Vijayapura: ಅನುದಾನ ದುರ್ಬಳಕೆ: ಮೂವರು ಅಧಿಕಾರಿಗಳ ಅಮಾನತು
Team Udayavani, Jan 30, 2024, 11:41 PM IST
ವಿಜಯಪುರ: ದಶಕದ ಹಿಂದೆ ಶಿಕ್ಷಣ ಇಲಾಖೆಯಲ್ಲಿನ ಐಇಡಿಎಸ್ಎಸ್ ಯೋಜನೆ ಅನುಷ್ಠಾನದ ಸಂದರ್ಭ ಅಸ್ತಿತ್ವದಲ್ಲೇ ಇಲ್ಲದ ಸರಕಾರೇತರ ಸಂಸ್ಥೆ (ಎನ್ಜಿಒ)ಗಳಿಗೆ ನಿಯಮ ಬಾಹಿರವಾಗಿ ಅನುದಾನ ಬಿಡುಗಡೆ ಮಾಡಿರುವ ಆರೋಪದಲ್ಲಿ ಶಿಕ್ಷಣ ಇಲಾಖೆ ಉಪನಿರ್ದೇಶಕ ಸೇರಿ ಮೂವರು ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ.
ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಅಧೀನ ಕಾರ್ಯದರ್ಶಿ ಮಲ್ಲಿಕಾರ್ಜುನ ರಾಮಚಂದ್ರಪ್ಪ ಇಲಾಖೆ ಹಿರಿಯ ಅಧಿಕಾರಿಗಳ ಶಿಫಾರಸು ಆಧರಿಸಿ ಅಮಾನತು ಆದೇಶ ಹೊರಡಿಸಿದ್ದಾರೆ. ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ವಿಜಯಪುರ ಜಿಲ್ಲೆಯ ಉಪ ನಿರ್ದೇಶಕರಾಗಿದ್ದ ಬಸವನಬಾಗೇವಾಡಿ ಹಿಂದಿನ ಬಿಇಒ ಆಗಿದ್ದ ಎನ್.ಎಚ್. ನಾಗೂರ, ಇಂಡಿ ಬಿಇಒ ಆಗಿದ್ದ ಹಾಲಿ ವಿಜಯಪುರ ಡಯಟ್ ಹಿರಿಯ ಉಪನ್ಯಾಸಕ ಎ.ಎಚ್. ಹತ್ತಳ್ಳಿ, ಸಿಂದಗಿ ಬಿಇಒ ಆಗಿದ್ದ ವಿಜಯಪುರ ಡಯಟ್ ಹಾಲಿ ಉಪನ್ಯಾಸಕ ಎಸ್.ಎ. ಮುಜಾವರ ಅಮಾನತಾಗಿರುವ ಅಧಿಕಾರಿಗಳು.
2009-10, 11-12ನೇ ಸಾಲಿನಲ್ಲಿ ಸರಕಾರದ ಐಇಡಿಎಸ್ಎಸ್ ಯೋಜನೆ ಅನುಷ್ಠಾನದ ಸಂದರ್ಭದಲ್ಲಿ ಈ ಅಧಿಕಾರಿಗಳು ಅಸ್ತಿತ್ವದಲ್ಲೇ ಇಲ್ಲದ 18 ಸರಕಾರೇತರ ಸಂಸ್ಥೆಗಳಿಗೆ ಶಿಫಾರಸು ಮಾಡಿರುವ ಹಾಗೂ ಅನುದಾನ ಬಿಡುಗಡೆ ಮಾಡಿ ಸರಕಾರದ ಅನುದಾನ ದುರ್ಬಳಕೆ ಮಾಡಿಕೊಂಡ ಆರೋಪದಲ್ಲಿ ಅಮಾನತು ಮಾಡಲಾಗಿದೆ. ಸರಕಾರದ ಅನುದಾನ ದುರ್ಬಳಕೆ ಮಾಡಿಕೊಂಡ ಕುರಿತು 2019ರಲ್ಲಿ ಸಾರ್ವಜನಿಕ ಲೆಕ್ಕಪತ್ರ ಸಮಿತಿ ಆಕ್ಷೇಪಿಸಿದೆ. ಪ್ರಕರಣದಲ್ಲಿ ಸೇವಾ ನಿವೃತ್ತಿ ಹೊಂದಿರುವ ಮೂವರು ಅಧಿಕಾರಿಗಳ ವಿರುದ್ಧ ಸಿವಿಲ್ ಮೊಕದ್ದಮೆ ಹೂಡಿ ಸರಕಾರಕ್ಕೆ ವಂಚಿಸಿರುವ ಹಣದ ಮರು ಪಾವತಿಗೆ ಕ್ರಮ ಕೈಗೊಳ್ಳುವಂತೆ ತಿಳಿಸಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು
State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ
Muddebihal: ಹೆಂಡತಿಗೆ ಚೂರಿ ಇರಿದು ಪರಾರಿಯಾದ ಗಂಡ
Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು
Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
MUST WATCH
ಹೊಸ ಸೇರ್ಪಡೆ
ಬಿಗ್ಬಾಸ್ ವಿನ್ನರ್ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸುತ್ತಾರೆ: ಮಾಜಿ ಸ್ಪರ್ಧಿ
Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು
T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ