ತವರಿಗೆ ತೆರಳಿದ ಉತ್ತರ ಪ್ರದೇಶದ ವಲಸೆ ಕಾರ್ಮಿಕರು

ಪುತ್ತೂರು ಉಪ ವಿಭಾಗದಿಂದ 1,520 ಮಂದಿ ಕಾರ್ಮಿಕರು

Team Udayavani, May 17, 2020, 5:30 AM IST

ತವರಿಗೆ ತೆರಳಿದ ಉತ್ತರ ಪ್ರದೇಶದ ವಲಸೆ ಕಾರ್ಮಿಕರು

ಪುತ್ತೂರು: ದ.ಕ. ಜಿಲ್ಲೆಯ ಪುತ್ತೂರು ಉಪ ವಿಭಾಗದಿಂದ ಶನಿವಾರ 1,520 ಮಂದಿ ಉತ್ತರ ಭಾರತ ಕಾರ್ಮಿಕರು ತಮ್ಮ ಸ್ವಂತ ಊರಿಗೆ ಶ್ರಮಿಕ ರೈಲಿನಲ್ಲಿ ತೆರಳಿದರು.

ಕಳೆದ ಮಾ. 12ರಂದು ಬಿಹಾರದ 1,428 ಮಂದಿ ತಮ್ಮೂರಿಗೆ ತೆರಳಿದ್ದರು. ಇದೀಗ ಪುತ್ತೂರು ಉಪ ವಿಭಾಗದಿಂದ ಒಟ್ಟು 2,948 ಮಂದಿ ಬಿಹಾರ ಹಾಗೂ ಉತ್ತರ ಪ್ರದೇಶದ ವಲಸೆ ಕಾರ್ಮಿಕರು ಜಿಲ್ಲೆಯಿಂದ ತವರಿಗೆ ತೆರಳಿದ್ದಾರೆ.

ಅಡಿಷನಲ್‌ ಎಸ್ಪಿ ವಿಕ್ರಂ ಅಮ್ಟೆ, ಪುತ್ತೂರು ಉಪ ವಿಭಾಗಾಧಿಕಾರಿ ಯತೀಶ್‌ ಉಳ್ಳಾಲ, ಡಿವೈಎಸ್ಪಿ ದಿನಕರ್‌ ಶೆಟ್ಟಿ, ಪುತ್ತೂರು ತಹಶೀಲ್ದಾರ್‌ ರಮೇಶ್‌ ಬಾಬು, ಬೆಳ್ತಂಗಡಿ ತಹಶೀಲ್ದಾರ್‌ ಗಣಪತಿ ಶಾಸ್ತ್ರೀ, ಕಡಬ ತಹಶೀಲ್ದಾರ್‌ ಜಾನ್‌ಪ್ರಕಾಶ್‌, ಅನಂತ ಶಂಕರ ಸುಳ್ಯ ಜತೆ ಕಂದಾಯ ಇಲಾಖೆ ಸಿಬಂದಿ, ಕೆಎಸ್ಸಾರ್ಟಿಸಿ ಅಧಿಕಾರಿಗಳು, ರೈಲ್ವೇ ಅಧಿಕಾರಿಗಳು, ಪೊಲೀಸ್‌ ಸಿಬಂದಿ ಸಹಕಾರದಲ್ಲಿ ಕಾರ್ಮಿಕರನ್ನು ಸ್ಕ್ರೀನಿಂಗ್‌ ಹಾಗೂ ವೈದ್ಯಕೀಯ ಪರಿಶೀಲನೆ ನಡೆಸಿ ಕಳುಹಿಸಿಕೊಡಲಾಯಿತು.

ಪುತ್ತೂರು ಉಪವಿಭಾಗದ ಬೆಳ್ತಂಗಡಿ, ಸುಳ್ಯ, ಸುಬ್ರಹ್ಮಣ್ಯ, ಕಡಬ, ಬಂಟ್ವಾಳ ಭಾಗಗಳಿಂದ 42 ಕೆಎಸ್ಸಾರ್ಟಿಸಿ ಬಸ್‌ಗಳಲ್ಲಿ ಬಂದ ಈ ವಲಸೆ ಕಾರ್ಮಿಕರನ್ನು ಪುತ್ತೂರು ಮಹಾಲಿಂಗೇಶ್ವರ ದೇಗುಲದ ದೇವರ ಮಾರುಗದ್ದೆಯಲ್ಲಿ ಒಟ್ಟು ಸೇರಿಸಿ ಅಲ್ಲಿಂದ ಅದೇ ಬಸ್‌ ಮೂಲಕ ರೈಲ್ವೇ ಸ್ಟೇಶನ್‌ಗೆ ಕರೆತರಲಾಯಿತು.

ಅನಂತರ ಮೂರು ಗಂಟೆಗೆ ಶ್ರಮಿಕ ರೈಲಿನಲ್ಲಿ ಅವರನ್ನು ಉತ್ತರ ಪ್ರದೇಶಕ್ಕೆ ಕಳುಹಿಸಿ ಕೊಡಲಾಯಿತು.

ವಲಸೆ ಕಾರ್ಮಿಕರಿಗೆ ಕುಕ್ಕೆ ಸುಬ್ರಹ್ಮಣ್ಯ ದೇಗುಲ ಮತ್ತು ಪುತ್ತೂರು ಮಹಾಲಿಂಗೇಶ್ವರ ದೇಗುಲದ ವತಿಯಿಂದ ಊಟ, ಕಿಟ್‌ ಹಾಗೂ ಕುಡಿಯುವ ನೀರಿನ ವ್ಯವಸ್ಥೆ ಮಾಡಲಾಯಿತು. ಪುತ್ತೂರು ಕಬಕ ರೈಲ್ವೇ ನಿಲ್ದಾಣದಿಂದ ಹೊರಟ ಶ್ರಮಿಕ ರೈಲು ಅರಸೀಕೆರೆ, ಗುಂಟಕಲ್‌, ನಾಗಪುರ, ಝಾನ್ಸಿ, ಲಕ್ನೋ ಮೂಲಕ ಸುಮಾರು 52 ಗಂಟೆಗಳಲ್ಲಿ ಉತ್ತರ ಪ್ರದೇಶ ಸೇರಲಿದೆ ಎಂದು ನೈಋತ್ಯ ರೈಲ್ವೇ ಮೈಸೂರು ವಿಭಾಗದ ಹಿರಿಯ ಟಿಕೇಟ್‌ ನಿರೀಕ್ಷಕ ವಿಟuಲ್‌ ನಾಯಕ್‌ ಮಾಹಿತಿ ನೀಡಿದ್ದಾರೆ.

ಕಾಸರಗೋಡು: 1,462 ಕಾರ್ಮಿಕರು ತವರಿಗೆ
ಕಾಸರಗೋಡು: ಜಿಲ್ಲೆಯಿಂದ 1,462 ಮಂದಿ ಉತ್ತರ ಭಾರತದ ವಲಸೆ ಕಾರ್ಮಿಕರನ್ನು ಕಾಂಞಂಗಾಡ್‌ ರೈಲು ನಿಲ್ದಾಣದಿಂದ ತವರಿಗೆ ಕಳುಹಿಸಿ ಕೊಡಲಾಯಿತು. ಪಂಚಾಯತ್‌ ಇಲಾಖೆಯ ಸಹಾಯಕ ನಿರ್ದೇಶಕ ಕೆ.ಕೆ.ರೆಜಿ ಕುಮಾರ್‌ ರೈಲು ಪ್ರಯಾಣಕ್ಕೆ ಹಸುರು ನಿಶಾನೆ ತೋರಿ ದರು. ಜಿಲ್ಲಾಧಿಕಾರಿ ಡಾ|ಡಿ.ಸಜಿತ್‌ ಬಾಬು,ಉಪ ಜಿಲ್ಲಾಧಿಕಾರಿ ಅರುಣ್‌ ಕೆ. ವಿಜಯನ್‌ ಉಪಸ್ಥಿತರಿದ್ದರು.

ಬಂಟ್ವಾಳದಿಂದ 327ಮಂದಿ
ಬಂಟ್ವಾಳ: ತಾಲೂಕಿನ ವಿವಿಧ ಭಾಗಗಳಿಗೆ ಕೂಲಿ ಕೆಲಸಕ್ಕಾಗಿ ಆಗಮಿಸಿದ ಉತ್ತರ ಪ್ರದೇಶದ ವಲಸೆ ಕಾರ್ಮಿಕರನ್ನು ಶನಿವಾರ ಊರಿಗೆ ಕಳುಹಿಸುವ ಉದ್ದೇಶ ದಿಂದ ಪುತ್ತೂರು ರೈಲ್ವೇ ನಿಲ್ದಾಣಕ್ಕೆ ಕಳುಹಿಸಿಕೊಡಲಾಯಿತು. ಮರಳು ತೆಗೆಯುವ ಕೆಲಸ ಸಹಿತ ಇತರ ಕೆಲಸ ನಿರ್ವಹಿಸುತ್ತಿದ್ದ ಒಟ್ಟು 327 ಕಾರ್ಮಿಕರನ್ನು 9 ಕೆಎಸ್ಸಾರ್ಟಿಸಿ ಬಸ್‌ಗಳ ಮೂಲಕ ಕಳುಹಿಸಿ ಕೊಡಲಾಯಿತು. ತಾಲೂಕಿನ ಬರಿಮಾರು, ಕರಿಯಂಗಳ ಪ್ರದೇಶದಲ್ಲಿ ಕಾರ್ಮಿಕರು ನೆಲೆಸಿದ್ದು, ಅಲ್ಲಿಗೆ ತೆರಳಿ ಆರೋಗ್ಯ ತಪಾಸಣೆಯ ಅನಂತರ ಕಳುಹಿಸಿಕೊಡಲಾಯಿತು.

ಬಂಟ್ವಾಳ ತಹಶೀಲ್ದಾರ್‌ ರಶ್ಮೀ ಎಸ್‌.ಆರ್‌., ತಾ.ಪಂ. ಕಾರ್ಯ ನಿರ್ವಹಣಾಧಿಕಾರಿ ರಾಜಣ್ಣ ಅವರ ನಿರ್ದೇಶನದಂತೆ ಸ್ಥಳೀಯ ಗ್ರಾ.ಪಂ.ಗಳು ಕಾರ್ಮಿಕರ ಮಾಹಿತಿ ಸಂಗ್ರಹಿಸಿದ್ದರು. ಕಾರ್ಮಿಕರನ್ನು ಊರಿಗೆ ಕಳುಹಿಸುವ ಸಂದರ್ಭದಲ್ಲಿ ಶಿರಸ್ತೇದಾರ್‌ ರಾಜೇಶ್‌ ನಾಯ್ಕ, ಗ್ರಾಮ ಲೆಕ್ಕಾಧಿಕಾರಿಗಳು, ಗ್ರಾಮ ಸಹಾಯಕರು, ಸ್ಥಳೀಯ ಗ್ರಾ.ಪಂ.ನವರು, ಪೊಲೀಸ್‌ ಇಲಾಖೆಯವರು ಉಪಸ್ಥಿತರಿದ್ದರು.

307 ಮಂದಿ ಪುತ್ತೂರಿಗೆ
ಬೆಳ್ತಂಗಡಿ: ತಾಲೂಕಿನಿಂದ 9 ಬಸ್‌ಗಳ ಮೂಲಕ 307 ಮಂದಿ ಯುಪಿಯ ವಲಸೆ ಕಾರ್ಮಿಕರನ್ನು ಪುತ್ತೂರಿಗೆ ಕಳುಹಿಸಿಕೊಡಲಾಯಿತು. ಪುತ್ತೂರಿನಿಂದ ಉತ್ತರ ಪ್ರದೇಶಕ್ಕೆ ಪ್ರಯಾಣ ಬೆಳೆಸಲಿದ್ದಾರೆ.

ಟಾಪ್ ನ್ಯೂಸ್

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

Kundapur: ಕುಸಿದು ಬಿದ್ದು ಸಾವು

Kundapur: ಕುಸಿದು ಬಿದ್ದು ಸಾವು

Electric shock: ಯುವಕನ ಸಾವು

Electric shock: ಯುವಕನ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.