ಹೆದ್ದಾರಿ ಸಂಪರ್ಕ ರಸ್ತೆಗಳ ಅಭಿವೃದ್ದಿ, ಸಿಗ್ನಲ್ ಲೈಟ್ ಅಳವಡಿಕೆಗೆ ಕ್ರಮ : ಮಂಜುನಾಥ್
Team Udayavani, Jan 30, 2022, 7:52 PM IST
ಹುಣಸೂರು : ರಾಷ್ಟ್ರೀಯ ಹೆದ್ದಾರಿಯ ಹುಣಸೂರು ಬೈಪಾಸ್ನ ದೇವರಾಜ ಅರಸು ಪುತ್ಥಳಿಯಿಂದ ಕಲ್ಕುಣಿಕೆ ವೃತ್ತದವರೆಗೆ ಸುಗಮ ಸಂಚಾರಕ್ಕೆ ಅವಕಾಶವಾಗುವಂತೆ ಅಭಿವೃದ್ದಿಕೈಗೊಳ್ಳಬೇಕೆಂದು ಶಾಸಕ ಎಚ್.ಪಿ.ಮಂಜುನಾಥ್ ಹೆದ್ದಾರಿ ಪ್ರಾಧಿಕಾರದ ಮುಖ್ಯ ಇಂಜಿನಿಯರ್ ರಮೇಂದ್ರರಿಗೆ ಸೂಚಿಸಿದರು.
ಭಾನುವಾರ 22 ಕೋಟಿರೂ ವೆಚ್ಚದ ತಾಲೂಕಿನ ಚಿಕ್ಕಾಡಿಗನಹಳ್ಳಿಯಿಂದ ನಗರಕ್ಕೆ ಸಮೀಪದ ಹಾಳಗೆರೆವರೆಗಿನ ಹೆದ್ದಾರಿ ಡಾಂಬರೀಕರಣ ಕಾಮಗಾರಿ ಪ್ರಗತಿಯನ್ನು ಮುಖ್ಯ ಇಂಜಿನಿಯರ್ರೊಂದಿಗೆ ಪರಿಶೀಲಿಸಿ ದೇವರಾಜ ಅರಸರ ಪುತ್ಥಳಿ ಬಳಿಯ ಜಂಕ್ಷನ್ನಲ್ಲಿ ರಸ್ತೆಯನ್ನು ಎಪಿಎಂಸಿ ಬಳಿಯಿಂದ ಅಗಲೀಕರಣಗೊಳಿಸುವ ಜೊತೆಗೆ ಡಿವೈಡರ್ ಅಳವಡಿಸಿ, ಸುಗಮ ಸಂಚಾರಕ್ಕೆ ಅವಕಾಶ ಮಾಡಿಕೊಡಬೇಕು. ಅಲ್ಲದೆ ಹೆದಾರಿಯ ಎಲ್ಲ ಸಂಪರ್ಕ ರಸ್ತೆಗಳನ್ನು ಅಭಿವೃದ್ದಿಗೊಳಿಸುವಂತೆ ಸಲಹೆ ನೀಡಿದರು.
ಹೆದ್ದಾರಿಯಿಂದ ಡಿ.ಡಿ.ಅರಸು ಸರಕಾರಿ ಪದವಿ ಕಾಲೇಜಿಗೆ ಸಂಪರ್ಕ ಕಲ್ಪಿಸುವ ರಸ್ತೆಯನ್ನು ಅಭಿವೃದ್ದಿಗೊಳಿಸುವುದು. ರಸ್ತೆ ಇಕ್ಕೆಲಗಳಲ್ಲಿ ಮಳೆ ನೀರು ಹರಿದು ಹೋಗಲು ಚರಂಡಿ ವ್ಯವಸ್ಥೆ ಇಲ್ಲದೆ ರಸ್ತೆ ಪಕ್ಕದಲ್ಲೇ ದೊಡ್ಡ ಹೊಂಡಗಳಾಗುತ್ತಿದ್ದು, ಸಾಕಷ್ಟು ಅವಘಡಗಳಿಗೆ ಕಾರಣವಾಗಿದೆ ಎಂಬ ಶಾಸಕರ ಮಾಹಿತಿಗೆ ಹೆದ್ದಾರಿಯ ಅರಸು ಪುತ್ಥಳಿಯಿಂದ ಕೋರ್ಟ್ವರೆಗೆ ಒಂದು ಬದಿಯಲ್ಲಿ ಚರಂಡಿ ನಿರ್ಮಿಸಿ ನೀರನ್ನು ದೊಡ್ಡಮೋರಿಗೆ ಸಂಪರ್ಕ ಕಲ್ಪಿಸಲು ಕ್ರಮವಹಿಸಲಾಗುವುದು ಹಾಗೂ ಕಲ್ಕುಣಿಕೆ ವೃತ್ತದವರೆಗಿನ ಸಂಪರ್ಕ ರಸ್ತೆಗಳನ್ನು ಅಭಿವೃದ್ದಿಗೊಳಿಸಲಾಗುತ್ತಿದೆ ಎಂದು ಮುಖ್ಯ ಇಂಜಿನಿಯರ್ ರಮೇಂದ್ರ ಭರವಸೆ ಇತ್ತರು.
ಎರಡು ವೃತ್ತಗಳಿಗೆ ಸಿಗ್ನಲ್ ಲೈಟ್ ಅಳವಡಿಕೆ:
ನಗರದಲ್ಲಿ ಪ್ರಥಮ ಬಾರಿಗೆ ಬೈಪಾಸ್ನ ಕೋರ್ಟ್ ಸರ್ಕಲ್ ಹಾಗೂ ಕಲ್ಕುಣಿಕೆ ವೃತ್ತಕ್ಕೆ ನಗರಸಭೆವತಿಯಿಂದ ಸಿಗ್ನಲ್ ಲೈಟ್ ವ್ಯವಸ್ಥೆ ಕಲ್ಪಿಸಲಾಗುತ್ತಿದ್ದು, ಇದರಿಂದ ಹೆದ್ದಾರಿಯಲ್ಲಿ ಹೆಚ್ಚು ವಾಹನ ಸಂಚಾರವಿರುವುದರಿಂದ ಅವಘಡ ನಿಯಂತ್ರಿಸಲು ಸಹಕಾರಿಯಾಗಲಿದೆ ಎಂದು ಶಾಸಕರು ತಿಳಿಸಿದರು.
ಈ ವೇಳೆ ತಹಸೀಲ್ದಾರ್ ಡಾ.ಅಶೋಕ್, ಪೌರಾಯುಕ್ತ ರಮೇಶ್, ಹೆದ್ದಾರಿ ಪ್ರಾಧಿಕಾರದ ಕಾರ್ಯಪಾಲಕ ಇಂಜಿನಿಯರ್ ಯೋಗಾನಂದ್, ಎಇಇ ಪುಟ್ಟರಾಜು, ಸಹಾಯಕ ಇಂಜಿನಿಯರ್ ಹೇಮಲತಾ, ಪ್ರಥಮ ದರ್ಜೆ ಗುತ್ತಿಗೆದಾರರಾದ ರೇವಣ್ಣ,ಗೋವಿಂದೇಗೌಡ, ಅಶೋಕ್, ಬಾಪುಜಿ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ರಸ್ತೆ ಬದಿ ನಿಲ್ಲಿಸಿದ್ದ ಟ್ರ್ಯಾಕ್ಟರ್ ಟ್ರಾಲಿಗೆ ಬೈಕ್ ಡಿಕ್ಕಿ: ಸವಾರ ಸ್ಥಳದಲ್ಲೇ ಮೃತ್ಯು
Shimoga; ಬಿಜೆಪಿ ಹಿರಿಯ ಮುಖಂಡ ಎಂ.ಬಿ.ಭಾನುಪ್ರಕಾಶ್ ಹೃದಯಾಘಾತದಿಂದ ನಿಧನ
ಈ ಇಳಿವಯಸ್ಸಿನಲ್ಲಿ ಇಂತದ್ದೆಲ್ಲ ಒಳ್ಳೆಯದಲ್ಲ… BSY ಕುರಿತು ಸಚಿವ ತಿಮ್ಮಾಪುರ ಹೇಳಿಕೆ
Price Hike; ಸರ್ಕಾರ ಜನರನ್ನು ನೇರವಾಗಿ ಸುಲಿಗೆ ಮಾಡುತ್ತಿದೆ…: ಬಿ.ಸಿ.ಪಾಟೀಲ್ ಆಕ್ರೋಶ
Renukaswamy Case; ಪಾರದರ್ಶಕ ವಿಚಾರಣೆಯಾಗಲಿ…: ದರ್ಶನ್ ಬಂಧನದ ಬಗ್ಗೆ ಉಪೇಂದ್ರ ಮಾತು
MUST WATCH
ಹೊಸ ಸೇರ್ಪಡೆ
Lok Sabha; ವಿಪಕ್ಷ ನಾಯಕನ ಸ್ಥಾನಕ್ಕೆ ಹೆಸರು ಬಹುತೇಕ ಅಂತಿಮ; ಹುದ್ದೆ ಬೇಡ ಎಂದ ರಾಹುಲ್
Goa Calangute Beach: ಮೊಬೈಲ್,ಬ್ಯಾಗ್ ಕಳ್ಳತನ; ಮೂವರ ಬಂಧನ
ಬಾಗಲಕೋಟೆ: ಇಳಕಲ್ಲ ಸೀರೆಯುಟ್ಟು ಓಡಿದ 1500 ನಾರಿಯರು !
ರಸ್ತೆ ಬದಿ ನಿಲ್ಲಿಸಿದ್ದ ಟ್ರ್ಯಾಕ್ಟರ್ ಟ್ರಾಲಿಗೆ ಬೈಕ್ ಡಿಕ್ಕಿ: ಸವಾರ ಸ್ಥಳದಲ್ಲೇ ಮೃತ್ಯು
ಪಂಪ್ವೆಲ್-ಪಡೀಲ್ ಚತುಷ್ಪಥ ಕಾಮಗಾರಿ: ಸಂಚಾರಕ್ಕೆ ಸಂಕಷ್ಟ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.