ಸಂತ್ರಸ್ತರ ಅಂತರ್‌ ಜಿಲ್ಲಾ ಪ್ರಯಾಣ, ಒಂದೆರಡು ದಿನಗಳ‌ಲ್ಲಿ ತೀರ್ಮಾನ: ಸಚಿವ ಕೋಟ


Team Udayavani, Apr 30, 2020, 1:11 PM IST

ಸಂತ್ರಸ್ತರ ಅಂತರ್‌ ಜಿಲ್ಲಾ ಪ್ರಯಾಣ, ಒಂದೆರಡು ದಿನಗಳ‌ಲ್ಲಿ ತೀರ್ಮಾನ: ಸಚಿವ ಕೋಟ

ಮಂಗಳೂರು: ಲಾಕ್‌ಡೌನ್‌ನಿಂದಾಗಿ ತಮ್ಮ ಕುಟುಂಬ ಸೇರಲಾಗದೆ ಬಾಕಿಯಾಗಿರುವ ಕಾರ್ಮಿಕರ ಅಂತರ್‌ ಜಿಲ್ಲಾ ಪ್ರಯಾಣಕ್ಕೆ ಅನುಮತಿ ನೀಡುವ ಸಂಬಂಧ ಒಂದೆರಡು ದಿನಗಳಲ್ಲಿ ನಿರ್ಧಾರ ಕೈಗೊಳ್ಳಲಾಗುವುದು ಎಂದು ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದರು.

ಬುಧವಾರ ದ.ಕ. ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಕೋವಿಡ್‌ ಮುಂಜಾಗೃತ ಕ್ರಮಗಳ ಬಗ್ಗೆ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

4,000 ಮಂದಿ ನಿರ್ಗಮನ
ಮೊದಲ ಹಂತದಲ್ಲಿ ವಲಸೆ ಕಾರ್ಮಿಕರಿಗೆ ತಮ್ಮ ಗ್ರಾಮಗಳಲ್ಲಿ ಕೃಷಿ ಕಾರ್ಯ ಕೈಗೊಳ್ಳಲು ಅಥವಾ ತಮ್ಮ ಕೆಲಸದ ಸ್ಥಳಗಳಿಗೆ ತಲುಪುವ ಸಲುವಾಗಿ ಅವರನ್ನು ಸ್ವಗ್ರಾಮಗಳಿಗೆ ತಲುಪಿಸಲು ರಾಜ್ಯ ಸರಕಾರ ಅನುಮತಿ ನೀಡಿದೆ. ಇದರಂತೆ ದ.ಕ. ಜಿಲ್ಲೆಯ ಎಲ್ಲ ತಾಲೂಕು ಕೇಂದ್ರಗಳಿಂದಲೂ ವಲಸೆ ಕಾರ್ಮಿಕರು ತೆರಳಲು ಜಿಲ್ಲಾಡಳಿತ ಕ್ರಮ ಕೈಗೊಂಡಿದೆ. ಈಗಾಗಲೇ ಮಂಗಳೂರು ಹೊರತುಪಡಿಸಿ ಉಳಿದ ತಾಲೂಕುಗಳಿಂದ ವಲಸೆ ಕಾರ್ಮಿಕರನ್ನು ಕಳುಹಿಸುವ ಪ್ರಕ್ರಿಯೆ ಪೂರ್ಣ ಗೊಂಡಿದೆ. ಸುಮಾರು 4,000 ಮಂದಿ ಈಗಾಗಲೇ ತೆರಳಿದ್ದಾರೆ. ಮಂಗಳೂರು ಮಹಾನಗರ ವ್ಯಾಪ್ತಿಯಲ್ಲಿ ಇನ್ನು 3-4 ದಿನಗಳೊಳಗೆ ಇದು ಪೂರ್ಣಗೊಳ್ಳಲಿದೆ ಎಂದರು.

ವಿದೇಶದಲ್ಲಿರುವ ಜಿಲ್ಲೆಯ ನಾಗರಿಕರನ್ನು ಇಲ್ಲಿಗೆ ಕರೆತರುವ ಬಗ್ಗೆ ಮಾಹಿತಿ ಇದ್ದು, ಈ ಬಗ್ಗೆ ಎಲ್ಲ ಸಿದ್ಧತೆಗಳನ್ನು ನಡೆಸಲಾಗುವುದು ಎಂದು ಜಿಲ್ಲಾಧಿಕಾರಿ ಹೇಳಿದರು.

ಸಂಸದ ನಳಿನ್‌ಕುಮಾರ್‌ ಕಟೀಲು, ಜಿ.ಪಂ.. ಅಧ್ಯಕ್ಷೆ ಮೀನಾಕ್ಷಿ ಶಾಂತಿ ಗೋಡು, ಶಾಸಕರಾದ ಯು.ಟಿ. ಖಾದರ್‌, ಎಸ್‌. ಅಂಗಾರ, ವೇದವ್ಯಾಸ ಕಾಮತ್‌, ಡಾ| ಭರತ್‌ ಶೆಟ್ಟಿ, ಹರೀಶ್‌ ಪೂಂಜ, ಹರೀಶ್‌ ಕುಮಾರ್‌, ಐವನ್‌ ಡಿ’ಸೋಜಾ, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ವಿ. ಪೊನ್ನುರಾಜ್‌, ಜಿಲ್ಲಾಧಿಕಾರಿ ಸಿಂಧೂ ಬಿ. ರೂಪೇಶ್‌, ಪೊಲೀಸ್‌ ಆಯುಕ್ತ ಡಾ| ಪಿ.ಎಸ್‌. ಹರ್ಷ ಉಪಸ್ಥಿತರಿದ್ದರು.

ಶಾಸಕರ ಮಧ್ಯೆ ಮಾತಿನ ಚಕಮಕಿ
” ಕೋವಿಡ್ ದಿಂದ ಮೃತಪಟ್ಟವರ ಅಂತ್ಯಕ್ರಿಯೆ ನಡೆಸಲು ಜನಪ್ರತಿನಿಧಿಗಳೇ ವಿರೋಧ ಮಾಡುತ್ತಿರುವುದು ಸರಿಯಾದ ನಿರ್ಧಾರವಲ್ಲ’ ಎಂದು ಶಾಸಕ ಯು.ಟಿ. ಖಾದರ್‌ ಹೇಳಿದರು. ಆಗ ಶಾಸಕ ವೇದವ್ಯಾಸ್‌ ಕಾಮತ್‌ “ಲಾಕ್‌ಡೌನ್‌ ಜಾರಿಯಲ್ಲಿದ್ದರೂ ನಿಯಮ ಉಲ್ಲಂಘಿಸಿ ಖಾದರ್‌ ಅವರು ಬೇರೆ ಜಿಲ್ಲೆಯಲ್ಲಿದ್ದವರನ್ನು ಕಾರಲ್ಲಿ ಕರೆದುಕೊಂಡು ಬರುತ್ತಿರುವುದು ಸರಿಯಾದ ನಿರ್ಧಾರವೇ?’ ಎಂದು ಪ್ರಶ್ನಿಸಿದರು. ಅದಕ್ಕೆ ಖಾದರ್‌, “ಬೇರೆ ಜಿಲ್ಲೆಯಲ್ಲಿ ಬಾಕಿಯಾದವರನ್ನು ಮಾನವೀಯ ದೃಷ್ಟಿಯಿಂದ ಕರೆ ತಂದಿರಬಹುದು. ಇದರಲ್ಲಿ ರಾಜಕೀಯ ಇಲ್ಲ’ ಎಂದರು.

ಯು.ಟಿ. ಖಾದರ್‌ ಅವರನ್ನು ಬೆಂಬಲಿಸಿದ ಐವನ್‌ ಡಿ’ಸೋಜಾ, “ಲಾಕ್‌ಡೌನ್‌ ಮಧ್ಯೆ ಜಲ್ಲಿ, ಕಲ್ಲು ಸಾಗಾಟದ ಲಾರಿಗೆ ಅನುಮತಿ ನೀಡುವಂತೆ ಶಾಸಕರೊಬ್ಬರು ಪತ್ರ ನೀಡಿರುವುದು ಎಷ್ಟು ಸರಿ?’ ಎಂದು ಪ್ರಶ್ನಿಸಿ ದರು. ಈ ರೀತಿಯಾಗಿ ಬಿಜೆಪಿ- ಕಾಂಗ್ರೆಸ್‌ ಶಾಸಕರ ಮಧ್ಯೆ ಕೆಲವೊಂದು ವಿಚಾರವಾಗಿ ಆರೋಪ – ಪ್ರತ್ಯಾ ರೋಪಗಳು ನಡೆದವು.

ಬೋಳೂರಿನಲ್ಲಿ ಅಂತ್ಯಸಂಸ್ಕಾರ
ಕೋವಿಡ್‌ನಿಂದ ಮೃತಪಟ್ಟವರನ್ನು ಮಂಗಳೂರಿನ ಬೋಳೂರು ವಿದ್ಯುತ್‌ ಚಿತಾಗಾರದಲ್ಲಿ ಅಂತ್ಯಸಂಸ್ಕಾರ ನಡೆಸಲು ನಿರ್ಧರಿಸಲಾಗಿದೆ. ಈ ಬಗ್ಗೆ ಯಾವುದೇ ಗೊಂದಲ ಬೇಡ. ಸಾಮಾನ್ಯ ರೋಗಿಗಳಿಗೆ ಕ್ಲಿನಿಕ್‌, ಆಸ್ಪತ್ರೆ, ನರ್ಸಿಂಗ್‌ ಹೋಂಗಳಲ್ಲಿ ಯಾವ ರೀತಿ ಚಿಕಿತ್ಸೆ ನೀಡಬೇಕು ಎಂಬ ಬಗ್ಗೆ ಸರಕಾರ ಮಾರ್ಗದರ್ಶನ ಕಳುಹಿಸಲಿದೆ ಎಂದು ಸಚಿವ ಶ್ರೀನಿವಾಸ ಪೂಜಾರಿ ತಿಳಿಸಿದರು.

ಟಾಪ್ ನ್ಯೂಸ್

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

Minchu

Bidar; ಬಿರುಗಾಳಿ‌ ಸಹಿತ ಭಾರಿ ಮಳೆ :ಸಿಡಿಲು ಬಡಿದು‌ ರೈತ ಸಾವು

1-wewqewqe

Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

1-qweqwewq

Congress;ಕಾರ್ಕಳ ಕ್ಷೇತ್ರದಿಂದ 40 ಸಾವಿರ ಲೀಡ್ ಗೆ ಪ್ರಯತ್ನ: ಮುನಿಯಾಲು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

Minchu

Bidar; ಬಿರುಗಾಳಿ‌ ಸಹಿತ ಭಾರಿ ಮಳೆ :ಸಿಡಿಲು ಬಡಿದು‌ ರೈತ ಸಾವು

1-wewqewqe

Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

1-qweqwewq

Congress;ಕಾರ್ಕಳ ಕ್ಷೇತ್ರದಿಂದ 40 ಸಾವಿರ ಲೀಡ್ ಗೆ ಪ್ರಯತ್ನ: ಮುನಿಯಾಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.