಂಕು ಹರಡು
ವುದನ್ನು ತಡೆಗಟ್ಟಲು ವಿವಿಧ ಕ್ರಮಗಳನ್ನುಕೈಗೊಂಡಿವೆ. ಈ ಸಮಯದಲ್ಲಿ ಗ್ರಾಹಕರು ಮನೆಯಲ್ಲಿ ಸುರಕ್ಷಿತವಾಗಿರಲು ಹಾಗೂ ಆರೋಗ್ಯವಾಗರಲು ಮೆಸ್ಕಾಂ ಬಯಸುತ್ತದೆ ಎಂದು ಪ್ರಕಟನೆ ತಿಳಿಸಿದೆ.

ಎಲ್ಲ ವಿದ್ಯುತ್‌ ಗ್ರಾಹಕರಿಗೆ ಸರಾಸರಿ ಬಿಲ್‌ ಅಥವಾ ಹಿಂದಿನ ತಿಂಗಳ ಬಿಲ್‌ನೀಡುವ ವ್ಯವಸ್ಥೆ ಮಾಡಲಾಗುವುದು.

ಹಾಲಿ ತಂತ್ರಾಂಶದಲ್ಲಿರುವ ಗ್ರಾಹಕರಿಗೆ ವಿದ್ಯುತ್‌ ಬಿಲ್‌ ಅನ್ನು ಇ-ಮೇಲ್‌ /ಎಸ್‌.ಎಂಎಸ್‌. / ವಾಟ್ಸ್‌ಆ್ಯಪ್‌ ಮುಖಾಂತರ ಕಳುಹಿಸಲಾಗುವುದು.

ಗ್ರಾಹಕರು ಸಹಾಯವಾಣಿ 1912ಕ್ಕೆ ಕರೆ ಮಾಡಿ ಅಕೌಂಟ್‌ ಐ.ಡಿ. ಹಾಗೂ ಮೊಬೈಲ್‌ ಸಂಖ್ಯೆಯನ್ನು ನೀಡಿದಲ್ಲಿ ಬಿಲ್‌ ವಿವರಗಳನ್ನು ಇ-ಮೇಲ್‌ / ಎಸ್‌.ಎಂಎಸ್‌/ ವಾಟ್ಸ್‌ಆ್ಯಪ್‌ ಮುಖಾಂತರ ಕಳುಹಿಸಲಾಗುವುದು.

ಗ್ರಾಹಕರು ಮೆಸ್ಕಾಂನ ಜಾಲತಾಣ www.mesco.in ನಲ್ಲಿ ನೋಂದಾಯಿಸಿಕೊಂಡು ಬಿಲ್‌ ವಿವರಗಳನ್ನು ಪಡೆಯಬಹುದು.

ಸಂಬಂಧಪಟ್ಟ ಉಪವಿಭಾಗ ಕಚೇರಿಯನ್ನು ಸಂಪರ್ಕಿಸಿಯೂ ವಿದ್ಯುತ್‌ ಬಿಲ್‌ ವಿವರ ಪಡೆಯಬಹುದು. (ಉಪವಿಭಾಗದ ಸಂಪರ್ಕ ವಿವರಗಳು ಜಾಲತಾಣದಲ್ಲಿ ಲಭ್ಯವಿವೆ.)

ಪಾವತಿ ಅಸಾಧ್ಯವೆನಿಸಿದರೆ ತಿಳಿಸಿ
ಯಾವುದೇ ಗ್ರಾಹಕರಿಗೆ ಬಿಲ್‌ ಪಾವತಿಸಲು ಅನಿವಾರ್ಯ ಕಾರಣಗಳಿಂದ ಸಾಧ್ಯವಾಗದಿದ್ದಲ್ಲಿ ಅಂತಹ ಗ್ರಾಹಕರು ಸ್ಥಳೀಯ ಮೆಸ್ಕಾಂ ಉಪವಿಭಾಗಾಧಿಕಾರಿ ಗಳ ಕಚೇರಿಗೆ ಮನವಿ ಸಲ್ಲಿಸುವುದು; ಅಂತಹ ಅರ್ಜಿಗಳನ್ನು ಉಪವಿಭಾಗಾಧಿ ಕಾರಿಗಳ ಕಚೇರಿಗಳಲ್ಲಿ ಆದ್ಯತೆ ಮೇರೆಗೆ ಪರಿಗಣಿಸಲು ಸೂಚಿಸಲಾಗಿದೆ.

ಮೇ 1ರಿಂದ ಯಥಾ ಪ್ರಕಾರ ಮಾಪಕ ಓದುವಿಕೆ, ಬಿಲ್‌ ಹಂಚುವಿಕೆ ಹಾಗೂ ಬಿಲ್‌ ಸ್ವೀಕೃತಿ ಚಟುವಟಿಕೆಗಳನ್ನು ನಿರ್ವಹಿಸಲಾಗುವುದು ಮತ್ತು ವಾಸ್ತವಿಕ ಬಳಕೆಯಲ್ಲಿ ಹಾಗೂ ಸರಾಸರಿ ಬಳಕೆಯಲ್ಲಿ ತಪ್ಪು/ ವ್ಯತ್ಯಾಸ ಕಂಡುಬಂದಲ್ಲಿ ಮುಂದಿನ ತಿಂಗಳ ಬಿಲ್‌ನಲ್ಲಿ ಸರಿಪಡಿಸಲಾಗುವುದು ಎಂದು ಮೆಸ್ಕಾಂ ಪ್ರಕಟನೆ ವಿವರಿಸಿದೆ.

ಬಿಲ್‌ ಪಾವತಿ ವಿಧಾನ
ನಗರ ಪ್ರದೇಶದ ಗ್ರಾಹಕರು
www.mescom.org.in ಜಾಲತಾಣದಲ್ಲಿ ಲಾಗ್‌ಇನ್‌ ಆಗಿ ಬಿಲ್‌ ವೀಕ್ಷಿಸಿ ಮತ್ತು ಕ್ರೆಡಿಟ್‌ ಕಾರ್ಡ್‌ / ಡೆಬಿಟ್‌ ಕಾರ್ಡ್‌ / ಇಂಟರ್‌ನೆಟ್‌ ಬ್ಯಾಂಕಿಂಗ್‌ ಹಾಗೂ ಯುಪಿಐ ಸೌಲಭ್ಯಗಳೊಂದಿಗೆ ಮೊತ್ತ ಪಾವತಿಸಬಹುದು. ((Quick payment ಆಯ್ಕೆಯನ್ನು ಮಾಡಿ ಗ್ರಾಹಕರು ರಿಜಿಸ್ಟರ್‌ ಮಾಡಿಕೊಳ್ಳದೆಯೂ ಪಾವತಿಸಬಹುದು.)

ಪೇ-ಟಿಎಂ ಇಲ್ಲವೇ ಕರ್ನಾಟಕ ಮೊಬೈಲ್‌ ಒನ್‌ ಆಪ್‌ ಅಪ್ಲಿಕೇಷನ್‌ನಲ್ಲಿ ಕ್ರೆಡಿಟ್‌ ಕಾರ್ಡ್‌ / ಡೆಬಿಟ್‌ ಕಾರ್ಡ್‌ / ಇಂಟರ್‌ನೆಟ್‌ ಬ್ಯಾಂಕಿಂಗ್‌ ಮೂಲಕವೂ ಬಿಲ್‌ ಪಾವತಿಸಬಹುದಾಗಿದೆ.

http://www.karnatakaone.gov.in/ ಜಾಲತಾಣದಲ್ಲೂ ಪಾವತಿಸಬಹುದು.

ಗ್ರಾಮೀಣ ಗ್ರಾಹಕರಿಗೆ
ಗ್ರಾಮೀಣ ಪ್ರದೇಶದ ಗ್ರಾಹಕರು (ಮೇಲೆ ತಿಳಿಸಿದ ಆರ್‌ಎಪಿಡಿಆರ್‌ಪಿ ವ್ಯಾಪ್ತಿಯ ಗ್ರಾಹಕರನ್ನು ಹೊರತುಪಡಿಸಿ)
www.mescomtrm.com ಜಾಲತಾಣದಲ್ಲಿ ಲಾಗ್‌ಇನ್‌ ಆಗಿ ಬಿಲ್‌ ವೀಕ್ಷಿಸಿ ಪಾವತಿಸಬಹುದು. (Quick pay ಆಯ್ಕೆಯನ್ನು ಮಾಡಿ ಗ್ರಾಹಕರು ರಿಜಿಸ್ಟರ್‌ ಮಾಡಿಕೊಳ್ಳದೆಯೂ ಪಾವತಿಸಬಹುದು.)

ಅದಲ್ಲದೆ ಉಪವಿಭಾಗದ ನಗದು ಕೌಂಟರ್‌ಗಳು ಎಲ್ಲ ಸುರಕ್ಷಾ ಮುನ್ನೆಚ್ಚರಿಕೆಗಳೊಂದಿಗೆ ಕಾರ್ಯನಿರ್ವಹಿಸಲಿವೆ ಎಂದು ಮೆಸ್ಕಾಂ ಪ್ರಕಟನೆ ತಿಳಿಸಿದೆ.

ಟಾಪ್ ನ್ಯೂಸ್

prahlad-joshi

Neha ಹತ್ಯೆ ಲವ್ ಜಿಹಾದ್ ಅಲ್ಲ ಅನ್ನೋಕೆ ಇವರ್ಯಾರು?: ಸಚಿವ ಜೋಶಿ

1-asasa

PM ಮೋದಿ ಸಾಗುತ್ತಿದ್ದ ವೇಳೆ ‘ಚೊಂಬು’ ತೋರಿಸಲೆತ್ನಿಸಿದ ಮೊಹಮ್ಮದ್ ನಲಪಾಡ್

1-wewqeqwe

Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

1-qeweqwe

Love Jihad ಹೆಸರಲ್ಲಿ ಒಂದು ಗುಂಪಿಗೆ ತರಬೇತಿ: ಜಗದೀಶ್ ಶೆಟ್ಟರ್ ಗಂಭೀರ ಆರೋಪ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12-mng

Neha ಹತ್ಯೆ ಪ್ರಕರಣ; ಎನ್‌ಐಎ ತನಿಖೆ; ಮಹಿಳೆಯರು ಕಿರುಕತ್ತಿ ಹೊಂದಲು ಅವಕಾಶ:ವಿಎಚ್‌ಪಿ ಆಗ್ರಹ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

Mangaluru ಪೆಟ್ರೋಲ್‌, ಡೀಸೆಲ್‌ ತುಟ್ಟಿ : ಪುಷ್ಪಾ ಅಮರನಾಥ್‌

Mangaluru ಪೆಟ್ರೋಲ್‌, ಡೀಸೆಲ್‌ ತುಟ್ಟಿ : ಪುಷ್ಪಾ ಅಮರನಾಥ್‌

1-aaa

Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

prahlad-joshi

Neha ಹತ್ಯೆ ಲವ್ ಜಿಹಾದ್ ಅಲ್ಲ ಅನ್ನೋಕೆ ಇವರ್ಯಾರು?: ಸಚಿವ ಜೋಶಿ

1-sdssd

Dharwad; ಚುನಾವಣೆ ಕರ್ತವ್ಯದಲ್ಲಿದ್ದ ಸೆಕ್ಟರ್ ಅಧಿಕಾರಿ ಹೃದಯಾಘಾತದಿಂದ ಸಾವು

1-asasa

PM ಮೋದಿ ಸಾಗುತ್ತಿದ್ದ ವೇಳೆ ‘ಚೊಂಬು’ ತೋರಿಸಲೆತ್ನಿಸಿದ ಮೊಹಮ್ಮದ್ ನಲಪಾಡ್

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

1-aaaa

Udupi: ನಿಟ್ಟೂರಿನಲ್ಲಿ ಬಸ್ ಢಿಕ್ಕಿಯಾಗಿ ಬೈಕ್ ಸವಾರ ದಾರುಣ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.