![Nagu; ಕಂಬಳ ಕ್ಷೇತ್ರಕ್ಕೆ ಮತ್ತೊಂದು ಆಘಾತ; ಹಲವು ಪದಕ ಗೆದ್ದಿದ್ದ ‘ನಾಗು’ ಕೋಣ ಇನ್ನಿಲ್ಲ!](https://www.udayavani.com/wp-content/uploads/2024/07/nagu-1-415x229.jpg)
“ಕಾಕ್ಟೇಲ್ ಲಸಿಕಾ ಪದ್ಧತಿ ಬೆಂಬಲಿಸಲ್ಲ’
ಸೀರಂ ಇನ್ಸ್ಟಿಟ್ಯೂಟ್ ಆಫ್ ಇಂಡಿಯಾ ಮುಖ್ಯಸ್ಥ ಪೂನಾವಾಲಾ ಹೇಳಿಕೆ
Team Udayavani, Aug 13, 2021, 10:15 PM IST
![“ಕಾಕ್ಟೇಲ್ ಲಸಿಕಾ ಪದ್ಧತಿ ಬೆಂಬಲಿಸಲ್ಲ’](https://www.udayavani.com/wp-content/uploads/2021/08/Mixing-of-Covishield-620x365.jpg)
ನವದೆಹಲಿ: ಎರಡು ಲಸಿಕೆಗಳ ಸಮ್ಮಿಶ್ರಣ (ವ್ಯಾಕ್ಸಿನ್ ಕಾಕ್ಟೇಲ್) ನೀಡುವ ಪರಿಕಲ್ಪನೆಯನ್ನು ತಾವು ಬೆಂಬಲಿಸುವುದಿಲ್ಲ ಎಂದು ಭಾರತದಲ್ಲಿ ಕೋವಿಶೀಲ್ಡ್ ಲಸಿಕೆ ತಯಾರಿಸುವ “ಸೀರಂ ಇನ್ ಸ್ಟಿಟ್ಯೂಟ್ ಆಫ್ ಇಂಡಿಯಾ’ (ಎಸ್ಐಐ) ಮುಖ್ಯಸ್ಥ ಡಾ. ಸೈರಸ್ ಪೂನಾವಾಲಾ ಹೇಳಿದ್ದಾರೆ.
ನವದೆಹಲಿಯಲ್ಲಿ ಶುಕ್ರವಾರ, ಲೋಕಮಾನ್ಯ ತಿಲಕ್ ಪ್ರಶಸ್ತಿ ಪಡೆದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “”ಲಸಿಕೆಗಳ ಸಮ್ಮಿಶ್ರಣದಿಂದ ಯಾವುದೇ ವ್ಯಕ್ತಿಯಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚದಿದ್ದರೆ, ಲಸಿಕೆಗಳ ಮಾತೃಸಂಸ್ಥೆಗಳು ಪರಸ್ಪರರ ಮೇಲೆ ಆರೋಪ ಮಾಡಿಕೊಳ್ಳಬಹುದು. ಹಾಗಾಗಿ, ಇದು ಒಳ್ಳೆಯ ಕ್ರಮವಲ್ಲ ಎಂಬುದು ನನ್ನ ಸ್ಪಷ್ಟ ಅಭಿಪ್ರಾಯ” ಎಂದರು.
ಇತ್ತೀಚೆಗೆ, ಲಸಿಕೆಗಳ ಸಮ್ಮಿಶ್ರಣದಂದ ಕೋವಿಡ್ ನಿರೋಧಕತೆ ಅಗಾಧವಾಗಿ ಹೆಚ್ಚಾಗುವ ಸಾಧ್ಯತೆಯಿರುತ್ತದೆ ಎಂದು ಐಸಿಎಂಆರ್ನ ಅಧ್ಯಯನವೊಂದು ಹೇಳಿದ್ದಕ್ಕೆ ಅವರು ಈ ರೀತಿ ಪ್ರತಿಕ್ರಿಯಿಸಿದ್ದಾರೆ.
ಇದನ್ನೂ ಓದಿ:ಭಾರತೀಯ ಕ್ರಿಕೆಟಿಗೆ ವಿದಾಯ ಹೇಳಿದ ಉನ್ಮುಕ್ತ್ ಚಂದ್
ಹೊಸ ಲಸಿಕೆಗೆ ಒಪ್ಪಿಗೆ: ಇದೇ ಮೊದಲ ಬಾರಿಗೆ ಭಾರತ್ ಬಯೋಟೆಕ್ ಸಂಸ್ಥೆಯ “ಮೂಗಿನ ಮೂಲಕ ಹಾಕಬಹುದಾದ ಕೋವಿಡ್ ಲಸಿಕೆ’ಯ ಫೇಸ್ 2 ಮತ್ತು ಫೇಸ್ 3 ಪ್ರಯೋಗಗಳಿಗೆ ಕೇಂದ್ರ ಸರ್ಕಾರ ಒಪ್ಪಿಗೆ ನೀಡಿದೆ.
ಗುಣಮುಖರ ಸಂಖ್ಯೆ ಶೇ. 97ಕ್ಕೆ
ಬುಧವಾರ-ಗುರುವಾರ ನಡುವಿನ 24 ಗಂಟೆಗಳ ಅವಧಿಯಲ್ಲಿ ಭಾರತದಲ್ಲಿ 40,120 ಕೋವಿಡ್ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ, ದೇಶದಲ್ಲಿ ಕೋವಿಡ್ ಪೀಡಿತರ ಒಟ್ಟು ಸಂಖ್ಯೆ 3,21,17,826ಕ್ಕೇರಿದೆ. ಇನ್ನು, ಗುಣಮುಖರಾಗುತ್ತಿರುವರ ಪ್ರಮಾಣ ಶೇ. 97.46ಕ್ಕೆ ಏರಿದೆ ಎಂದು ಕೇಂದ್ರ ಆರೋಗ್ಯ ಇಲಾಖೆ ತಿಳಿಸಿದೆ. ಈ ನಡುವೆ, ಮುಂಬೈನಲ್ಲಿ ಇದೇ ಮೊದಲ ಬಾರಿಗೆ ಕೋವಿಡ್ ವೈರಾಣುವಿನ ಡೆಲ್ಟಾ ಪ್ಲಸ್ ರೂಪಾಂತರಿಯಿಂದ ನರಳುತ್ತಿದ್ದ ವ್ಯಕ್ತಿಯೊಬ್ಬರು ಸಾವಿಗೀಡಾಗಿದ್ದಾರೆ.
ಪ್ರೊಟೀನ್ ಆಧಾರಿತ ಹೊಸ ಲಸಿಕೆ
ನೋಡಲು ಕೋವಿಡ್ ವೈರಾಣುವಿನಂತೆಯೇ ಕಾಣುವ ಪ್ರತಿಕಾಯಗಳನ್ನು ಹೊಂದಿರುವ ಕೋವಿಡ್ ಲಸಿಕೆಯೊಂದನ್ನು ಅಮೆರಿಕದ ಚಿಕಾಗೋ ವಿವಿಯ ಸಂಶೋಧಕರು ಅಭಿವೃದ್ಧಿಪಡಿಸಿರುವುದಾಗಿ “ಎಸಿಎಸ್ ಸೆಂಟ್ರಲ್ ಸೈನ್ಸ್’ ಎಂಬ ನಿಯತಕಾಲಿಕೆ ವರದಿ ಮಾಡಿದೆ. “ಇದೊಂದು ಪ್ರೋಟೀನ್ ಆಧಾರಿತ ಲಸಿಕೆಯಾಗಿದ್ದು, ಸಾಮಾನ್ಯ ಲಸಿಕೆಗಳು ನೀಡುವುದಕ್ಕಿಂತ ಹೆಚ್ಚಿನ ನಿರೋಧಕತೆ ನೀಡುತ್ತದೆ’ ಎಂದು ವರದಿಯಲ್ಲಿ ಬಣ್ಣಿಸಲಾಗಿದೆ. ಈ ನಡುವೆ, ಎರಡು ಡೋಸ್ ಕೋವಿಡ್ ಲಸಿಕೆ ಪಡೆದ ನಂತರವೂ ರೋಗ ನಿರೋಧಕತೆ ಪ್ರಮಾಣ ಕಡಿಮೆ ಇರುವ ಅಮೆರಿಕನ್ನರಿಗೆ ಬೂಸ್ಟರ್ ಕೋವಿಡ್ ಲಸಿಕೆ ನೀಡಲು ಅಲ್ಲಿನ ಸರ್ಕಾರ ಒಪ್ಪಿಗೆ ನೀಡಿದೆ.
ಟಾಪ್ ನ್ಯೂಸ್
![Nagu; ಕಂಬಳ ಕ್ಷೇತ್ರಕ್ಕೆ ಮತ್ತೊಂದು ಆಘಾತ; ಹಲವು ಪದಕ ಗೆದ್ದಿದ್ದ ‘ನಾಗು’ ಕೋಣ ಇನ್ನಿಲ್ಲ!](https://www.udayavani.com/wp-content/uploads/2024/07/nagu-1-415x229.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ](https://www.udayavani.com/wp-content/uploads/2024/07/BUILDING-1-150x84.jpg)
Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ
![modi (4)](https://www.udayavani.com/wp-content/uploads/2024/07/modi-4-4-150x92.jpg)
NITI Aayog ಸಭೆ ಇಂದು; “ವಿಕಸಿತ ಭಾರತ’ದ ಬಗ್ಗೆ ಚರ್ಚೆ: 7 ರಾಜ್ಯಗಳಿಂದ ಬಹಿಷ್ಕಾರ!
![Exam](https://www.udayavani.com/wp-content/uploads/2024/07/Exam-8-150x84.jpg)
NEET ಟಾಪರ್ಗಳ ಸಂಖ್ಯೆ 67ರಿಂದ ಈಗ 17ಕ್ಕೆ ಇಳಿಕೆ!
![1-assam](https://www.udayavani.com/wp-content/uploads/2024/07/1-assam-150x84.jpg)
UNESCO ವಿಶ್ವ ಪಾರಂಪರಿಕ ತಾಣ ಪಟ್ಟಿಗೆ ‘ದಿಬ್ಬ ಸಮಾಧಿಗಳು’: ಏನಿದು ಮೊಯಿಡಮ್ಸ್?
![1-kanwar-msid](https://www.udayavani.com/wp-content/uploads/2024/07/1-kanwar-msid-150x84.jpg)
Uttara Khand; ಕನ್ವರ್ ಯಾತ್ರೆ: ಮಸೀದಿಗೇ ಪರದೆ ಹಾಕಿದ ಹರಿದ್ವಾರ ಆಡಳಿತ!
MUST WATCH
ಹೊಸ ಸೇರ್ಪಡೆ
![Screenshot (2)](https://www.udayavani.com/wp-content/uploads/2024/07/Screenshot-2-150x83.png)
Mangaluru: ಸೈನಿಕರನ್ನು ಗೌರವದಿಂದ ನಡೆಸಿಕೊಳ್ಳಿ: ಬ್ರಿ| ಐ.ಎನ್. ರೈ
![Nagu; ಕಂಬಳ ಕ್ಷೇತ್ರಕ್ಕೆ ಮತ್ತೊಂದು ಆಘಾತ; ಹಲವು ಪದಕ ಗೆದ್ದಿದ್ದ ‘ನಾಗು’ ಕೋಣ ಇನ್ನಿಲ್ಲ!](https://www.udayavani.com/wp-content/uploads/2024/07/nagu-1-150x83.jpg)
Nagu; ಕಂಬಳ ಕ್ಷೇತ್ರಕ್ಕೆ ಮತ್ತೊಂದು ಆಘಾತ; ಹಲವು ಪದಕ ಗೆದ್ದಿದ್ದ ‘ನಾಗು’ ಕೋಣ ಇನ್ನಿಲ್ಲ!
![Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ](https://www.udayavani.com/wp-content/uploads/2024/07/shiruru-150x90.jpg)
Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ
![Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ](https://www.udayavani.com/wp-content/uploads/2024/07/shi1-150x83.jpg)
Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ
![2-chithapura](https://www.udayavani.com/wp-content/uploads/2024/07/2-chithapura-150x90.jpg)
Chittapur: ಪಟ್ಟಣದ ಹೊರವಲಯದಲ್ಲಿ ಯುವಕನ ಶವ ಪತ್ತೆ: ಕೊಲೆ ಶಂಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.