ಲಾಗಿನ್‌ ಐಡಿ ಮತ್ತು ಪಾಸ್‌ವರ್ಡ್‌ ದುರ್ಬಳಕೆ; ನೀರಿನ ಹಣ ನುಂಗಿದ 13 ನೌಕರರ ಅಮಾನತು

ನೌಕರರು ದುರ್ಬಳಕೆ ಮಾಡಿಕೊಂಡು ಮಂಡಳಿಗೆ ವಂಚಿಸಲಾಗಿದೆ

Team Udayavani, Jan 4, 2023, 1:32 PM IST

ಲಾಗಿನ್‌ ಐಡಿ ಮತ್ತು ಪಾಸ್‌ವರ್ಡ್‌ ದುರ್ಬಳಕೆ; ನೀರಿನ ಹಣ ನುಂಗಿದ 13 ನೌಕರರ ಅಮಾನತು

ಬೆಂಗಳೂರು: ನೀರು ಪೂರೈಕೆ ಶುಲ್ಕ ವಸೂಲಿ ಮಾಡಿ ಜಲಮಂಡಳಿಗೆ ಪಾವತಿಸದೆ ವಂಚಿಸುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಡಳಿಯ 13 ಅಧಿಕಾರಿ, ಸಿಬ್ಬಂದಿಯನ್ನು ಅಮಾನತುಗೊಳಿಸಿ ಜಲಮಂಡಳಿ ಅಧ್ಯಕ್ಷ ಜಯರಾಂ ಆದೇಶಿಸಿದ್ದಾರೆ.

ಕಳೆದ ಕೆಲ ವರ್ಷಗಳ ಹಿಂದೆ ಜಲಮಂಡಳಿಯಿಂದ ನೀರು ಪೂರೈಕೆ ಶುಲ್ಕವನ್ನು ನಗದು ಅಥವಾ ಡಿಡಿ, ಚೆಕ್‌ ಮೂಲಕ ವಸೂಲಿ ಮಾಡಲಾಗುತ್ತಿತ್ತು. ಹೀಗೆ ವಸೂಲಿ ಮಾಡುವ ಮೊತ್ತವನ್ನು ಜಲಮಂಡಳಿಯ ನಗದು ಪುಸ್ತಕದಲ್ಲಿ ನೋಂದಾಯಿಸುವುದರ ಜತೆಗೆ ಸಜಲ ತಂತ್ರಾಂಶದಲ್ಲಿ ಗ್ರಾಹಕರ ಖಾತೆಯಲ್ಲಿ ಅದನ್ನು ನಮೂದಿಸ ಬೇಕಿತ್ತು. ಜತೆಗೆ ಹಣವನ್ನು ಜಲಮಂಡಳಿ ಬ್ಯಾಂಕ್‌ ಖಾತೆಗೆ ಪಾವತಿಸಬೇಕಿತ್ತು. ಆದರೆ, 2016ರಿಂದ 2018ರವರೆಗೆ 850ಕ್ಕೂ ಹೆಚ್ಚಿನ ಗ್ರಾಹಕರಿಂದ ವಸೂಲಿಯಾದ ನೀರಿನ ಶುಲ್ಕವನ್ನು ಜಲಮಂಡಳಿ ಬ್ಯಾಂಕ್‌ ಖಾತೆಗೆ ಪಾವತಿಸದೆ, ಸಜಲ ತಂತ್ರಾಂಶದಲ್ಲಿ ಗ್ರಾಹಕರ ಖಾತೆಯಲ್ಲಿ ಹಣ ಪಾವತಿಸಲಾಗಿದೆ ಎಂದು ನಮೂದಿಸಿ ವಂಚಿಸಿರುವುದು ಕಳೆದ ತಿಂಗಳು ಬೆಳಕಿಗೆ ಬಂದಿತ್ತು. ಈ ವಂಚನೆಯಿಂದಾಗಿ ಮಂಡಳಿಗೆ 1.75 ಕೋಟಿ ರೂ.ಗಳಷ್ಟು ನಷ್ಟವುಂಟಾಗಿರುವ ಕುರಿತು ಅಂದಾಜಿಸಲಾಗಿತ್ತು.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಜಲಮಂಡಳಿಯು ಸಹಾಯಕ ನಿಯಂತ್ರಕರು(ಲೆಕ್ಕ) ಅವರ ನೇತೃತ್ವದಲ್ಲಿ 3 ತಂಡಗಳನ್ನು ರಚಿಸಿ ಆಡಿಟ್‌ ಮಾಡಲಾಗಿತ್ತು. ಈ ಆಡಿಟ್‌ಗೆ ಸಂಬಂಧಿಸಿದಂತೆ ಇದೀಗ ಮಧ್ಯಂತರ ವರದಿ ಬಂದಿದ್ದು, ಅಂದಾಜು 1.75 ಕೋಟಿ ರೂ.ಗೂ ಹೆಚ್ಚಿನ ಮೊತ್ತದ ಬಿಲ್‌ ಮೊತ್ತ ವಸೂಲಿಯಾಗಿದ್ದು, ಅದನ್ನು ಜಲಮಂಡಳಿ ಬ್ಯಾಂಕ್‌ ಖಾತೆಗೆ ಪಾವತಿಸಲಾಗಿಲ್ಲ ಎಂಬುದು ತಿಳಿದು ಬಂದಿದೆ.

ಜತೆಗೆ ಮಂಡಳಿಯ ಎಂಜಿನಿಯರ್‌ಗಳು ಸೇರಿ ಅಧಿಕಾರಿಗಳು ಮಾತ್ರ ಬಳಸುತ್ತಿದ್ದ ಸಜಲ ತಂತ್ರಾಂಶದ ಲಾಗಿನ್‌ ಐಡಿ ಮತ್ತು ಪಾಸ್‌ವರ್ಡ್‌ ಅನ್ನು ಗುತ್ತಿಗೆ ನೌಕರರು ದುರ್ಬಳಕೆ ಮಾಡಿಕೊಂಡು ಮಂಡಳಿಗೆ ವಂಚಿಸಲಾಗಿದೆ ಎಂದೂ ಉಲ್ಲೇಖಿಸಲಾಗಿದೆ.

ಯಾರ್ಯಾರು ಅಮಾನತು?
ಸಹಾಯಕ ನಿಯಂತ್ರಕರು (ಲೆಕ್ಕ) ಅವರ ನೇತೃತ್ವದ ತಂಡಗಳು ನೀಡಿದ ಮಧ್ಯಂತರ ವರದಿಯನ್ನಾಧರಿಸಿ ಜಲಮಂಡಳಿ ಅಧ್ಯಕ್ಷ ಜಯರಾಂ ಅವರು 13 ಜನ ಗುತ್ತಿಗೆ ನೌಕರರು ಸೇರಿ ಅಧಿಕಾರಿಗಳನ್ನು ಅಮಾನತು ಮಾಡಿದ್ದಾರೆ. ಅದರಲ್ಲಿ ಕಾರ್ಯನಿರ್ವಾಹಕ ಎಂಜಿನಿಯರ್‌, ಕಂದಾಯ ವ್ಯವಸ್ಥಾಪಕ, ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್‌, ಸಹಾಯಕ ಕಲ್ಯಾಣಾಧಿಕಾರಿ ಸೇರಿ ಇನ್ನಿತರ ಹುದ್ದೆಯ ಅಧಿಕಾರಿಗಳಿದ್ದಾರೆ.

ನೀರಿನ ಬಿಲ್‌ ವಸೂಲಿ ಮಾಡಿ ಮಂಡಳಿ ಬ್ಯಾಂಕ್‌ ಖಾತೆಗೆ ಪಾವತಿಸದೇ ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆಂತರಿಕ ಆಡಿಟ್‌ನ ಮಧ್ಯಂತರ ವರದಿ
ಸಲ್ಲಿಕೆಯಾಗಿದೆ. ಅದರ ಆಧಾರದಲ್ಲಿ 13 ಜನರನ್ನು ಅಮಾನತು ಮಾಡಲಾಗಿದೆ. 1.75 ಕೋಟಿ ರೂ.ಗೂ ಹೆಚ್ಚಿನ ವಂಚನೆಯಾಗಿರುವ ಅಂದಾಜಿಸಲಾಗಿದೆ. ಪೂರ್ಣ ಪ್ರಮಾಣದ ವರದಿ ಬಂದ ನಂತರ ಮುಂದಿನ ಕ್ರಮಗಳನ್ನು ಕೈಗೊಳ್ಳಲಾಗುವುದು.
●ಜಯರಾಂ, ಜಲಮಂಡಳಿ ಅಧ್ಯಕ್ಷ

ಟಾಪ್ ನ್ಯೂಸ್

1-w-wewqe

Congress ದೌರ್ಜನ್ಯ ತಡೆಯಲು ಶೀಘ್ರದಲ್ಲೇ ಸಹಾಯವಾಣಿ: ತೇಜಸ್ವಿ ಸೂರ್ಯ

ಕಾರ್ಕಳ: ಮೀನಿನ ಗೊಬ್ಬರ ಸಾಗಿಸುತ್ತಿದ್ದ ಲಾರಿ ಮರಕ್ಕೆ ಢಿಕ್ಕಿ: ಗಾಯ

ಕಾರ್ಕಳ: ಮೀನಿನ ಗೊಬ್ಬರ ಸಾಗಿಸುತ್ತಿದ್ದ ಲಾರಿ ಮರಕ್ಕೆ ಢಿಕ್ಕಿ: ಗಾಯ

1-sadasd

ರೈಲು ದುರಂತ: ಕೋಲ್ಕತಾದಲ್ಲಿ ಸಂಕಷ್ಟ; ಕ್ರೀಡಾಪಟುಗಳಿಗೆ ರಾಜ್ಯ ಸರಕಾರದ ನೆರವು

train-track

Express train ಬರುವ ವೇಳೆ ಟ್ರ್ಯಾಕ್ ಮೇಲೆ ಲಾರಿ ಟೈರ್‌ ಗಳು; ಆರೋಪಿಗಳಿಗೆ ಶೋಧ

arrest-lady

NCB ಯಿಂದ ನಿಷೇಧಿತ ಮಾದಕವಸ್ತು ಸಹಿತ ಮಹಿಳೆಯ ಬಂಧನ

1-sadd

Odisha trains ಅವಘಡ: ಪ್ರಾಥಮಿಕ ತನಿಖೆಯಲ್ಲಿ ಕಂಡುಬಂದದ್ದೇನು?

ಸೊರಗಿದ ಲಿಂಗನಮಕ್ಕಿ ನೀರ ಮಟ್ಟ; ಸದ್ಯದಲ್ಲೇ ನಿಲ್ಲಲಿದೆ ಹಸಿರುಮಕ್ಕಿ ಲಾಂಚ್

ಸೊರಗಿದ ಲಿಂಗನಮಕ್ಕಿ ನೀರ ಮಟ್ಟ; ಸದ್ಯದಲ್ಲೇ ಓಡಾಟ ನಿಲ್ಲಿಸಲಿದೆ ಹಸಿರುಮಕ್ಕಿ ಲಾಂಚ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-w-wewqe

Congress ದೌರ್ಜನ್ಯ ತಡೆಯಲು ಶೀಘ್ರದಲ್ಲೇ ಸಹಾಯವಾಣಿ: ತೇಜಸ್ವಿ ಸೂರ್ಯ

1-sadasd

ರೈಲು ದುರಂತ: ಕೋಲ್ಕತಾದಲ್ಲಿ ಸಂಕಷ್ಟ; ಕ್ರೀಡಾಪಟುಗಳಿಗೆ ರಾಜ್ಯ ಸರಕಾರದ ನೆರವು

ಸೊರಗಿದ ಲಿಂಗನಮಕ್ಕಿ ನೀರ ಮಟ್ಟ; ಸದ್ಯದಲ್ಲೇ ನಿಲ್ಲಲಿದೆ ಹಸಿರುಮಕ್ಕಿ ಲಾಂಚ್

ಸೊರಗಿದ ಲಿಂಗನಮಕ್ಕಿ ನೀರ ಮಟ್ಟ; ಸದ್ಯದಲ್ಲೇ ಓಡಾಟ ನಿಲ್ಲಿಸಲಿದೆ ಹಸಿರುಮಕ್ಕಿ ಲಾಂಚ್

train-track

Konkan Railway ಜೂನ್ 10 ರಿಂದ ರೈಲುಗಳ ಸಂಚಾರದ ಸಮಯ ಬದಲಾವಣೆ

ಕುಡಿಯುವ ನೀರಿನ ಸಮಸ್ಯೆ… ಅಧಿಕಾರಿಗಳು ಮೈಚಳಿಬಿಟ್ಟು ಕೆಲಸ ಮಾಡಿ: ಶಾಸಕ ಆರಗ

ಕುಡಿಯುವ ನೀರಿನ ಸಮಸ್ಯೆ… ಅಧಿಕಾರಿಗಳು ಮೈಚಳಿಬಿಟ್ಟು ಕೆಲಸ ಮಾಡಿ: ಶಾಸಕ ಆರಗ

MUST WATCH

udayavani youtube

ಗ್ಯಾರಂಟಿ ಖಚಿತ, ಪ್ರಯಾಣ ಉಚಿತ, ಷರತ್ತು ನಿಯಮಿತ… | ಗ್ಯಾರಂಟಿ ಯೋಜನೆಗಳ ನಿಯಮಗಳು ಇಲ್ಲಿದೆ

udayavani youtube

Yellur: ಗೋಶಾಲೆ ನಿರ್ಮಾಣಕ್ಕೆ ಮೀಸಲಿಟ್ಟ ಜಾಗದಲ್ಲಿ ಅದಮಾರು ಶ್ರೀಗಳಿಂದ ಗೋಪೂಜೆ

udayavani youtube

ಕಪ್ಪು ಬಣ್ಣದ ತುಟಿ…ಕೆಂಪು ಬಣ್ಣವಾಗಿ ಕಾಣಲು ಇಲ್ಲಿದೆ ಸರಳ ಮನೆಮದ್ದು

udayavani youtube

ಜಾನಪದ ಕಲೆಯನ್ನು ಅಂತರಾಷ್ಟ್ರೀಯ ಮಟ್ಟಕ್ಕೆ ಕೊಂಡೊಯ್ದ ಸೋಲಿಗರು

udayavani youtube

ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಕಾರುಗಳ ನಡುವೆ ಅಪಘಾತ, ನಾಲ್ವರಿಗೆ ಗಾಯ

ಹೊಸ ಸೇರ್ಪಡೆ

1-werr

ಲಂಚ ನೀಡಬೇಡಿ, ಮಧ್ಯವರ್ತಿಗಳ ಬಗ್ಗೆ ಎಚ್ಚರದಿಂದಿರಿ: ಶಾಸಕ ಹರೀಶ್‌ಗೌಡ

1-qwrewq

ಸಿಡಿಲಿಗೆ ಬಲಿಯಾಗಿದ್ದ ಹರೀಶ್ ಕುಟುಂಬಕ್ಕೆ 5 ಲಕ್ಷ ರೂ. ಚೆಕ್ ವಿತರಣೆ

1-w-wewqe

Congress ದೌರ್ಜನ್ಯ ತಡೆಯಲು ಶೀಘ್ರದಲ್ಲೇ ಸಹಾಯವಾಣಿ: ತೇಜಸ್ವಿ ಸೂರ್ಯ

ಕಾರ್ಕಳ: ಮೀನಿನ ಗೊಬ್ಬರ ಸಾಗಿಸುತ್ತಿದ್ದ ಲಾರಿ ಮರಕ್ಕೆ ಢಿಕ್ಕಿ: ಗಾಯ

ಕಾರ್ಕಳ: ಮೀನಿನ ಗೊಬ್ಬರ ಸಾಗಿಸುತ್ತಿದ್ದ ಲಾರಿ ಮರಕ್ಕೆ ಢಿಕ್ಕಿ: ಗಾಯ

1-sadasd

ರೈಲು ದುರಂತ: ಕೋಲ್ಕತಾದಲ್ಲಿ ಸಂಕಷ್ಟ; ಕ್ರೀಡಾಪಟುಗಳಿಗೆ ರಾಜ್ಯ ಸರಕಾರದ ನೆರವು