Hampi: ಜನತಾ‌ ಪ್ಲಾಟ್‌ ನಿವಾಸಿಗಳ ಸಮಸ್ಯೆ ಆಲಿಸಿದ ಸಚಿವ ಜಮೀರ್


Team Udayavani, Aug 9, 2023, 5:45 PM IST

JAM

ಹೊಸಪೇಟೆ: ವಿಜಯನಗರ ಜಿಲ್ಲಾ ಉಸ್ತುವಾರಿ ಸಚಿವ ಜಮೀರ್ ಅಹಮದ್ ಖಾನ್ ಬುಧವಾರ ಹಂಪಿಗೆ ಭೇಟಿ ನೀಡಿ, ಜನತಾ ಪ್ಲಾಟ್ ನಿವಾಸಿಗಳ ಸಮಸ್ಯೆ ಆಲಿಸಿದರು.

ನ್ಯಾಯಾಂಗ ನಿಂದನೆ ಕೇಸ್ ಹೆಸರಲ್ಲಿ ಕಳೆದ ಎರಡು ತಿಂಗಳ ಹಿಂದೆ ವಿಜಯನಗರ ಜಿಲ್ಲಾಡಳಿತ ಇಲ್ಲಿನ ಹೋಂ ಸ್ಟೇ, ಅಂಗಡಿ ಮುಂಗಟ್ಟು ಹಾಗೂ ಹೊಟೇಲ್ ಗಳಿಗೆ ಬೀಗಮುದ್ರೆ ಹಾಕಿತ್ತು. ಇದರಿಂದ ಕಳೆದ ಎರಡು ತಿಂಗಳಿಂದ ಹಂಪಿಗೆ ಬರುವ ಯಾತ್ರಾರ್ಥಿಗಳಿಗೆ ಹಾಗೂ ಪ್ರವಾಸಿಗರಿಗೆ ವಸತಿ ಸೌಲಭ್ಯ ಇರಲಿ ಆಹಾರ, ನೀರೂ ಸಹ ದೊರಕದೆ ಸಮಸ್ಯೆಯಾಗಿತ್ತು. ಇನ್ನು ಸ್ಥಳೀಯರೂ ಸಹ ಯಾವುದೇ ಸರಕು ಬೇಕಾದರೂ ಸಮೀಪದ ಗ್ರಾಮಗಳಿಗೆ ತೆರಳುವ ಪರಿಸ್ಥಿತಿ ಬಂದೊದಗಿದೆ.

ಈ ಎಲ್ಲಾ ವಿಷಯವನ್ನು ಸ್ಥಳೀಯರು ಭೇಟಿ ನೀಡಿದ ಸಚಿವ ಜಮೀರ್ ಅಹಮದಗ ಅವರ ಗಮನಕ್ಕೆ ತಂದರು. ಮಹಿಳೆಯರು ಹಾಗೂ ಗ್ರಾಮಸ್ಥರು ತಮ್ಮ ಅಹವಾಲು ಸಲ್ಲಿಸಿದರು. ಈ ವೇಳೆ ಸಚಿವರೊಂದಿಗೆ ಮಾತನಾಡಿದ ಗ್ರಾಮಸ್ಥ ಕಿರಣ್ ಹಂಪಿ ಜನರ ಮೇಲಿರುವ ಗಾಂಜಾ ಮಾರಾಟ, ವೇಷ್ಯಾವಾಟಿಕೆ ಆರೋಪದ ಕುರಿತು ಇರುವ ವಾಸ್ತವತೆ, ಹಂಪಿ ಜನರ ಮೇಲೆ ಕೇಳಿ ಬಂದ ಆರೋಪಗಳನ್ನು ಸಚಿವರಿಗೆ ಮನವರಿಕೆ ಮಾಡಿಕೊಟ್ಟರು.

ಎಲ್ಲರು ಆರೋಪಿಸುವಂತೆ ಇಲ್ಲಿ ಯಾವುದೇ ರೆಸಾರ್ಟ್ ಗಳಿಲ್ಲ. ಇರುವುದೆಲ್ಲವೂ ಹೋಂ ಸ್ಟೇಗಳು. ಈ ಹೋಂಸ್ಟೇಗಳು ವಾಣಿಜ್ಯ ವಹಿವಾಟಿನ ಅಡಿಯಲ್ಲಿ ಬರುವುದೇ ಇಲ್ಲ. ಆದರೂ ಅನಧಿಕೃತ ವ್ಯವಹಾರ ಎಂದು ಆರೋಪಿಸಿ ಜನರ ಜೀವನ‌ ನಡೆಸಲೂ ಸಹ ತೊಂದರೆ ಮಾಡಿದ್ದಾರೆ ಎಂದು ಸ್ಥಳೀಯರು ಸಚಿವರ ಗಮನಕ್ಕೆ ತಂದರು.
ಇದಕ್ಕೆ ಪ್ರತಿಕ್ರಿಯಿಸಿದ ಜಮೀರ್ ಅಹಮದ್ ನಿಮ್ಮಗಳ ಬಗ್ಗೆ ಇರುವ ತಪ್ಪು ಗ್ರಹಿಕೆ ನನಗೀಗ ನಿವಾರಣೆಯಾಯಿತು ಎಂದರು.

ಜನರ ಅಹವಾಲು ಸ್ವೀಕರಿಸಿದ ಸಚಿವ ಜಮೀರ್ ಅಹಮದ್ ಖಾನ್ ನಂತರ ಹಂಪಿಯ ವಿರೂಪಾಕ್ಷೇಶ್ವರ ಸ್ವಾಮಿಯ ದರ್ಶನ ಪಡೆದರು.

ಹಂಪಿ ಜನರು ಗಾಂಜಾ ಮಾರಾಟ ಮಾಡುತ್ತಾರೆ ವೇಷ್ಯಾವಾಟಿಕೆ ನಡೆಸುತ್ತಾರೆ ಎನ್ನುವ ಆರೋಪಗಳು ಹುರುಳಿಲ್ಲದವು ಎನ್ನುವುದನ್ನು ಸಚಿವರ ಗಮನಕ್ಕೆ ತರಲಾಗಿದೆ. ನ್ಯಾಯಾಂಗದ ಆದೇಶ ಆಗುವವರೆಗಾದರೂ ಜನರ ಜೀವನೋಪಾಯಕ್ಕೆ ಯಾವುದೇ ತೊಂದರೆ ಮಾಡದಂತೆ ಸಚಿವರಲ್ಲಿ ಮನವಿ ಮಾಡಲಾಗಿದೆ. ಎಂದು‌‌ ನಿವಾಸಿ ಕಿರಣ್ ಕುಮಾರ್ ತಿಳಿಸಿದರು

ಟಾಪ್ ನ್ಯೂಸ್

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

1-RR

Modi ಹಾವಿನ ರೀತಿಯಲ್ಲಿ ರೈತರ ವಿರುದ್ಧ ಸೇಡಿಗೆ ಕಾಯ್ತಿದ್ದಾರೆ: ರೇವಂತ್‌

Lok Sabha Elections; ದಕ್ಷಿಣ ಕನ್ನಡ: ಶೇ.77.56; ಉಡುಪಿ-ಚಿಕ್ಕಮಗಳೂರು: ಶೇ.77.15 ಮತದಾನ

Lok Sabha Elections; ದಕ್ಷಿಣ ಕನ್ನಡ: ಶೇ.77.56; ಉಡುಪಿ-ಚಿಕ್ಕಮಗಳೂರು: ಶೇ.77.15 ಮತದಾನ

Jagan mohan

YSR Congress ಪ್ರಣಾಳಿಕೆ: ಪಿಂಚಣಿ ಮೊತ್ತ ಏರಿಕೆ, ವೈಜಾಗ್‌ ಕಾರ್ಯಕಾರಿ ರಾಜಧಾನಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

s suresh kumar

Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ

SHriramulu (2)

BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

15

ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

1-wwqw

CRPF DIG ಯಿಂದ ಲೈಂಗಿಕ ಕಿರುಕುಳ: ಖಜಾನ ವಜಾ ಸಾಧ್ಯತೆ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.