ಪರಿಸ್ಥಿತಿ ಕೈ ಮೀರುತ್ತಿದೆ, ಲಾಕ್ ಡೌನ್ ಅನಿವಾರ್ಯ: ಸಚಿವ ಬಿ.ಸಿ. ಪಾಟೀಲ್
Team Udayavani, May 7, 2021, 4:49 PM IST
ಕುಷ್ಟಗಿ: ಜನತಾ ಕರ್ಪ್ಯೂ ಪರಿಣಾಮಕಾರಿಯಾಗದ ಹಿನ್ನೆಲೆಯಲ್ಲಿ ಪರಿಸ್ಥಿತಿ ಕೈ ಮೀರಿ ಹೋಗುತ್ತಿದ್ದು, ಲಾಕಡೌನ್ ಅನಿವಾರ್ಯವಾಗಿದೆ ಎಂದು ಕೃಷಿ ಸಚಿವ ಬಿ.ಸಿ. ಪಾಟೀಲ ಹೇಳಿದರು.
ಕುಷ್ಟಗಿ ತಾಲೂಕಾ ಸರ್ಕಾರಿ ಆಸ್ಪತ್ರೆಯ ಕೋವಿಡ್ ಕೇರ್ ಸೆಂಟರ್ ಗೆ ಭೇಟಿ ನೀಡಿ ಪರಿಶೀಲಿಸಿದ ಅವರು ಸುದ್ದಿಗಾರರೊಂದಿಗೆ ಮಾತನಾಡಿ, ದಿನೇ ದಿನೇ ಕೊರೊನಾ ವೈರಸ್ ಉಲ್ಬಣಿಸುತ್ತಿದ್ದು ಲಾಕ್ ಡೌನ್ ಅನಿವಾರ್ಯಎನ್ನುವುದು ನನ್ನ ಅನಿಸಿಕೆ ಎಂದರು.
ಕುಷ್ಟಗಿಯ ಡೆಡಿಕೇಟ್ ಕೋವಿಡ್ ಕೇರ್ ಸೆಂಟರ್ ನಲ್ಲಿ 42 ಬೆಡ್ ಇದ್ದು 36 ರೋಗಿಗಳು ದಾಖಲಾಗಿದ್ದು, ಸದ್ಯ ಇನ್ನು 6 ಬೆಡ್ ಖಾಲಿ ಇವೆ. ಇಲ್ಲಿಯೇ ಇನ್ನು 20 ಬೆಡ್ ವಿಸ್ತರಿಸಲಾಗುತ್ತಿದೆ. ಅಲ್ಲದೇ ಕುಷ್ಟಗಿ ವಿದ್ಯಾರ್ಥಿ ನಿಲಯಗಳಲ್ಲಿ 150 ಬೆಡ್, ತಾವರಗೇರಾದಲ್ಲಿ 30 ಬೆಡ್ ವ್ಯವಸ್ಥೆ ಮಾಡಲಾಗಿದೆ. ಕುಷ್ಟಗಿ ತಾಲೂಕಾ ಆಸ್ಪತ್ರೆಗೆ ಕೊಪ್ಪಳದಿಂದ ಪಿಜಿಷಿಯನ್ ವೈದ್ಯರ ನಿಯೋಜಿಸಲಾಗುತ್ತಿದೆ. ಅನಸ್ತೇಸಿಯಾ ವೈದ್ಯ ಅಮಾನತ್ತಾಗಿದ್ದು ಸದ್ಯದ ಪರಿಸ್ಥಿತಿಯಲ್ಲಿ ಪುನರ್ ನೇಮಕ ಮಾಡಿಕೊಳ್ಳಲಾಗುವುದು ಎಂದರು. ಕುಷ್ಟಗಿ ಡಿಸಿಎಚ್ ಸಿ ಯಲ್ಲಿ ಈ ದಿನ ಇಬ್ಬರು ಮೃತರಾಗಿದ್ದು ಒಬ್ಬರಿಗೆ 95 ವರ್ಷ, ಇನ್ನೊಬ್ಬರಿಗೆ ಗಂಟಲ ಕ್ಯಾನ್ಸರ್ ಹಾಗೂ ಕೋವಿಡ್ ಸಹ ಇತ್ತು ಎಂದರು.
ಇದನ್ನೂ ಓದಿ:ಕೋವಿಡ್ ಮೂರನೇ ಅಲೆಯನ್ನು ಹೊಡೆದುರುಳಿಸಲಿದೆ ಜರ್ಮನ್ : ಜೆನ್ಸ್ ಸ್ಪಾನ್
ಇದೇ ವೇಳೆ ಕೊಪ್ಪಳ ಸಂಸದ ಕರಡಿ ಸಂಗಣ್ಣ, ಶಾಸಕ ಅಮರೇಗೌಡ ಪಾಟೀಲ ಬಯ್ಯಾಪೂರ, ಜಿಲ್ಲಾಧಿಕಾರಿ ವಿಕಾಸ್ ಕಿಶೋರ್ , ಜಿ.ಪಂ ಸಿಇಓ ರಘುನಂದನ ಮೂರ್ತಿ ಮತ್ತೀರಿದ್ದರು. ಇದೇ ವೇಳೆ ತಹಶೀಲ್ದಾರ ಕಛೇರಿಯಲ್ಲಿ ಅಧಿಕಾರಿಗಳ ಸಭೆ ನಡೆಸಿ, ಹಿಂದುಳಿದ ವರ್ಗಗಳ ಬಾಲಕಿಯರ ಮೆಟ್ರಿಕ್ ನಂತರದ ವಸತಿ ನಿಲಯದ ಕೋವಿಡ್ ಕೇರ್ ಸೆಂಟರ್ ಭೇಟಿ ನೀಡಿ ಪರಿಶೀಲಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PSI re-examination: ಪಿಎಸ್ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ
Lok sabha polls: ಸುರೇಶ್ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್ ದಾಸ್
Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್
Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್
Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್’ ಎಂದ ಬಿಜೆಪಿಗರು!
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ