Mahalingapura: ಘಟಪ್ರಭಾ ಎಡದಂಡೆ ಕಾಲುವೆಗೆ ಸಚಿವ ಸತೀಶ ಜಾರಕಿಹೋಳಿ ಭೇಟಿ

ಘಟಪ್ರಭಾ ಮುಖ್ಯಕಾಲುವೆ ಕೊನೆ ಹಂತದವರೆಗೆ ನೀರು ಹರಿಸಲು ಅಧಿಕಾರಿಗಳಿಗೆ ನಿರ್ದೇಶನ

Team Udayavani, Jan 7, 2024, 7:59 PM IST

stsh

ಮಹಾಲಿಂಗಪುರ: ಮಹಾಲಿಂಗಪುರ ಸಮೀಪದ ಚಿಮ್ಮಡ ಗ್ರಾಮದ ಹತ್ತಿರದ ಘಟಪ್ರಭಾ ಎಡದಂಡೆ ಕಾಲುವೆಯ ಚಿಮ್ಮಡ ಚೌಕಿಗೆ ರವಿವಾರ ಘಟಪ್ರಭಾ ಯೋಜನೆಯ ನೀರಾವರಿ ಸಲಹಾ ಸಮಿತಿ ಅಧ್ಯಕ್ಷರು, ಲೋಕೋಪಯೋಗಿ ಮತ್ತು ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರಾದ ಸತೀಶ ಜಾರಕಿಹೊಳಿ ಅವರು ಭೇಟಿ ನೀಡಿ ಪರಿಶೀಲಿಸಿದರು.

ಈ ಸಂದರ್ಭದಲ್ಲಿ ಬಿಎಲ್‌ಬಿಸಿಯ ಘಟಪ್ರಭಾ, ಜಮಖಂಡಿ, ಬೀಳಗಿ ವಿಭಾಗದ ಅಧಿಕಾರಿಗಳೊಂದಿಗೆ ಮತ್ತು ರೈತರೊಂದಿಗೆ ಮಾತನಾಡಿದ ಅವರು ಈ ವರ್ಷ ಬರಗಾಲ ಇರುವ ಕಾರಣ ಪ್ರತಿವರ್ಷದಂತೆ ಹಿಡಕಲ್ ಜಲಾಶಯದಿಂದ ನಿಗದಿತ ಪ್ರಮಾಣದಲ್ಲಿ ನೀರು ಹರಿಸಲು ಸಾಧ್ಯವಾಗುತ್ತಿಲ್ಲ. ಇದೇ ಜನವರಿ 1 ರಿಂದ ಕುಡಿಯುವ ನೀರಿನ ಉದ್ದೇಶಕ್ಕಾಗಿ ಘಟಪ್ರಭಾ ಎಡದಂಡೆ ಕಾಲುವೆಗೆ 2400 ಕ್ಯೂಸೆಕ್ ನೀರನ್ನು ಹರಿಸಲಾಗುತ್ತಿದೆ. ಘಟಪ್ರಭಾ ಎಡದಂಡೆ ಕಾಲುವೆಗೆ ಸಂಬಂಧಿಸಿದ ಅಕಾರಿಗಳು ಆದ್ಯತೆಯ ಮೇರೆಗೆ ಪ್ರತಿಯೊಂದು ಪಟ್ಟಣ ಮತ್ತು ಗ್ರಾಮಗಳಲ್ಲಿನ ಕೆರೆಗಳನ್ನು ತುಂಬಿಸುವದರ ಜೊತೆಗೆ ಘಟಪ್ರಭಾ ಎಡದಂಡೆ ಮುಖ್ಯಕಾಲುವೆಯ ಕೊನೆಯ ಹಂತ (ಬೀಳಗಿ ವಿಭಾಗ) ದವರೆಗೂ ನೀರನ್ನು ಹರಿಸಲು ಅಧಿಕಾರಿಗಳೊಂದಿಗೆ ರೈತರು ಸಹಕಾರ ನೀಡಬೇಕಾಗಿದ್ದು ಅವಶ್ಯವಾಗಿದೆ ಎಂದರು.

ಸದ್ಯ ಹಿಡಕಲ್ ಜಲಾಶಯದಲ್ಲಿ 34 ಟಿಎಂಸಿ ನೀರು ಲಭ್ಯವಿದ್ದು, ಬೆಳಗಾವಿ ನಗರ ಸೇರಿದಂತೆ ಬೆಳಗಾವಿ ಮತ್ತು ಬಾಗಲಕೋಟೆ ಜಿಲ್ಲೆಗಳ ಜನ-ಜಾನುವಾರುಗಳಿಗೆ ಬೆಸುಗೆ ಕಾಲದಲ್ಲಿ ಕುಡಿಯುವ ನೀರು ಸಮಸ್ಯೆಯಾಗದಂತೆ ಮುಂಜಾಗ್ರತೆ ವಹಿಸಬೇಕಾಗಿದೆ. ಸಾರ್ವಜನಿಕರು ಸಹ ಅನಾವಶ್ಯಕವಾಗಿ ನೀರು ಪೋಲಾಗದಂತೆ ನೀರನ್ನು ಮಿತವಾಗಿ ಬಳಸುವದು ಅನಿವಾರ್ಯವಾಗಿದೆ ಎಂದರು.
ಕುಡಿಯುವ ಉದ್ದೇಶಕ್ಕಾಗಿ ಈಗ ಘಟಪ್ರಭಾ ಎಡದಂಡೆ ಹರಿಸುತ್ತಿರುವ ನೀರನ್ನು ಜ.15 ರವರೆಗೆ ಹರಿಸಲಾಗುವದು. ಜಿಎಲ್‌ಬಿಸಿ ಜಮಖಂಡಿ ವೃತ್ತದ ಅಡಿಯಲ್ಲಿ ಬರುವ ಎಲ್ಲಾ ವಿಭಾಗದ ಅಧಿಕಾರಿಗಳಿಂದ ಮಾಹಿತಿಯನ್ನು ಪಡೆದುಕೊಂಡರು. ಬೀಳಗಿ ಕೊಣೆಯ ಭಾಗದವರೆಗೆ ಸಮರ್ಪಕ ನೀರು ಪೋರೈಸುವ ಕಾರ್ಯವನ್ನು ಅಧಿಕಾರಿಗಳು ಕೈಗೊಳ್ಳಬೇಕು ಅವಶ್ಯವೆನಿಸಿದರೆ ಇತರೆ ಇಲಾಖೆಗಳ ಸಹಕಾರ ಪಡೆದು ಎಲ್ಲ ಭಾಗಗಳ ಕೆರೆ, ಬಾಂದಾರ, ಚೆಕ್ ಡ್ಯಾಂಗಳು ಭರ್ತಿಯಾಗುವಂತೆ ನೋಡಿಕೊಳ್ಳಬೇಕೆಂದು ಸಚಿವರು ಅಧಿಕಾರಿಗಳಿಗೆ ಸೂಕ್ತ ನಿರ್ದೇಶನ ನೀಡಿದರು.
ಈ ಭಾಗದಲ್ಲಿ ಹಲವು ಕೆರೆಗಳು ಭರ್ತಿಯಾಗಿವೆ ಇನ್ನು ಕೆಲವು ಕೆರೆಗಳಿಗೆ ನೀರು ಪೋರೈಕೆಯಾಗುತ್ತಿಲ್ಲ ರಾಯಭಾಗ ಭಾಗದಿಂದ ಈ ಕೆಳಗಿನ ಭಾಗಕ್ಕೆ ನೀರು ಸಮರ್ಪಕವಾಗಿ ಬರುತ್ತಿಲ್ಲ ಹೀಗಾಗಿ ಬೀಳಗಿ ಭಾಗಕ್ಕೆ ನೀರು ತಲುಪುತ್ತಿಲ್ಲವೆಂದು ಹಲವು ರೈತರು ಅಧಿಕಾರಿಗಳು ಸಚಿವರಿಗ ಮನವರಿಕೆ ಮಾಡಿದರು.

ಈ ಸಂದರ್ಭದಲ್ಲಿ ತೇರದಾಳ ಮತಕ್ಷೇತ್ರದ ಶಾಸಕ ಸಿದ್ದು ಸವದಿ ಮಾತನಾಡಿ ನೀರು ತಲುಪಿದ ಭಾಗದಲ್ಲಿ ನೀರು ಹರಿಸುವುದನ್ನು ನಿಲ್ಲಿಸಿ, ತಲುಪದ ಕಡೆ ಮಾತ್ರ ನೀರು ಹರಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ತೇರದಾಳ ಮತಕ್ಷೇತ್ರದ ಮುಖಂಡ ಸಿದ್ದು ಕೊಣ್ಣುರ, ಬೆಳಗಾವಿಯ ನೀರಾವರಿ ಉತ್ತರ ವಲಯದ ಮುಖ್ಯ ಅಭಿಯಂತರ ಬಿ.ಆರ್.ರಾಠೋಡ, ಜಿಎಲ್‌ಬಿಸಿ ಜಮಖಂಡಿ ವೃತ್ತದ ಅಧಿಕ್ಷಕ ಅಭಿಯಂತರ ಪ್ರಶಾಂತ ಗಿಡಪ್ಪನವರ, ಜಮಖಂಡಿ ಕಾರ್ಯನಿರ್ವಾಹಕ ಅಭಿಯಂತರ ಶ್ರೀಶೈಲ ಕಲ್ಯಾಣಿ, ರಬಕವಿ ಜಿಎಲ್‌ಬಿಸಿ ಎಇಇ ಚೇತನ ಅಬ್ಬಿಗೇರಿ, ಮಹಾಲಿಂಗಪುರ ಜಿಎಲ್‌ಬಿಸಿ ಎಇಇ ವೆಂಕಟೇಶ ಬೆಳಗಲ್, ಬೀಳಗಿ ವಿಭಾಗದ ಕಾರ್ಯನಿರ್ವಾಹಕ ಅಭಿಯಂತರ ಎಚ್.ಆರ್.ಮಾರಡ್ಡಿ, ಘಟಪ್ರಭಾ ವಿಭಾಗದ ಕಾರ್ಯ ನಿರ್ವಾಹಕ ಅಧಿಕಾರಿ ನಾಗೇಶ ಕೋಲಕರ, ರಬಕವಿ ಎಇ ಶ್ರೀಧರ ನಂದಿಹಾಳ, ಕಾಂಗ್ರೆಸ್ ಮುಖಂಡರಾದ ಮಲ್ಲಪ್ಪಾ ಸಿಂಗಾಡಿ, ಲಕ್ಷ್ಮಣ ದೇಸಾರಟ್ಟಿ, ಉಮೇಶ ಪೂಜಾರಿ, ಅಶೋಕ ಧಡೂತಿ, ಭೀಮಸಿ ಸಸಾಲಟ್ಟಿ, ಕಿರಣ ಕರಲಟ್ಟಿ ಸೇರಿದಂತೆ ವಿವಿಧ ಗ್ರಾಮಗಳ ರೈತ ಮುಖಂಡರು, ಜಿಎಲ್‌ಬಿಸಿ ಅಧಿಕಾರಿಗಳು ಇದ್ದರು.

ಟಾಪ್ ನ್ಯೂಸ್

Mamata Banerjee: ಹೆಲಿಕಾಪ್ಟರ್ ಹತ್ತುವಾಗ ಬಿದ್ದು ಮತ್ತೆ ಗಾಯ ಮಾಡಿಕೊಂಡ ಮಮತಾ ಬ್ಯಾನರ್ಜಿ

Mamata Banerjee: ಮತ್ತೆ ಎಡವಿ ಬಿದ್ದ ಮಮತಾ ಬ್ಯಾನರ್ಜಿ… ಕಾಲಿಗೆ ಸಣ್ಣ ಗಾಯ

siddaramaiah

Kalaburagi; ಪ್ರಧಾನಿ ಮೋದಿ ಸುಳ್ಳು ಮಾರಾಟ ಮಾಡುವ ವ್ಯಾಪಾರಿ: ಸಿಎಂ ಸಿದ್ದರಾಮಯ್ಯ

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

13-bk-hariprasad

ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್

Hubli; ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡ ಶಕ್ತಿ: ದಿಂಗಾಲೇಶ್ವರ ಸ್ವಾಮೀಜಿ

ಪ್ರಹ್ಲಾದ ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡವರು: ದಿಂಗಾಲೇಶ್ವರ ಸ್ವಾಮೀಜಿ

12-prakash-raj

April 28 ರಂದು ರಾಜ್ಯಮಟ್ಟದ ವಿದ್ಯಾರ್ಥಿ ಸಮಾವೇಶಕ್ಕೆ ಚಿತ್ರನಟ ಪ್ರಕಾಶ ರೈ ಆಗಮನ

ಈಶ್ವರ ಖಂಡ್ರೆ

ಕೇಂದ್ರದಿಂದ 3454 ಕೋಟಿ ರೂ. ಬರ ಪರಿಹಾರ; ರಾಜ್ಯಕ್ಕೆ ಸಂದ ಜಯ: ಈಶ್ವರ ಖಂಡ್ರೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Mamata Banerjee: ಹೆಲಿಕಾಪ್ಟರ್ ಹತ್ತುವಾಗ ಬಿದ್ದು ಮತ್ತೆ ಗಾಯ ಮಾಡಿಕೊಂಡ ಮಮತಾ ಬ್ಯಾನರ್ಜಿ

Mamata Banerjee: ಮತ್ತೆ ಎಡವಿ ಬಿದ್ದ ಮಮತಾ ಬ್ಯಾನರ್ಜಿ… ಕಾಲಿಗೆ ಸಣ್ಣ ಗಾಯ

siddaramaiah

Kalaburagi; ಪ್ರಧಾನಿ ಮೋದಿ ಸುಳ್ಳು ಮಾರಾಟ ಮಾಡುವ ವ್ಯಾಪಾರಿ: ಸಿಎಂ ಸಿದ್ದರಾಮಯ್ಯ

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

13-bk-hariprasad

ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್

Hubli; ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡ ಶಕ್ತಿ: ದಿಂಗಾಲೇಶ್ವರ ಸ್ವಾಮೀಜಿ

ಪ್ರಹ್ಲಾದ ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡವರು: ದಿಂಗಾಲೇಶ್ವರ ಸ್ವಾಮೀಜಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.