ಕೇಂದ್ರ ಬಜೆಟ್ ನಲ್ಲಿ ಎಲ್ಲಾ ಕ್ಷೇತ್ರದ ಅಭಿವೃದ್ಧಿಗೆ ಆದ್ಯತೆ ನೀಡಲಾಗಿದೆ: ವಿ.ಸೋಮಣ್ಣ
Team Udayavani, Feb 13, 2021, 12:48 PM IST
ಬೆಂಗಳೂರು: ಎಲ್ಲರಿಗೂ ಸಮಾನ ಆದ್ಯತೆ ನೀಡುವ ಹಾಗೂ ಎಲ್ಲಾ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಪೂರಕವಾದ ಅತ್ಯತ್ತಮ ಆಯವ್ಯಯವನ್ನು ಕೇಂದ್ರ ಸರ್ಕಾರ ಮಂಡಿಸಿದೆ ಎಂದು ವಸತಿ ಸಚಿವ ವಿ. ಸೋಮಣ್ಣ ಹೇಳಿದರು.
ಬಿಜೆಪಿ ಕಚೇರಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿ ಕೇಂದ್ರ ಬಜೆಟ್ ಬಗ್ಗೆ ಮಾಹಿತಿ ನೀಡಿದ ಅವರು, ರಾಷ್ಟ್ರೀಯ ಹೆದ್ದಾರಿಗೆ ನಿರ್ಮಾಣಕ್ಕೆ ಅಪಾರ ಕೊಡುಗೆ ನೀಡಲಾಗಿದೆ. ರಾಜ್ಯದ 33 ರಾಷ್ಟ್ರೀಯ ಹೆದ್ದಾರಿಗೆ ಅಡಿಗಲ್ಲು ಹಾಕಲಾಗಿದೆ. ಲಕ್ಷ ಕೋಟಿಗೂ ಅಧಿಕ ಅನುದಾನವನ್ನು ಮೂಲಸೌಕರ್ಯಕ್ಕೆ ಮೀಸಲಿಡಲಾಗಿದೆ. ಮೆಟ್ರೋ ಕಾಮಗಾರಿಗೆ 14 ಸಾವಿರಕ್ಕೂ ಅಧಿಕ ಕೋಟಿ ರೂ. ಮೀಸಲಿಡಲಾಗಿದೆ ಎಂದರು.
ರೈಲ್ವೆ ಉನ್ನತೀಕರಣಕ್ಕೂ ವಿಶೇಷ ಅನುದಾನ ನೀಡಲಾಗಿದೆ. ಸಣ್ಣ ಸಣ್ಣ ಕೈಗಾರಿಕೆಗಳ ಉತ್ತೇಜನಕ್ಕೂ ಕ್ರಮ ತೆಗೆದುಕೊಂಡು, ಉದ್ಯೋಗಾವಕಾಶ ಸೃಷ್ಟಿಗೆ ಕ್ರಮ ತೆಗೆದುಕೊಳ್ಳಲಾಗಿದೆ. ಬೆಂಗಳೂರು- ಮಂಗಳೂರು ಸುಗಮ ಸಾರಿಗೆಗೆ ಸಿರಾಡಿ ಘಾಟಿನಲ್ಲಿ ಸುರಂಗ ನಿರ್ಮಾಣಕ್ಕೆ 10 ಸಾವಿರ ಕೋಟಿ ಬಿಡುಗಡೆ ಮಾಡಲಾಗಿದೆ ಎಂದು ಹೇಳಿದರು.
ಇದನ್ನೂ ಓದಿ:ನಿಮ್ಮಲ್ಲಿರುವ 50, 200 ರೂ. ನೋಟುಗಳು ನಕಲಿ ಇರಬಹುದು ಪರಿಶೀಲಿಸಿಕೊಳ್ಳಿ : ಆರ್ ಬಿ ಐ
ಕೃಷಿಗೂ ವಿಶೇಷ ಆದ್ಯತೆ ನೀಡಲಾಗಿದೆ. ಹಕ್ಕು ಪತ್ರ ನೀಡುವುದು, ಹಳ್ಳಿಗಳಲ್ಲಿ ಸೌಲಭ್ಯ ಒದಗಿಸಲು ಕ್ರಮ ಆಗಿದೆ. ಕೃಷಿ ಸಾಲ ವಿತರಣೆಗೆ ಅನುದಾನ ಮೀಸಲಿಡಲಾಗಿದೆ. ಹೈನುಗಾರಿಕೆ ಮೀನುಗಾರಿಕೆಗೂ ಅನುದಾನ ನೀಡಲಾಗಿದೆ. ಹೀಗೆ ಎಪಿಎಂಸಿ ಬಲವರ್ಧನೆ, ಕೃಷಿ ಮೂಲಸೌಕರ್ಯ ನಿಧಿ ಬಳಕೆ, ಕೋಲ್ಡ್ ಸ್ಟೋರೇಜ್ ನಿರ್ಮಾಣ ಸೇರಿದಂತೆ ರೈತರಿಗೆ ಅನುಕೂಲ ಆಗುವಂತ ಅನೇಕ ಕ್ರಮ ಬಜೆಟ್ನಲ್ಲಿ ಆಗಿದೆ. ನರೇಗಾದಡಿ ನಗರ ವಲಸೆ ತಪ್ಪಿಸಲು 14ನೇ ಹಣಕಾಸು ಯೋಜನೆಯಡಿ ಪಂಚಾಯತಿಗೆ ನೇರ ಅನುದಾನ ನೀಡುವ ವ್ಯವಸ್ಥೆ ಜಾರಿಗೆ ಮಾಡಿ, ನರೇಗಾ ಯೋಜನೆಗೆ 73 ಸಾವಿರ ಕೋಟಿ ಮೀಸಲಿಡಲಾಗಿದೆ. ಕಾರ್ಮಿಕರಿಗೆ ವಿವಿಧ ಸೌಲಭ್ಯ, ವಿಮಾ ಭದ್ರತೆ ಒದಗಿಸಲು ಸೂಕ್ತ ಕಾನೂನು ಮಾಡಲಾಗಿದೆ ಎಂದರು.
ಇದನ್ನೂ ಓದಿ:ವಿಚಾರಕ್ಕಾಗಿ ನನ್ನ ತಂದೆ, ಅಜ್ಜಿ ಹತ್ಯೆಯಾದ ಬಗ್ಗೆ ನನಗೆ ಹೆಮ್ಮೆಯಿದೆ: ರಾಹುಲ್ ಗಾಂಧಿ
ಶುದ್ಧ ಕುಡಿಯುವ ನೀರು, ಬಂದರುಗಳ ಮೂಲಸೌಕರ್ಯ ಅಭಿವೃದ್ಧಿ, ಆರೋಗ್ಯ ಕ್ಷೇತ್ರಕ್ಕೆ ಹೆಚ್ಚಿನ ಆಧ್ಯತೆ, ಕೋವಿಡ್ ಲಸಿಕೆ ವಿತರಣೆಗೆ ವಿಶೇಷ ಅನುದಾನ ಸೇರಿದಂತೆ ಎಲ್ಲ ಕ್ಷೇತ್ರಗಳ ಸಮಗ್ರ ಅಭಿವೃದ್ದಿ ಅನುದಾನವನ್ನು ಕೇಂದ್ರ ಬಜೆಟ್ನಲ್ಲಿ ಮೀಸಲಿಡಲಾಗಿದೆ ಎಂದು ಸಚಿವ ಸೋಮಣ್ಣ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
MUST WATCH
ಹೊಸ ಸೇರ್ಪಡೆ
Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?
ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ
ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ